ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ಮಾಫಿಯಾ ವಿಚಾರವಾಗಿ ಸಿಸಿಬಿ ವಿಚಾರಣೆಗೆ ಹಾಜರಾಗಲು ನಟಿ ರಾಗಿಣಿ ದ್ವಿವೇದಿ ಅನಾರೋಗ್ಯದ ನೆಪ ಹೇಳಿದ್ದಾರೆ.
ನನಗೆ ಆರೋಗ್ಯ ಸಮಸ್ಯೆ ಇದೆ. ಹೀಗಾಗಿ ವಿಚಾರಣೆಗೆ ಹಾಜರಾಗಲು ಒಂದು ವಾರ ಕಾಲಾವಕಾಶ ನೀಡಿ ಎಂದು ವಕೀಲರ ಮೂಲಕ ಸಿಸಿಬಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ರಾಗಿಣಿ ಮನವಿಗೆ ಸಿಸಿಬಿ ಪೊಲೀಸರು ಏನು ತಿಳಿಸಿದ್ದಾರೆ ಎಂಬುದರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ನಿನ್ನೆಯೇ ಸಿಸಿಬಿ ಪೊಲೀಸರು ರಾಗಿಣಿ ದ್ವಿವೇದಿಗೆ ನೋಟಿಸ್ ಜಾರಿ ಮಾಡಿದ್ದರು. ಇಂದು ಬೆಳಿಗ್ಗೆ 10 ಗಂಟೆಗೆ ಸಿಸಿಬಿ ಕಚೇರಿಗೆ ಬಂದು ವಿಚಾರಣೆಗೆ ಸಹಕಾರ ನೀಡುವಂತೆ ಸೂಚಿಸಿದ್ದರು.
ಈ ನಡುವೆ, ಬೆಳಿಗ್ಗೆ 10 ಗಂಟೆಗೆ ಸಿಸಿಬಿ ಕಚೇರಿಗೆ ಹಾಜರಾಗಿ ವಿಚಾರಣೆ ಎದುರಿಸಬೇಕಾಗಿದ್ದ ನಟಿ ರಾಗಿಣಿ, ಫೋನ್ ಸ್ವಿಚ್ ಆಫ್ ಮಾಡಿಕೊಂಡು ನಾನು ಮನೆಯಲ್ಲಿ ಇಲ್ಲ, ಇಂದಿರಾನಗರದ ಸ್ನೇಹಿತರ ಮನೆಗೆ ಹೋಗಿದ್ದೇನೆ ಎಂದು ಸೆಕ್ಯುರಿಟಿ ಗಾರ್ಡ್ ಮೂಲಕ ಹೇಳಿಸಿದ್ದರು.
ಆದರೆ, ಬೆಳಿಗ್ಗೆ 10ಗಂಟೆ ಆದರೂ ರಾಗಿಣಿ ವಿಚಾರಣೆಗೆ ಹಾಜರಾಗಲಿಲ್ಲ. ಆನಂತರ ನಾನು ಯಲಹಂಕದ ಮನೆಯಲ್ಲೇ ಇದ್ದೇನೆ, ಸಮಯ ಬಂದಾಗ ನಾನು ಮಾತನಾಡುತ್ತೇನೆ ಎಂದು ಕೆಲಸದವರ ಮೂಲಕ ಮಾಧ್ಯಮ ಪ್ರತಿನಿಧಿಗಳಿಗೆ ಹೇಳಿ ಕಳಿಸಿದ್ದಾರೆ.
ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ
ಬೆಂಗಳೂರು: ರಾಜ್ಯದ ಸಮಸ್ತ ರೈತ ಬಾಂಧವರಿಗೆ ಕಂದಾಯ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ಮುಂದೆ ರೈತರು ತಮ್ಮ ಜಮೀನಿನ ಪಹಣಿ ಅಥವಾ ಆರ್ಟಿಸಿಯಲ್ಲಿ (RTC) ಹೆಸರು ತಪ್ಪಾಗಿದ್ದರೆ,...








