ADVERTISEMENT
Sunday, July 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports IPL 2020

ಐಪಿಎಲ್ 2020- ಸೂಪರ್ ಓವರ್ ನಲ್ಲಿ ಮುಂಬೈ ಇಂಡಿಯನ್ಸ್ ಸೋಲುಣಿಸಿದ ಆರ್ ಸಿಬಿ

admin by admin
September 29, 2020
in IPL 2020, Sports, ಐಪಿಎಲ್ 2020, ಕ್ರೀಡೆ
Share on FacebookShare on TwitterShare on WhatsappShare on Telegram

ಐಪಿಎಲ್ 2020- ಸೂಪರ್ ಓವರ್ ನಲ್ಲಿ ಮುಂಬೈ ಇಂಡಿಯನ್ಸ್ ಸೋಲುಣಿಸಿದ ಆರ್ ಸಿಬಿ

#rcb #mumbai indians #ipl 2020 #Devdutt Padikkal #ipl2020ರ ಐಪಿಎಲ್ ಟೂರ್ನಿಯ 10ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೂಪರ್ ಓವರ್ ನಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿದೆ.
ದುಬೈ ನಲ್ಲಿ ನಡೆದ ಪಂದ್ಯದಲ್ಲಿ ರಾಯಲ್ಸ್ ಚಾಲೆಂಜರ್ಸ್ ತಂಡದ ನೀಡಿದ್ದ 201 ರನ್ ಗಳ ಸವಾಲನ್ನು ಬೆನ್ನಟ್ಟಿದ್ದ ಮುಂಬೈ ಇಂಡಿಯನ್ಸ್ ತಂಡ ಟೈ ಮಾಡಿಕೊಳ್ಳುವಲ್ಲಿ ಯಶಸ್ವಿಯಾಯ್ತು. ನಂತರ ನಡೆದ ಸೂಪರ್ ಓವರ್ ನಲ್ಲಿ ಮುಂಬೈ ತಂಡ ಕೇವಲ ಏಳು ರನ್ ಗಳಿಸಲಷ್ಟೇ ಸಾಧ್ಯವಾಯ್ತು. ಹೀಗಾಗಿ ಎಬಿಡಿ ವಿಲಿಯರ್ಸ್ ಅವರ ಸಮಯೋಚಿತ ಆಟದಿಂದ ಆರ್‍ಸಿಬಿ ತಂಡ ಗೆಲುವಿನ ನಗೆ ಬೀರಿತ್ತು
ಇದಕ್ಕೂ ಮೊದಲು ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತ್ತು. ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ ತಂಡಕ್ಕೆ ದೇವದತ್ ಪಡಿಕ್ಕಲ್ ಮತ್ತು ಆರೋನ್ ಫಿಂಚ್ ಅವರು 9 ಓವರ್ ಗಳಲ್ಲಿ 81 ರನ್ ಕಲೆ ಹಾಕಿತ್ತು. ಆರೋನ್ ಫಿಂಚ್ 35 ಎಸೆತಗಳಲ್ಲಿ ಏಳು ಬೌಂಡರಿ ಮತ್ತು ಸಿಕ್ಸರ್ ನೆರವಿನಿಂದ 52 ರನ್ ದಾಖಲಿಸಿದ್ರು. ಹಾಗೇ ದೇವದತ್ ಪಡಿಕ್ಕಲ್ ಅವರು 40 ಎಸೆತಗಳಲ್ಲಿ ಐದು ಬೌಂಡರಿ ಮತ್ತು ಎರಡು ಸಿಕ್ಸರ್ ಗಳ ಸಹಾಯದಿಂದ 54 ರನ್ ಗಳಿಸಿದ್ರು.
ವಿರಾಟ್ ಕೊಹ್ಲಿ ಮೂರು ರನ್ ಗಳಿಸಿದ್ರೆ ಮತ್ತೆ ಆರ್ ಸಿಬಿ ಅಭಿಮಾನಿಗಳನ್ನು ನಿರಾಸೆಗೊಳಿಸಿದ್ರು. ಆದ್ರೆ ಎಬಿಡಿ ವಿಲಿಯರ್ಸ್ ಮತ್ತು ಶಿವಂ ದುಬೆ ಮಿಂಚಿನ ಆಟವನ್ನಾಡಿದ್ರು. ಎಬಿಡಿ 24 ಎಸೆತಗಳಲ್ಲಿ ನಾಲ್ಕು ಬೌಂಡರಿ ಮತ್ತು ನಾಲ್ಕು ಸಿಕ್ಸರ್ ಗಳ ಸಹಾಯದಿಂದ ಅಜೇಯ 55 ರನ್ ಸಿಡಿಸಿದ್ರೆ, ಶಿವಂ ದುಬೆ 10 ಎಸೆತಗಳಲ್ಲಿ ಮೂರು ಸಿಕ್ಸರ್ ಮತ್ತು ಒಂದು ಬೌಂಡರಿಯ ನೆರವಿನಿಂದ ಅಜೇಯ 27 ರನ್ ದಾಖಲಿಸಿದ್ರು. ಪರಿಣಾಮ ಆರ್ ಸಿಬಿ ತಂಡ ನಿಗದಿತ 20 ಓವರ್ ಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ 201 ರನ್ ಗಳಿಸಿತು.
#ishan kishan #ipl 2020 #ipl #rcb #mumbai indians ಸವಾಲನ್ನು ಬೆನ್ನಟ್ಟಿದ್ದ ಮುಂಬೈ ಇಂಡಿಯನ್ಸ್ ತಂಡ ಆರಂಭದಲ್ಲೇ ಆಘಾತ ಅನುಭವಿಸಿತ್ತು. 39 ರನ್ ಗಳಿಸುಷ್ಟರಲ್ಲಿ ಮುಂಬೈ ಇಂಡಿಯನ್ಸ್ ತಂಡ ರೋಹಿತ್ ಶರ್ಮಾ (8), ಕ್ವಿಂಟಾನ್ ಡಿ ಕಾಕ್ (14) ಮತ್ತು ಸೂರ್ಯ ಕುಮಾರ್ ಯಾದವ್ (0) ಪೆವಿಲಿಯನ್ ಸೇರಿಕೊಂಡ್ರು.
ಬಳಿಕ ಇಶಾನ್ ಕಿಶನ್ ಅವರನ್ನು ಸೇರಿಕೊಂಡ ಹಾರ್ದಿಕ್ ಪಾಂಡ್ಯ 15 ರನ್ ಗಳಿಸಿ ಪೆವಿಲಿಯನ್ ಹಾದಿ ಹಿಡಿದ್ರು. ಆಗ ಮುಂಬೈ ಇಂಡಿಯನ್ಸ್ ತಂಡದ ಮೊತ್ತ ನಾಲ್ಕು ವಿಕೆಟ್ ಗೆ 78 ರನ್.
ನಂತರ ಇಶಾನ್ ಕಿಶನ್ ಮತ್ತು ಕಿರಾನ್ ಪೊಲಾರ್ಡ್ ಜವಾಬ್ದಾರಿಯುತ ಆಟಕ್ಕೆ ಮುಂದಾದ್ರು. ಇನ್ನೇನೂ ಪಂದ್ಯ ಆರ್ ಸಿಬಿ ತಂಡ ಗೆಲ್ಲುತ್ತೆ ಅಂತ ಅಂದುಕೊಂಡುವಷ್ಟರಲ್ಲಿ ಇಶಾನ್ ಕಿಶನ್ ಆರ್ ಸಿಬಿ ಬೌಲರ್ ಗಳ ಮೇಲೆ ಪ್ರಹಾರ ನಡೆಸಿದ್ರು. ಮತ್ತೊಂದೆಡೆ ಕಿರಾನ್ ಪೊಲಾರ್ಡ್ ಕೂಡ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ್ರು. ಬೌಂಡರಿ ಮತ್ತು ಸಿಕ್ಸರ್ ಗಳ ಸಿಡಿಸುವ ಮೂಲಕ ಮುಂಬೈ ತಂಡ ಗೆಲುವಿನ ಹಾದಿ ಹಿಡಿಯಿತ್ತು. ಈ ಹಂತದಲ್ಲಿ ಮನಮೋಹಕ 99 ರನ್ ಗಳಿಸಿದ್ದ ಇಶಾನ್ ಕಿಶಾನ್ ಉದಾನಗೆ ವಿಕೆಟ್ ಒಪ್ಪಿಸಿದ್ರು.
ಇಶಾನ್ ಕಿಶನ್ ಅವರು 58 ಎಸೆತಗಳಲ್ಲಿ ಎರಡು ಬೌಂಡರಿ ಮತ್ತು 9 ಸಿಕ್ಸರ್ ಗಳನ್ನು ಸಿಡಿಸುವ ಮೂಲಕ ಮಿಂಚು ಹರಿಸಿದ್ರು. ಮತ್ತೊಂದೆಡೆ ಕಿರಾನ್ ಪೊಲಾರ್ಡ್ 24 ಎಸೆತಗಳಲ್ಲಿ ಮೂರು ಬೌಂಡರಿ ಮತ್ತು ಐದು ಸಿಕ್ಸರ್ ಗಳ ಸಹಾಯದಿಂದ ಅಜೇಯ 60 ರನ್ ಗಳಿಸಿದ್ದಾಗ ಪಂದ್ಯ ಟೈಗೊಂಡಿತ್ತು. ಅಂತಿಮವಾಗಿ ಸೂಪರ್ ಓವರ್ ನಲ್ಲಿ ಆರ್ ಸಿಬಿ ತಂಡ ಗೆಲುವಿನ ನಗೆ ಬೀರಿತ್ತು. ಎಬಿಡಿ ವಿಲಿಯರ್ಸ್ ಪಂದ್ಯ ಶ್ರೇಷ್ಠ ಪ್ರಶಶ್ತಿಗೆ ಭಾಜನರಾದ್ರು.

Related posts

jandu-kumar-commonwealth-games-para-powerlifting-success

ಎದೆತುಂಬಿ ಹೇಳಿರುವೆ…ಪ್ರೀತಿಯಿಂದ ಬರೆದಿರುವೆ… ಮನವಿಟ್ಟು ಓದಿ… ಇದು ನನ್ನ ಅಂತರಾಳದ ಮಾತು..!

July 26, 2026
devshayani-ekadashi-hari-shayani-significance

Astro- ಇಂದು ದೇವಶಯನಿ ಏಕಾದಶಿ ಅಥವಾ ಹರಿ-ಶಯನಿ ಎಂದು ಕರೆಯಲಾಗುತ್ತದೆ ಎಂದು ಗೋತ್ತೇ..?

July 25, 2026
Tags: #A B de Villiers#Ishan Kishan#Kieron Pollard#Navdeep Saini#Royal Challengers bengaluruCricketHardik PandyaIPLIPL 2020mumbai indiansRCBrohith sharmavirat kohli
ShareTweetSendShare
Join us on:

Related Posts

jandu-kumar-commonwealth-games-para-powerlifting-success

ಎದೆತುಂಬಿ ಹೇಳಿರುವೆ…ಪ್ರೀತಿಯಿಂದ ಬರೆದಿರುವೆ… ಮನವಿಟ್ಟು ಓದಿ… ಇದು ನನ್ನ ಅಂತರಾಳದ ಮಾತು..!

by admin
July 26, 2026
0

ಎದೆತುಂಬಿ ಹೇಳಿರುವೆ...ಪ್ರೀತಿಯಿಂದ ಬರೆದಿರುವೆ... ಮನವಿಟ್ಟು ಓದಿ... ಇದು ನನ್ನ ಅಂತರಾಳದ ಮಾತು..! ಬಹುಶಃ ಅಂದು ನನಗೆ ನಾಲ್ಕೈದು ವರ್ಷ. ಎಲ್ಲ ಮಕ್ಕಳಂತೆ ಓಡಾಡಿಕೊಂಡು ನಾನು ಆಟವಾಡುತ್ತಿದ್ದೆ. ಆದ್ರೆ...

devshayani-ekadashi-hari-shayani-significance

Astro- ಇಂದು ದೇವಶಯನಿ ಏಕಾದಶಿ ಅಥವಾ ಹರಿ-ಶಯನಿ ಎಂದು ಕರೆಯಲಾಗುತ್ತದೆ ಎಂದು ಗೋತ್ತೇ..?

by admin
July 25, 2026
0

ಇಂದು ದೇವಶಯನಿ ಏಕಾದಶಿ ಅಥವಾ ಹರಿ-ಶಯನಿ ಎಂದು ಕರೆಯಲಾಗುತ್ತದೆ ಎಂದು ಗೋತ್ತೇ..? ಸಮಚರಣ ಸರೋಜಂ ಸಾಂದ್ರನೀಲಾಂಮುದಾಭಂ ಜಘನ ನಿಹಿತಪಾಣಿಂ ಮಂಡನಂ ಮಂಡನಾನಾಂ || ತರುಣ ತುಳಸೀಮಾಲಾಕಂಧರಂ ಕಂಜನೇತ್ರಂ...

sindhushree-ganesh-pole-vault-national-record-karnataka-sports

Sindhushree- ಬಡತನದಲ್ಲಿ ಅರಳಿದ ಪ್ರತಿಭೆ….! ಬಾಣದಂತೆ ಚಿಮ್ಮುವ ಈ ತರುಣಿ ಯಾರು..?

by admin
July 25, 2026
0

ಈಕೆಯ ಸಾಧನೆಗೆ ಸರ್ವಸ್ವವನ್ನು ತ್ಯಾಗ ಮಾಡಿದ್ದು ಅಪ್ಪ ಎಂಬ ಸಾಹುಕಾರ. ಪ್ರತಿದಿನ ಮಗಳ ತರಬೇತಿಗೆ ಒಂಚೂರು ತೊಂದರೆಯಾಗದಂತೆ ನೋಡಿಕೊಂಡಿದ್ದ ಕಾವಲುಗಾರ. ಯಾರು ಏನೇ ಅಂದ್ರೂ, ಮಗಳ ಪ್ರತಿಭೆ,...

The King of Branding: How David Beckham Built an Empire Beyond Football!

David Beckham – ಮೈದಾನದ ಸ್ಟೈಲೀಶ್ ಪ್ಲೇಯರ್. ಜಾಗತಿಕ ಮಾರುಕಟ್ಟೆಯ ಟ್ರೆಂಡ್ ಸೆಟ್ಟರ್. ಬ್ರ್ಯಾಂಡಿಂಗ್ ಲೋಕದ ಕಿಂಗ್‍ಮೇಕರ್..!

by admin
July 23, 2026
0

 ಮೈದಾನದ ಸ್ಟೈಲೀಶ್ ಪ್ಲೇಯರ್. ಜಾಗತಿಕ ಮಾರುಕಟ್ಟೆಯ ಟ್ರೆಂಡ್ ಸೆಟ್ಟರ್. ಬ್ರ್ಯಾಂಡಿಂಗ್ ಲೋಕದ ಕಿಂಗ್‍ಮೇಕರ್..!  ಆತ ಫುಟ್‍ಬಾಲ್ ಮೈದಾನದಲ್ಲಿ ಕಾಮನಬಿಲ್ಲಿನಂತೆ ಚಿತ್ತಾರ ಬಿಡಿಸುತ್ತಿದ್ದ ಕಲೆಗಾರ. ಕಾಲಿನ ಸ್ಪರ್ಶದಿಂದಲೇ ಚೆಂಡನ್ನು...

ranjith bajaj menerva fc

Football – ಇಂಡಿಯಾ ಫಿಫಾ ವಿಶ್ವಕಪ್‍ನಲ್ಲಿ ಯಾಕೆ ಆಡುತ್ತಿಲ್ಲ.. ಕ್ರಿಕೆಟ್ ಧರ್ಮವಾಗಿರುವ ಭಾರತದಲ್ಲಿ ಫುಟ್‍ಬಾಲ್ ಕ್ರೀಡೆ ಧರ್ಮವಾಗಿ ಬೆಳೆಯಲು ಸಾಧ್ಯನಾ..?

by admin
July 22, 2026
0

ಇಂಡಿಯಾ ಫಿಫಾ ವಿಶ್ವಕಪ್‍ನಲ್ಲಿ ಯಾಕೆ ಆಡುತ್ತಿಲ್ಲ...? ಹೀಗೆ ಕೇಳುವುದು ತುಂಬಾ ಸುಲಭ. ಆದ್ರೆ ನಮ್ಮ ದೇಶದ ಫುಟ್‍ಬಾಲ್ ವ್ಯವಸ್ಥೆಯನ್ನು ಸರಿ ಮಾಡೋದು ಯಾರು..? ಭಾರತದಲ್ಲಿ ಕ್ರಿಕೆಟ್ ಆಟವೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram