ರಾಜ್ಯದ ಬಿಜೆಪಿ ಸರ್ಕಾರ ಸುಳ್ಳು ಹೇಳುತ್ತಿದೆ. ಆದರೆ ಅದನ್ನು ಒಪ್ಪಿಕೊಳ್ಳುತ್ತಿಲ್ಲ ಎಂದು ಮಾಜಿ ಸಚಿವ ಯು.ಟಿ ಖಾದರ್ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಬಜೆಟ್ ಮಂಡಿಸಿದೆ. ಯಡಿಯೂರಪ್ಪನವರು ಯಾವ ಯೋಜನೆ ಉಳಿಸಿಕೊಳ್ಳುತ್ತಾರೆ, ಯಾವ ಯೋಜನೆ ರದ್ದು ಮಾಡುತ್ತಾರೆ ಅಂತ ಗೊತ್ತಿಲ್ಲ. ಬಿಜೆಪಿ ಸರ್ಕಾರದಲ್ಲಿ ಹಣಕಾಸು ವ್ಯವಸ್ಥೆ ಸರಿಯಿಲ್ಲ. ಅದರಿಂದಾಗಿ ಬೇರೆ ಬೇರೆ ಯೋಜನೆಗಳನ್ನು ಕಡಿತ ಮಾಡ್ತಾರೆ. ನಾವು ಕಷ್ಟದಲ್ಲಿದ್ದೇವೆ ಅಂತ ಸರ್ಕಾರ ಒಪ್ಪಿಕೊಳ್ಳುತ್ತಿಲ್ಲ. ಬಡವರ ಯೋಜನೆಗಳನ್ನ ಯಾಕೆ ಕಟ್ ಮಾಡ್ತಿದ್ದಾರೆ. ಶಾದಿಭಾಗ್ಯ ಯೋಜನೆಯನ್ನು ರದ್ದು ಮಾಡಲಾಗಿದೆ. ಕಳೆದ ವರ್ಷ ಶಾದಿಭಾಗ್ಯ ಯೋಜನೆಯಡಿಯಲ್ಲಿ 31 ಸಾವಿರ ಅಪ್ಲಿಕೇಶನ್ ಬಂದಿವೆ. ಅರ್ಜಿ ಸಲ್ಲಿಸಿದವರಿಗೆ ಅನುದಾನ ಬಿಡುಗಡೆ ಮಾಡಬೇಕು. ಆಹಾರ ಇಲಾಖೆಯಲ್ಲಿ 2 ಸಾವಿರ ಕೋಟಿ ಕಡಿತ ಮಾಡಲಾಗಿದೆ. ಹೊಸ ವರ್ಷದಲ್ಲಿ ಶಾದಿಭಾಗ್ಯ ಅಲ್ಲ ಶಾದಿಮಹಲ್ ಗೂ ಒಂದು ರೂಪಾಯಿ ಕೊಟ್ಟಿಲ್ಲ. ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿ 200 ಕೋಟಿ ಘೋಷಣೆ ಮಾಡಿದ್ದಾರೆ. ಆದರೆ 56 ಕೋಟಿ ಮಾತ್ರ ಮಾತ್ರ ಬುಕ್ ನಲ್ಲಿ ತೋರಿಸಿದ್ದಾರೆ. ಬಡವರ ಪರ ಇಲ್ಲದ ಯೋಜನೆಗಳನ್ನು ರದ್ದು ಪಡಿಸಲಿ. ಬಿಜೆಪಿ ಸರ್ಕಾರ ಸುಳ್ಳುಗಳನ್ನು ಹೇಳುತ್ತಿದೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಗ್ಯಾರಂಟಿ ಯೋಜನೆಗಳ ಎಫೆಕ್ಟ್ : ಮದ್ಯದ ಅಮಲಿನಲ್ಲಿರುವವರಿಗೆ ಕಹಿ ಸುದ್ದಿ ಇನ್ಮುಂದೆ ಎಣ್ಣೆ ಬೇಕಿದ್ದರೆ ಪಕ್ಕಾ ಎಕ್ಸ್ಟ್ರಾ ದುಡ್ಡು ಕೊಡಬೇಕು
ಕರ್ನಾಟಕ ರಾಜ್ಯದ ಮದ್ಯಪ್ರಿಯರಿಗೆ ರಾಜ್ಯ ಸರ್ಕಾರವು ಚೇತರಿಸಿಕೊಳ್ಳಲಾಗದಂತಹ ಕಹಿ ಸುದ್ದಿ ನೀಡಿದೆ. ಮುಂಬರುವ ಮೇ 1 ರಿಂದ ರಾಜ್ಯಾದ್ಯಂತ ಹೊಸ ಅಬಕಾರಿ ನೀತಿಯು ಜಾರಿಗೆ ಬರಲಿದ್ದು ಇದರ...








