ನವದೆಹಲಿ: ದೇಶದಲ್ಲಿ ಕೊರೊನಾ ರುದ್ರತಾಂಡವ ಮುಂದುವರೆದಿದೆ. ಇದರಿಂದಾಗಿ ಈವರೆಗೂ ಬೃಹತ್ ಸಮಾವೇಶ ಸೇರಿದಂತೆ ಯಾವುದೇ ಕಾರ್ಯಕ್ರಮಗಳಿಗೂ ಈವರೆಗೂ ಅವಕಾಶ ನೀಡಲಾಗಿಲ್ಲ. ಅದರಂತೆ ಮುಸ್ಲಿಂ ಸಮುದಾಯದ ಮೊಹರಂ ಹಬ್ಬದ ದಿನದಂದು ಮೆರವಣಿಗೆಗೆ ಅವಕಾಶ ನೀಡುವಂತೆ ಸುಪ್ರೀಂಕೋರ್ಟ್ನಲ್ಲಿ ಸಲ್ಲಿಸಲಾಗಿದ್ದ ಮನವಿಯನ್ನೂ ನ್ಯಾಯಾಲಯವು ತಿರಸ್ಕರಿಸಿದೆ.
![]()
ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬ್ಡೆ ಅವರ ನೇತೃತ್ವದ ಸುಪ್ರೀಂಕೋರ್ಟ್ ಪೀಠವು ಈ ಮಹತ್ವದ ತೀರ್ಪು ನೀಡಿದೆ. ದೇಶಾದ್ಯಂತ ಮೊಹರಂ ಮೆರವಣಿಗೆ ನಡೆಸಲು ಅನುಮತಿ ನೀಡಲು ನಿರಾಕರಿಸಿದೆ.









