ADVERTISEMENT
Monday, February 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ನಡೆದಾಡುವ ಸಂಗೀತ ವಿಶ್ವವಿದ್ಯಾಲಯದ ಮುಂದೆ ಕುಳಿತ ಕ್ಷಣ; ಪವಡಿಸು ಪರಮಾತ್ಮ ಶ್ರೀ ಬಾಲಸುಬ್ರಹ್ಮಣ್ಯಂ

admin by admin
September 26, 2020
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ಆಕಾಶದ ವಿಸ್ತಾರವನ್ನು ವಿವರಿಸಲಾಗುವುದಿಲ್ಲ ; ಕಡಲಿನ ಆಳವನ್ನು ಅಳೆಯಲಾಗುವುದಿಲ್ಲ ಹಾಗೆಯೇ ಸಂಗೀತದಲ್ಲಿ ಎಸ್ ಪಿ ಬಾಲಸುಬ್ರಹ್ಮಣ್ಯಮ್ ಅವರ ವ್ಯಕ್ತಿತ್ವವೂ ವರ್ಣನಾತೀತ. ಇವತ್ತಿಗೆ ಸರಿಯಾಗಿ ಹದಿನಾರು ವರ್ಷಗಳ ಹಿಂದೆ ಈ ಟಿವಿಯ ‘ಎದೆ ತುಂಬಿ ಹಾಡುವೆನು’ ಕಾರ್ಯಕ್ರಮದ ಶೂಟಿಂಗ್ ಸೆಟ್ ನಲ್ಲಿ ಈ ಸಂಗೀತದ ದೇವರೊಂದಿಗೆ ಸಂವಾದಿಸುವ ಒಂದು ಅವಕಾಶದಲ್ಲಿ ನಮ್ಮ ಎದೆ ತುಂಬಾ ಆವರಿಸಿಕೊಂಡು ಕುಳಿತಿದ್ದರು ಎಸ್ಪಿಬಿ.

ಬೆಳದಿಂಗಳ ಕವಿ ಕೆ ಕಲ್ಯಾಣ್ ಅವರೊಂದಿಗೆ ಹೋದಾಗ ತುಂಬು ತೋಳಿನ ಬನಿಯನ್ ತೊಟ್ಟು ಊಟಕ್ಕೆ ಕುಳಿತಲ್ಲಿಂದಲೇ ಸ್ವಾಗತಿಸಿದ ಗಾನ ಗಂಧರ್ವ, ನಮ್ಮ ಪ್ರೆಸ್ ಕ್ಲಬ್ ಸಂಗೀತ ರಸಮಂಜರಿ ಕಾರ್ಯಕ್ರಮ ನಡೆಸಿಕೊಡಲು ತುಂಬು ಮನಸಿನಿಂದ ಒಪ್ಪಿಗೆ ನೀಡಿದರು.

Related posts

What should the God's lamp look like inside the house?

ಮನೆಯೊಳಗೆ ದೇವರ ದೀಪ ಹೇಗಿರ ಬೇಕು?

February 15, 2026
ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

February 15, 2026

ಅವರ ಕಾರ್ಯಕ್ರಮದ ಮೂಲಕ ಪತ್ರಕರ್ತರ ಆರೋಗ್ಯ ನಿಧಿಯನ್ನು ಸ್ಥಾಪಿಸುತ್ತಿರುವ ವಿಷಯ ತಿಳಿದ ನಂತರ ತಮ್ಮ ಸಂಭಾವನೆಯನ್ನು ಆ ಫಂಡ್ ಗೆ ಬಿಟ್ಟುಕೊಟ್ಟು ದೊಡ್ಡತನ ಮೆರೆದರು. ಅಲ್ಲದೇ ಆವತ್ತಿನ ಎದೆ ತುಂಬಿ ಹಾಡುವ ಶೂಟಿಂಗ್ ನಲ್ಲಿ ಪ್ರೆಸ್ ಕ್ಲಬ್ ಪದಾಧಿಕಾರಿಗಳನ್ನು ಪರಿಚಯಿಸಿ ಕರ್ನಾಟಕದ ಪತ್ರಕರ್ತರನ್ನು ಶ್ಲಾಘಿಸಿ ಮಾತನಾಡಿದ್ದು ಪ್ರಸಾರವೂ ಆಯಿತು. ಆ ಕಾರ್ಯಕ್ರಮದ ಮುಖ್ಯ ಛಾಯಾಗ್ರಾಹಕ ನಮ್ಮ ಸದಸ್ಯ ಬಾಲು, ನಮ್ಮ ಮೇಲೆ ( ನಾನು, ಶೆಣೈ, ಜೆಸುನಾ, ಕಲ್ಯಾಣ್ ) ಬೆಳಕು ಚೆಲ್ಲಿ, ಕ್ಯಾಮೆರಾ ತಿರುಗಿಸಿ ಶೂಟ್ ಮಾಡಿದ್ದು ಮರೆಯಲಾಗದ ಕ್ಷಣ.

2004 ಅಕ್ಟೋಬರ್ 18 ಬೆಳಗ್ಗೆ ಪ್ರೆಸ್ ಕ್ಲಬ್ ನಲ್ಲಿ ಎಸ್ ಪಿ ಬಿ ಪತ್ರಿಕಾ ಸಂವಾದ , ಮಧ್ಯಾಹ್ನ ಭೋಜನ, ಸಂಜೆ ಕೋರಮಂಗಲ ಇಂಡೋರ್ ಸ್ಟೇಡಿಯಂನಲ್ಲಿ ಸಂಗೀತರಾಧನೆ ಜತೆಗೇ ಅಂಬರೀಷ್ ಅವರು 200 ಚಿತ್ರಗಳನ್ನು ಪೂರೈಸಿದ ಸಂಭ್ರಮದ ಪುರಸ್ಕಾರ ಸನ್ಮಾನ. ಅವತ್ತು ಮುಖ್ಯಮಂತ್ರಿ ಧರ್ಮಸಿಂಗ್ ದಿಡೀರ್ ದೆಹಲಿ ಬುಲಾವ್ ನಿಂದಾಗಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ,ಮಲ್ಲಿಕಾರ್ಜುನ ಖರ್ಗೆ ಅವರಿಂದ ಎಸ್ ಪಿ ಬಿಗೆ ಪ್ರೆಸ್ ಕ್ಲಬ್ ಗೌರವ ಸಮರ್ಪಣೆ.

“ಪ್ರೆಸ್, ಪೊಲಿಟಿಷಿಯನ್ಸ್ ಮತ್ತು ಫಿಲಂ ಇಂಡಸ್ಟ್ರಿ ಸೇರಿದ ಒಂದೇ ವೇದಿಕೆಯಲ್ಲಿ ನಡೆದ ಈ ಪುರಸ್ಕಾರ ತಮ್ಮ ಸಂಗೀತ ಪಯಣದಲ್ಲಿ ಯಾವತ್ತೂ ನೆನಪಿನಲ್ಲಿರುತ್ತದೆ” ಎಂದು ಮನಸು ತುಂಬಿ ಹೇಳಿದ್ದಲ್ಲದೆ ಅಂದು ಎದೆ ತುಂಬಿ ಹಾಡಿ ಸ್ಟೇಡಿಯಂನಲ್ಲಿ ತುಂಬಿದ ಅಸಂಖ್ಯಾತ ಸಂಗೀತ ರಸಿಕರ ಮೆಚ್ಚಿನ ಕನ್ನಡ ಗೀತೆಗಳನ್ನು ಸಾಕ್ಷಾತ್ಕಾರಗೊಳಿಸಿದರು. ಈ ಟಿವಿ ಆ ರಸಸಂಜೆಯನ್ನು ಮುದ್ರಿಸಿ ಮರು ಪ್ರಸಾರವನ್ನು ಮಾಡಿತು. ಅಂದು ಎಸ್ ಪಿ ಯವರ ಗಾಯನದಿಂದ ಶುರುವಾದ ಆರೋಗ್ಯ ನಿಧಿಯ ಯೋಜನಾರಂಭ ಮುಂದುವರೆದು ಸರ್ಕಾರ ಒಂದು ಕೋಟಿ ನಿಧಿಯನ್ನು ವಾರ್ತಾ ಇಲಾಖೆಯಲ್ಲಿಟ್ಟಿದೆ.

ಇನ್ನು ಒಂದೆರಡು ಅನುಭವಗಳನ್ನು ಹಾಗೆ ಉಳಿಸಿಕೊಂಡು..

– ವೈ ಜಿ ಅಶೋಕ್ ಕುಮಾರ್

Tags: Balasubramaniams p balasubramaniamSPBSPB Hits
ShareTweetSendShare
Join us on:

Related Posts

What should the God's lamp look like inside the house?

ಮನೆಯೊಳಗೆ ದೇವರ ದೀಪ ಹೇಗಿರ ಬೇಕು?

by admin
February 15, 2026
0

ಮನೆಯೊಳಗೆ ದೇವರ ದೀಪ ಹೇಗಿರ ಬೇಕು? ನಾವು ದಿನ ನಿತ್ಯ ದೇವರಿಗೆ ದೀಪ ಇಟ್ಟು, ಭಕ್ತಿಯಿಂದ ದೇವರಿಗೆ ಕೈ ಮುಗಿಯುತ್ತೇವೆ. ನಮ್ಮನ್ನು ಕುತೂಹಲದಿಂದ ನೋಡಿ ಕಲಿಯುವ ಮಕ್ಕಳು'...

ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

by Shwetha
February 15, 2026
0

ಮಹಾರಾಷ್ಟ್ರದ ಮಾಲೆಗಾಂವ್ ಮಹಾನಗರ ಪಾಲಿಕೆಯಲ್ಲಿ ತೀವ್ರ ಸ್ವರೂಪದ ರಾಜಕೀಯ ವಿವಾದವೊಂದು ಭುಗಿಲೆದ್ದಿದೆ. ಮಹಾನಗರ ಪಾಲಿಕೆಯ ಉಪಮೇಯರ್ ಅವರ ಅಧಿಕೃತ ಕೊಠಡಿಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಮತ್ತು ಸಂವಿಧಾನ...

ನನ್ನ ಮಾತನ್ನು ಬರೆದಿಟ್ಟುಕೊಳ್ಳಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಬರೋಬ್ಬರಿ 141 ಸ್ಥಾನ:2028ರ ಚುನಾವಣೆಗೆ ಈಗಲೇ ಭವಿಷ್ಯ ನುಡಿದ ಡಿಕೆ ಶಿವಕುಮಾರ್

ನನ್ನ ಮಾತನ್ನು ಬರೆದಿಟ್ಟುಕೊಳ್ಳಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಬರೋಬ್ಬರಿ 141 ಸ್ಥಾನ:2028ರ ಚುನಾವಣೆಗೆ ಈಗಲೇ ಭವಿಷ್ಯ ನುಡಿದ ಡಿಕೆ ಶಿವಕುಮಾರ್

by Shwetha
February 15, 2026
0

ಹಾವೇರಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅಲೆ ದಿನೇ ದಿನೇ ಹೆಚ್ಚುತ್ತಿದ್ದು, ಮುಂದಿನ 2028ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಬರೋಬ್ಬರಿ 141 ಸ್ಥಾನಗಳನ್ನು ಗೆಲ್ಲಲಿದೆ ಎಂದು ಉಪಮುಖ್ಯಮಂತ್ರಿ...

ನನ್ನ ಅಜೆಂಡಾ ಸಿಎಂ ಕುರ್ಚಿಯಲ್ಲ, ಭ್ರಷ್ಟ ಸರ್ಕಾರ ಕಿತ್ತೊಗೆಯುವುದೇ ಗುರಿ: ಸಿಎಂ ಯಾರು ಎಂಬ ಚರ್ಚೆಯೇ ಅಪ್ರಬುದ್ಧತೆ ಎಚ್‌ಡಿಕೆ

ನನ್ನ ಅಜೆಂಡಾ ಸಿಎಂ ಕುರ್ಚಿಯಲ್ಲ, ಭ್ರಷ್ಟ ಸರ್ಕಾರ ಕಿತ್ತೊಗೆಯುವುದೇ ಗುರಿ: ಸಿಎಂ ಯಾರು ಎಂಬ ಚರ್ಚೆಯೇ ಅಪ್ರಬುದ್ಧತೆ ಎಚ್‌ಡಿಕೆ

by Shwetha
February 15, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ 2028ರ ವಿಧಾನಸಭಾ ಚುನಾವಣೆಯ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಚರ್ಚೆ ಈಗಲೇ ಕಾವೇರುತ್ತಿದೆ. ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಸಿಎಂ ಆಗಲು...

ರಾಜ್ಯದ ಜನತೆಗೆ ಬಂಪರ್ ಸುದ್ದಿ: ಫೆಬ್ರವರಿಯಿಂದಲೇ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭ, ಅನರ್ಹ ಕಾರ್ಡ್‌ಗಳಿಗೆ ಕತ್ತರಿ ಗ್ಯಾರಂಟಿ!

ರಾಜ್ಯದ ಜನತೆಗೆ ಬಂಪರ್ ಸುದ್ದಿ: ಫೆಬ್ರವರಿಯಿಂದಲೇ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭ, ಅನರ್ಹ ಕಾರ್ಡ್‌ಗಳಿಗೆ ಕತ್ತರಿ ಗ್ಯಾರಂಟಿ!

by Shwetha
February 15, 2026
0

ಬೆಂಗಳೂರು: ರಾಜ್ಯದಲ್ಲಿ ಹೊಸ ಪಡಿತರ ಚೀಟಿಗಾಗಿ (Ration Card) ಚಾತಕ ಪಕ್ಷಿಯಂತೆ ಕಾಯುತ್ತಿದ್ದ ಲಕ್ಷಾಂತರ ಕುಟುಂಬಗಳಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಕಳೆದ ಕೆಲವು ಸಮಯದಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram