ADVERTISEMENT
Wednesday, July 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರಾಮುಲು ಸಂಧಾನ ಸಕ್ಸಸ್ ಆಯ್ತಾ..? ಸಿಎಂ ಯಡಿಯೂರಪ್ಪ ಹೇಳಿದ ಕಿವಿಮಾತೇನು..!

Kariyappa N by Kariyappa N
October 13, 2020
in Newsbeat, Politics, Samagra karnataka, ರಾಜ್ಯ
bsy sandhana
Share on FacebookShare on TwitterShare on WhatsappShare on Telegram

ಬೆಂಗಳೂರು: ಆರೋಗ್ಯ ಖಾತೆ ಜತೆಗೆ ಹಿಂದುಳಿದ ವರ್ಗಗಳ ಖಾತೆಯನ್ನೂ ವಾಪಸ್ ಪಡೆದು ರೆಕ್ಕೆಪುಕ್ಕ ಕಟ್ ಮಾಡಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧ ಸಚಿವ ಬಿ.ಶ್ರೀರಾಮುಲು ಅಸಮಾಧಾನಗೊಂಡಿದ್ದರು. ಆದರೆ, ಇಂದು ಶ್ರೀರಾಮುಲು ಹಾಗೂ ಡಾ.ಕೆ ಸುಧಾಕರ್‍ ರನ್ನು ಅಕ್ಕ-ಪಕ್ಕ ಕೂರಿಸಿಕೊಂಡು ಯಡಿಯೂರಪ್ಪ ಸಂಧಾನ(Ramulu bsy Negotiation) ನಡೆಸಿದ್ದಾರೆ. ಶ್ರೀರಾಮುಲು ಸಂಧಾನ ಸಕ್ಸಸ್ ಆಗಿದೆ, ಸಂತೋಷ್‍ದಿಂದಲೇ ಸಮಾಜ ಕಲ್ಯಾಣ ಇಲಾಖೆ ವಹಿಸಿಕೊಂಡಿದ್ದೇನೆ ಎಂದು ಬಹಿರಂಗವಾಗಿ ಹೇಳಿಕೊಂಡರೂ ಅವರ ಹೇಳಿಕೆಗಳಲ್ಲೇ ಅಸಮಾಧಾನ ಎದ್ದು ಕಾಣುತ್ತಿತ್ತು.

ramulu-sudhakar
ಈಗ ಉಪಚುನಾವಣೆ ಸಮೀಪದಲ್ಲಿದೆ, ಜತೆಗೆ ಕೊರೊನಾ ಪ್ರಕರಣಗಳು ಭಾರಿ ಪ್ರಮಾಣದಲ್ಲಿ ಹೆಚ್ಚುತ್ತಿದ್ದು ಸರ್ಕಾರದ ಮೇಲೆ ಒತ್ತಡ ಹೆಚ್ಚಾಗಿದೆ. ಇಂತಹ ಸಂದರ್ಭದಲ್ಲಿ ಹೊರಗಡೆ ಹಾಗೂ ಮತದಾರರಿಗೆ ಕೆಟ್ಟ ಸಂದೇಶ ಹೋಗಬಾರದು. ಹೀಗಾಗಿ ಅಸಮಾಧಾನ ಮರೆತು ಒಟ್ಟಿಗೆ ಕೆಲಸ ಮಾಡಿ ಎಂದು ಸಿಎಂ ಯಡಿಯೂರಪ್ಪ ಕಿವಿಮಾತು ಹೇಳಿದ್ದಾರೆ. ಸಿಎಂ ಸಲಹೆಗೆ ಬೇರೆ ದಾರಿ ಇಲ್ಲದೆ ತಲೆಯಾಡಿಸಿದ ಶ್ರೀರಾಮುಲು ಸಮಾಜ ಕಲ್ಯಾಣ ಇಲಾಖೆ ನಿಭಾಯಿಸಲು ಒಪ್ಪಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

Related posts

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

July 1, 2026
ಜುಲೈ 1ರಿಂದ ವಾಣಿಜ್ಯ, ಕೈಗಾರಿಕಾ LPG ಸಿಲಿಂಡರ್ ದರ ಏರಿಕೆ

ಜುಲೈ 1ರಿಂದ ವಾಣಿಜ್ಯ, ಕೈಗಾರಿಕಾ LPG ಸಿಲಿಂಡರ್ ದರ ಏರಿಕೆ

July 1, 2026

ರಾಮುಲು-ಸುಧಾಕರ್ ಮುಖಾಮುಖಿ ಮಾಡಿದ್ದೇಕೆ..?
ಆರೋಗ್ಯ ಇಲಾಖೆಯನ್ನು ತಮ್ಮಿಂದ ಕಸಿದುಕೊಂಡು ಸಚಿವ ಸುಧಾಕರ್‍ಗೆ ಹೆಚ್ಚುವರಿಯಾಗಿ ನೀಡಿದ್ದಕ್ಕೆ ಸಚಿವ ಶ್ರೀರಾಮುಲು ಅಸಮಾಧಾನಗೊಂಡಿದ್ದರು. ನಿನ್ನೆಯೂ ಸಿಎಂ ಯಡಿಯೂರಪ್ಪ ಭೇಟಿ ಮಾಡಿದ್ದ ಸಚಿವ ಶ್ರೀರಾಮುಲು ತಮ್ಮ ಅಸಮಾಧಾನ ಹೊರಹಾಕಿದ್ದರು. ಮತ್ತೆ ಸಂಜೆ ಬಾ ಮಾತನಾಡೋಣ ಎಂದು ಹೇಳಿ ಯಡಿಯೂರಪ್ಪ ಅವರು ಶ್ರೀರಾಮುಲು ಅವರನ್ನು ಕಳಿಸಿದ್ದರು.
ಆದರೆ, ಇಂದು ಬೆಳಿಗ್ಗೆ ಸಿಎಂ ನಿವಾಸ ಕಾವೇರಿಗೆ ಶ್ರೀರಾಮುಲು ಹೋಗುವುದರೊಳಗೆ ಸಚಿವ ಸುಧಾಕರ್ ಬಂದು ಕುಳಿತಿದ್ದರು. ತಮಗೂ ಮೊದಲೇ ಸುಧಾಕರ್ ಜತೆ ಬಂದಿರುವುದು ರಾಮುಲುಗೆ ಶಾಕ್ ಕಾದಿತ್ತು. ಇಬ್ಬರನ್ನು ಅಕ್ಕಪಕ್ಕ ಕೂರಿಸಿಕೊಂಡ ಸಿಎಂ ಯಡಿಯೂರಪ್ಪ ಸಂಧಾನ ಮಾಡಿ ಕಿವಿ ಮಾತು ಹೇಳಿ ಕಳಿಸಿದ್ದಾರೆ.


ಒಬ್ಬರನ್ನೇ ಪ್ರತ್ಯೇಕವಾಗಿ ಮಾತನಾಡಿಸಿದರೆ ಬೇರೆಯವರ ಬಗ್ಗೆ ದೂರು ಹೇಳಿ ಅಸಮಾಧಾನ ಹೇಳಿಕೊಳ್ಳುವುದೇ ಆಗುತ್ತದೆ. ಹೀಗಾಗಿ ಇಬ್ಬರನ್ನೂ ಒಟ್ಟಿಗೆ ಕೂರಿಸಿ ಮಾತನಾಡಿದರೆ ಸಮಸ್ಯೆ ಸುಲಭವಾಗಿ ಬಗೆಹರಿಯಲಿದೆ. ಶ್ರೀರಾಮುಲು ಮೃದು ಸ್ವಭಾದವರಾದ ಕಾರಣ ಎದುರು ಬದುರು ಕೂರಿಸಿಕೊಂಡು ಮಾತನಾಡಿದರೆ ನನ್ನ ಮಾತು ತಳ್ಳಿ ಹಾಕಲ್ಲ. ಈ ಲೆಕ್ಕಚಾರದಿಂದಲೇ ಈ ಪ್ರಯತ್ನ ನಡೆಸಿದ ಸಿಎಂ ಯಡಿಯೂರಪ್ಪ ಅವರು ಶ್ರೀರಾಮುಲು-ಸುಧಾಕರ್ ಅವರನ್ನು ಮುಖಾಮುಖಿ ಮಾಡಿಸಿದ್ದು ಎನ್ನಲಾಗಿದೆ. ಆದರೆ, ಈ ಸಂಧಾನದ ಮೂಲಕ ಸಚಿವ ಸುಧಾಕರ್ ಸಿಎಂ ಮೇಲೆ ಒತ್ತಡ ಹೇರಿ ತಮ್ಮ ಪ್ರಭಾವ ಬೀರುವಲ್ಲಿ ಯಶಸ್ವಿಯಾದ್ರಾ ಎಂಬ ಮಾತುಗಳೂ ರಾಜ್ಯ ರಾಜ್ಯಕೀಯದಲ್ಲಿ ಕೇಳಿ ಬರುತ್ತಿವೆ.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: bs yadiyurappaDr. K Sudhakarhealth departmetsiriramulu
ShareTweetSendShare
Join us on:

Related Posts

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

by Shwetha
July 1, 2026
0

ಬೆಂಗಳೂರು ನಗರದ ಅಭಿವೃದ್ಧಿ ಮತ್ತು ಸಾರ್ವಜನಿಕರ ತೆರಿಗೆ ಹಣದ ಸದುಪಯೋಗದ ಕುರಿತು ನಡೆದ ಜಿಬಿಎ ಸಭೆಯಲ್ಲಿ ಸಚಿವ ಕೃಷ್ಣಭೈರೇಗೌಡ ಅವರು ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....

ಜುಲೈ 1ರಿಂದ ವಾಣಿಜ್ಯ, ಕೈಗಾರಿಕಾ LPG ಸಿಲಿಂಡರ್ ದರ ಏರಿಕೆ

ಜುಲೈ 1ರಿಂದ ವಾಣಿಜ್ಯ, ಕೈಗಾರಿಕಾ LPG ಸಿಲಿಂಡರ್ ದರ ಏರಿಕೆ

by Shwetha
July 1, 2026
0

ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಹಾಗೂ ಕೈಗಾರಿಕಾ ಬಳಕೆಯ LPG ಸಿಲಿಂಡರ್‌ಗಳ ದರವನ್ನು ಹೆಚ್ಚಿಸಲು ನಿರ್ಧರಿಸಿವೆ. ಹೊಸ ದರಗಳು ಜುಲೈ 1ರಿಂದ ಜಾರಿಗೆ ಬರಲಿವೆ. ಹೊಸ ಪರಿಷ್ಕರಣೆಯ...

ಓಡದಿದ್ದರೆ ಹಿಂದಕ್ಕೆ ಬೀಳ್ತೀರಿ, ಹೊಸ ನಾಯಕರು ಬರ್ತಾರೆ: ಸಿದ್ದರಾಮಯ್ಯ ಕಡೆಗಣನೆ ವಿಚಾರದಲ್ಲಿ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು

ಓಡದಿದ್ದರೆ ಹಿಂದಕ್ಕೆ ಬೀಳ್ತೀರಿ, ಹೊಸ ನಾಯಕರು ಬರ್ತಾರೆ: ಸಿದ್ದರಾಮಯ್ಯ ಕಡೆಗಣನೆ ವಿಚಾರದಲ್ಲಿ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು

by Shwetha
July 1, 2026
0

ರಾಜಕಾರಣ ಎಂಬುದು ನಿಂತ ನೀರಲ್ಲ, ಅದು ನಿರಂತರವಾಗಿ ಓಡುವ ರೇಸ್ ಎನ್ನುವ ಸತ್ಯವನ್ನು ಸಚಿವ ಸತೀಶ್ ಜಾರಕಿಹೊಳಿ ಅವರು ಅತ್ಯಂತ ನೇರ ನುಡಿಗಳಲ್ಲಿ ಬಿಚ್ಚಿಟ್ಟಿದ್ದಾರೆ. ಮಾಜಿ ಮುಖ್ಯಮಂತ್ರಿ...

ಆಡಿಯೋ ವಿವಾದಕ್ಕೆ ಡಿ.ವಿ. ಸದಾನಂದಗೌಡ ಪ್ರತಿಕ್ರಿಯೆ; ಅದು ನನ್ನದಲ್ಲ

ಆಡಿಯೋ ವಿವಾದಕ್ಕೆ ಡಿ.ವಿ. ಸದಾನಂದಗೌಡ ಪ್ರತಿಕ್ರಿಯೆ; ಅದು ನನ್ನದಲ್ಲ

by Shwetha
July 1, 2026
0

ರಾಜ್ಯ ಬಿಜೆಪಿಯಲ್ಲಿ ಚರ್ಚೆಗೆ ಕಾರಣವಾಗಿರುವ ವೈರಲ್ ಆಡಿಯೋ ವಿವಾದದ ಕುರಿತು ಹಿರಿಯ ಬಿಜೆಪಿ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ...

ಸಿದ್ದರಾಮಯ್ಯ ಹಾದಿ ನನಗಲ್ಲ ನನ್ನ ಸ್ಟೈಲೇ ಬೇರೆ: ದೆಹಲಿ ನಾಯಕರ ಜೊತೆ ಡಿಕೆಶಿ ದೋಸ್ತಿ ಪಾಲಿಟಿಕ್ಸ್

ಸಿದ್ದರಾಮಯ್ಯ ಹಾದಿ ನನಗಲ್ಲ ನನ್ನ ಸ್ಟೈಲೇ ಬೇರೆ: ದೆಹಲಿ ನಾಯಕರ ಜೊತೆ ಡಿಕೆಶಿ ದೋಸ್ತಿ ಪಾಲಿಟಿಕ್ಸ್

by Shwetha
July 1, 2026
0

ಕರ್ನಾಟಕ ರಾಜಕಾರಣದ ಇಬ್ಬರು ಧ್ರುವತಾರೆಗಳಾದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕಾರ್ಯವೈಖರಿಯಲ್ಲಿ ಈಗ ದೊಡ್ಡ ಬದಲಾವಣೆ ಕಂಡುಬರುತ್ತಿದೆ. ವಿಶೇಷವಾಗಿ ಕೇಂದ್ರ ಸರ್ಕಾರದೊಂದಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram