ADVERTISEMENT
Tuesday, March 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಇಂದು ವಿಶ್ವ ವಿದ್ಯಾರ್ಥಿ ದಿನ – ವಿದ್ಯಾರ್ಥಿಗಳ ಸ್ಫೂರ್ತಿಯ ಮೂಲ ಕಲಾಂ ಮೇಷ್ಟ್ರು ಅವರ ಜನ್ಮ‌ದಿನ

Shwetha by Shwetha
October 15, 2020
in Newsbeat, Saaksha Special, ಎಸ್ ಸ್ಪೆಷಲ್, ನ್ಯೂಸ್ ಬೀಟ್
Kalam sir bday
Share on FacebookShare on TwitterShare on WhatsappShare on Telegram

ಇಂದು ವಿಶ್ವ ವಿದ್ಯಾರ್ಥಿ ದಿನ – ವಿದ್ಯಾರ್ಥಿಗಳ ಸ್ಫೂರ್ತಿಯ ಮೂಲ ಕಲಾಂ ಮೇಷ್ಟ್ರು ಅವರ ಜನ್ಮ‌ದಿನ – Kalam sir bday

ಮಂಗಳೂರು, ಅಕ್ಟೋಬರ್15: ಪ್ರತಿ ವರ್ಷ ಅಕ್ಟೋಬರ್ 15 ರಂದು ವಿಶ್ವ ವಿದ್ಯಾರ್ಥಿ ದಿನಾಚರಣೆಯನ್ನು ಆಚರಿಸಲಾಗುತ್ತದೆ. Kalam sir bday
ಇದು ಭಾರತದ ಮಾಜಿ ರಾಷ್ಟ್ರಪತಿ ಡಾ. ಎಪಿಜೆ ಅಬ್ದುಲ್ ಕಲಾಂ ಅವರ ಜನ್ಮ ದಿನಾಚರಣೆಯನ್ನು ಸೂಚಿಸುತ್ತದೆ. ವಿಶ್ವಸಂಸ್ಥೆಯು ಅಕ್ಟೋಬರ್ 15 ಅನ್ನು 2010 ರಲ್ಲಿ ವಿಶ್ವ ವಿದ್ಯಾರ್ಥಿ ದಿನವೆಂದು ಘೋಷಿಸಿತು.

Related posts

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

March 3, 2026
ಅಪ್ಪನ ಹಾದಿ ಹಿಡಿದ್ರಾ ವಿಜಯೇಂದ್ರ? ಸಮುದಾಯ ಬೆಂಬಲಕ್ಕೆ ಬಿವೈವಿ ಮನವಿ

ಅಪ್ಪನ ಹಾದಿ ಹಿಡಿದ್ರಾ ವಿಜಯೇಂದ್ರ? ಸಮುದಾಯ ಬೆಂಬಲಕ್ಕೆ ಬಿವೈವಿ ಮನವಿ

March 3, 2026

Kalam sir bday

ಎಪಿಜೆ ಅಬ್ದುಲ್ ಕಲಾಂ ಅವರ ಜನ್ಮದಿನದಂದು ವಿಶ್ವ ವಿದ್ಯಾರ್ಥಿ ದಿನವನ್ನು ಏಕೆ ಆಚರಿಸಲಾಗುತ್ತದೆ?

‘ಭಾರತದ ಕ್ಷಿಪಣಿ ಮನುಷ್ಯ’ ಎಂದು ಜನಪ್ರಿಯವಾಗಿರುವ ಕಲಾಂ ಅವರು 1931 ರ ಅಕ್ಟೋಬರ್ 15 ರಂದು ತಮಿಳುನಾಡಿನ ರಾಮೇಶ್ವರಂನಲ್ಲಿ ಜನಿಸಿದರು. ಅವರು 2002 ರಿಂದ 2007 ರವರೆಗೆ ಭಾರತದ 11 ನೇ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದರು.

ಕಲಾಂ ಕೇವಲ ರಾಜಕಾರಣಿ ಮತ್ತು ಏರೋಸ್ಪೇಸ್ ವಿಜ್ಞಾನಿ ಮಾತ್ರವಲ್ಲ, ಶಿಕ್ಷಕರೂ ಆಗಿದ್ದರು. ಜೊತೆಗೆ ಜಗತ್ತು ತನ್ನನ್ನು ಶಿಕ್ಷಕನಾಗಿ ನೆನಪಿಸಿಕೊಳ್ಳಬೇಕೆಂದು ಅವರು ಬಯಸಿದ್ದರು.

ಮಿಸೈಲ್ ಮ್ಯಾನ್, ಸರಳ ಸಜ್ಜನ, ಭಾರತ ಕಂಡ ಅದ್ಭುತ ವಿಜ್ಞಾನಿ, ದೇಶದ 11ನೇ ರಾಷ್ಟ್ರಪತಿ ತಮ್ಮ ಸಾಧನೆಯಿಂದಲೇ ಆಕಾಶದೆತ್ತರಕ್ಕೆ ಬೆಳೆದವರು.

ಭಾರತದ ಮಾಜಿ ರಾಷ್ಟ್ರಪತಿ ಅವುಲ್ ಪಕೀರ್ ಜೈನುಲಾಬ್ಡೀನ್ ಅಬ್ದುಲ್ ಕಲಾಂ ಅವರು ಭಾರತದಲ್ಲಿ ಮಾತ್ರವಲ್ಲ, ಜಗತ್ತಿನಲ್ಲಿಯೂ ಲಕ್ಷಾಂತರ ಜನರಿಗೆ ಸ್ಫೂರ್ತಿಯಾಗಿದ್ದಾರೆ. ಜನರ ಪ್ರೆಸಿಡೆಂಟ್ ಎಂದು ಪ್ರೀತಿಯಿಂದ ಕರೆಯಿಸಿಕೊಳ್ಳುತ್ತಿದ್ದ, ಕಲಾಂ ಅವರು ಅಗ್ನಿ ಮತ್ತು ಪೃಥ್ವಿ ಕ್ಷಿಪಣಿಗಳ ಅಭಿವೃದ್ಧಿ ಹಾಗೂ ಪರೀಕ್ಷೆಯ ನೇತೃತ್ವ ವಹಿಸಿ ಯಶಸ್ವಿಯಾಗಿದ್ದರು. ಹಾಗಾಗಿ ಕಲಾಂ ಅವರನ್ನು ಮಿಸೈಲ್ ಮ್ಯಾನ್ ( ಕ್ಷಿಪಣಿ ಮನುಷ್ಯ ) ಎಂದೇ ಕರೆಯಲಾಗುತ್ತದೆ.

ಭವ್ಯ ಭಾರತದ ಬಗ್ಗೆ ಅದೆಷ್ಟೋ ಕನಸುಗಳನ್ನು ಕಂಡ ಕ್ಷಿಪಣಿ ಮನುಷ್ಯ ಶಿಕ್ಷಣದ ಮಹತ್ವವನ್ನು ಇಡೀ ದೇಶಕ್ಕೆ ಸಾರಿದ್ದರು.
ಯುವ ವಿದ್ಯಾರ್ಥಿಗಳಿಗೆ ಸದಾ ಪ್ರೇರಣೆಯಾಗಿದ್ದ ಎಪಿಜೆ ಅವರನ್ನು ‌ ರಾಷ್ಟ್ರಪತಿ ಹುದ್ದೆಯಿಂದ ನಿವೃತ್ತರಾದ ಮೇಲೆ ಮುಂದೇನು‌ ಮಾಡುತ್ತೀರಿ ಎಂದು ಪ್ರಶ್ನಿಸಿದಾಗ ಅವರು, ನಾನು ಮೊದಲು ಶಿಕ್ಷಕನಾಗಿದ್ದೆ. ನಂತರವೂ ಶಿಕ್ಷಕನಾಗಿ ಮುಂದುವರಿಯುತ್ತೇನೆ ಎಂದಿದ್ದರು.

ಜನರು ತಮ್ಮನ್ನು ವಿಜ್ಞಾನಿ ಎಂದು ನೆನಪಿಸಿಕೊಳ್ಳುವುದಕ್ಕಿಂತ, ಶಿಕ್ಷಕ ಎಂದು ನೆನಪಿಸಿಕೊಳ್ಳಬೇಕು ಎಂದು ಬಯಸಿದ್ದ ಕಲಾಂ ಮೇಷ್ಟ್ರು, ಜುಲೈ 27, 2015 ರಂದು ಶಿಲ್ಲಾಂಗ್‌ನಲ್ಲಿ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡುತ್ತಿದ್ದಾಗಲೇ ಹೃದಯಾಘಾತದಿಂದ ಕುಸಿದು ಬಿದ್ದು ಕೊನೆಯುಸಿರೆಳೆದಿದ್ದರು.
ಪ್ರತಿಕೂಲ ಪರಿಸ್ಥಿತಿಗಳ ನಡುವೆಯೂ ಜೀವನದಲ್ಲಿ ಅಸಾಧಾರಣ ವಿಷಯಗಳನ್ನು ಸಾಧಿಸಬೇಕು ಎಂದು ಯುವಕರಲ್ಲಿ ಧೈರ್ಯ ತುಂಬಿದ ಎಪಿಜೆ ಅವರ ಸರಳತೆ, ದೇಶಪ್ರೇಮ, ವಿಜ್ಞಾನ ಮತ್ತು ತಂತ್ರಜ್ಞಾನ, ನಾವೀನ್ಯತೆ ಯಾವಾಗಲೂ ಜನ ಮಾನಸದಲ್ಲಿರುತ್ತಾರೆ.

ಭಾರತದ ನಾಗರಿಕ ಪ್ರಶಸ್ತಿಗಳಾದ ಪದ್ಮ ಭೂಷಣ (1981), ಪದ್ಮವಿಭೂಷಣ (1990) ಮತ್ತು ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನ (1997) ಡಾ. ಎಪಿಜೆ ಅಬ್ದುಲ್ ಕಲಾಂ ಅವರ ಮುಡಿಗೇರಿವೆ.

ದೈಹಿಕವಾಗಿ ಕಲಾಂ ಸರ್ ಅವರು ನಮ್ಮಿಂದ ದೂರವಾಗಿದ್ದರೂ, ಅವರ ಜೀವನ, ಆದರ್ಶ, ಸಿದ್ಧಾಂತ, ಸಂದೇಶ ಎಂದೆಂದಿಗೂ ಅಮರ..

Kalam sir bday

ಡಾ.ಎಪಿಜೆ ಅಬ್ದುಲ್ ಕಲಾಂ ಅವರ ‌ಕೆಲವು ಸ್ಪೂರ್ತಿದಾಯಕ ಮಾತುಗಳು ಇಲ್ಲಿವೆ

ನಿಮ್ಮ ಧ್ಯೇಯದಲ್ಲಿ ಯಶಸ್ವಿಯಾಗಬೇಕು ಎಂದರೆ, ನೀವು ನಿಮ್ಮ ಗುರಿಯ ಬಗ್ಗೆ ಏಕ ಮನಸ್ಸಿನ ಭಕ್ತಿ ಹೊಂದಿರಬೇಕು

ನಮ್ಮೆಲ್ಲರಿಗೂ ಸಮಾನ ಪ್ರತಿಭೆ ಇಲ್ಲ. ಆದರೆ, ನಮ್ಮ ಪ್ರತಿಭೆಯನ್ನು ಬೆಳೆಸಿಕೊಳ್ಳಲು ನಮಗೆಲ್ಲರಿಗೂ ಸಮಾನ ಅವಕಾಶವಿದೆ.

ನಿಮ್ಮ ಭವಿಷ್ಯವನ್ನು ನೀವು ಬದಲಾಯಿಸಲು ಸಾಧ್ಯವಿಲ್ಲ, ಆದರೆ ನಿಮ್ಮ ಅಭ್ಯಾಸವನ್ನು ನೀವು ಬದಲಾಯಿಸಬಹುದು, ಮತ್ತು ಖಂಡಿತವಾಗಿಯೂ ನಿಮ್ಮ ಅಭ್ಯಾಸಗಳು ನಿಮ್ಮ ಭವಿಷ್ಯವನ್ನು ಬದಲಾಯಿಸುತ್ತವೆ.

ಯಾರನ್ನಾದರೂ ಸೋಲಿಸುವುದು ತುಂಬಾ ಸುಲಭ, ಆದರೆ ಯಾರನ್ನಾದರೂ ಗೆಲ್ಲುವುದು ತುಂಬಾ ಕಷ್ಟ.

ನಿಮ್ಮ ಅತ್ಯುತ್ತಮ ಶಿಕ್ಷಕ ನಿಮ್ಮ ಕೊನೆಯ ತಪ್ಪು.

ನಮ್ಮನ್ನು ಸೋಲಿಸಲು ನಾವು ಸಮಸ್ಯೆಗೆ ಅನುಮತಿಸಬಾರದು

ಮನುಷ್ಯನಿಗೆ ಜೀವನದಲ್ಲಿ ಕಷ್ಟಗಳು ಬೇಕಾಗುತ್ತವೆ ಏಕೆಂದರೆ ಅವು ಯಶಸ್ಸನ್ನು ಆನಂದಿಸಲು ಅವಶ್ಯಕ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

https://twitter.com/SaakshaTv

Tags: APJ Abdul Kalambirth anniversary of former President of India Dr APJ Abdul Kalamlatest-newsWorld Students' Day
ShareTweetSendShare
Join us on:

Related Posts

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

by Shwetha
March 3, 2026
0

2028ರ ವಿಧಾನಸಭಾ ಚುನಾವಣೆಗೆ ಜೆಡಿಎಸ್–ಬಿಜೆಪಿ ಮೈತ್ರಿ ವಿಚಾರವಾಗಿ ರಾಜಕೀಯ ಸಂದೇಶಗಳು ಹೊರಬರುತ್ತಿರುವ ಹಿನ್ನೆಲೆ, ಬಿಜೆಪಿಯ ಜಿಲ್ಲಾ ಘಟಕದಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ. ವಿಶೇಷವಾಗಿ ಟಿಕೆಟ್ ಆಕಾಂಕ್ಷಿಗಳಲ್ಲಿ ಗೊಂದಲ ಹೆಚ್ಚಾಗಿದೆ...

ಅಪ್ಪನ ಹಾದಿ ಹಿಡಿದ್ರಾ ವಿಜಯೇಂದ್ರ? ಸಮುದಾಯ ಬೆಂಬಲಕ್ಕೆ ಬಿವೈವಿ ಮನವಿ

ಅಪ್ಪನ ಹಾದಿ ಹಿಡಿದ್ರಾ ವಿಜಯೇಂದ್ರ? ಸಮುದಾಯ ಬೆಂಬಲಕ್ಕೆ ಬಿವೈವಿ ಮನವಿ

by Shwetha
March 3, 2026
0

ರಾಜ್ಯ ರಾಜಕೀಯದಲ್ಲಿ ಬದಲಾದ ಸಮೀಕರಣಗಳ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ತಮ್ಮ ರಾಜಕೀಯ ಬಲವನ್ನು ಸಂಘಟಿಸಲು ಮುಂದಾಗಿರುವಂತೆ ಕಾಣುತ್ತಿದೆ. ತಮ್ಮ ತಂದೆ ಮತ್ತು ಹಿರಿಯ...

ಯುದ್ಧ ಭೀತಿ ನಡುವೆ ಭಾರತೀಯ ಷೇರು ಮಾರುಕಟ್ಟೆ ತಲ್ಲಣ: ಸೆನ್ಸೆಕ್ಸ್ 1700 ಪಾಯಿಂಟ್ ಕುಸಿತ

ಯುದ್ಧ ಭೀತಿ ನಡುವೆ ಭಾರತೀಯ ಷೇರು ಮಾರುಕಟ್ಟೆ ತಲ್ಲಣ: ಸೆನ್ಸೆಕ್ಸ್ 1700 ಪಾಯಿಂಟ್ ಕುಸಿತ

by Shwetha
March 3, 2026
0

ಮಧ್ಯಪ್ರಾಚ್ಯದಲ್ಲಿ ಇಸ್ರೇಲ್–ಅಮೆರಿಕಾ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಷೇರು ಮಾರುಕಟ್ಟೆ ಭಾರೀ ತಲ್ಲಣಕ್ಕೊಳಗಾಗಿದೆ. ಯುದ್ಧ ಭೀತಿ ಹೂಡಿಕೆದಾರರಲ್ಲಿ ಆತಂಕ ಸೃಷ್ಟಿಸಿದ್ದು, ಮಾರುಕಟ್ಟೆಯಲ್ಲಿ ಮಾರಾಟದ...

ನೀರು ಬೇಕಿದ್ದರೆ 12 ಕೋಟಿ ಕಟ್ಟಿ: ಪ್ರತಿಷ್ಠಿತ ಜೈನ್ ಶಾಲೆಗೆ ಹೈಕೋರ್ಟ್ ಖಡಕ್ ಆದೇಶ

ನೀರು ಬೇಕಿದ್ದರೆ 12 ಕೋಟಿ ಕಟ್ಟಿ: ಪ್ರತಿಷ್ಠಿತ ಜೈನ್ ಶಾಲೆಗೆ ಹೈಕೋರ್ಟ್ ಖಡಕ್ ಆದೇಶ

by Shwetha
March 3, 2026
0

ಬೆಂಗಳೂರು: ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಜೈನ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆಗೆ ಕರ್ನಾಟಕ ಹೈಕೋರ್ಟ್ ಭಾರಿ ಆಘಾತ ನೀಡಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ...

ದೆಹಲಿ ತಲುಪಿದ ರಾಜ್ಯ ಕಾಂಗ್ರೆಸ್ ಸಂಪುಟ ಕಸರತ್ತು: ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಅಂಗಳದಲ್ಲಿ ಜೋರಾದ ಲಾಬಿ

ದೆಹಲಿ ತಲುಪಿದ ರಾಜ್ಯ ಕಾಂಗ್ರೆಸ್ ಸಂಪುಟ ಕಸರತ್ತು: ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಅಂಗಳದಲ್ಲಿ ಜೋರಾದ ಲಾಬಿ

by Shwetha
March 3, 2026
0

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆಯ ಮಾತುಗಳು ಮತ್ತೆ ಮುನ್ನೆಲೆಗೆ ಬಂದಿದ್ದು, ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ವಿಧಾನಸೌಧದ ಪಡಸಾಲೆಯಲ್ಲಿ ಕೇಳಿಬರುತ್ತಿದ್ದ ಮಂತ್ರಿಗಿರಿಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram