ಬೆಂಗಳೂರು: ನಟಿ ರಾಗಿಣಿ ದ್ವಿವೇದಿ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು 33ನೇ ಸಿಸಿಹೆಚ್ ನ್ಯಾಯಾಲಯ ಸೆ.14ರವರೆಗೆ(ಸೋಮವಾರ) ಮುಂದೂಡಿದೆ.
ನಟಿ ರಾಗಿಣಿ ಪರ ವಕೀಲರು ಜಾಮೀನು ಕೋರಿ ಬೆಂಗಳೂರಿನ 33ನೇ ಸಿಸಿಹೆಚ್ ಕೋರ್ಟ್ಗೆ ನಿನ್ನೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ದಾಖಲಿಸಿಕೊಂಡಿದ್ದ ಕೋರ್ಟ್ ಇಂದು ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ತಿಳಿಸಿತ್ತು.
ಇಂದು ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯ ಸಿಸಿಬಿ ಪೊಲೀಸರಿಗೆ ನೋಟಿಸ್ ನೀಡಿದೆ. ಕೋರ್ಟ್ ನೀಡಿದ ನೋಟಿಸ್ಗೆ ಸಿಸಿಬಿ ಪೊಲೀಸರು ಉತ್ತರ ನೀಡಬೇಕು ಅಥವಾ ಆಕ್ಷೇಪಣೆ ಸಲ್ಲಿಸಬೇಕು. ಪ್ರಕರಣದ ತನಿಖೆ ಕುರಿತ ಕೇಸ್ ಡೈರಿಯನ್ನು ಸಲ್ಲಿಸಬೇಕು. ಈ ಹಿನ್ನೆಲೆಯಲ್ಲಿ ವಿಚಾರಣೆ ಮುಂದೂಡಲಾಗಿದ್ದು, ನಟಿ ರಾಗಿಣಿಗೆ ಸೆ.14ರವರೆಗೆ ಬಿಡುಗಡೆಯ ಭಾಗ್ಯವಾಗಲಿ, ರಿಲೀಫ್ ಆಗಲಿ ಸಿಕ್ಕಿಲ್ಲ.
ಆರೋಪಿಯು ಪೊಲೀಸರ ಕಸ್ಟಡಿಯಲ್ಲಿರುವಾಗ ಕೋರ್ಟ್ಗಳು ಜಾಮೀನು ಕೊಡಲು ಬರುವುದಿಲ್ಲ. ಇಂದು ಎನ್ಡಿಪಿಎಸ್ ಕೋರ್ಟ್ನಲ್ಲಿ ರಾಗಿಣಿ ಸಿಸಿಬಿ ಕಸ್ಟಡಿ ಅಂತ್ಯವಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತೊಂದು ವಿಚಾರಣೆ ಇದೆ. ಒಂದು ವೇಳೆ ಎನ್ಡಿಪಿಎಸ್ ಕೋರ್ಟ್ ರಾಗಿಣಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಿದರೆ ಮಾತ್ರ ಜಾಮೀನು ವಿಚಾರಣೆ ಕೈಗೆತ್ತಿಕೊಳ್ಳಲು ಮತ್ತೊಂದು ಕೋರ್ಟ್ಗೆ ಅವಕಾಶ ಇದೆ. ಈ ಕಾರಣಕ್ಕೆ ಇಂದು ರಾಗಿಣಿ ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್ ಸೋಮವಾರಕ್ಕೆ ಮುಂಡೂಡಿದೆ.
ದೇವೇಗೌಡರ ವಿಚಾರದಲ್ಲಿ ಕಾಂಗ್ರೆಸ್ಸಿಗರಿಂದ ಮೊಸಳೆ ಕಣ್ಣೀರು: ಬಿ ವೈ ವಿಜಯೇಂದ್ರ ತೀವ್ರ ವಾಗ್ದಾಳಿ, ಬ್ರ್ಯಾಂಡ್ ಬೆಂಗಳೂರು ಅಲ್ಲ ಇದು ಬ್ರೋಕನ್ ಬೆಂಗಳೂರು ಎಂದ ಆರ್ ಅಶೋಕ್
ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ಈ ಬಾರಿ ರಾಜ್ಯಸಭೆ ಟಿಕೆಟ್ ಕೈತಪ್ಪಿದ ವಿಚಾರವಾಗಿ ಕರ್ನಾಟಕ ರಾಜಕಾರಣದಲ್ಲಿ ಭಾರಿ ವಾಕ್ಸಮರ ಏರ್ಪಟ್ಟಿದೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯ...








