ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ಮಾಫಿಯಾ ವಿಚಾರವಾಗಿ ಸಿಸಿಬಿ ವಿಚಾರಣೆಗೆ ಹಾಜರಾಗಲು ನಟಿ ರಾಗಿಣಿ ದ್ವಿವೇದಿ ಅನಾರೋಗ್ಯದ ನೆಪ ಹೇಳಿದ್ದಾರೆ.
ನನಗೆ ಆರೋಗ್ಯ ಸಮಸ್ಯೆ ಇದೆ. ಹೀಗಾಗಿ ವಿಚಾರಣೆಗೆ ಹಾಜರಾಗಲು ಒಂದು ವಾರ ಕಾಲಾವಕಾಶ ನೀಡಿ ಎಂದು ವಕೀಲರ ಮೂಲಕ ಸಿಸಿಬಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ರಾಗಿಣಿ ಮನವಿಗೆ ಸಿಸಿಬಿ ಪೊಲೀಸರು ಏನು ತಿಳಿಸಿದ್ದಾರೆ ಎಂಬುದರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ನಿನ್ನೆಯೇ ಸಿಸಿಬಿ ಪೊಲೀಸರು ರಾಗಿಣಿ ದ್ವಿವೇದಿಗೆ ನೋಟಿಸ್ ಜಾರಿ ಮಾಡಿದ್ದರು. ಇಂದು ಬೆಳಿಗ್ಗೆ 10 ಗಂಟೆಗೆ ಸಿಸಿಬಿ ಕಚೇರಿಗೆ ಬಂದು ವಿಚಾರಣೆಗೆ ಸಹಕಾರ ನೀಡುವಂತೆ ಸೂಚಿಸಿದ್ದರು.
ಈ ನಡುವೆ, ಬೆಳಿಗ್ಗೆ 10 ಗಂಟೆಗೆ ಸಿಸಿಬಿ ಕಚೇರಿಗೆ ಹಾಜರಾಗಿ ವಿಚಾರಣೆ ಎದುರಿಸಬೇಕಾಗಿದ್ದ ನಟಿ ರಾಗಿಣಿ, ಫೋನ್ ಸ್ವಿಚ್ ಆಫ್ ಮಾಡಿಕೊಂಡು ನಾನು ಮನೆಯಲ್ಲಿ ಇಲ್ಲ, ಇಂದಿರಾನಗರದ ಸ್ನೇಹಿತರ ಮನೆಗೆ ಹೋಗಿದ್ದೇನೆ ಎಂದು ಸೆಕ್ಯುರಿಟಿ ಗಾರ್ಡ್ ಮೂಲಕ ಹೇಳಿಸಿದ್ದರು.
ಆದರೆ, ಬೆಳಿಗ್ಗೆ 10ಗಂಟೆ ಆದರೂ ರಾಗಿಣಿ ವಿಚಾರಣೆಗೆ ಹಾಜರಾಗಲಿಲ್ಲ. ಆನಂತರ ನಾನು ಯಲಹಂಕದ ಮನೆಯಲ್ಲೇ ಇದ್ದೇನೆ, ಸಮಯ ಬಂದಾಗ ನಾನು ಮಾತನಾಡುತ್ತೇನೆ ಎಂದು ಕೆಲಸದವರ ಮೂಲಕ ಮಾಧ್ಯಮ ಪ್ರತಿನಿಧಿಗಳಿಗೆ ಹೇಳಿ ಕಳಿಸಿದ್ದಾರೆ.
ನೈಸ್ ಸಂಸ್ಥೆಯ ಟೋಲ್ ದಗಾಬಾಜಿಗೆ ಬ್ರೇಕ್ ಹಾಕಿ: ಡಿಕೆಶಿ ಸರ್ಕಾರಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಒತ್ತಾಯ
ಬೆಂಗಳೂರು: ರಾಜಧಾನಿ ಬೆಂಗಳೂರಿನ ಹೊರವಲಯದಲ್ಲಿರುವ ನೈಸ್ ರಸ್ತೆಯಲ್ಲಿ (BMICP) ಯಾವುದೇ ನಿಯಮಾವಳಿಗಳಿಲ್ಲದೆ ಅನಧಿಕೃತವಾಗಿ ಸಂಗ್ರಹಿಸುತ್ತಿರುವ ಟೋಲ್ ವಸೂಲಿಯನ್ನು ತಕ್ಷಣವೇ ಜಾರಿಗೆ ಬರುವಂತೆ ನಿಷೇಧಿಸಬೇಕು ಎಂದು ಕೇಂದ್ರ ಸಚಿವ...








