ಬೆಂಗಳೂರು: ಲಾಕ್ಡೌನ್ ಗೈಡ್ಲೈನ್ಸ್ ಸಡಿಲಿಕೆ ಹಿನ್ನೆಲೆಯಲ್ಲಿ ನಾಳೆಯಿಂದ ಕೆ.ಆರ್ ಮಾರುಕಟ್ಟೆ ಹಾಗೂ ಕಲಾಸಿಪಾಳ್ಯ ಮಾರುಕಟ್ಟೆಗಳು ತೆರೆಯಲಿವೆ.
ಕಳೆದ 6 ತಿಂಗಳಿಂದ ಮುಚ್ಚಿದ್ದ ದೊಡ್ಡ ದೊಡ್ಡ ಮಾರುಕಟ್ಟೆಗಳು ಇಂದು ಮಧ್ಯರಾತ್ರಿಯಿಂದಲೇ ತೆರೆಯಲಿದ್ದು, ನಾಳೆಯಿಂದ ಮೊದಲಿನಂತೆ ವಹಿವಾಟು ನಡೆಸಲಿವೆ.
ಕೆ.ಆರ್ ಮಾರುಕಟ್ಟೆಯಲ್ಲಿ ಹೂ-ಹಣ್ಣು, ತರಕಾರಿ ಸೇರಿದಂತೆ ಎಲ್ಲಾ ರೀತಿಯ ವ್ಯಾಪಾರಕ್ಕೆ ಬಿಬಿಎಂಪಿ ಅನುಮತಿ ಮಾಡಿಕೊಟ್ಟಿದೆ. ಆದರೆ, ಹೂವಿನ ವ್ಯಾಪಾರ ನಡೆಯುವ ಸ್ಥಳಗಳಲ್ಲಿ ಕೆಲ ನಿರ್ಬಂಧಗಳನ್ನು ವಿಧಿಸಲಾಗಿದೆ.
ದೊಡ್ಡ ಮಾರ್ಕೆಟ್ಗಳನ್ನು ತೆರೆಯಲು ಕೇಂದ್ರ ಸರ್ಕಾರ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಪ್ರತಿ ದಿನ ಲಕ್ಷಾಂತರ ಜನರು ವ್ಯಾಪಾರ ನಡೆಸುವ ಕೆ.ಆರ್ ಮಾರುಕಟ್ಟೆ ಹಾಗೂ ಕಲಾಸಿಪಾಳ್ಯ ಮಾರುಕಟ್ಟೆಗಳನ್ನು ಸ್ವಚ್ಛತೆ ಮಾಡಿ ಸ್ಯಾನಿಟೈಸ್ ಮಾಡಲಾಗಿದೆ.
ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್, ಮಾರುಕಟ್ಟೆಗಳಿಗೆ ಭೇಟಿ ನೀಡಿ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು.
ಪ್ರತಿ ಅಂಗಡಿ ಮಾಲೀಕರು ಪ್ರತ್ಯೇಕವಾಗಿ ಸ್ಯಾನಿಟೈಸ್ ಇಟ್ಟುಕೊಂಡಿರಬೇಕು. ಗ್ರಾಹಕರು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ನಿಯಮ ಉಲ್ಲಂಘಿಸಿದರೆ 200 ರೂ. ದಂಡ ವಿಧಿಸಲಾಗುವುದು ಎಂದು ಬಿಬಿಎಂಪಿ ಎಚ್ಚರಿಕೆ ನೀಡಿದೆ.
****
ಕೇರಳ ಮತ್ತು ಕೊಳ್ಳೇಗಾಲದ ಮಹಾ ವಶೀಕರಣ ಮಾಂತ್ರಿಕರು ಮತ್ತು ತಾಂತ್ರಿಕರು ಪಂಡಿತ್ ಸಂತೋಷ್ ಆಚಾರ್ಯ ಗುರೂಜಿ
ಇವರು ನಿಮ್ಮ ಸಮಸ್ಯೆಗಳಾದ ವಶೀಕರಣ, ವಿವಾಹ, ಸಂತಾನ, ಪ್ರೀತಿ ಪ್ರೇಮದಲ್ಲಿ ನಂಬಿ ಮೋಸ ಹೋಗಿದ್ರೆ, ಇಷ್ಟ ಪಟ್ಟ ಪುರುಷ ಮತ್ತು ಸ್ತ್ರಿ ನಿಮ್ಮ ವಶ ಆಗಬೇಕಾದರೆ ಮತ್ತು ಲೈಂಗಿಕ ಸಮಸ್ಯೆ, ಸಾಲಬಾಧೆ, ಗುಪ್ತ ಸಮಸ್ಯೆಗಳಿಗೆ ಕೇರಳದ ಭದ್ರಕಾಳಿ ದೇವಿ ಶಕ್ತಿಯಿಂದ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ದೂರವಾಣಿ ಸಂಖ್ಯೆ 9901005534
ಕರೆ ಅಥವಾ ವಾಟ್ಸಾಪ್ ಮಾಡಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ.








