ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕರ್ನಾಟಕ ಬಂದ್ ಹೋರಾಟದ ಕಿಚ್ಚು ತೀವ್ರಗೊಂಡಿದೆ. ಬೆಳಿಗ್ಗೆಯಿಂದಲೇ ವಿವಿಧ ಸಂಘಟನೆಗಳು ಪ್ರತಿಭಟನೆ ಆರಂಭಿಸಿದ್ದು, ಬಸ್ ಗಳನ್ನು ತಡೆದು ಅನ್ನದಾತರು ಪ್ರತಿಭಟನೆಗಿಳಿದಿದ್ದಾರೆ.
ಹುಬ್ಬಳ್ಳಿ ನಗರದ ಚೆನ್ನಮ್ಮ ವೃತ್ತದಲ್ಲಿ ಬಸ್ ಗಳನ್ನು ತಡೆದು ಪ್ರತಿಭಟನೆ ನಡೆಸುತ್ತಿದ್ದರೆ, ರಸ್ತೆ ಮೇಲೆ ಮಲಗಿಕೊಂಡು ರೈತರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಬಸ್ ಸಂಚಾರ ಆರಂಭವಾದ ಹಿನ್ನೆಲೆಯಲ್ಲಿ ಚಾಲಕರು, ಪ್ರಯಾಣಿಕರನ್ನು ರೈತರು ತರಾಟೆಗೆ ತೆಗೆದುಕೊಂಡಿದ್ದಾರೆ. ರೈತರ ಹೋರಾಟಕ್ಕೆ ಎಎಪಿ, ಕಾಂಗ್ರೆಸ್, ಜೆಡಿಎಸ್ ಮುಖಂಡರ ಸಾಥ್ ನೀಡಿದ್ದು, ಬಂದ್ಗೆ ಬೆಂಬಲ ನೀಡುವಂತೆ ಕೈಮುಗಿದು ವಾಹನ ಸವಾರರಲ್ಲಿ ರೈತರು ಹಾಗೂ ಹೋರಾಟಗಾರರು ಕೈಮುಗಿದು ಮನವಿ ಮಾಡುತ್ತಿರುವ ದೃಶ್ಯ ಕಂಡು ಬರುತ್ತಿದೆ.
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರ ಭರವಸೆ: ಡಿಕೆ ಶಿವಕುಮಾರ್
ಬೆಂಗಳೂರು ನಗರಕ್ಕೆ ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಅಗತ್ಯವಿರುವ ಎಲ್ಲಾ ಅನುಮತಿಗಳನ್ನು ಕೇಂದ್ರ ಸರ್ಕಾರ ನೀಡಲಿದೆ ಎಂದು ಡಿ. ಕೆ. ಶಿವಕುಮಾರ್ ತಿಳಿಸಿದ್ದಾರೆ. ಕೇಂದ್ರ ವಿಮಾನಯಾನ ಸಚಿವರನ್ನು...








