ಬೆಂಗಳೂರು : ರಾಜರಾಜೇಶ್ವರಿ ( R.R.Nagar By Election ) ವಿಧಾನಸಭಾ ಕ್ಷೇತ್ರ ಉಪಚುನವಾಣೆ ಹಿನ್ನೆಲೆ ಏನೇ ಆದರೂ ಮುನಿರತ್ನ ( Munirathna) ಅವರೇ ಅಭ್ಯರ್ಥಿಯಾಗುವುದು ಖಚಿತ ಎಂದು ಸಚಿವ ಎಸ್.ಟಿ. ಸೋಮಶೇಖರ್ ( S.T.Somashekhar) ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಆರ್ ಆರ್ ನಗರ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸೋಮಶೇಖರ್ (Somashekhar), ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯಲ್ಲಿ ಮುನಿರತ್ನ ಅವರಿಗೆ ಬಿಜೆಪಿಯಿಂದಲೇ ಟಿಕೆಟ್ ಸಿಗಲಿದೆ.
ಪಕ್ಷದ ವರಿಷ್ಠರು ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಕಾರಣಕ್ಕಾಗಿ ರಾಜ್ಯದ ಎರಡು ಉಪಚುನಾವಣೆಗೆ ಟಿಕೆಟ್ ಘೋಷಣೆ ಮಾಡಲು ವಿಳಂಬವಾಗಿದೆ ಎಂದರು.
ಇವೇ ವೇಳೆ ಮುನಿರತ್ನ ಅವರಿಗೆ ಟಿಕೆಟ್ ಕೈ ತಪ್ಪುವ ಸಾಧ್ಯತೆ ಇದೆ ಎಂಬ ಸುದ್ದಿ ಬಗ್ಗೆ ಮಾತನಾಡಿದ ಸೋಮಶೇಖರ್, ಯಾವುದೇ ಕಾರಣಕ್ಕೂ ಮುನಿರತ್ನ ಅವರಿಗೆ ಆರ್ ಆರ್ ನಗರದಿಂದ ಟಿಕೆಟ್ ಕೈ ತಪ್ಪುವ ಪ್ರಶ್ನೆಯೇ ಉದ್ಭವಿಸುವುದಿಲ್ಲ.
ಇದನ್ನೂ ಓದಿ : ಜನತೆಗೆ ಉತ್ತಮ ಆರೋಗ್ಯ ಕಲ್ಪಿಸಲು ಶಕ್ತಿ ಮೀರಿ ಕೆಲಸ ಮಾಡ್ತೇನೆ : ಸುಧಾಕರ್
ಏಕೆಂದರೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾದ ನಾನೂ ಸೇರಿದಂತೆ ಎಲ್ಲರಿಗೂ ಟಿಕೆಟ್ ನೀಡಿರುವಾಗ ಒಬ್ಬರಿಗೆ ಟಿಕೆಟ್ ಕೈ ತಪ್ಪಿಸಲು ಹೇಗೆ ಸಾಧ್ಯ.
ಏನೇ ಆದರೂ ಮುನಿರತ್ನ ಅವರೇ ಅಭ್ಯರ್ಥಿಯಾಗುವುದು ಖಚಿತ ಎಂದು ವಿಶ್ವಾಸದಿಂದ ನುಡಿದರು.
ಕೆಲವರು ಸುಖಾಸುಮ್ಮನೆ ಟಿಕೆಟ್ ಕೈ ತಪ್ಪಲಿದೆ ಎಂಬ ವದಂತಿಯನ್ನು ಹಬ್ಬಿಸುತ್ತಿದ್ದಾರೆ. ಇದರಲ್ಲಿ ಎಳ್ಳಷ್ಟೂ ಸತ್ಯಾಂಶವಿಲ್ಲ.
ನಾವೆಲ್ಲರೂ ಅವರಿಗೇ ಟಿಕೆಟ್ ನೀಡಬೇಕೆಂದು ಮನವಿ ಮಾಡಿದ್ದೇವೆ. ವರಿಷ್ಠರು ನಮ್ಮ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಸೋಮಶೇಖರ್ ತಿಳಿಸಿದ್ದಾರೆ.
ಇದನ್ನೂ ಓದಿ : `ಕೈ’ ಬಿಟ್ಟ ನಟಿ ಖುಷ್ಬೂ : ನಾಳೆ `ಕಮಲ’ ಹಿಡಿಯುವ ಸಾಧ್ಯತೆ
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel