ದೇಶದಲ್ಲಿ ಕೊರೊನಾ ಸೋಂಕಿತ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಈ ಹಿನ್ನಲೆಯಲ್ಲಿ ಕೊರೊನಾ ವೈರಸ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ, ವಿದೇಶಾಂಕ ಸಚಿವಾಲಯ ಅಫಘಾನಿಸ್ಥಾನ, ಫಿಲಿಫೈನ್, ಮಲೇಷ್ಯಾ ದೇಶಗಳಿಂದ ಭಾರತಕ್ಕೆ ಆಗಮಿಸುವಂತ ಪ್ರಯಾಣಿಕರಿಗೆ ಮಾರ್ಚ್ 31ರ ವರೆಗೆ ನಿರ್ಬಂಧ ವಿಧಿಸಿದೆ.
ಸೋಂಕು ಭಾರತದಲ್ಲಿ ಮತ್ತಷ್ಟು ಹರಡದಂತೆ ಮುನ್ನೆಚ್ಚರಿಕೆಯನ್ನು ವಹಿಸಲಾಗಿದೆ. ಎಚ್ಚರಿಕೆಯ ಭಾಗವಾಗಿ ಮಾರ್ಚ್ 31ರ ವರೆಗೆ ಅಪಘಾನಿಸ್ಥಾನ, ಫಿಲಿಫೈನ್ ಮತ್ತು ಮಲೇಷ್ಯಾ ದೇಶಗಳಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರ ಮೇಲೆ ನಿರ್ಬಂಧ ವಿಧಿಸಲಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ. ಅಲ್ಲದೆ ಮಾರ್ಚ್ 31ರ ವರೆಗೆ ಭಾರತದಿಂದ ಅಪಘಾನಿಸ್ಥಾನ, ಫಿಲಿಫೈನ್ ಹಾಗೂ ಮಲೇಷ್ಯಾ ದೇಶಗಳಿಗೆ ಭಾರತದಿಂದ ತೆರಳುವ ಎಲ್ಲಾ ವಿಮಾನಗಳ ಹಾರಾಟವನ್ನು ರದ್ದುಪಡಿಸಲಾಗಿದೆ.
2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ
2028ರ ವಿಧಾನಸಭಾ ಚುನಾವಣೆಗೆ ಜೆಡಿಎಸ್–ಬಿಜೆಪಿ ಮೈತ್ರಿ ವಿಚಾರವಾಗಿ ರಾಜಕೀಯ ಸಂದೇಶಗಳು ಹೊರಬರುತ್ತಿರುವ ಹಿನ್ನೆಲೆ, ಬಿಜೆಪಿಯ ಜಿಲ್ಲಾ ಘಟಕದಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ. ವಿಶೇಷವಾಗಿ ಟಿಕೆಟ್ ಆಕಾಂಕ್ಷಿಗಳಲ್ಲಿ ಗೊಂದಲ ಹೆಚ್ಚಾಗಿದೆ...








