ADVERTISEMENT
Thursday, March 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೋವಿಡ್‌ ವಿರುದ್ಧ ಸಂಘಟಿತ ಹೋರಾಟ ಅಗತ್ಯ : ಸಚಿವ ಸುಧಾಕರ್‌

admin by admin
August 29, 2020
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಕೋವಿಡ್‌ ವಿರುದ್ಧ ಸಂಘಟಿತ ಹೋರಾಟ ಅಗತ್ಯ : ಸಚಿವ ಸುಧಾಕರ್‌

ಬೆಂಗಳೂರು : ಸರ್ಕಾರದ ಪ್ರಮಾಣಿಕ ಪ್ರಯತ್ನಗಳ ಜತೆಗೆ ಸಮಾಜದ ಪ್ರತಿಯೊಬ್ಬರ ಸಹಕಾರ ಮತ್ತು ಸಂಘಟಿತ ಹೋರಾಟದಿಂದ ಮಾತ್ರ ಕೋವಿಡ್‌ ವಿರುದ್ಧದ ಹೋರಾಟದಲ್ಲಿ ಯಶಸ್ಸು ಸಾಧ್ಯ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಅಭಿಪ್ರಾಯಪಟ್ಟರು.
ಮೈಸೂರಿನ ಜೆಎಸ್‌ಎಸ್‌ ಸಂಸ್ಥೆ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಜಿಯವರ ಜಯಂತಿ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ʼಕೋವಿಡ್‌-೧೯ : ಸವಾಲು ಮತ್ತು ನಿರ್ವಹಣೆ ʼ ವಿಡಿಯೋ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶನಿವಾರ ಸಚಿವರು ಮಾತನಾಡಿದರು.
ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಮತ್ತು ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದ ಸರ್ಕಾರಗಳು ಮಾನವೀಯ ನೆಲೆಯಲ್ಲಿ ಬಡವ-ಶ್ರೀಮಂತ, ಹಿರಿಯರು-ಕಿರಿಯರು ಬೇಧವಿಲ್ಲದೆ ಸಮಭಾವದಿಂದ ಎಲ್ಲರಿಗೂ ಗುಣಮಟ್ಟದ ಕೋವಿಡ್‌ ಚಿಕಿತ್ಸೆ ನೀಡುತ್ತಿವೆ. ಅದರಲ್ಲೂ ರೋಗಕ್ಕೆ ತುತ್ತಾಗುವ ಅವಕಾಶಗಳಿರುವ ಮಕ್ಕಳು ಮತ್ತು ಹಿರಿಯರ ವಿಷಯದಲ್ಲಿ ವಿಶೇಷ ಕಾಳಜಿ ವಹಿಸಿದೆ. ಕೆಲ ಮುಂದುವರಿದ ರಾಷ್ಟ್ರಗಳು ತಮ್ಮದೇ ಕಾರಣಗಳಿಂದ ರೋಗಪೀಡಿತರಾದ ಹಿರಿಯ ನಾಗರಿಕರಿಗೆ ಚಿಕಿತ್ಸೆ ನಿರಾಕರಿಸಿದ ಉದಾಹರಣೆಗಳಿವೆ. ಅಂತಹ ಯಾವುದೇ ತಾರತಮ್ಯ ನಮ್ಮಲ್ಲಿ ಮಾಡಿಲ್ಲ ಎಂದರು.
ಜಗತ್ತಿನ ಇತರೆ ರಾಷ್ಟ್ರಗಳಲ್ಲಿ ಸಾವಿನ ಪ್ರಮಾಣ ಶೇಕಡಾ ೪ ಮತ್ತು ಅದಕ್ಕಿಂತ ಹೆಚ್ಚು ಇದ್ದರೆ ಭಾರತದಲ್ಲಿ ಶೇ.1.5 ರಿಂದ 1.7 ರಷ್ಟಿರುವುದು ಸಮಾಧಾನಕರ ಸಂಗತಿ. ಇದನ್ನು ಶೇಕಡಾ ೧ಕ್ಕಿಂತ ಕಡಿಮೆ ಮಾಡುವ ಉದ್ದೇಶದಿಂದ ಯತ್ನಗಳನ್ನು ಮುಂದುವರಿಸಲಾಗಿದೆ. ಇದು ಯುದ್ಧದ ಸಮಯ. ಈ ಹೋರಾಟದಲ್ಲಿ ಸರ್ಕಾರದಿಂದ ಮಾತ್ರ ಸಂಪೂರ್ಣ ನಿಗ್ರಹ ಸಾಧ್ಯವಿಲ್ಲ. ಸಮಾಜದಲ್ಲಿನ ಎಲ್ಲ ಸಂಘ-ಸಂಸ್ಥೆಗಳ ಜತೆ ಪ್ರತಿಯೊಬ್ಬ ನಾಗರೀಕರು ತಮ್ಮ ಜವಾಬ್ದಾರಿಗಳನ್ನು ಅರಿತು ಈ ಸಮಯದಲ್ಲಿ ಸಾಮಾಜಿಕ ಪ್ರಜ್ಞೆ ಮೆರೆಯಬೇಕಿದೆ ಎಂದರು.
ಕೋವಿಡ್‌ ನಂತರದ ದಿನಗಳಲ್ಲಿ ನಮ್ಮ ಶಿಕ್ಷಣ ಸಂಸ್ಥೆಗಳು ಸಂಶೋಧನೆ ಮತ್ತು ಪರಿಹಾರ ಉಪಕ್ರಮಗಳ ಬಗ್ಗೆ ಗಮನಹರಿಸಬೇಕಿದೆ. ಭವಿಷ್ಯದಲ್ಲಿ ಎದುರಾಗುವ ಇಂತಹ ಕಂಟಕಗಳನ್ನು ಯಾವುದೇ ಜೀವಹಾನಿ ಮತ್ತು ಜೀವನಕ್ರಮಗಳಿಗೆ ಧಕ್ಕೆ ಆಗದಂತೆ ನಿವಾರಿಸುವ ಪರಿಹಾರೋಪಾಯಗಳನ್ನು ನಾವು ಕಂಡುಕೊಳ್ಳಬೇಕು. ಇತರೆ ದೇಶಗಳ ಕೆಲ ತಪ್ಪು ನಿರ್ಧಾರಗಳಿಂದ ಎಚ್ಚೆತ್ತುಕೊಂಡ ನಾವು ನಿಖರ ಮತ್ತು ವೈಜ್ಞಾನಿಕ ಹಿನ್ನಲೆಯಲ್ಲಿ ತೀರ್ಮಾನಗಳನ್ನು ತೆಗೆದುಕೊಂಡಿದ್ದರಿಂದ ಇಂದು ಸಮಾಧಾನಕರ ಪರಿಸ್ಥಿತಿಯಲ್ಲಿ ನಾವಿದ್ದೇವೆ. ಸರ್ಕಾರ ಸೂಚಿಸಿರುವ ಸರಳ ಮಾರ್ಗಸೂಚಿಗಳನ್ನು ದೈನಂದಿನ ಜೀವನದಲ್ಲಿ ಪ್ರತಿಯೊಬ್ಬರು ಅಳವಡಿಸಿಕೊಳ್ಳುವ ಮೂಲಕ ಸಹಕರಿಸಬೇಕು. ಆಗ ಮಾತ್ರ ಕೋವಿಡ್‌ ಮಣಿಸಲು ಸಾಧ್ಯ ಎಂದು ತಿಳಿಸಿದರು.
ಆರಂಭದಿಂದಲೂ ಕರ್ನಾಟಕ ದೇಶಕ್ಕೆ ಮಾದರಿಯಾದ ಕ್ರಮಗಳನ್ನು ಯಡಿಯೂರಪ್ಪ ಅವರ ನಾಯಕತ್ವದಲ್ಲಿ ಅಳವಡಿಸಿಕೊಂಡಿದೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಬಂದರುಗಳಲ್ಲಿ ಪ್ರಯಾಣಿಕರ ತಪಾಸಣೆ, ಜನದಟ್ಟಣಿ ಪ್ರದೇಶಗಳಲ್ಲಿ ನಿರ್ಬಂಧಗಳಂತಹ ಸಕಾರಾತ್ಮಕ ನಿಲುವುಗಳು ಕೊರೋನಾ ಹರಡುವಿಕೆಯ ತೀವ್ರತೆಯನ್ನು ತಡೆಯಲು ಸಾಧ್ಯವಾಯಿತು. ತಂತ್ರಜ್ಞಾನದ ಬಳಕೆ, ಇತರೆ ರಾಜ್ಯಗಳಿಗಿಂತ ಹೆಚ್ಚಿನ ಸಂಖ್ಯೆಯಲ್ಲಿರುವ ವೈದ್ಯಕೀಯ, ನರ್ಸಿಂಗ್‌, ಪ್ಯಾರಾಮೆಡಿಕಲ್‌ ಶಿಕ್ಷಣ ಸಂಸ್ಥೆಗಳಿಂದ ನಮ್ಮಲ್ಲಿ ಚಿಕಿತ್ಸೆಗೆ ಹೆಚ್ಚಿನ ಮಾನವ ಸಂಪನ್ಮೂಲವನ್ನು ಒದಗಿಸಿಕೊಳ್ಳಲಾಯಿತು. ಜತೆಗೆ ಲಾಕ್‌ಡೌನ್‌ ಸಂದರ್ಭದಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದ್ದು ನೆರವಿಗೆ ಬಂತು ಎಂದು ವಿವರಿಸಿದರು.
ರೋಗಕ್ಕೆ ಶೀಘ್ರದಲ್ಲೇ ಲಸಿಕೆ ಸಿಗುವ ವಿಶ್ವಾಸವಿದೆ. ಆದರೆ ಅಲ್ಲಿಯವರೆಗೆ ಜೀವ ಮತ್ತು ಜೀವನ ನಡೆಸಲು ಅವಕಾಶ ಮಾಡಿಕೊಟ್ಟಿರುವ ಸರ್ಕಾರದ ಜತೆಗೆ ಜನರು ಕೈ ಜೋಡಿಸಬೇಕು. ನಿಯಮಿತವಾಗಿ ನೀಡುವ ಸೂಚನೆಗಳನ್ನು ಚಾಚೂ ತಪ್ಪದೆ ಪಾಲಿಸಬೇಕು ಆಗ ಮಾತ್ರ ಸಂಪೂರ್ಣ ನಿಯಂತ್ರಣ ಸಾಧ್ಯ ಎಂದರು.
ಜಮ್ಮು ಕಾಶ್ಮೀರದ ಲೆಪ್ಟಿನೆಂಟ್‌ ಗೌರ್ನರ್‌ ಮನೋಜ್‌ ಸಿನ್ಹಾ ಕಾರ್ಯಕ್ರಮ ಉದ್ಘಾಟಿಸಿದರು. ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ, ಇನ್ಫೊಸಿಸ್‌ ಫೌಂಡೇಶನ್ನಿನ ಮುಖ್ಯಸ್ಥೆ ಸುಧಾಮೂರ್ತಿ, ಚಿತ್ರನಟ ದರ್ಶನ್‌, ಜೆಎಸ್‌ಎಸ್‌ ಸಂಸ್ಥೆಗಳ ಸಮ ಕುಲಾಧಿಪತಿ ಡಾ. ಸುರೇಶ್‌ ಭೋಜರಾಜ್‌ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಜಗದ್ಗುರು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಅವರು ಕಾರ್ಯಕ್ರಮದ ಸಾನ್ನಿಧ್ಯವಹಿಸಿದ್ದರು.

Related posts

ಅಂತ್ಯಸಂಸ್ಕಾರಕ್ಕೆ ಜಾಗ ಹುಡುಕಿ ಸುಸ್ತಾದ ಸರ್ಕಾರ: ಖಾಸಗಿ ಭೂಮಿ ಖರೀದಿಯೇ ಏಕೈಕ ದಾರಿ ; ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಸಹಾಯಕತೆ!

ಅಂತ್ಯಸಂಸ್ಕಾರಕ್ಕೆ ಜಾಗ ಹುಡುಕಿ ಸುಸ್ತಾದ ಸರ್ಕಾರ: ಖಾಸಗಿ ಭೂಮಿ ಖರೀದಿಯೇ ಏಕೈಕ ದಾರಿ ; ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಸಹಾಯಕತೆ!

March 19, 2026
ಅಂತರ್ಜಾತಿ ವಿವಾಹಕ್ಕೆ ರಕ್ಷಣೆ: ರಾಜ್ಯದಿಂದ ಹೊಸ ಕಾಯ್ದೆ ಸಿದ್ಧತೆ

ಅಂತರ್ಜಾತಿ ವಿವಾಹಕ್ಕೆ ರಕ್ಷಣೆ: ರಾಜ್ಯದಿಂದ ಹೊಸ ಕಾಯ್ದೆ ಸಿದ್ಧತೆ

March 19, 2026
Tags: # JSSbengalurubsy govtCoronaCOVID-19karnatakaMedical education Minister Dr.Sudhakar
ShareTweetSendShare
Join us on:

Related Posts

ಅಂತ್ಯಸಂಸ್ಕಾರಕ್ಕೆ ಜಾಗ ಹುಡುಕಿ ಸುಸ್ತಾದ ಸರ್ಕಾರ: ಖಾಸಗಿ ಭೂಮಿ ಖರೀದಿಯೇ ಏಕೈಕ ದಾರಿ ; ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಸಹಾಯಕತೆ!

ಅಂತ್ಯಸಂಸ್ಕಾರಕ್ಕೆ ಜಾಗ ಹುಡುಕಿ ಸುಸ್ತಾದ ಸರ್ಕಾರ: ಖಾಸಗಿ ಭೂಮಿ ಖರೀದಿಯೇ ಏಕೈಕ ದಾರಿ ; ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಸಹಾಯಕತೆ!

by Shwetha
March 19, 2026
0

ಬೆಂಗಳೂರು: ರಾಜ್ಯದಲ್ಲಿ ಬದುಕಿರುವವರಿಗಷ್ಟೇ ಅಲ್ಲ, ಮೃತಪಟ್ಟವರಿಗೂ ಮಣ್ಣಾಗಲು ಜಾಗವಿಲ್ಲದಂತಹ ಗಂಭೀರ ಪರಿಸ್ಥಿತಿ ನಿರ್ಮಾಣವಾಗಿದೆ. ಲಭ್ಯವಿದ್ದ ಸರ್ಕಾರಿ ಜಮೀನ್ನೆಲ್ಲಾ ಇತರೆ ಉದ್ದೇಶಗಳಿಗೆ ಹಂಚಿಕೆ ಮಾಡಿ, ಇದೀಗ ಸ್ಮಶಾನಕ್ಕೆ ಜಾಗವಿಲ್ಲದೆ...

ಅಂತರ್ಜಾತಿ ವಿವಾಹಕ್ಕೆ ರಕ್ಷಣೆ: ರಾಜ್ಯದಿಂದ ಹೊಸ ಕಾಯ್ದೆ ಸಿದ್ಧತೆ

ಅಂತರ್ಜಾತಿ ವಿವಾಹಕ್ಕೆ ರಕ್ಷಣೆ: ರಾಜ್ಯದಿಂದ ಹೊಸ ಕಾಯ್ದೆ ಸಿದ್ಧತೆ

by Shwetha
March 19, 2026
0

ಅಂತರ್ಜಾತಿ ವಿವಾಹವಾಗುವ ಜೋಡಿಗಳಿಗೆ ರಾಜ್ಯ ಸರ್ಕಾರದಿಂದ ಮಹತ್ವದ ನೆರವು ಸಿಗುವ ಸಾಧ್ಯತೆ ಹೆಚ್ಚಿದೆ. ಕುಟುಂಬಸ್ಥರಿಂದ ವಿರೋಧ, ಬಹಿಷ್ಕಾರ ಮತ್ತು ಕೆಲ ಸಂದರ್ಭಗಳಲ್ಲಿ ಹಿಂಸೆ ಅಥವಾ ಕೊಲೆಗಳ ಘಟನೆಗಳ...

ನಟಿ ತಮನ್ನಾಗೆ 5 ಕೋಟಿ ನೀಡಲು ದುಡ್ಡಿದೆ ವಿಧವೆಯರಿಗೆ ವೇತನ ನೀಡಲು ಆಗಲ್ವಾ ಸರ್ಕಾರದ ವಿರುದ್ಧ ಶರಣು ಸಲಗಾರ್ ಆಕ್ರೋಶ

ನಟಿ ತಮನ್ನಾಗೆ 5 ಕೋಟಿ ನೀಡಲು ದುಡ್ಡಿದೆ ವಿಧವೆಯರಿಗೆ ವೇತನ ನೀಡಲು ಆಗಲ್ವಾ ಸರ್ಕಾರದ ವಿರುದ್ಧ ಶರಣು ಸಲಗಾರ್ ಆಕ್ರೋಶ

by Shwetha
March 19, 2026
0

ಬೆಳಗಾವಿ: ರಾಜ್ಯ ಸರ್ಕಾರದ ಆದ್ಯತೆಗಳು ಮತ್ತು ಅನುದಾನ ಹಂಚಿಕೆಯ ತಾರತಮ್ಯದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ ನಡೆದಿದ್ದು, ಬಸವಕಲ್ಯಾಣದ ಬಿಜೆಪಿ ಶಾಸಕ ಶರಣು ಸಲಗಾರ್ ಅವರು ಸರ್ಕಾರದ...

ಲೈಕ್ಸ್ ಆಸೆಗೆ ಅಪ್ಪನ ಪ್ರಾಣದ ಜತೆ ಆಟ ಪ್ರ್ಯಾಂಕ್ ಹೆಸರಲ್ಲಿ ವಿಕೃತಿ :ಬೆಂಗಳೂರಿನ ಕೊರಿಯರ್ ಆಫೀಸ್ ನಲ್ಲಿ ರೀಲ್ಸ್ ಹುಚ್ಚರ ಹೈಡ್ರಾಮಾ

ಲೈಕ್ಸ್ ಆಸೆಗೆ ಅಪ್ಪನ ಪ್ರಾಣದ ಜತೆ ಆಟ ಪ್ರ್ಯಾಂಕ್ ಹೆಸರಲ್ಲಿ ವಿಕೃತಿ :ಬೆಂಗಳೂರಿನ ಕೊರಿಯರ್ ಆಫೀಸ್ ನಲ್ಲಿ ರೀಲ್ಸ್ ಹುಚ್ಚರ ಹೈಡ್ರಾಮಾ

by Shwetha
March 19, 2026
0

ಸಾಮಾಜಿಕ ಜಾಲತಾಣಗಳಲ್ಲಿ ಲೈಕ್ಸ್ ಮತ್ತು ಕಾಮೆಂಟ್ಸ್ ಗಿಟ್ಟಿಸಿಕೊಳ್ಳಲು ಇಂದಿನ ಯುವಪೀಳಿಗೆ ಯಾವ ಹಂತಕ್ಕೆ ಬೇಕಾದರೂ ಇಳಿಯಲು ಸಿದ್ಧರಿದ್ದಾರೆ ಎಂಬುದಕ್ಕೆ ರಾಜಧಾನಿ ಬೆಂಗಳೂರಿನಲ್ಲಿ ನಡೆದ ಈ ಘಟನೆಯೇ ಸಾಕ್ಷಿಯಂತಿದೆ....

ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ಖರೀದಿಗೆ ₹104 ಕೋಟಿ ಬಿಡುಗಡೆ

ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ಖರೀದಿಗೆ ₹104 ಕೋಟಿ ಬಿಡುಗಡೆ

by Shwetha
March 19, 2026
0

ರಾಜ್ಯ ಸರ್ಕಾರ 2026-27ನೇ ಶೈಕ್ಷಣಿಕ ವರ್ಷದ ಆರಂಭದಲ್ಲಿಯೇ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್ ಹಾಗೂ ಪಾದರಕ್ಷೆಗಳನ್ನು ಒದಗಿಸಲು ₹104 ಕೋಟಿ ಬಿಡುಗಡೆ ಮಾಡಿದೆ. ಈ ಕುರಿತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram