ADVERTISEMENT
Thursday, May 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಯಾರು ಹೆಚ್ಚು ಸಿರಿವಂತರು? ಅಂಬಾನಿಯೋ ಅಥವಾ ರತನ್ ಟಾಟಾ ನೀವೇ ನಿರ್ಧರಿಸಿ:

saaksha tv by saaksha tv
September 4, 2020
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ಯಾರು ಹೆಚ್ಚು ಸಿರಿವಂತರು? ಅಂಬಾನಿಯೋ ಅಥವಾ ರತನ್ ಟಾಟಾ ನೀವೇ ನಿರ್ಧರಿಸಿ:

ರತನ್ ಟಾಟಾ ಮತ್ತು ಮುಖೇಶ್ ಅಂಬಾನಿ ಹೆಸರು ಕೇಳದವರು ಯಾರಿದ್ದಾರೆ ಹೇಳಿ? ಭಾರತದ ಅತ್ಯಂತ ಹೆಚ್ಚು ಶ್ರೀಮಂತರ ಪಟ್ಟಿಯಲ್ಲಿ ಮುಖೇಶ್ ಅಂಬಾನಿ ಮೊದಲ ಸ್ಥಾನದಲ್ಲಿದ್ದರೆ, ರತನ್ ಟಾಟಾ ನಂತರದ ಸ್ಥಾನದಲ್ಲಿದ್ದಾರೆ. ಭಾರತದ ಪ್ರಖ್ಯಾತ ವಿಶ್ವವಿದ್ಯಾಲಯವೊಂದು ರಿಲಯನ್ಸ್ ನಲ್ಲಿ ಹಣಹೂಡಿಕೆ ಮಾಡಿ, ಟಾಟಾ ಸಂಸ್ಥೆಯಲ್ಲಿ ಕೆಲಸ ಮಾಡಿ ಎಂದು ಒಮ್ಮೆ ಹೇಳಿತ್ತು. ಇದರ ವಾಚ್ಯಾರ್ಥ ಮತ್ತು ಗೂಢಾರ್ಥ ಗೊತ್ತಿದ್ದಬರಿಗಷ್ಟೇ ಗೊತ್ತು.

Related posts

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

May 14, 2026
NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

May 14, 2026

ರತನ್ ಟಾಟಾ ಹಾಗೂ ಮುಖೇಶ್ ಅಂಬಾನಿ ನಡುವೆ ಸಾಕಷ್ಟು ಸಾಮ್ಯತೆಗಳಿವೆ. ಅದರಲ್ಲಿ ಒಂದು ಅವರಿಬ್ಬರೂ ಪ್ರಪಂಚದಲ್ಲೇ ಅತ್ಯತ್ತಮವಾದ ವಿಶ್ವವಿದ್ಯಾಲಯದಲ್ಲಿ ಎಂಬಿಎ ಪದವಿ ಪಡೆದಿದ್ದಾರೆ. ಆದರೂ ರತನ್ ಟಾಟಾಗಿಂತ ಅಂಬಾನಿ ಏಕೆ ಹೆಚ್ಚು ಸಿರಿವಂತರು? ಈ ಪ್ರಶ್ನೆ ಸರ್ವೇಸಾಧಾರಣವಾಗಿ ಕೇಳಿಬರುತ್ತಿರುತ್ತದೆ. ರತನ್ ಟಾಟಾ ಕೂಡ ಒಂದು ಸಮಾರಂಭದಲ್ಲಿ ಈ ಪ್ರಶ್ನೆ ಎದುರಿಸಿದ್ದರು. ಅದಕ್ಕೆ ಟಾಟಾ ನಾನೊಬ್ಬ ಕೈಗಾರಿಕೋದ್ಯಮಿ ಅಂಬಾನಿ ಒಬ್ಬ ಶುದ್ಧ ಚಾಣಾಕ್ಷ ಉದ್ಯಮಿ ಎಂದು ಹೇಳಿ ಮಾತು ಮುಗಿಸಿದ್ದರು.

ಟಾಟಾ ತಮ್ಮ ಸಂಸ್ಥೆಯ ಶೇ.66ರಷ್ಟು ಲಾಭವನ್ನು ಸಮುದಾಯದ ಬೇರೆ ಬೇರೆ ಸಮಾಜಮುಖಿ ಕ್ಷೇತ್ರಗಳ ಅಭಿವೃದ್ಧಿಗೆ ದಾನ ಮಾಡುತ್ತಾರೆ. 2010ರಲ್ಲಿ ಟಾಟಾ ಸಮೂಹ ಸಂಸ್ಥೆಗಳ ಒಟ್ಟು ವಾರ್ಷಿಕ ಆದಾಯ 118 ಬಿಲಿಯನ್ ಡಾಲರ್ ಹಾಗೂ ರಿಲಯನ್ಸ್ ಸಂಸ್ಥೆಯ 2010ರ ಆದಾಯ 44 ಬಿಲಿಯನ್ ಡಾಲರ್ ಆಗಿತ್ತು. ಅಲ್ಲಿಗೆ ರಿಲಾಯನ್ಸ್ ನ ಎರಡು ಪಟ್ಟು ಹೆಚ್ಚು ಟಾಟಾ ಅವರದ್ದಿತ್ತು.

ಭಾರತದಲ್ಲಿ ಟಾಟಾ ಹೊರತು ಪಡಿಸಿ ಇನ್ನಾರೂ ಇಷ್ಟೊಂದು ದೊಡ್ಡ ಮಟ್ಟದ ಲಾಭವನ್ನು ದಾನ ಮಾಡುವ ಶಕ್ತಿ ಹೊಂದಿಲ್ಲ. ನಮ್ರತೆ ಎಂಬುದು ರತನ್ ಟಾಟಾ ಅವರ ರಕ್ತದಲ್ಲಿಯೇ ಇದೆ. ನಮ್ರತೆಯ ವಿಚಾರದಲ್ಲಿ ಟಾಟಾ ಅವರ ಜೊತೆ ಯಾರೂ ಸ್ಪರ್ಧಿಸಲಾರರು. ಇತ್ತೀಚೆಗಷ್ಟೇ ರತನ್ ಟಾಟಾ ಹಾರ್ವರ್ಡ್ ಯೂನಿವರ್ಸಿಟಿಗೆ 50 ಮಿಲಿಯನ್ ಡಾಲರ್ ದಾನ ಮಾಡಿದ್ದಾರೆ. ಕಳೆದ ದೀಪಾವಳಿಯಲ್ಲಿ 1000 ಕೋಟಿ ಹಣವನ್ನು ಕ್ಯಾನ್ಸರ್ ಪೇಷೆಂಟ್ ಗಳಿಗೆ ದಾನ ನೀಡಿದ್ದಾರೆ.
ಟಾಟಾ ಸನ್ಸ್ ಸಂಸ್ಥೆ 2 ಲೋಕೋಪಕಾರಿ ಟ್ರಸ್ಟ್ ಗಳನ್ನೂ ಕೂಡ ನಡೆಸುತ್ತಿದೆ. ಅವು ಸರ್ ದೊರಾಬ್ಜಿ ಟ್ರಸ್ಟ್ ಮತ್ತು ಸರ್ ರತನ್ ಟಾಟಾ ಟ್ರಸ್ಟ್. ಟಾಟಾ ಸನ್ಸ್ ಸಂಸ್ಥೆಯ ಶೇ.27ರಷ್ಟು ಶೇರ್‍ಗಳನ್ನು ದೊರಾಬ್ಜಿ ಟ್ರಸ್ಟ್ ಹಾಗೂ ಶೇ.23.5 ರಷ್ಟು ಶೇರ್ ಗಳನ್ನು ರತನ್ ಟಾಟಾ ಟ್ರಸ್ಟ್ ಹೊಂದಿದೆ. ರತನ್ ಟಾಟಾ, ತಮಗೋಸ್ಕರ ಟಾಟಾ ಸಂಸ್ಥೆಯ ಶೇ. 83ರಷ್ಟು ಶೇರ್ ಹೊಂದಿದ್ದಾರೆ. ಅವರ ಒಟ್ಟು ಆಸ್ತಿ ಸುಮಾರು 9258 ಕೋಟಿ.

ಇನ್ನು ಮುಖೇಶ್ ಅಂಬಾನಿ ತಮ್ಮ ಆದಾಯದ ಶೇ.0.2 ನಷ್ಟು ಮಾತ್ರ ದಾನ ಮಾಡುತ್ತಾರೆ. ಈಗ ತಿಳಿಯಿತಲ್ಲವೇ? ಟಾಟಾಗಿಂತ ಅಂಬಾನಿ ಏಕೆ ಹೆಚ್ಚು ಶ್ರೀಮಂತರೆಂದು. ತಮ್ಮ ಉದ್ಧಾರ ಮಾತ್ರವಲ್ಲ ಸಮಾಜದ ಉದ್ಧಾರಕ್ಕೂ ಟಾಟಾ ಸಂಸ್ಥೆಯಾಗಲಿ, ಟಾಟಾ ಅವರಾಗಲಿ ಕೈಜೋಡಿಸುತ್ತಾರೆ. ಹೀಗಾಗಿ ದಾನ ಧರ್ಮ ಎಂಬುದು ಸಾಧಾರಣವಾಗಿ ನಡೆಯುತ್ತಲೇ ಇರುತ್ತದೆ. ಆದರೆ ಯೋಚಿಸಿ ನೋಡಿ. ನಿಮಗೆ ಈಗಲೂ ಅಂಬಾನಿಯೇ ಹೆಚ್ಚಿನ ಶ್ರೀಮಂತರು ಎನಿಸುತ್ತಾರೆಯೇ? ಹಾಗೆನಿಸಿದರೆ ಅದು ದುರದೃಷ್ಟವೇ ಸರಿ.

ರತನ್ ಟಾಟಾ ಬಗ್ಗೆ ಬರೆದ ಈ ಸಂದರ್ಭದಲ್ಲಿಯೇ ಅವರ ಹಾಗೂ ಅವರ ತಂದೆಯ ನಡುವಿನ ಘಟನೆಯೊಂದು ನೆನಪಿಗೆ ಬರುತ್ತಿದೆ. ರತನ್ ಟಾಟಾ ಅವರ ತಂದೆ ನಾವಲ್ ಟಾಟಾ, ರತನ್ ಟಾಟಾ ಅವರು ಬಳಸುತ್ತಿದ್ದ ಸೋಪುಗಳ ಉಳಿಕೆ ತುಂಡುಗಳನ್ನು ಸೇರಿಸಿ ತಮ್ಮ ಸ್ನಾನಕ್ಕೆ ಬಳಸುತ್ತಿದ್ದರಂತೆ. ಅದನ್ನು ನೋಡಿದ ರತನ್ ಟಾಟಾ ತಂದೆಯ ಬಳಿ ಹಾಗೇಕೆ ಉಳಿದ ತುಂಡುಗಳನ್ನು ಬಳಸುತ್ತಿದ್ದೀರಿ ಎಂದು ಕೇಳಿದರಂತೆ ಅದಕ್ಕೆ ನಾವಲ್ ಟಾಟಾ, “ನಿಮ್ಮಪ್ಪ ಶ್ರೀಮಂತ, ನಮ್ಮಪ್ಪ ಅಲ್ಲ” ಎಂದರಂತೆ. ಬಹುಶಃ ಅದೊಂದು ಮಾತೇ ಇರಬೇಕು ರತನ್ ಟಾಟಾ ತಾವು ಯೋಚಿಸುವ ವಿಧಾನವನ್ನೇ ಬದಲಾಯಿಸಿಕೊಂಡರು. ಸಮಾಜಸೇವೆಗೆ ತಮ್ಮ ಸಂಪತ್ತಿನ ಬಹುಪಾಲು ಮೀಸಲಿರಿಸಿದರು.
ಹೀಗಾಗಿಯೇ ರತನ್ ಟಾಟಾ ಅಂಬಾನಿಗಿಂತ ಶ್ರೀಮಂತರಾಗಬಹುದಾದ ಎಲ್ಲಾ ಅವಕಾಶಗಳಿದ್ದರೂ ಸಂಪತ್ತಿನ ಶ್ರೀಮಂತಿಕೆ ಬಿಟ್ಟು ಮಾನವೀಯತೆಯ ಶ್ರೀಮಂತಿಕೆ ಮೆರೆಯುತ್ತಿದ್ದಾರೆ.

ಸಂಗ್ರಹ ಮಾಹಿತಿ:-
ಅಂಬಿಕಾ ಸೀತೂರು

Tags: # Dhirubhai Ambani#rathan tata#saakshatv.com#tata groupindiamukhesh ambaniReliance group
ShareTweetSendShare
Join us on:

Related Posts

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

by Shwetha
May 14, 2026
0

ಬೆಂಗಳೂರು: ದೇಶದ ಆರ್ಥಿಕ ಶಕ್ತಿಯನ್ನು ವೃದ್ಧಿಸುವ ನಿಟ್ಟಿನಲ್ಲಿ ಇಂಧನ ಬಳಕೆಯನ್ನು ಕಡಿಮೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ದೇಶದ ಜನತೆಗೆ ಕರೆ ನೀಡಿದ್ದರು. ಪ್ರಧಾನಿಯವರ...

NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

by Shwetha
May 14, 2026
0

ದೇಶಾದ್ಯಂತ ಚರ್ಚೆಗೆ ಕಾರಣವಾಗಿರುವ NEET-UG 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಪರೀಕ್ಷೆಯ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಪ್ರಶ್ನೆಯಾದ ಹಿನ್ನೆಲೆಯಲ್ಲಿ ಪರೀಕ್ಷೆ...

ಕೇಳದಿದ್ದರೆ ತಾಯಿ ಕೂಡ ಊಟ ನೀಡಲ್ಲ ಎಂದು ಮಂತ್ರಿಗಿರಿಗೆ ಪಟ್ಟು : ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮೆಟ್ಟಿಲೇರಲು ಸಜ್ಜಾದ ಪ್ರದೀಪ್ ಈಶ್ವರ್

ಕೇಳದಿದ್ದರೆ ತಾಯಿ ಕೂಡ ಊಟ ನೀಡಲ್ಲ ಎಂದು ಮಂತ್ರಿಗಿರಿಗೆ ಪಟ್ಟು : ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮೆಟ್ಟಿಲೇರಲು ಸಜ್ಜಾದ ಪ್ರದೀಪ್ ಈಶ್ವರ್

by Shwetha
May 14, 2026
0

ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಇಂದು ವಿಧಾನಸೌಧದಲ್ಲಿ ತಮ್ಮ ರಾಜಕೀಯ ಆಕಾಂಕ್ಷೆ ಮತ್ತು ಶೈಕ್ಷಣಿಕ ವ್ಯವಸ್ಥೆಯ ಲೋಪದೋಷಗಳ ಬಗ್ಗೆ ಅತ್ಯಂತ ಪ್ರಭಾವಶಾಲಿ ಮಾತುಗಳನ್ನಾಡಿದ್ದಾರೆ. ಅವರ ಮಾತುಗಳು...

ಬೆಳಗಾವಿ ಪಾಲಿಕೆಯಲ್ಲಿ ಗಡಿ ಕಾವು..! ಕನ್ನಡ–MES ಸದಸ್ಯರ ನಡುವೆ ಭಾರೀ ವಾಗ್ವಾದ

ಬೆಳಗಾವಿ ಪಾಲಿಕೆಯಲ್ಲಿ ಗಡಿ ಕಾವು..! ಕನ್ನಡ–MES ಸದಸ್ಯರ ನಡುವೆ ಭಾರೀ ವಾಗ್ವಾದ

by Shwetha
May 14, 2026
0

ಬೆಳಗಾವಿ ಮಹಾನಗರ ಪಾಲಿಕೆ ಸಭೆ ಮತ್ತೆ ಗಡಿ ವಿವಾದದ ಕಾವು ಪಡೆದುಕೊಂಡಿತು. ಕನ್ನಡ ಪರ ಸದಸ್ಯರು ಮತ್ತು MES ಸದಸ್ಯರ ನಡುವೆ ತೀವ್ರ ವಾಗ್ವಾದ ನಡೆದಿದ್ದು, ವಾತಾವರಣ...

ಕಾಂಗ್ರೆಸ್‌ನ 6ನೇ ಗ್ಯಾರಂಟಿ ಘೋಷಣೆ..! ‘ನನ್ನ ಖಾತಾ – ನನ್ನ ಹಕ್ಕು’ ಅಭಿಯಾನ ಆರಂಭ

ಕಾಂಗ್ರೆಸ್‌ನ 6ನೇ ಗ್ಯಾರಂಟಿ ಘೋಷಣೆ..! ‘ನನ್ನ ಖಾತಾ – ನನ್ನ ಹಕ್ಕು’ ಅಭಿಯಾನ ಆರಂಭ

by Shwetha
May 14, 2026
0

ಕರ್ನಾಟಕ ರಾಜಕೀಯದಲ್ಲಿ ಗ್ಯಾರಂಟಿ ಯೋಜನೆಗಳ ಮೂಲಕ ಗಮನ ಸೆಳೆದಿರುವ ಕಾಂಗ್ರೆಸ್ ಸರ್ಕಾರ ಇದೀಗ ಮತ್ತೊಂದು ಮಹತ್ವದ ಘೋಷಣೆ ಮಾಡಿದೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ಸರ್ಕಾರದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram