ADVERTISEMENT
Saturday, February 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬಳ್ಳಾರಿ ಜಿಲ್ಲೆ ಇಬ್ಭಾಗ ಪಕ್ಕಾ: ವಿಜಯನಗರ ಜಿಲ್ಲೆಗೆ ಬಿಎಸ್‍ವೈ ಗ್ರೀನ್ ಸಿಗ್ನಲ್..!

admin by admin
September 22, 2020
in Newsbeat, Politics, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಬಳ್ಳಾರಿ ಜಿಲ್ಲೆ: ಬಳ್ಳಾರಿ, ಕುರುಗೋಡು, ಸಿರಗುಪ್ಪ, ಸಂಡೂರು, ಕೂಡ್ಲಿಗಿ
ವಿಜಯನಗರ ಜಿಲ್ಲೆ: ಹೊಸಪೇಟೆ, ಕಂಪ್ಲಿ, ಹಗರಿಬೊಮ್ಮನಹಳ್ಳಿ, ಕೊಟ್ಟೂರು, ಹಡಗಲಿ, ಹರಪನಹಳ್ಳಿ
ಬೆಂಗಳೂರು: ವಿವಾದಿತ ಬಳ್ಳಾರಿ ಜಿಲ್ಲೆಯನ್ನು ಇಬ್ಭಾಗ ಮಾಡಿ ವಿಜಯನಗರ ಜಿಲ್ಲೆ ರಚನೆಗೆ ಇಲ್ಲಿಯವರೆಗೆ ಎದುರಾಗಿದ್ದ ಅಡೆತಡೆಗಳು ದೂರವಾದ ಹಿನ್ನೆಲೆಯಲ್ಲಿ ನೂತನ ಜಿಲ್ಲೆ ರಚನೆಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಗ್ರೀನ್ ಸಿಗ್ನಲ್ ನೀಡಿದ್ದಾರೆ.
11 ತಾಲೂಕುಗಳನ್ನು ಹೊಂದಿರುವ ಬಳ್ಳಾರಿ ಜಿಲ್ಲೆಯನ್ನು 5:6 ತಾಲೂಕುಗಳಾಗಿ ಹಂಚಿಕೆ ಮಾಡಿ ನೂತನ ವಿಜಯನಗರ ಜಿಲ್ಲೆ ಸ್ಥಾಪನೆ ಮಾಡುವುದು ತುಂಬಾ ಅಗತ್ಯವಿದೆ. ಹೀಗಾಗಿ ಮುಂದಿನ ಸಚಿವ ಸಂಪುಟ ಸಭೆಗೆ ಈ ವಿಷಯನ್ನು ಮಂಡಿಸಲು ಸೂಚಿಸಿ ಬಿಎಸ್‍ವೈ ಟಿಪ್ಪಣಿಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಇಲ್ಲಿಯವರೆಗೆ ಬಳ್ಳಾರಿ ಜಿಲ್ಲೆ ವಿಭಜನೆಗೆ ಎದುರಾಗಿದ್ದ ಪರ-ವಿರೋಧಿ ಹೋರಾಟಗಳಿಗೆ ತಲೆ ಕೆಡಿಸಿಕೊಳ್ಳದೆ ಸಚಿವ ಆನಂದ್‍ಸಿಂಗ್ ಒತ್ತಡಕ್ಕೆ ಮುಖ್ಯಮಂತ್ರಿಗಳು ಮಣಿದಿದ್ದಾರೆ ಎಂಬುದಕ್ಕೆ ಈ ಟಿಪ್ಪಣಿಯೇ ಉತ್ತರ ನೀಡಿದೆ.


ಬಳ್ಳಾರಿ ಜಿಲ್ಲೆ ವಿಭಜನೆಗೆ ಬಿಜೆಪಿ ಶಾಸಕರೇ ಆದ ಸೋಮಶೇಖರ ರೆಡ್ಡಿ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಯವುದೇ ಕಾರಣಕ್ಕೂ ಜಿಲ್ಲೆ ವಿಭಜನೆ ಮಾಡಲು ಬಿಡುವುದಿಲ್ಲ ಎಂದು ಬಿಎಸ್‍ವೈ ಮುಂದೆಯೂ ತಮ್ಮ ಆಕ್ರೋಶ ಹೊರಹಾಕಿದ್ದರು.
ಆದರೆ, ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳ, ಲಾಕ್‍ಡೌನ್ ಆದ ಹಿನ್ನೆಲೆಯಲ್ಲಿ ಈ ಪ್ರಸ್ತಾಪ ಮೂಲೆ ಗುಂಪಾಗಿತ್ತು. ಆದರೆ, ಕೊರೊನಾ ನಡುವೆಯೇ ಜನಜೀವನ ಸಹಜ ಸ್ಥಿತಿಗೆ ಮರಳುತ್ತಿರುವ ಹಿನ್ನೆಲೆಯಲ್ಲಿ ನೂತನ ವಿಜಯನಗರ ಜಿಲ್ಲೆ ರಚನೆಗೆ ಪ್ರಕ್ರಿಯೆಗೆ ಮರುಜೀವ ಬಂದಿದೆ.
ಬಳ್ಳಾರಿ ಜಿಲ್ಲೆಯು ತುಂಬಾ ವಿಸ್ತಾರವಾಗಿದೆ. ಬಳ್ಳಾರಿ 11 ಕಂದಾಯ ತಾಲೂಕುಗಳನ್ನು ಹಾಗೂ 3 ಕಂದಾಯ ಉಪವಿಭಾಗಗಳನ್ನು ಒಳಗೊಂಡಿರುವ ಅತಿದೊಡ್ಡ ಜಿಲ್ಲೆ ಎನಿಸಿಕೊಂಡಿದೆ. ಕೆಲವೊಂದು ಪ್ರದೇಶಗಳು ಜಿಲ್ಲಾ ಕೇಂದ್ರದಿಂದ 200 ಕಿ.ಮೀ ದೂರದಲ್ಲಿವೆ. ಇದರಿಂದ ಈ ಭಾಗದ ರೈತರಿಗೆ, ಬಡವರಿಗೆ, ಕೂಲಿ ಕಾರ್ಮಿಕರಿಗೆ ಹಾಗೂ ಜನ ಸಾಮಾನ್ಯರಿಗೆ ತಮ್ಮ ಕೆಲಸ ಕಾರ್ಯಗಳಿಗೆ ಜಿಲ್ಲಾ ಕೇಂದ್ರ ತಲುಪುವುದು ತುಂಬಾ ದುಸ್ತರವಾಗಿದೆ.
ಸಾರ್ವಜನಿಕ ಹಾಗೂ ಆಡಳಿತ ಹಿತದೃಷ್ಟಿಯಿಂದ ಪ್ರಸ್ತುತ ಬಳ್ಳಾರಿ ಜಿಲ್ಲೆಯ 11 ತಾಲೂಕುಗಳಲ್ಲಿ ಮೂಲ ಬಳ್ಳಾರಿ ಜಿಲ್ಲೆಯಲ್ಲಿ ಐದು ತಾಲೂಕುಗಳನ್ನು(ಬಳ್ಳಾರಿ, ಕುರುಗೋಡು, ಸಿರಗುಪ್ಪ, ಸಂಡೂರು, ಕೂಡ್ಲಿಗಿ) ಉಳಿಸಿಕೊಂಡು, ಉಳಿದ 6 ತಾಲೂಕುಗಳನ್ನು (ಹೊಸಪೇಟೆ, ಕಂಪ್ಲಿ, ಹಗರಿಬೊಮ್ಮನಹಳ್ಳಿ, ಕೊಟ್ಟೂರು, ಹಡಗಲಿ, ಹರಪನಹಳ್ಳಿ) ಸೇರಿಸಿ ಹೊಸಪೇಟೆ ಪಟ್ಟಣವನ್ನು ಕೇಂದ್ರ ಸ್ಥಾನವನ್ನಾಗಿಸಿಕೊಂಡು ನೂತನ ವಿಜಯನಗರ ಜಿಲ್ಲೆ ರಚಿಸುವುದು ತುಂಬಾ ಅಗತ್ಯವಿರುತ್ತದೆ. ಈ ಹಿನ್ನೆಲೆಯಲ್ಲಿ ಈ ವಿಷಯವನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸುವಂತೆ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.
ಹೀಗಾಗಿ ನೂತನ ವಿಜಯನಗರ ಜಿಲ್ಲೆ ಸ್ಥಾಪನೆ ಕುರಿತ ವಿಚಾರ ಯಾವ ಸ್ವರೂಪ ಪಡೆಯುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

Related posts

ಗಿಲ್ಲಿ ಬಡವ ಅಂತ ನಾನು ಹೇಳಿಲ್ಲ ಅಶ್ವಿನಿ ಗೌಡ ಯೂ ಟರ್ನ್ ಹಿಂದಿನ ಅಸಲಿ ಕಾರಣವೇನು?

ಗಿಲ್ಲಿ ಬಡವ ಅಂತ ನಾನು ಹೇಳಿಲ್ಲ ಅಶ್ವಿನಿ ಗೌಡ ಯೂ ಟರ್ನ್ ಹಿಂದಿನ ಅಸಲಿ ಕಾರಣವೇನು?

February 14, 2026
ರಾಜ್ಯ ಕಾಂಗ್ರೆಸ್ ಸರ್ಕಾರ ಪತನದ ಅಂಚಿನಲ್ಲಿದೆ, ಡಿಕೆಶಿ ಸಿಎಂ ಆಗೋದು ಫಿಕ್ಸ್: ಶಾಸಕ ಯತ್ನಾಳ್ ಸ್ಫೋಟಕ ಹೇಳಿಕೆ

ರಾಜ್ಯ ಕಾಂಗ್ರೆಸ್ ಸರ್ಕಾರ ಪತನದ ಅಂಚಿನಲ್ಲಿದೆ, ಡಿಕೆಶಿ ಸಿಎಂ ಆಗೋದು ಫಿಕ್ಸ್: ಶಾಸಕ ಯತ್ನಾಳ್ ಸ್ಫೋಟಕ ಹೇಳಿಕೆ

February 14, 2026

ಇನ್ನಷ್ಟು ಹೊಸ ಜಿಲ್ಲೆ ರಚನೆಗೆ ಹೋರಾಟ ಸಾಧ್ಯತೆ..!
ನೂತನ ವಿಜಯನಗರ ಜಿಲ್ಲೆ ರಚನೆಗೆ ಸರ್ಕಾರ ಕ್ಯಾಬಿನೆಟ್‍ನಲ್ಲಿ ಅನುಮೋದನೆ ನೀಡಿದರೆ ಈಗಾಗಲೇ ಹಲವು ದಶಕಗಳಿಂದ ಬೇಡಿಕೆಯಲ್ಲಿರುವ ಇತರೆ ಜಿಲ್ಲೆಗಳ ರಚನೆಯ ಬೇಡಿಕೆ ಮತ್ತೆ ಮುನ್ನೆಲೆಗೆ ಬರುವ ಸಾಧ್ಯತೆ ಇದೆ.
ವಿಶೇಷವಾಗಿ ಬೆಳಗಾವಿ ಜಿಲ್ಲೆಯನ್ನು ವಿಭಾಗಿಸಿ ಚಿಕ್ಕೋಡಿ ಜಿಲ್ಲೆ ರಚನೆ ಮಾಡಬೇಕೆಂಬ ಹೋರಾಟ ಕಳೆದ ವರ್ಷದ ತೀವ್ರ ಸ್ವರೂಪ ಪಡೆದಿತ್ತು. ಚಿಕ್ಕೋಡಿ ಜೊತೆಗೆ ಶಿರಸಿ, ಶಿಕಾರಿಪುರ ಸೇರಿದಂತೆ ಹಲವು ಜಿಲ್ಲೆಗಳ ಬೇಡಿಕೆಗಳು ಕೇಳಿ ಬಂದಿದ್ದವು. ಈ ಜಿಲ್ಲೆಗಳ ಬೇಡಿಕೆಗಳಿಗೆ ಸರ್ಕಾರಕ್ಕೆ ಬಿಸಿ ತುಪ್ಪವಾಗುವ ಸಾಧ್ಯತೆ ಇದೆ.

Tags: bellariBSYdivedigreen signalVijayanagar district
ShareTweetSendShare
Join us on:

Related Posts

ಗಿಲ್ಲಿ ಬಡವ ಅಂತ ನಾನು ಹೇಳಿಲ್ಲ ಅಶ್ವಿನಿ ಗೌಡ ಯೂ ಟರ್ನ್ ಹಿಂದಿನ ಅಸಲಿ ಕಾರಣವೇನು?

ಗಿಲ್ಲಿ ಬಡವ ಅಂತ ನಾನು ಹೇಳಿಲ್ಲ ಅಶ್ವಿನಿ ಗೌಡ ಯೂ ಟರ್ನ್ ಹಿಂದಿನ ಅಸಲಿ ಕಾರಣವೇನು?

by Shwetha
February 14, 2026
0

ಬಿಗ್ ಬಾಸ್ ಕನ್ನಡ ಸೀಸನ್ 12 ಮುಗಿದು ದಿನಗಳೇ ಕಳೆದರೂ ಅದರ ಅಬ್ಬರ ಮಾತ್ರ ಇನ್ನೂ ಕಡಿಮೆಯಾಗಿಲ್ಲ. ಅತಿ ದೊಡ್ಡ ರಿಯಾಲಿಟಿ ಶೋನ ವಿನ್ನರ್ ಆಗಿ ಗಿಲ್ಲಿ...

ರಾಜ್ಯ ಕಾಂಗ್ರೆಸ್ ಸರ್ಕಾರ ಪತನದ ಅಂಚಿನಲ್ಲಿದೆ, ಡಿಕೆಶಿ ಸಿಎಂ ಆಗೋದು ಫಿಕ್ಸ್: ಶಾಸಕ ಯತ್ನಾಳ್ ಸ್ಫೋಟಕ ಹೇಳಿಕೆ

ರಾಜ್ಯ ಕಾಂಗ್ರೆಸ್ ಸರ್ಕಾರ ಪತನದ ಅಂಚಿನಲ್ಲಿದೆ, ಡಿಕೆಶಿ ಸಿಎಂ ಆಗೋದು ಫಿಕ್ಸ್: ಶಾಸಕ ಯತ್ನಾಳ್ ಸ್ಫೋಟಕ ಹೇಳಿಕೆ

by Shwetha
February 14, 2026
0

ಉಡುಪಿ: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸುವಂತಹ ಹೇಳಿಕೆಯೊಂದನ್ನು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟಿಲ್ ಯತ್ನಾಳ್ ನೀಡಿದ್ದಾರೆ. ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಪತನವಾಗುವ ಹಂತಕ್ಕೆ...

ದುರಂತ, ಶುಭ ಸಂದರ್ಭಗಳಲ್ಲಿ ಸಾಲ ವಸೂಲಾತಿ ಬೇಡ: RBI ಕಠಿಣ ಸೂಚನೆ

ದುರಂತ, ಶುಭ ಸಂದರ್ಭಗಳಲ್ಲಿ ಸಾಲ ವಸೂಲಾತಿ ಬೇಡ: RBI ಕಠಿಣ ಸೂಚನೆ

by Shwetha
February 14, 2026
0

ಸಾಲಗಾರರ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ (RBI) ಮಹತ್ವದ ಮಾರ್ಗಸೂಚಿಗಳನ್ನು ಹೊರಡಿಸಿದೆ. ಸಾಲಗಾರರ ಮನೆಗಳಲ್ಲಿ ದುರಂತ ಸಂಭವಿಸಿದಾಗ ಅಥವಾ ಮದುವೆ ಸೇರಿದಂತೆ ಶುಭ ಕಾರ್ಯಕ್ರಮಗಳು...

ನೀವು ಪತ್ರಕರ್ತರೋ ಅಥವಾ ಬಿಜೆಪಿ ಕಾರ್ಯಕರ್ತರೋ? ದೇಶಕ್ಕೆ ಅನ್ಯಾಯ ಮಾಡಬೇಡಿ ಮಾಧ್ಯಮಗಳಿಗೆ  ರಾಹುಲ್ ಗಾಂಧಿ ಖಡಕ್ ಎಚ್ಚರಿಕೆ

ನೀವು ಪತ್ರಕರ್ತರೋ ಅಥವಾ ಬಿಜೆಪಿ ಕಾರ್ಯಕರ್ತರೋ? ದೇಶಕ್ಕೆ ಅನ್ಯಾಯ ಮಾಡಬೇಡಿ ಮಾಧ್ಯಮಗಳಿಗೆ ರಾಹುಲ್ ಗಾಂಧಿ ಖಡಕ್ ಎಚ್ಚರಿಕೆ

by Shwetha
February 14, 2026
0

ನವದೆಹಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಂದು ಸಂಸತ್ ಭವನದ ಹೊರಗೆ ಮಾಧ್ಯಮ ಪ್ರತಿನಿಧಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಸಂಸದ...

RCB ಅಭಿಮಾನಿಗಳ ಸುರಕ್ಷತೆ ಕುರಿತು ಸರ್ಕಾರದ ಮಹತ್ವದ ಹೇಳಿಕೆ

RCB ಅಭಿಮಾನಿಗಳ ಸುರಕ್ಷತೆ ಕುರಿತು ಸರ್ಕಾರದ ಮಹತ್ವದ ಹೇಳಿಕೆ

by Shwetha
February 14, 2026
0

ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ RCB ಪಂದ್ಯ ನಡೆಯಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮತಿ ನೀಡಲಾಗಿದೆ. ಇದರ ಹಿನ್ನೆಲೆಯಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅಭಿಮಾನಿಗಳ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram