ADVERTISEMENT
Friday, August 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಕೊರೋನಾ ಭೀತಿಯ ನಡುವೆ ಸಚಿವರೊಂದಿಗೆ ಎಚ್.ಡಿ.ಕೆ. ಟ್ವೀಟ್ ಸಮರ

admin by admin
March 16, 2020
in Politics, Samagra karnataka
Share on FacebookShare on TwitterShare on WhatsappShare on Telegram

ಜಗತ್ತಿನಾದ್ಯಂತ ಕೊರೋನಾ ವೈರಸ್ ತನ್ನ ಮರಣ ಮೃದಂಗ ಮುಂದುವರಿಸಿದ್ದು, ಭಾರತದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 109ಕ್ಕೆ ಏರಿದೆ. ಇದೀಗ ಕರ್ನಾಟಕದ ಕಲಬುರಗಿ ಯಲ್ಲಿ ಮತ್ತೊಂದು ಕೊರೊನಾ ಸೋಂಕು ಪ್ರಕರಣ ದೃಢಪಟ್ಟಿದ್ದು, ರಾಜ್ಯದಲ್ಲಿ 7 ಕೊರೋನಾ ಪ್ರಕರಣ ಪತ್ತೆಯಾಗಿದ್ದು, ಅವರಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ.
ಇವೆಲ್ಲದರ ನಡುವೆ ಆತಂಕಿತರಾಗಿರುವ ರಾಜ್ಯದ ಜನರಿಗೆ ಧೈರ್ಯ ಹೇಳಿ, ಜಾಗೃತಿ ಮೂಡಿಸುವತ್ತ ಗಮನ ಹರಿಸಬೇಕಾದ ರಾಜಕೀಯ ನಾಯಕರು, ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್‌ ಮಾಡಿ ಕಾಲೆಳೆಯುವ ಸಮರದಲ್ಲಿ ನಿರತರಾಗಿದ್ದಾರೆ.

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸರಣಿ ಟ್ವೀಟ್ ಮೂಲಕ ಕೊರೊನಾ ವಿರುದ್ಧ ಕೈಗೊಂಡ ಕ್ರಮಗಳ ಕುರಿತ ಸುದ್ದಿಯನ್ನು ಜನರಿಗೆ ತಿಳಿಸುವ ವಿಚಾರದಲ್ಲಿ ಸರ್ಕಾರದಲ್ಲಿ ಎರಡು ಧ್ರುವಗಳು ಸೃಷ್ಟಿಯಾದಂತಿವೆ. ಆರೋಗ್ಯ ಸಚಿವರು ಮತ್ತು ವೈದ್ಯಕೀಯ ಶಿಕ್ಷಣ ಸಚಿವರು ಒಮ್ಮತದಿಂದ ಕಾರ್ಯ ನಿರ್ವಹಿಸಲಿ. ಪರಸ್ಪರರ ನಡುವೆ ಸಹಕಾರವಿರಲಿ. ಇದು ಪ್ರಚಾರ ಪಡೆಯುವ ಪ್ರಹಸನವಾಗಬಾರದು. ಜನರಲ್ಲಿ ಗೊಂದಲ ಮೂಡದಿರಲಿ ಎಂದು ಪರೋಕ್ಷವಾಗಿ ಸಚಿವರಿಗೆ ಟಾಂಗ್ ಕೊಟ್ಟಿದ್ದಾರೆ.

Related posts

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

August 7, 2026
ಪೇಮೆಂಟ್ ಕೋಟಾ ಕ್ಯಾಬಿನೆಟ್ ಆರೋಪಕ್ಕೆ ತಿಮ್ಮಾಪುರ ಆಡಿಯೋವೇ ಸಾಕ್ಷಿ: ಸವಕಲು ಸಮಜಾಯಿಷಿ ಬೇಡ ಸತ್ಯ ಹೊರಬರಲಿ- ಸರ್ಕಾರಕ್ಕೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಸವಾಲು

ಪೇಮೆಂಟ್ ಕೋಟಾ ಕ್ಯಾಬಿನೆಟ್ ಆರೋಪಕ್ಕೆ ತಿಮ್ಮಾಪುರ ಆಡಿಯೋವೇ ಸಾಕ್ಷಿ: ಸವಕಲು ಸಮಜಾಯಿಷಿ ಬೇಡ ಸತ್ಯ ಹೊರಬರಲಿ- ಸರ್ಕಾರಕ್ಕೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಸವಾಲು

August 7, 2026

ಕೊರೊನಾ ಸೋಂಕಿತರಿಗೆ ಪ್ರತ್ಯೇಕವಾಗಿ ಚಿಕಿತ್ಸೆ ನೀಡುವುದೇ ಮುಂಜಾಗ್ರತಾ ಕ್ರಮ. ಇದಕ್ಕಾಗಿ ಕೆಲ ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಿಭಾಗ ತೆರೆದಿರುವುದಾಗಿ ಸರ್ಕಾರ ಹೇಳುತ್ತಿದೆ. ಆದರೆ ಇತರ ರೋಗಿಗಳ ಜೊತೆ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುವುದು ಸರಿಯೇ? ಇದರ ಬದಲು ಖಾಲಿ ಉಳಿದಿರುವ ಸರ್ಕಾರಿ ಕಟ್ಟಡಗಳನ್ನು ಇದಕ್ಕಾಗಿ ಬಳಸಿಕೊಳ್ಳಬೇಕು ಎಂದು ಇನ್ನೊಂದು ಟ್ವೀಟ್‌ ಮಾಡಿ ಸರ್ಕಾರಕ್ಕೆ ಸಲಹೆ ಕೊಟ್ಟಿದ್ದರು.


ತಮ್ಮ ಟ್ವೀಟ್‌ ಸಲಹೆಯನ್ನು ಮುಂದುವರಿಸಿ‌ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ
ರಾಜ್ಯದಲ್ಲಿ ಹಲವು ಸರ್ಕಾರಿ ಮತ್ತು ಖಾಸಗಿ ಕಟ್ಟಡಗಳು ಖಾಲಿ ಉಳಿದಿವೆ. ಅವುಗಳನ್ನು ಕೊರೊನಾ ವೈರಸ್ ಸೋಂಕಿತರಿಗೆ ಕ್ವಾರಂಟೈನ್ ಕೇಂದ್ರಗಳಾಗಿ ಪರಿವರ್ತಿಸಬೇಕು. ಜನನಿಬಿಡ ಪ್ರದೇಶಗಳಿಂದ ದೂರದಲ್ಲಿ ಕ್ವಾರಂಟೈನ್ ಕೇಂದ್ರ ತರೆಯಬೇಕು. ಸೋಂಕಿತರ ರಕ್ತ ಮಾದರಿ ಸಂಗ್ರಹಕ್ಕೆ ಅವರಿರುವಲ್ಲಿಯೇ ವ್ಯವಸ್ಥೆಯಾಗಬೇಕು ಎಂದು ರಾಜ್ಯ ಸರ್ಕಾರಕ್ಕೆ ಯಾವ ರೀತಿ ಕಾರ್ಯ ನಿರ್ವಹಿಸಬೇಕು ಎಂದು ಸೂಚಿಸಿದ್ದರು.

ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಅವರು ಇದಕ್ಕೆ ಟ್ವೀಟ್ ಮೂಲಕ, ಕೊರೊನಾ ನಿರ್ವಹಣೆ ವಿಚಾರದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ಬಾಲಿಶ ಹೇಳಿಕೆ ನೀಡಿದ್ದನ್ನು ಗಮನಿಸಿದ್ದೇನೆ. ವಿಪತ್ತನ್ನು ಎದುರಿಸಲು ಸಿಎಂ ಯಡಿಯೂರಪ್ಪ ಅವರ ಆದೇಶದಂತೆ ರಾಜ್ಯಸರ್ಕಾರ ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತವಾಗಿದ್ದು ಆರೋಗ್ಯ ಸಚಿವ ಶ್ರೀರಾಮುಲು ಮತ್ತು ನಾನು ಪರಸ್ಪರ ಸಮನ್ವಯದಿಂದ ಕರ್ತವ್ಯ ನಿರ್ವಹಿಸುತ್ತಿದ್ದೇವೆ ಎಂದು ಪ್ರತಿಕ್ರಿಯೆ ನೀಡಿದ್ದರು.

ಜನರಲ್ಲಿ ಕೊರೊನಾ ಬಗ್ಗೆ ಜಾಗೃತಿ ಮೂಡಿಸುವುದು, ಸೋಂಕಿತರ ಪತ್ತೆಗೆ ಸರ್ವ ಪ್ರಯತ್ನ, ಸೋಂಕಿತರ ಚಿಕಿತ್ಸೆಗೆ ಎಲ್ಲ ಸೌಕರ್ಯ, ಪ್ರತ್ಯೇಕ ನಿಗಾ ಘಟಕಗಳು, ತಜ್ಞ ವೈದ್ಯರ ಮತ್ತು ಇತರ ಸಿಬ್ಬಂದಿ ಹಗಲಿರುಳು ಕೆಲಸ ಮಾಡುತ್ತಿದ್ದಾರೆ. ಎಲ್ಲ ಮುಂಜಾಗ್ರತಾ ಕ್ರಮಗಳನ್ನು ರಾಜ್ಯಸರ್ಕಾರ ತೆಗೆದುಕೊಂಡಿದೆ. ಇದನ್ನು ಜನರೂ ಮೆಚ್ಚಿಕೊಂಡಿದ್ದಾರೆ ಎಂದೂ ತಿಳಿಸಿದ್ದರು.


ಇಷ್ಟೇ ಅಲ್ಲದೆ ಮಾಜಿ ಮುಖ್ಯಮಂತ್ರಿಗಳಲ್ಲಿ ನನ್ನ ವಿನಂತಿಯೆಂದರೆ, ಈ ಸೂಕ್ಷ್ಮ ಪರಿಸ್ಥಿತಿಗಳಲ್ಲಿ ರಾಜಕೀಯ ಬದಿಗಿಟ್ಟು, ಜಾಗೃತಿ ಮೂಡಿಸುವ ಕೆಲಸದಲ್ಲಿ ಆದಷ್ಟು ಸಹಕರಿಸಿ. ತಾವು ಕೂಡ ಎಚ್ಚರಿಕೆಯಿಂದ ಇದ್ದು ಸುರಕ್ಷಿತವಾಗಿರಿ. ಇಂತಹ ಸಂದರ್ಭಗಳಲ್ಲಿ ಜನರಲ್ಲಿ ಆತಂಕ ಹೆಚ್ಚಿಸುವ ಯಾವುದೇ ಪ್ರಯತ್ನ ಅಪೇಕ್ಷಣೀಯವಲ್ಲ ಎಂದು ಟ್ವೀಟ್ ನಲ್ಲೇ ಕುಟುಕಿದ್ದರು

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಟ್ವೀಟ್‌ ಗೆ ಆರೋಗ್ಯ ಸಚಿವ ಶ್ರೀರಾಮುಲು ಅವರು ಕೂಡ ರೀಟ್ವೀಟ್ ಮಾಡಿ , ಕುಮಾರಸ್ವಾಮಿಯವರೇ, ನಾನು ಹಾಗೂ ಸುಧಾಕರ್ ಅವರು ಜೊತೆಜೊತೆಗೆ ಜನರ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸ ಮಾಡುತ್ತಿದ್ದೇವೆ. ತಮ್ಮ ಗೊಂದಲದಲ್ಲಿ ಯಾವುದೇ ಹುರುಳಿಲ್ಲ. ಇತ್ತೀಚೆಗೆ ಹೆಚ್ಚಾಗಿ ಗೊಂದಲದಲ್ಲಿರುವ ತಾವು, ಜನರನ್ನು ಗೊಂದಲಕ್ಕೆ ದೂಡುವ ಕೆಲಸಕ್ಕೆ ಕೈಹಾಕದಿರಿ ಎಂದು ವಿನಂತಿಸುತ್ತೇನೆ ಎಂದು ಕಾಲೆಳೆದಿದ್ದರು.

ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಮತ್ತು ಆರೋಗ್ಯ ಸಚಿವ ಶ್ರೀರಾಮುಲು ಅವರ ಟ್ವೀಟ್‌ ಗೆ ಕಿಡಿಕಿಡಿಯಾಗಿರುವ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮತ್ತೆ ಸರಣಿ ಟ್ವೀಟ್ ಮಾಡಿ ರಾಜ್ಯ ಸರ್ಕಾರ ಹಾಗೂ ಸಚಿವರ ವಿರುದ್ಧ ತಮ್ಮ ಆಕ್ರೋಶವನ್ನು ಹೊರ ಹಾಕಿದ್ದಾರೆ.

ವಿರೋಧ ಪಕ್ಷದ ನಾಯಕನಾದ ನಾನು ಸರ್ಕಾರಕ್ಕೆ ಸಲಹೆ ನೀಡುವುದು ನನ್ನ ಕರ್ತವ್ಯ, ನನ್ನ ಹಕ್ಕು. ಮತ್ತು, ಅದೇ ವೃತ್ತಿ ಧರ್ಮ. ರಾಜಕೀಯ ಮಾಡಲು ಬೇರೆ ಅವಕಾಶಗಳಿವೆ. ಅಲ್ಲಿ ಮಾಡೋಣ ಎಂದು ಕಿಡಿಕಾರಿದ್ದಾರೆ.


ಈಗಲೂ ಹೇಳುತ್ತಿದ್ದೇನೆ ಇದು ನನ್ನ ಸಲಹೆ. ಇದರಲ್ಲಿಯೂ ರಾಜಕೀಯ ಹುಡುಕುವವರು ‘ಪ್ರಚಾರ ಪ್ರಿಯ’ರಷ್ಟೇ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊರೊನಾ ವೈರಸ್ ಕುರಿತು ಸರ್ಕಾರಕ್ಕೆ ಕೆಲ ಸಲಹೆಗಳನ್ನು ನೀಡಿದ್ದೆ. ಇದರಲ್ಲಿ ರಾಜಕೀಯ ಹುಡುಕಿರುವ ಸಚಿವರೊಬ್ಬರು ಸರ್ಕಾರ ಎಲ್ಲ ರೀತಿಯಲ್ಲೂ ಮುಂಜಾಗ್ರತಾ ಕ್ರಮಗಳನ್ನು ವಹಿಸಿರುವುದಾಗಿ ಹೇಳಿದ್ದಾರೆ. ಸರಿ, ಸಿಎಂ ಬಿಎಸ್ ವೈ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ವೈದ್ಯಕೀಯ ತಪಾಸಣೆಗೆ ಒಳಗಾಗದೇ ನಿಯಮ ಉಲ್ಲಂಘಿಸಿದ್ದು ಯಾವ ಕ್ರಮ ಎಂದು ಪರೋಕ್ಷವಾಗಿ ಸುಧಾಕರ್ ಗೆ ಕುಟುಕಿದ್ದಾರೆ.


ಕೊರೊನಾ ವೈರಸ್ ತಡೆಗೆ ಮುಂಜಾಗ್ರತೆಯೇ ಮದ್ದು. ಇದಕ್ಕಾಗಿಯೇ ಎಲ್ಲ ವಿಮಾನ ನಿಲ್ದಾಣಗಳಲ್ಲಿ, ಪ್ರತಿಯೊಬ್ಬರ ತಪಾಸಣೆ ನಡೆಯುತ್ತಿದೆ. ಈ ತಪಾಸಣೆಯನ್ನು ಮುಖ್ಯಮಂತ್ರಿಯೇ ನಿರ್ಲಕ್ಷಿಸುವುದು ಎಂಥ ಕಟ್ಟುನಿಟ್ಟಿನ ಕ್ರಮ? ಇದರಿಂದ ಜನರಿಗೆ ಹೋಗುವ ಸಂದೇಶವೇನು? ಈ ಬಗ್ಗೆ ‘ರಾಜಕೀಯ’ ಹುಡುಕಿದ ಸಚಿವರು ಏನು ಹೇಳುತ್ತಾರೆ ಎಂದು ಪ್ರಶ್ನಿಸಿದ್ದಾರೆ.

Tags: Corona VirusH D KUMARASWAMYHDKkarnataka bjpSri RamaluSudhakar
ShareTweetSendShare
Join us on:

Related Posts

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

by Shwetha
August 7, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ನಂತರ ಅತೃಪ್ತಗೊಂಡಿರುವ ಶಾಸಕರ ಪಟ್ಟಿಯಲ್ಲಿ ಕೇಳಿಬರುತ್ತಿರುವ ಮಾಜಿ ಸಚಿವ ದಿನೇಶ್‌ ಗುಂಡೂರಾವ್ ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಸಚಿವ ಸ್ಥಾನ...

ಪೇಮೆಂಟ್ ಕೋಟಾ ಕ್ಯಾಬಿನೆಟ್ ಆರೋಪಕ್ಕೆ ತಿಮ್ಮಾಪುರ ಆಡಿಯೋವೇ ಸಾಕ್ಷಿ: ಸವಕಲು ಸಮಜಾಯಿಷಿ ಬೇಡ ಸತ್ಯ ಹೊರಬರಲಿ- ಸರ್ಕಾರಕ್ಕೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಸವಾಲು

ಪೇಮೆಂಟ್ ಕೋಟಾ ಕ್ಯಾಬಿನೆಟ್ ಆರೋಪಕ್ಕೆ ತಿಮ್ಮಾಪುರ ಆಡಿಯೋವೇ ಸಾಕ್ಷಿ: ಸವಕಲು ಸಮಜಾಯಿಷಿ ಬೇಡ ಸತ್ಯ ಹೊರಬರಲಿ- ಸರ್ಕಾರಕ್ಕೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಸವಾಲು

by Shwetha
August 7, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ಮಾಜಿ ಸಚಿವ ಆರ್ ಬಿ ತಿಮ್ಮಾಪುರ ಅವರದ್ದು ಎನ್ನಲಾದ ವೈರಲ್ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ನಾಯಕ ಆರ್ ಅಶೋಕ್...

ಭಾರತ ಹಿಂದೂ ರಾಷ್ಟ್ರವಾದರೆ ದಮನಿತರು ಮತ್ತೆ ಗುಲಾಮರಾಗಬೇಕಾಗುತ್ತದೆ ಸಚಿವ ಯತೀಂದ್ರ ಸಿದ್ದರಾಮಯ್ಯ ಎಚ್ಚರಿಕೆ

ಭಾರತ ಹಿಂದೂ ರಾಷ್ಟ್ರವಾದರೆ ದಮನಿತರು ಮತ್ತೆ ಗುಲಾಮರಾಗಬೇಕಾಗುತ್ತದೆ ಸಚಿವ ಯತೀಂದ್ರ ಸಿದ್ದರಾಮಯ್ಯ ಎಚ್ಚರಿಕೆ

by Shwetha
August 7, 2026
0

ಭಾರತವನ್ನು ಹಿಂದೂ ರಾಷ್ಟ್ರ ಮಾಡುವ ಪ್ರಯತ್ನವು ಈ ದೇಶಕ್ಕೆ ಬಹುದೊಡ್ಡ ಅಪಾಯ ತಂದೊಡ್ಡಲಿದೆ. ಇದು ಕೇವಲ ಧಾರ್ಮಿಕ ಬದಲಾವಣೆಯಲ್ಲ, ಬದಲಾಗಿ ಶೋಷಣೆಯ ಹಳೆಯ ವ್ಯವಸ್ಥೆಯನ್ನು ಮರಳಿ ತರುವ...

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

by Shwetha
August 6, 2026
0

ಭಾರತೀಯ ರಾಜಕಾರಣದ ತೆರೆಮರೆಯ ಚಾಣಕ್ಯ ಎಂದೇ ಖ್ಯಾತರಾಗಿರುವ ಪ್ರಶಾಂತ್ ಕಿಶೋರ್ (ಪಿಕೆ), ಈಗ ನೇರ ಚುನಾವಣಾ ಕಣದಲ್ಲೂ ತಮ್ಮ ಚಮತ್ಕಾರ ತೋರಿದ್ದಾರೆ. ಬಿಹಾರದ ಅತ್ಯಂತ ಪ್ರತಿಷ್ಠಿತ ಹಾಗೂ...

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

by Shwetha
August 6, 2026
0

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷರು ಅಸಮಾಧಾನಗೊಂಡಿರುವ ಶಾಸಕರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಸಚಿವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram