ದೇಶದಲ್ಲಿ ಎನ್.ಪಿ.ಆರ್ ಜಾರಿ ಮಾಡಲು ಬಿಡುವುದಿಲ್ಲ ಎಂಬ ನಿರ್ಣಯವೊಂದನ್ನು ರಾಜ್ಯ ಕಾಂಗ್ರೆಸ್ ಪಾಸು ಮಾಡಿದೆ. ಕಾಂಗ್ರೆಸ್ ಪಕ್ಷದ ಶಾಸಕಾಂಗ ನಾಯಕ ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ಇಂದು ಶಾಸಕಾಂಗ ಸಭೆ ನಡೆದಿದೆ. ಸಭೆಯಲ್ಲಿ ದೇಶ ಮತ್ತು ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ರಾಜಕೀಯ ಬೆಳವಣಿಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಎನ್.ಪಿ.ಆರ್., ಎನ್.ಆರ್.ಸಿ, ಮತ್ತು ಸಿಏಏ ವಿರೋಧಿಸಿ ನಡೆದ ಚಳುವಳಿಗಳ ಬಗ್ಗೆ ಗಂಬೀರವಾಗಿ ಚರ್ಚೆ ಮಾಡಲಾಗಿದೆ ಚರ್ಚೆಯ ಬಳಿಕ ದೇಶದಲ್ಲಿ ಎನ್.ಪಿ.ಆರ್ ಜಾರಿ ಮಾಡಲು ಬಿಡುವುದಿಲ್ಲ ಎಂಬ ನಿರ್ಣಯವನ್ನು ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಸರ್ವಾನುಮತದಿಂದ ಪಾಸ್ ಮಾಡಲಾಗಿದೆ. ಈ ಬಗ್ಗೆ ನೂತನ ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಾರ್ಯದರ್ಶಿ ಶಾಸಕ ಈ ತುಕರಾಮ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್ನಲ್ಲಿ ಆರ್ಸಿಬಿ ವಾದ
ಬೆಂಗಳೂರಿನ ಎಮ್. ಚಿನ್ನಸ್ವಾಮಿ ಸ್ಟೇಡಿಯಂ ಹೊರಗಡೆ ನಡೆದ ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತನ್ನ ವಿರುದ್ಧದ ಆರೋಪಗಳನ್ನು ತಳ್ಳಿ ಹಾಕಿದೆ. ಸ್ಟೇಡಿಯಂ...








