ADVERTISEMENT
Wednesday, May 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports IPL 2020

ಮುಂಬೈ ಬ್ಯಾಟ್ಸ್ ಮನ್ ಗಳ ರೌದ್ರಾವತಾರ.. ಪಂಜಾಬ್ ಗೆ 48 ರನ್ ಗಳ ಸೋಲು

admin by admin
October 2, 2020
in IPL 2020, Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ಮುಂಬೈ ತಂಡದ ಬ್ಯಾಟ್ಸ್ ಮನ್ ರೌದ್ರಾವತಾರ… ಶಿಸ್ತುಬದ್ಧ ಬೌಲಿಂಗ್ ದಾಳಿ, ಸಂಘಟಿತ ಹೋರಾಟ. ಪಂಜಾಬ್ ಪೆವೀಲಿಯನ್ ಪರೇಡ್ ಇದು  ನಿನ್ನೆ ಅಬುಧಾಬಿಯಲ್ಲಿ ನಡೆದ ಐಪಿಎಲ್ ನ 13ನೇ ಪಂದ್ಯದ ಹೈಲೆಟ್ಸ್..

ಹೌದು…! ಅಬುಧಾಬಿಯ ಕ್ರಿಕೆಟ್ ಮೈದಾನದಲ್ಲಿ ಐಪಿಎಲ್ 2020ರ ಸೀಜನ್ ನಲ್ಲಿ ಮುಂಬೈ ಇಂಡಿಯನ್ಸ್ ತಂಡ ಗೆಲುವಿನ ಹಾದಿಗೆ ಮರಳಿದೆ.

Related posts

ದೇಶದಲ್ಲಿ ಬಿಜೆಪಿಯ ಹೊಸ ಮೈಲಿಗಲ್ಲು!

ದೇಶದಲ್ಲಿ ಬಿಜೆಪಿಯ ಹೊಸ ಮೈಲಿಗಲ್ಲು!

May 6, 2026
ನಮ್ಮ ಗೆಲುವನ್ನು ಕದಿಯಲಾಗಿದೆ.. ಮಮತಾ ಕಿಡಿ

ನಮ್ಮ ಗೆಲುವನ್ನು ಕದಿಯಲಾಗಿದೆ.. ಮಮತಾ ಕಿಡಿ

May 6, 2026

ಕಿಂಗ್ಸ್ ಇಲೆವೆನ್ ತಂಡದ ವಿರುದ್ಧ 48 ರನ್ ಗಳ ಗೆಲುವು ಪಡೆದಿದೆ. ಆ ಮೂಲಕ ಮುಂಬೈ ತಂಡ ಟೂರ್ನಿಯಲ್ಲಿ 2ನೇ ಗೆಲುವು ಪಡೆದುಕೊಂಡಿದೆ.

ಇದನ್ನೂ ಓದಿ : ಕೊರೋನಾ ಸಕ್ರಿಯ ಪ್ರಕರಣಗಳ ಪೈಕಿ ಮೂರನೇ ಸ್ಥಾನಕ್ಕೆ ಏರಿದ ಕೇರಳ

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ತಂಡ, ನಾಯಕ ರೋಹಿತ್ ಶರ್ಮಾರ ಅರ್ಧ ಶತಕ ಹಾಗೂ ಹಾರ್ಧಿಕ್ ಪಾಂಡ್ಯ, ಪೊಲ್ಲಾರ್ಡ್ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ 191 ರನ್ ಗಳನ್ನು ಪೇರಿಸಿತು.

ಅದರಲ್ಲೂ ಕೊನೆಯ 6 ಓವರ್ ಗಳಲ್ಲಿ ಪಂಜಾಬ್ ಬೌಲರ್ ಗಳನ್ನು ಚೆಂಡಾಡಿದ ಮುಂಬೈ ದಾಂಡಿಗರು, 36 ಎಸೆತಗಳಲ್ಲಿ 104 ರನ್ ಗಳನ್ನು ಚಚ್ಚಿ ಬೀಸಾಕಿದರು.

ರೋಹಿತ್ ಶರ್ಮಾ 45 ಎಸೆತಗಳಲ್ಲಿ 8 ಬೌಂಡರಿ, 3 ಸಿಕ್ಸರ್ ಗಳಿಂದ 70 ರನ್ ಗಳಿಸಿದರೆ, ಹಾರ್ದಿಕ್ 11 ಎಸೆತಗಳಲ್ಲಿ 30 ರನ್ ಹಾಗೂ ಪೊಲ್ಲಾರ್ಡ್ 47 ರನ್ ಸಿಡಿಸಿದರು.

IPL2020 KINGS XI PUNJAB VS MUMBAI INDIANS
MUMBAI INDIANS

ಮುಂಬೈ ನೀಡಿದ್ದ 192 ರನ್ ಬೃಹತ್ ಮೊತ್ತವನ್ನು ಬೆನ್ನಟ್ಟಿದ್ದ ಪಂಜಾಬ್ ತಂಡದ ನಿಗದಿತ 20 ಓವರ್ ಗಳಲ್ಲಿ ಮುಂಬೈ ಇಂಡಿಯನ್ಸ್ ಬೌಲರ್ ಗಳ ಶಿಸ್ತು ಬದ್ಧ ಬೌಲಿಂಗ್ ದಾಳಿಯಿಂದ 8 ವಿಕೆಟ್ ನಷ್ಟಕ್ಕೆ 143 ರನ್ ಗಳಷ್ಟೆ ಗಳಿಸಲು ಶಕ್ತವಾಯಿತು.

192 ರನ್ ಗುರಿಯನ್ನು ಬೆನ್ನಟ್ಟಿದ ಕಿಂಗ್ಸ್ ಇಲೆವೆನ್ ಪಂಜಾಬ್ ಗೆ ನಾಯಕ ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್ ಸಾಲಿಡ್ ಓಪನಿಂಗ್ ನೀಡಿದರು.

ಬಿರುಸಿನ ಬ್ಯಾಟಿಂಗ್ ಆರಂಭ ಪಡೆದ ಪಂಜಾಬ್ ಮೊದಲ 4 ಓವರ್ ಗಳಲ್ಲಿ 37 ರನ್ ರನ್ ಗಳನ್ನು ಗಳಿಸಿತ್ತು.

ಈ ವೇಳೆ ದಾಳಿಗೆ ಇಳಿದ ಬೂಮ್ ಬೂಮ್ ಬೂಮ್ರಾ 18 ಎಸೆತಗಳಲ್ಲಿ 25 ರನ್ ಗಳಿಸಿದ್ದ ಮಯಾಂಕ್ ಅಗರ್ ವಾಲ್ ಅವರನ್ನು ಕ್ಲೀನ್ ಬೌಲ್ಡ್ ಮಾಡಿದರು.

ಮಯಾಂಕ್ ಪೆವಿಲಿಯನ್ ಹಾದಿ ತುಳಿಯುತ್ತಿದಂತೆ ಕ್ರಿಸ್ ಬಂದ ಕರುಣ್ ನಾಯರ್ ರನ್ನು ಕೃನಾಲ್ ಪಾಂಡ್ಯ ಶೂನ್ಯಕ್ಕೆ ಔಟ್ ಮಾಡುವ ಮೂಲಕ ಪಂಜಾಬ್ ತಂಡಕ್ಕೆ ಶಾಕ್ ನೀಡಿದರು.

ಇತ್ತ ವಿಕೆಟ್ ಉರುಳುತ್ತಿದ್ದರೂ ಉತ್ತಮವಾಗಿ ಬ್ಯಾಟ್ ಬೀಸುತ್ತಿದ್ದ ನಾಯಕ ಕೆ.ಎಲ್ ರಾಹುಲ್, 17 ರನ್ ಗಳಿಸಿದ್ದ ವೇಳೆ ರಾಹುಲ್ ಚಹರ್ ಓವರಿನ ಮೊದಲ ಎಸೆತದಲ್ಲೇ ಔಟಾಗುವ ಮೂಲಕ ನಿರಾಸೆ ಮೂಡಿಸಿದರು.

ಇದರೊಂದಿಗೆ ಪಂಜಾಬ್ ತಂಡದ ರನ್ ವೇಗಕ್ಕೆ ಕಡಿವಾಣ ಹಾಕಲು ಮುಂಬೈ ಯಶಸ್ವಿಯಾಯಿತು.

Rahul KL Rahul Kings 11 Panjab
Rahul

ಇದರಿಂದ ಪಂಜಾಬ್ ತಂಡ ಅಂತಿಮ 50 ಎಸೆತಗಳಲ್ಲಿ 100 ರನ್ ಗಳಿಸುವ ಒತ್ತಡಕ್ಕೆ ಸಿಲುಕಿತ್ತು. ಸಂಕಷ್ಟದಲ್ಲಿದ್ದ ತಂಡಕ್ಕೆ ಬಿರುಸಿನ ಬ್ಯಾಟಿಂಗ್ ನಿಂದ ನೆರವಾಗುತ್ತಿದ್ದ ಪೊರನ್ ವಿಕೆಟ್ ಪಡೆಯುವಲ್ಲಿ ಜೇಮ್ಸ್ ಪ್ಯಾಟಿನ್ಸನ್ ಯಶಸ್ವಿಯಾದರು.

27 ಎಸೆತಗಳಲ್ಲಿ 3 ಬೌಂಡರಿ, 2 ಸಿಕ್ಸರ್ ನೆರವಿನಿಂದ 44 ರನ್ ಗಳಿಸಿದ್ದ ಪೊರನ್, ಡಿ ಕಾಕ್ ಗೆ ಕ್ಯಾಚ್ ನೀಡಿ ನಿರ್ಗಮಿಸಿದರು.

ಇದರ ಬೆನ್ನಲ್ಲೇ ದಾಳಿ ನಡೆಸಿದ ಚಹರ್ ಬೌಲಿಂಗ್ ನಲ್ಲಿ 11 ರನ್ ಗಳಿಸಿದ್ದ ಮ್ಯಾಕ್ಸ್ ವೆಲ್ ವಿಕೆಟ್ ಒಪ್ಪಿಸಿದರು. ಆ ಬಳಿಕ ಬಂದ ನಿಶಮ್ (7 ರನ್)ರನ್ನು ಬಂದಷ್ಟೇ ವೇಗದಲ್ಲಿ ಬುಮ್ರಾ ಪೆವಿಲಿಯನ್ ಗೆ ವಾಪಸ್ ಕಳುಹಿಸಿದರು.

ಆ ಬಳಿಕ ಕೆಳ ಕ್ರಮಾಂಕದಲ್ಲಿ ಬ್ಯಾಟಿಂಗ್ ಇಳಿದ ಪಂಜಾಬ್ ಬ್ಯಾಟ್ಸ್ ಮನ್ ಗಳನ್ನು ಮುಂಬೈ ಬೌಲಿಂಗ್ ಪಡೆ ಸುಲಭವಾಗಿ ಕಟ್ಟಿಹಾಕಲು ಯಶಸ್ವಿಯಾಯಿತು.

ಅಂತಿಮವಾಗಿ ಕಿಂಗ್ಸ್ ಇಲೆವೆನ್ ಪಂಜಾನ್ 8 ವಿಕೆಟ್ ನಷ್ಟದೊಂದಿಗೆ 143 ರನ್ ಗಳಿಸಿ ಸೋಲುಂಡಿತು.

Tags: IPLipl2020Kings XI Punjabmimumbai indiansRCB
ShareTweetSendShare
Join us on:

Related Posts

ದೇಶದಲ್ಲಿ ಬಿಜೆಪಿಯ ಹೊಸ ಮೈಲಿಗಲ್ಲು!

ದೇಶದಲ್ಲಿ ಬಿಜೆಪಿಯ ಹೊಸ ಮೈಲಿಗಲ್ಲು!

by Shwetha
May 6, 2026
0

ದೇಶದ ರಾಜಕೀಯದಲ್ಲಿ ಭಾರತೀಯ ಜನತಾ ಪಾರ್ಟಿ (BJP) ಮತ್ತೊಂದು ಮಹತ್ವದ ಸಾಧನೆ ದಾಖಲಿಸಿದೆ. ಪ್ರಸ್ತುತ, ಬಿಜೆಪಿ ದೇಶಾದ್ಯಂತ 21 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ನೇರವಾಗಿ ಅಥವಾ...

ನಮ್ಮ ಗೆಲುವನ್ನು ಕದಿಯಲಾಗಿದೆ.. ಮಮತಾ ಕಿಡಿ

ನಮ್ಮ ಗೆಲುವನ್ನು ಕದಿಯಲಾಗಿದೆ.. ಮಮತಾ ಕಿಡಿ

by Shwetha
May 6, 2026
0

ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶದ ಹಿನ್ನೆಲೆ, ಮಮತಾ ಬ್ಯಾನರ್ಜಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮ್ಮ ಪಕ್ಷ ಟಿಎಂಸಿ ಯ ಸೋಲಿಗೆ ಚುನಾವಣಾ ಆಯೋಗವೇ ಕಾರಣ ಎಂದು ಅವರು...

ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದ ಜೀವರಾಜ್ – ನನ್ನನ್ನು 3 ವರ್ಷ ವನವಾಸಕ್ಕೆ ಕಳಿಸಿದ್ರಿ, ಈಗ ಸವಾರಿ ಮಾಡ್ತೀರಾ?

ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದ ಜೀವರಾಜ್ – ನನ್ನನ್ನು 3 ವರ್ಷ ವನವಾಸಕ್ಕೆ ಕಳಿಸಿದ್ರಿ, ಈಗ ಸವಾರಿ ಮಾಡ್ತೀರಾ?

by Shwetha
May 6, 2026
0

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ಪ್ರಕ್ರಿಯೆಯು ರಾಜ್ಯ ರಾಜಕಾರಣದಲ್ಲಿ ಈಗ ಹೊಸ ಕಿಚ್ಚು ಹಚ್ಚಿದೆ. ಮರುಎಣಿಕೆಯಲ್ಲಿ ಜೀವರಾಜ್ ಅಕ್ರಮ ಎಸಗಿದ್ದಾರೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ...

ತಮಿಳುನಾಡು ರಾಜಕೀಯದಲ್ಲಿ ವಿಜಯ್ ಭರವಸೆಗಳ ಅಬ್ಬರ: ಈಡೇರಿಸಲು ಬೇಕು ಬರೋಬ್ಬರಿ 42 ಸಾವಿರ ಕೋಟಿ ರೂಪಾಯಿಗಳ ಬೃಹತ್ ಮೊತ್ತ

ತಮಿಳುನಾಡು ರಾಜಕೀಯದಲ್ಲಿ ವಿಜಯ್ ಭರವಸೆಗಳ ಅಬ್ಬರ: ಈಡೇರಿಸಲು ಬೇಕು ಬರೋಬ್ಬರಿ 42 ಸಾವಿರ ಕೋಟಿ ರೂಪಾಯಿಗಳ ಬೃಹತ್ ಮೊತ್ತ

by Shwetha
May 6, 2026
0

ತಮಿಳುನಾಡಿನ ಜನಪ್ರಿಯ ನಟ ಮತ್ತು ತಮಿಳಗ ವೆಟ್ರಿ ಕಳಗಂ ಪಕ್ಷದ ನಾಯಕ ವಿಜಯ್ ಅವರು ಘೋಷಿಸಿರುವ ಜನಪ್ರಿಯ ಕಲ್ಯಾಣ ಯೋಜನೆಗಳು ಚುನಾವಣಾ ಕಣದಲ್ಲಿ ಸಂಚಲನ ಮೂಡಿಸಿರುವುದು ನಿಜ....

ಅಮೆರಿಕದ ವಿಮಾನ ಮಿಸ್ಸಿಂಗ್!

ಅಮೆರಿಕದ ವಿಮಾನ ಮಿಸ್ಸಿಂಗ್!

by Shwetha
May 6, 2026
0

ಅಮೆರಿಕದ ಭಾರೀ ಸೈನಿಕ ವಿಮಾನವಾದ KC-135 ಸ್ಟ್ರಾಟೋಟ್ಯಾಂಕರ್ ಪರ್ಷಿಯನ್ ಗಲ್ಫ್ ಪ್ರದೇಶದಲ್ಲಿ ಕಾಣೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಈ ವಿಮಾನವು ಗಾಳಿಯಲ್ಲೇ ಇಂಧನ ತುಂಬುವ ಪ್ರಮುಖ ಕಾರ್ಯವನ್ನು ನಿರ್ವಹಿಸುವುದರಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram