ADVERTISEMENT
Wednesday, June 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಅಮಿತ್ ಶಾ ಭೇಟಿಯಾದ ಅಲ್ತಾಫ್ ಬುಖಾರಿ ಪಕ್ಷದ ನಿಯೋಗ

admin by admin
March 16, 2020
in International, Politics
Share on FacebookShare on TwitterShare on WhatsappShare on Telegram

ಅಲ್ತಾಫ್ ಬುಖಾರಿ ಪಕ್ಷದ ನಿಯೋಗ ಅಮಿತ್ ಶಾ ಅವರನ್ನು ಭೇಟಿ ಮಾಡಿದೆ. ಜನಸಂಖ್ಯಾ ವಿಷಯದಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಗೃಹ ಸಚಿವರು ಸ್ಪಷ್ಟಪಡಿಸಿದ್ದಾರೆ ಎಂದು ಅಲ್ತಾಫ್ ಬುಖಾರಿ ಹೇಳಿದರು.
ಹೊಸದಾಗಿ ರೂಪುಗೊಂಡ ಜೆಕೆ ಅಪ್ನಿ ಪಕ್ಷದ ಮುಖ್ಯಸ್ಥ ಅಲ್ತಾಫ್ ಬುಖಾರಿ ಅವರು ಭಾನುವಾರ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾದರು. ಈ ಸಂದರ್ಭದಲ್ಲಿ ಸಚಿವರು ಜಮ್ಮು ಮತ್ತು ಕಾಶ್ಮೀರದಲ್ಲಿ ಜನಸಂಖ್ಯಾ ವಿಷಯದಲ್ಲಿನ ಭೀತಿಯನ್ನು ನಿವಾರಿಸಿದರು ಮತ್ತು ಶೀಘ್ರವಾಗಿ ರಾಜ್ಯ ಸ್ಥಾನಮಾನವನ್ನು ಮತ್ತೆ ಮರಳಿಸುವ ಭರವಸೆ ನೀಡಿದರು ಎಂದು ಬುಖಾರಿ ಹೇಳಿದ್ದಾರೆ.
ಗೃಹ ಸಚಿವರೊಂದಿಗೆ ಸುಮಾರು ಎರಡು ಗಂಟೆಗಳ ಕಾಲ ನಡೆದ ಸಭೆಯ ನಂತರ, ಪಕ್ಷದ ನಿಯೋಗವನ್ನು ಮುನ್ನಡೆಸಿದ ಉದ್ಯಮಿ ಮತ್ತು ರಾಜಕಾರಣಿ ಶ್ರೀ ಬುಖಾರಿ, ಜನಸಂಖ್ಯಾ ಬದಲಾವಣೆಯ ಕುರಿತು ಜನರ ಆತಂಕ, ರಾಜ್ಯತ್ವದ ಆರಂಭಿಕ ಪುನಃಸ್ಥಾಪನೆ ಸೇರಿದಂತೆ ವಿವಿಧ ವಿಷಯಗಳು ಮತ್ತು ರಾಜಕೀಯ ಕೈದಿಗಳ ಬಿಡುಗಡೆ ಕುರಿತು ಚರ್ಚಿಸಲಾಯಿತು. ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯತ್ವವನ್ನು ಶೀಘ್ರವಾಗಿ ಪುನಃಸ್ಥಾಪಿಸಲು ಸರ್ಕಾರ ಬದ್ಧವಾಗಿದೆ ಎಂದು ಗೃಹ ಸಚಿವರು ಪುನರುಚ್ಚರಿಸಿದ್ದಾರೆ ಮತ್ತು ಡಿಲಿಮಿಟೇಶನ್ ಪ್ರಕ್ರಿಯೆಯನ್ನು ಶೀಘ್ರವಾಗಿ ಅತ್ಯಂತ ವೈಜ್ಞಾನಿಕ ರೀತಿಯಲ್ಲಿ ಪೂರ್ಣಗೊಳಿಸಲಾಗುವುದು ಎಂದು ಹೇಳಿದ್ದಾರೆ ಎಂದರು.

ಕಣಿವೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಅಪ್ನಿ ಪಾರ್ಟಿ(ಜೆಕೆಎಪಿ) ಎಂಬ ಹೊಸ ರಾಜಕೀಯ ಪಕ್ಷದ ಉಗಮವಾಗಿದ್ದು, ಇದು ನ್ಯಾಶನಲ್ ಕಾನ್ಫರೆನ್ಸ್ (ಎನ್‌ಸಿ) ಹಾಗೂ ಪೀಪಲ್ಸ್ ಡೆಮಾಕ್ರೆಟಿಕ್ ಪಾರ್ಟಿ (ಪಿಡಿಪಿ) ಗೆ ಪರ್ಯಾಯವಾದ ರಾಜಕೀಯ ಸಿದ್ಧಾಂತ ಹೊಂದಿರುವುದಾಗಿ ಸ್ಪಷ್ಟಪಡಿಸಿದೆ. ಮಾಜಿ ಸಚಿವ ಅಲ್ತಾಫ್ ಬುಖಾರಿ ಮತ್ತು ವಿವಿಧ ಪಕ್ಷಗಳ 30 ನಾಯಕರು ಸೇರಿ ಈ ಪಕ್ಷವನ್ನು ರಚಿಸಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ರಾಜ್ಯದ ಸ್ಥಾನಮಾನ ಪುನಸ್ಥಾಪಿಸಿ ಶಿಕ್ಷಣ, ಉದ್ಯೋಗ ಮತ್ತು ಇತರ ಮೂಲಸೌಕರ್ಯಗಳನ್ನು ಒದಗಿಸುವಂತೆ ಮಾಡುವ ಸಲುವಾಗಿ ಈ ಪಕ್ಷ ರಚಿಸಲಾಗಿದೆ ಎಂದು ಅಲ್ತಾಫ್ ತಿಳಿಸಿದ್ದಾರೆ.
ಗೃಹ ಸಚಿವ ಅಮಿತ್ ಶಾರೊಂದಿಗೆ ನಡೆದ ಸಭೆಯಲ್ಲಿ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಸಭೆಯಲ್ಲಿ, ಗೃಹ ಸಚಿವರು ನಿಯೋಗಕ್ಕೆ ಜನರ ಸಾಂವಿಧಾನಿಕ ಹಕ್ಕುಗಳನ್ನು ರಕ್ಷಿಸಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ಶ್ರೀ ಬುಖಾರಿ ಹೇಳಿದರು
ಪ್ರಧಾನಿ ನರೇಂದ್ರ ಮೋದಿಯವರನ್ನು ನಿಯೋಗ ಭೇಟಿ ಮಾಡಿದ ಒಂದು ದಿನದ ನಂತರ ಈ ಭೇಟಿ ನಡೆದಿದೆ.
ಶೀಘ್ರದಲ್ಲೇ ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನವನ್ನು ಮತ್ತೆ ಮರಳಿಸಲಾಗುವುದು ಎಂದು ಪ್ರಧಾನಿ ಮೋದಿ ಕಣಿವೆಯ ನೂತನ ರಾಜಕೀಯ ಪಕ್ಷದ ಸದಸ್ಯರಿಗೆ ಈ ಸಂದರ್ಭದಲ್ಲಿ ಭರವಸೆ ನೀಡಿದ್ದರು.
ಜೆಕೆ ಅಪ್ನಿ ಪಕ್ಷದ ಮುಖ್ಯಸ್ಥರು ಜಮ್ಮು ಮತ್ತು ಕಾಶ್ಮೀರ ಬ್ಯಾಂಕಿನ ಸ್ವಾಯತ್ತತೆ, ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (ಯುಪಿಎಸ್ಸಿ) ಪರೀಕ್ಷೆ ಬರೆಯುವ ಕೇಂದ್ರಾಡಳಿತ ಪ್ರದೇಶದ ಯುವಕರಿಗೆ ವಯಸ್ಸು ಸಡಿಲಿಸುವುದು, ಪ್ರವಾಸೋದ್ಯಮ ಕ್ಷೇತ್ರದ ಹೊರತಾಗಿ ತೋಟಗಾರಿಕೆ ಮತ್ತು ಕೃಷಿಯಲ್ಲಿ ಪರಿಹಾರ ಸೇರಿದಂತೆ ಹಲವಾರು ಇತರ ವಿಷಯಗಳನ್ನು ಪ್ರಸ್ತಾಪಿಸಿದರು.

Related posts

ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

June 17, 2026
ಕರ್ನಾಟಕದಲ್ಲಿ ಮದ್ಯ ಪ್ರಿಯರಿಗೆ ಬಿಗ್ ಶಾಕ್: ವಯಸ್ಸು 21 ಆಗದಿದ್ದರೆ ಎಣ್ಣೆ ಸಿಗುವುದು ಡೌಟು!- ಪ್ರಿಯಾಂಕ್ ಖರ್ಗೆ ವಾರ್ನಿಂಗ್!

RSS ಬಗ್ಗೆ ಪ್ರಿಯಾಂಕ್ ಖರ್ಗೆ ಪ್ರಶ್ನೆ; ಪಾರದರ್ಶಕತೆ ಕುರಿತು ಮಹತ್ವದ ಹೇಳಿಕೆ

June 17, 2026
Tags: Altaf BukhariAmit ShahApni PartyNarendra modi
ShareTweetSendShare
Join us on:

Related Posts

ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

by Shwetha
June 17, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ನೋಂದಣಿ ವಿಚಾರವಾಗಿ ದೇಶಾದ್ಯಂತ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರು ಸಂಘಟನೆಯನ್ನು ಹಿಂದೂ ಧರ್ಮಕ್ಕೆ ಹೋಲಿಸಿ...

ಕರ್ನಾಟಕದಲ್ಲಿ ಮದ್ಯ ಪ್ರಿಯರಿಗೆ ಬಿಗ್ ಶಾಕ್: ವಯಸ್ಸು 21 ಆಗದಿದ್ದರೆ ಎಣ್ಣೆ ಸಿಗುವುದು ಡೌಟು!- ಪ್ರಿಯಾಂಕ್ ಖರ್ಗೆ ವಾರ್ನಿಂಗ್!

RSS ಬಗ್ಗೆ ಪ್ರಿಯಾಂಕ್ ಖರ್ಗೆ ಪ್ರಶ್ನೆ; ಪಾರದರ್ಶಕತೆ ಕುರಿತು ಮಹತ್ವದ ಹೇಳಿಕೆ

by Shwetha
June 17, 2026
0

ಕರ್ನಾಟಕ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಷ್ಟ್ರೀಯ ಸ್ವಯಂ ಸೇವಕ್ ಸಂಘ ಕುರಿತು ಮಹತ್ವದ ಹೇಳಿಕೆ ನೀಡಿದ್ದು, ಯಾವುದೇ ಸಂಘ-ಸಂಸ್ಥೆ ದೇಶದ ಕಾನೂನು ಚೌಕಟ್ಟಿನೊಳಗೆ ಕಾರ್ಯನಿರ್ವಹಿಸಬೇಕು...

ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

ಸಿದ್ದರಾಮಯ್ಯ ಶಕ್ತಿಗೆ ಹಿನ್ನಡೆ? – ಮೂಲ ವರ್ಸಸ್ ವಲಸೆ ಕಾಂಗ್ರೆಸ್ಸಿಗರ ಮುಸುಕಿನ ಗುದ್ದಾಟ: ಅಹಿಂದ ನಾಯಕರ ಅಸಮಾಧಾನದ ಹಿಂದೆ ಅಡಗಿದೆಯೇ ಗುಟ್ಟು?

by Shwetha
June 17, 2026
0

ರಾಜ್ಯ ರಾಜಕಾರಣದ ಭದ್ರಕೋಟೆ ಎಂದೇ ಬಿಂಬಿತವಾಗಿದ್ದ ಸಿದ್ದರಾಮಯ್ಯ ಅವರ ಅಹಿಂದ ಶಕ್ತಿ ಈಗ ಒಳಗಿನಿಂದಲೇ ಕುಸಿಯತೊಡಗಿದೆಯೇ ಎಂಬ ಗಂಭೀರ ಚರ್ಚೆ ರಾಜಕೀಯ ವಲಯದಲ್ಲಿ ಆರಂಭವಾಗಿದೆ. ದಶಕಗಳಿಂದ ಸಿದ್ದರಾಮಯ್ಯ...

ಪ್ರಿಯಾಂಕ್ ಖರ್ಗೆ ಪತ್ರ ಕೇವಲ ರಾಜಕೀಯ ಗಿಮಿಕ್ ಎಂದ ಮೋಹನ್ ಭಾಗವತ್: ನಾವು ಬ್ರಿಟಿಷರ ಕಾಲದಲ್ಲೂ ಇದ್ದೆವು ಈಗಲೂ ಇದ್ದೇವೆ: ಖರ್ಗೆ ಕೇಳಿದ ನೋಂದಣಿ ಪ್ರಶ್ನೆಗೆ ಮೋಹನ್ ಭಾಗವತ್ ಕೊಟ್ಟ ಪವರ್ ಫುಲ್ ಉತ್ತರ ಇದು

ಧರ್ಮದ ಲೆಕ್ಕವಲ್ಲ ಸಂಘದ ಲೆಕ್ಕ ಬೇಕು – ಸಂಘದ ಲೆಕ್ಕ ಕೇಳಿದರೆ ಹಿಂದೂ ವಿರೋಧಿ ಪಟ್ಟ ಏಕೆ? ಶ್ರೀರಾಮನೇ ಲೆಕ್ಕ ಕೊಡುವಾಗ ಇವರಿಗೇನು ಸಮಸ್ಯೆ? ಪ್ರಿಯಾಂಕ್ ಖರ್ಗೆ ಖಾರವಾದ ಪ್ರಶ್ನೆ

by Shwetha
June 17, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಆರ್ಥಿಕ ವ್ಯವಹಾರಗಳ ಬಗ್ಗೆ ಲೆಕ್ಕ ಕೇಳಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು ಈಗ ಬಿಜೆಪಿ ನಾಯಕರ ಟೀಕೆಗಳಿಗೆ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ....

ನೆನಪಿನಲ್ಲಿ ಮದೀನಾ ಕಣ್ಣಿನಲ್ಲಿ ಕಾಬಾ ಎಂದವರು ಈಗ ಬಾಬಾ ಜೊತೆ ಚಹಾ ಕುಡಿಯುತ್ತಿದ್ದಾರೆ: ಟಿಎಂಸಿ ಬಂಡಾಯಗಾರರು ಹಾಗೂ ಅಖಿಲೇಶ್ ವಿರುದ್ಧ ಅಸದುದ್ದೀನ್ ಓವೈಸಿ ಕೆಂಡಾಮಂಡಲ

ನೆನಪಿನಲ್ಲಿ ಮದೀನಾ ಕಣ್ಣಿನಲ್ಲಿ ಕಾಬಾ ಎಂದವರು ಈಗ ಬಾಬಾ ಜೊತೆ ಚಹಾ ಕುಡಿಯುತ್ತಿದ್ದಾರೆ: ಟಿಎಂಸಿ ಬಂಡಾಯಗಾರರು ಹಾಗೂ ಅಖಿಲೇಶ್ ವಿರುದ್ಧ ಅಸದುದ್ದೀನ್ ಓವೈಸಿ ಕೆಂಡಾಮಂಡಲ

by Shwetha
June 16, 2026
0

ಪಶ್ಚಿಮ ಬಂಗಾಳದ ರಾಜಕೀಯ ಬಂಡಾಯದ ಕಿಡಿ ಈಗ ಉತ್ತರ ಪ್ರದೇಶದ ಚುನಾವಣಾ ಅಖಾಡದಲ್ಲಿ ಭಾರೀ ಸಂಚಲನ ಮೂಡಿಸಿದೆ. ತೃಣಮೂಲ ಕಾಂಗ್ರೆಸ್ ಪಕ್ಷದ ರೆಬೆಲ್ ಸಂಸದರು ದೆಹಲಿಯಲ್ಲಿ ಎನ್‌ಡಿಎ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram