ADVERTISEMENT
Sunday, February 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಮಿಡ್ ಡೇ ನ್ಯೂಸ್ ರೌಂಡ್ ಅಪ್..!

admin by admin
September 12, 2020
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

“ಜಮೀರ್ ಮನೆ ಮಾರಲು ರೆಡಿಯಾಗ್ಲಿ”..!

ಸ್ಯಾಂಡಲ್‍ವುಡ್ ಡ್ರಗ್ಸ್ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಸಿಸಿಬಿ ಕಚೇರಿಗೆ ತೆರಳುವ ಮುನ್ನ ಮತ್ತೊಂದು ಬಾಂಬ್ ಸಿಡಿಸಿದ್ದಾರೆ.  ನಾನು ಸರ್ಕಾರಕ್ಕೆ ಪ್ರಾಮಾಣಿಕವಾಗಿ ಟ್ಯಾಕ್ಸ್ ಕಟ್ಟುತ್ತಿದ್ದೇನೆ. ಅದೇ ರೀತಿ ಶಾಸಕ ಜಮೀರ್ ಅಹಮದ್‍ರಿಂದಲೂ ಸರ್ಕಾರಕ್ಕೆ ಟ್ಯಾಕ್ಸ್ ಕಟ್ಟುವಂತೆ ಮಾಡುತ್ತಿದ್ದೇನೆ ಎಂದಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಜಮೀರ್ ಅಹಮದ್ ಶ್ರೀಲಂಕಾದ ಕ್ಯಾಸಿನೋದಲ್ಲಿದ್ದ ಸಾಕ್ಷ್ಯ ಹೇಳ್ತೇನೆ. ಶ್ರೀಲಂಕಾದ ವ್ಯವಹಾರದ ದಾಖಲೆ ಕೊಡ್ತೇನೆ ಎಂದು ಹೇಳುವ ಮೂಲಕ ಪ್ರಶಾಂತ್ ಸಂಬರಗಿ ಕುತೂಹಲ ಮೂಡಿಸಿದ್ದಾರೆ

Related posts

ಮಹಿಳೆಯರಿಗೆ ತಿಂಗಳಿಗೆ ₹25,000 ಯೋಜನೆ ಇಲ್ಲ: PIB ಫ್ಯಾಕ್ಟ್ ಚೆಕ್ ಸ್ಪಷ್ಟನೆ

ಮಹಿಳೆಯರಿಗೆ ತಿಂಗಳಿಗೆ ₹25,000 ಯೋಜನೆ ಇಲ್ಲ: PIB ಫ್ಯಾಕ್ಟ್ ಚೆಕ್ ಸ್ಪಷ್ಟನೆ

February 22, 2026
ರಾಜ್ಯದಲ್ಲೂ ಹಕ್ಕಿ ಜ್ವರ ಆತಂಕ?.. ಕೊಪ್ಪಳದಲ್ಲಿ ಮುಂಜಾಗ್ರತಾ ಕ್ರಮ ಕಡ್ಡಾಯ

ರಾಜ್ಯದಲ್ಲೂ ಹಕ್ಕಿ ಜ್ವರ ಆತಂಕ?.. ಕೊಪ್ಪಳದಲ್ಲಿ ಮುಂಜಾಗ್ರತಾ ಕ್ರಮ ಕಡ್ಡಾಯ

February 22, 2026

ಪಾಪಿ ತಂದೆ..!

ಪಾಪಿ ತಂದೆಯೊಬ್ಬ ತನ್ನ ಸ್ವಂತ ಮಗಳನ್ನೇ ನೀರಿನ ಬಕೆಟ್ ನಲ್ಲಿ ಮುಳುಗಿಸಿ ಕೊಲೆ ಮಾಡಿರುವ ಅಮಾನವೀಯ ಘಟನೆ ಚಿಕ್ಕಮಗಳೂರಿನ  ಕಡೂರು ಪಟ್ಟಣದಲ್ಲಿ ನಡೆದಿದೆ.  ದೊಡ್ಡಪೇಟೆಯ ನಿವಾಸಿ ಉಮಾಶಂಖರ್ ಹೆಣ್ಣು ಮಗು ಎಂಬ ಕಾರಣಕ್ಕೆ ಈ ಹೀನ ಕೃತ್ಯ ಎಸಗಿದ್ದಾನೆ.  ಆರೋಪಿಯನ್ನು ಕಡೂರು ಪೊಲೀಸರು ಬಂಧಿಸಿ ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಮೂರುವರೆ ವರ್ಷ ಯಡಿಯೂರಪ್ಪರೇ ಸಿಎಂ..!

ಮುಂದಿನ ಮೂರುವರೆ ವರ್ಷ ಯಡಿಯೂರಪ್ಪ ಅವರೇ ಮುಖ್ಯಮಂತ್ರಿ ಆಗಿ ಮುಂದುವರಿಯಲಿದ್ದಾರೆ ಎಂದು ಡಿಸಿಎಂ ಗೋವಿಂದ ಕಾರಜೋಳ ಅವರು ದಾವಣಗೆರೆಯಲ್ಲಿ ಹೇಳಿದ್ದಾರೆ. ಅಲ್ಲದೇ ಅವರಿಗೆ ಯಾವುದೇ ಹಿನ್ನಡೆ ಆಗುತ್ತಿಲ್ಲ. ಅದು ಮಾಧ್ಯಮಗಳ ಸೃಷ್ಟಿ, ಈ ಊಹಾಪೋಹಗಳು ಸತ್ಯಕ್ಕೆ ದೂರವಾದದ್ದು ಎಂದು ತಿಳಿಸಿದ್ದಾರೆ. ಇದೇ ವೇಳೆ ಬಿಎಸ್ ವೈ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ಭೇಟಿ ಕೇವಲ ಸೌಹಾರ್ದದ ಭೇಟಿ ಅಷ್ಟೇ ಎಂದು ಸ್ಪಷ್ಟಪಡಿಸಿದ್ದಾರೆ.

“ಜಮೀರ್ ಗುಜರಿ ಗಿರಾಕಿಯಂತೆ“

ದಾವಣಗೆರೆ: ಶಾಸಕ ಜಮೀರ್ ಅಹಮದ್ ಖಾನ್ ಗುಜರಿ ಗಿರಾಕಿ. ಗಳೀಸಿರೋದೆಲ್ಲ ಅನೈತಿಕ ಚಟುವಟಿಕೆಗಳಿಂದಲೇ.  ಅನೈತಿಕ ಚಟುವಟಿಕೆಯಿಂದಲೇ ಉನ್ನತ ಸ್ಥಾನಕ್ಕೆ ಬಂದ ವ್ಯಕ್ತಿ ಎಂದು ಬಿಜೆಪಿ ಶಾಸಕ‌ ಎಂ.ಪಿ.ರೇಣುಕಾಚಾರ್ಯ ಜಮೀರ್ ವಿರುದ್ಧ ಕಿಡಿಕಾರಿದ್ದಾರೆ. ಇದೇ ವೇಳೆ ಯಡಿಯೂರಪ್ಪ ಸಿಎಂ ಆದ್ರೆ ಅವರ ಮನೆ ಮುಂದೆ  ವಾಚ್ ಮನ್ ಆಗುತ್ತೇನೆ ಎಂದಿದ್ದರು. ಆದರೆ ಇನ್ನೂ ಆಗಲಿಲ್ಲ. ಜಮೀರ್ ಎರಡು ನಾಲಿಗೆಯ ವ್ಯಕ್ತಿ  ಎಂದು ಟೀಕಿಸಿದ್ದಾರೆ.

ಭಾರತದಲ್ಲಿ ಕೊರೊನಾ ರೌದ್ರಾವತಾರ..!

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 97,570 ಹೊಸ ಕೇಸ್’ಗಳು ಪತ್ತೆಯಾಗಿವೆ. ಇದರೊಂದಿಗೆ ದೇಶದ ಒಟ್ಟು ಸೋಂಕಿತರ ಸಂಖ್ಯೆ 46,59,985ಕ್ಕೆ ಏರಿಕೆಯಾಗಿದೆ. ಒಂದೇ ದಿನ 97,570 ಹೊಸ ಕೇಸ್ ಗಳು ಪತ್ತೆಯಾಗಿದೆ. ಕಿಲ್ಲರ್ ಕೊರೊನಾಗೆ 1,201 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ದೇಶದ ಒಟ್ಟು ಸೋಂಕಿತರ ಸಂಖ್ಯೆ 46,59,985ಕ್ಕೆ ಸಾವಿನ ಸಂಖ್ಯೆ 77,472ಕ್ಕೆ ತಲುಪಿದೆ.

ಜೆಇಇ ಪರೀಕ್ಷೆ ಫಲಿತಾಂಶ ಪ್ರಕಟ..!

ನವದೆಹಲಿ: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಇಂಜಿನಿಯರಿಂಗ್​ ಜೆಇಇ ಮುಖ್ಯ ಪರೀಕ್ಷೆಯ ಫಲಿತಾಂಶವನ್ನ ಪ್ರಕಟಿಸಿದೆ. ಇದ್ರಲ್ಲಿ 24 ವಿದ್ಯಾರ್ಥಿಗಳು ನೂರಕ್ಕೆ ನೂರು ಅಂಕ ಗಳಿಸಿ ಸಾಧನೆ ಮಾಡಿದ್ದಾರೆ.

ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು 100ಕ್ಕೆ 100ರಷ್ಟು ಅಂಕ ಗಳಿಸಿದ್ದು, ತೆಲಂಗಾಣದ 8 ವಿದ್ಯಾರ್ಥಿಗಳು ಟಾಪರ್​ಗಳಾಗಿ ಹೊರಹೊಮ್ಮಿದ್ದಾರೆ. ಇನ್ನೂ ತೆಲಂಗಾಣ ಮೊದಲ ಸ್ಥಾನದಲ್ಲಿದ್ದರೆ  ನಂತರದ ಸ್ಥಾನದಲ್ಲಿ ದೆಹಲಿ, ರಾಜಸ್ಥಾನ, ಆಂಧ್ರಪ್ರದೇಶ, ಹರಿಯಾಣ, ಗುಜರಾತ್​ ಹಾಗೂ ಮಹಾರಾಷ್ಟ್ರವಿದೆ.

 ‘ನಶೆ ನಂಟು’: ಮತ್ತೆ ಮೂವರು ಅಂದರ್..!

ಸ್ಯಾಂಡಲ್ ವುಡ್ ಡ್ರಗ್ ನಟಿನ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ  ಮತ್ತೆ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಐದನೇ ಆರೋಪಿ ಆಗಿದ್ದ ವೈಭವ್ ಜೈನ್ ಹಾಗೂ ಇಬ್ಬರು ಹೊಸ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಸಾಫ್ಟ್‌ವೇರ್ ಉದ್ಯೋಗಿ ಪ್ರತೀಕ್ ಶೆಟ್ಟಿ ಹಾಗೂ ಹರಿಯಣ ಮೂಲದ ಆದಿತ್ಯ ಅಗರ್ವಾಲ್ ಎಂಬುವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ತಂಗಾಳಿ ನಾಗರಾಜ್ ನಿಧನ..!

ಕನ್ನಡ ಚಿತ್ರರಂಗದ  ಖ್ಯಾತ  ಚಿತ್ರಸಾಹಿತಿ, ಗೀತ ರಚನೆಕಾರರಾದ ತಂಗಾಳಿ ನಾಗರಾಜ್ ಅವರು ಇಂದು ಮುಂಜಾನೆ ಹೃದಯಾಘಾತದಿಂದ ನಿಧನರಾಗಿದ್ದಾರೆ.  ನಾಗರಾಜ್ ಅವರ ನಿಧನಕ್ಕೆ ಗೀತರಚನೆಕಾರ ಕವಿರಾಜ್ ಸೇರಿದಂತೆ ಚಂದನವನದ ಇತರ ಗೀತರಚನೆಕಾರರು,  ಸಂಗೀತ ನಿರ್ದೇಶಕರು  ಸಂತಾಪ ಸೂಚಿಸಿದ್ದಾರೆ.

ನೈಟ್ ರೈಡರ್ಸ್ ಗೆ ಗುಡ್ ನ್ಯೂಸ್

ಸೆಪ್ಟೆಂಬರ್ 19ರಿಂದ ಯುಎಇನಲ್ಲಿ ಐಪಿಎಲ್ ಹಂಗಾಮ ಶುರುವಾಗಲಿದೆ. ಆದ್ರೆ ಕೆಲವೊಂದು ತಂಡಗಳಿಗೆ ಆರಂಭಿಕ ಪಂದ್ಯಗಳಿಗೆ ವಿದೇಶಿ ಪ್ಲೇಯರ್ಸ್ ಅಲಭ್ಯತೆ ಕಾಡುತ್ತಿದ್ದು, ಈ ವಿಚಾರವಾಗಿ ಕೆಕೆಆರ್ ತಂಡಕ್ಕೆ ಗುಡ್ ನ್ಯೂಸ್ ಸಿಕ್ಕಿದೆ. ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಪ್ಲೇಯರ್ಸ್ ಗಳಾಗಿರುವ ಇಯಾನ್ ಮಾರ್ಗನ್ ಹಾಗೂ ಪ್ಯಾಟ್ ಕಮಿನ್ಸ್ ಐಪಿಎಲ್ ನ ಆರಂಭಿಕ ಪಂದ್ಯಗಳಿಗೆ ಲಭ್ಯರಿದ್ದಾರೆ ಎಂದು ತಿಳಿದುಬಂದಿದೆ. ಕೆಕೆಆರ್ ಮೊದಲ ಪಂದ್ಯ ಸೆಪ್ಟೆಂಬರ್ 23ರಂದು ನಡೆಯಲಿದ್ದು, ಮಾರ್ಗನ್ ಹಾಗೂ ಕಮಿನ್ಸ್ ಸೆಪ್ಟೆಂಬರ್ 17ರಂದು ದುಬೈಗೆ ಆಗಮಿಸಿದ್ದಾರೆ.

ರೈನಾ ಬದಲಿಗೆ ಡೇವಿಡ್ ಮಮಿಡ್ ಡೇ ನ್ಯೂಸ್ ರೌಂಡ್ ಅಪ್..! 

ಈ ಬಾರಿಯ ಐಪಿಎಲ್ ಗೆ ಸುರೇಶ್ ರೈನಾ ಅಲಭ್ಯವಾಗಿದ್ದಾರೆ. ಹೀಗಾಗಿ ಸಿಎಸ್ ಕೆಗೆ ಸಂಕಷ್ಟ ಎದುರಾಗಿದ್ದು, ಈಗ ರೈನಾ ಜಾಗಕ್ಕೆ ಇಂಗ್ಲೆಂಡ್ ನ ಡೇವಿಡ್ ಮಲನ್ ಹೆಸರು ಕೇಳಿಬಂದಿದೆ. ಇತ್ತೀಚೆಗಷ್ಟೆ ಮುಕ್ತಾಯಗೊಂಡ ಆಸ್ಟ್ರೇಲಿಯಾ ವಿರುದ್ಧದ ಟಿ-20 ಸರಣಿಯಲ್ಲಿ ಮಲನ್, ಅದ್ಭುತ ಪ್ರದರ್ಶನ ತೋರಿದ್ದಾರೆ. ಈ ಹಿನ್ನೆಲೆ ಇಂಗ್ಲೆಂಡ್ ತಂಡದ ಬ್ಯಾಟ್ಸ್ ಮನ್ ಡೇವಿಡ್ ಮಲನ್ ಅವರನ್ನು ಚೆನ್ನೈ ರೈನಾ ಜಾಗಕ್ಕೆ ಆಯ್ಕೆ ಮಾಡುವುದು ಫೈನಲ್ ಆಗಿದೆ ಎನ್ನಲಾಗಿದೆ. ಮಲನ್ ಐಸಿಸಿ ಟಿ-20 ಬ್ಯಾಟಿಂಗ್ ಯಾರ್ಂಕಿಂಗ್ ನಲ್ಲಿ ಅಗ್ರ ಸ್ಥಾನದಲ್ಲಿದ್ದಾರೆ.

 

Tags: CinemaCrimenational newspoliticsSportsState News
ShareTweetSendShare
Join us on:

Related Posts

ಮಹಿಳೆಯರಿಗೆ ತಿಂಗಳಿಗೆ ₹25,000 ಯೋಜನೆ ಇಲ್ಲ: PIB ಫ್ಯಾಕ್ಟ್ ಚೆಕ್ ಸ್ಪಷ್ಟನೆ

ಮಹಿಳೆಯರಿಗೆ ತಿಂಗಳಿಗೆ ₹25,000 ಯೋಜನೆ ಇಲ್ಲ: PIB ಫ್ಯಾಕ್ಟ್ ಚೆಕ್ ಸ್ಪಷ್ಟನೆ

by Shwetha
February 22, 2026
0

ಸಾಮಾಜಿಕ ಜಾಲತಾಣಗಳಲ್ಲಿ ಕೇಂದ್ರ ಸರ್ಕಾರವು ಮಹಿಳೆಯರಿಗಾಗಿ ಮನೆಯಿಂದ ಕೆಲಸ ಮಾಡುವ ಯೋಜನೆ ತಂದಿದ್ದು, ತಿಂಗಳಿಗೆ ₹25,000 ಸಂಬಳ ನೀಡಲಿದೆ ಎಂಬ ಸಂದೇಶ ವೈರಲ್ ಆಗುತ್ತಿದೆ. ಆದರೆ ಈ...

ರಾಜ್ಯದಲ್ಲೂ ಹಕ್ಕಿ ಜ್ವರ ಆತಂಕ?.. ಕೊಪ್ಪಳದಲ್ಲಿ ಮುಂಜಾಗ್ರತಾ ಕ್ರಮ ಕಡ್ಡಾಯ

ರಾಜ್ಯದಲ್ಲೂ ಹಕ್ಕಿ ಜ್ವರ ಆತಂಕ?.. ಕೊಪ್ಪಳದಲ್ಲಿ ಮುಂಜಾಗ್ರತಾ ಕ್ರಮ ಕಡ್ಡಾಯ

by Shwetha
February 22, 2026
0

ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಕೋಳಿ ಹಕ್ಕಿ ಜ್ವರ (Bird Flu) ಪ್ರಕರಣ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಕೊಪ್ಪಳ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಜಿಲ್ಲಾಧಿಕಾರಿ...

ಜನಸಾಮಾನ್ಯರಿಗೆ ಬಿಗ್‌ಶಾಕ್… ಏಪ್ರಿಲ್‌ನಿಂದ ವಿದ್ಯುತ್ ದರ ಏರಿಕೆ ಸಾಧ್ಯತೆ

ಜನಸಾಮಾನ್ಯರಿಗೆ ಬಿಗ್‌ಶಾಕ್… ಏಪ್ರಿಲ್‌ನಿಂದ ವಿದ್ಯುತ್ ದರ ಏರಿಕೆ ಸಾಧ್ಯತೆ

by Shwetha
February 22, 2026
0

ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (KERC) ವಿದ್ಯುತ್ ದರ ಏರಿಕೆಗೆ ಸಿದ್ಧತೆ ನಡೆಸಿರುವುದಾಗಿ ತಿಳಿದುಬಂದಿದೆ. ಬರುವ ಏಪ್ರಿಲ್ ತಿಂಗಳಿಂದ ಗೃಹ ಬಳಕೆ ವಿದ್ಯುತ್ ದರ ಯೂನಿಟ್‌ಗೆ ಸುಮಾರು...

ರಾಜ್ಯದಲ್ಲಿ ಭ್ರಷ್ಟಾಚಾರ ಮತ್ತು ವರ್ಗಾವಣೆ ದಂಧೆ ಮಿತಿಮೀರಿದೆ: ಬಹಿರಂಗವಾಗಿಯೇ ಒಪ್ಪಿಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಭ್ರಷ್ಟಾಚಾರ ಮತ್ತು ವರ್ಗಾವಣೆ ದಂಧೆ ಮಿತಿಮೀರಿದೆ: ಬಹಿರಂಗವಾಗಿಯೇ ಒಪ್ಪಿಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ

by Shwetha
February 22, 2026
0

ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ವ್ಯವಸ್ಥೆಯೊಳಗೆ ಭ್ರಷ್ಟಾಚಾರ ಹಿಂದಿಗಿಂತಲೂ ಈಗ ವ್ಯಾಪಕವಾಗಿ ಹಬ್ಬಿದೆ. ವರ್ಗಾವಣೆಗಾಗಿ ಮಧ್ಯವರ್ತಿಗಳು ಮತ್ತು ಏಜೆಂಟರ ಹಾವಳಿ ಮಿತಿಮೀರಿದೆ ಎಂದು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಸ್ಫೋಟಕ...

ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (22-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
February 22, 2026
0

ದಿನ ಭವಿಷ್ಯ: 22-02-2026 ಮೇಷ ರಾಶಿ ಇಂದು ನಿಮಗೆ ಮಿಶ್ರ ಫಲಗಳು ದೊರೆಯಲಿವೆ. ಉದ್ಯೋಗದಲ್ಲಿರುವವರಿಗೆ ಜವಾಬ್ದಾರಿಗಳು ಹೆಚ್ಚಾಗಬಹುದು ಆದರೆ ನಿಮ್ಮ ಕೆಲಸಕ್ಕೆ ತಕ್ಕ ಮೆಚ್ಚುಗೆ ದೊರೆಯಲಿದೆ. ವ್ಯಾಪಾರಸ್ಥರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram