ಶಿವಮೊಗ್ಗ : ಎರಡು ಉಪ ಚುನಾವಣೆಯಲ್ಲಿ ನಾವು ಗೆಲ್ಲುತ್ತೇವೆ. ಸಾಮೂಹಿಕ ಪ್ರಯತ್ನದಲ್ಲಿ ಕಾರ್ಯಕರ್ತರು, ಶಾಸಕರು, ಸಚಿವರು ಹಾಗೂ ಸಿಎಂ ಕೆಲಸ ಮಾಡುವುದರಿಂದ ಚುನಾವಣೆ ಗೆಲ್ಲಲು ನಮಗೆ ಕಷ್ಟ ಆಗುವುದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿರಾ ಹಾಗೂ ಆರ್.ಆರ್.ನಗರ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿಗಳನ್ನು ಇನ್ನೆರಡು ದಿನಗಳಲ್ಲಿ ಘೋಷಣೆ ಮಾಡಲಾಗುತ್ತದೆ.
ಇದನ್ನೂ ಓದಿ : ಮೊದಲು ಅಭಿಪ್ರಾಯ ಸಂಗ್ರಹ, ಅಲ್ಲಿಯವರೆಗೆ ಶಾಲೆ ಆರಂಭ ಇಲ್ಲ: ಸಿಎಂ ಬಿಎಸ್ವೈ ಸ್ಪಷ್ಟನೆ
ಎರಡು ಉಪ ಚುನಾವಣೆಯಲ್ಲಿ ನಾವು ಗೆಲ್ಲುತ್ತೇವೆ. ಸಾಮೂಹಿಕ ಪ್ರಯತ್ನದಲ್ಲಿ ಕಾರ್ಯಕರ್ತರು, ಶಾಸಕರು, ಸಚಿವರು ಹಾಗೂ ಸಿಎಂ ಕೆಲಸ ಮಾಡುವುದರಿಂದ ಚುನಾವಣೆ ಗೆಲ್ಲಲು ನಮಗೆ ಕಷ್ಟ ಆಗುವುದಿಲ್ಲ.

ಉಪ ಚುನಾವಣೆ ನಡೆಯುತ್ತಿರುವ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ದ್ವೇಷದ ರಾಜಕಾರಣ ನಡೆಸಿಲ್ಲ. ನಮ್ಮ ಸರ್ಕಾರದ ಕಡೆಯಿಂದ ಯಾರ ಮೇಲೂ ಸುಮ್ಮನೆ ಕೇಸ್ ಹಾಕಿಲ್ಲ.
ಇದನ್ನೂ ಓದಿ : ಅ.25ಕ್ಕೆ `ಕೈ’ ಹಿಡೀತಾರೆ ಶರತ್ ಬಚ್ಚೇಗೌಡ: `ಹಸ್ತದ ಜತೆ ಶರತ್’ ಫೋಟೋ ವೈರಲ್
ವಿರೋಧ ಪಕ್ಷಗಳ ಆರೋಪ ಸುಳ್ಳು, ಅವರು ತಾನು ಕಳ್ಳ, ಪರರನ್ನು ನಂಬ ಎಂಬ ಮನಸ್ಥಿತಿಯಲ್ಲಿದ್ದಾರೆ ಎಂದು ವಿಪಕ್ಷಗಳಿಗೆ ಸಿ.ಟಿ.ರವಿ ಟಾಂಗ್ ನೀಡಿದರು.







