Dcm Govinda Karajola
ಬೆಂಗಳೂರು: ಡಿಸಿಎಂ ಗೋವಿಂದ ಕಾರಜೋಳ ಅವರು ಹಾಗೂ ಕುಟುಂಬಸ್ಥರು ಈಗಾಗಲೇ ಹೆಮ್ಮಾರಿ ಕೊರೊನಾ ಸಂಕಸ್ಷಟಕ್ಕೆ ಸಿಲುಕಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಶಿರಾ ಅಸೆಂಬ್ಲಿ ಕ್ಷೇತ್ರದ ಉಪಚುನಾವಣೆಯ ಪಕ್ಷದ ಅಭ್ಯರ್ಥಿ ಡಾ.ರಾಜೇಶ್ ಗೌಡ ನಾಮಪತ್ರ ಸಲ್ಲಿಕೆಯ ವೇಳೆ ಹಾಜರಾಗಿದ್ದ ಕಾರಜೋಳ ಅವರಿಗೆ, ನೆರೆ ಪೀಡಿತ ಪ್ರದೇಶಕ್ಕೆ ಭೇಟಿ ನೀಡದೇ ಇರುವ ಆಪಾದನೆ ಎದುರಾಗಿದೆ.

ಇದಕ್ಕೆ ಫೇಸ್ ಬುಕ್ ಖಾತೆಯಲ್ಲಿ ಪೋಸ್ಟ್ ಒಮದನ್ನ ಹಾಕಿರುವ ಕಾರಜೋಳ ಅವರು, ” ತಾವು ಹಾಗು ತಮ್ಮ ಕುಟುಂಬದ ಎಂಟು ಮಂದಿ ಕೋವಿಡ್ ಬಾಧಿತರಾಗಿದ್ದೇವೆ. ಪುತ್ರ ಡಾ. ಗೋಪಾಲ ಕಾರಜೋಳ 23 ದಿನಗಳಿಂದ ವೆಂಟಿಲೇಟರ್ನಲ್ಲಿದ್ದಾರೆ. ಇಂಥ ಸಂಕಷ್ಟದ ಸಂದರ್ಭದಲ್ಲಿ ಒಂದು ಘಟನೆಯಿಂದ ಅಳೆಯಲು ಹೋಗಬೇಡಿ”. ಎಂದು ಮನವಿ ಮಾಡಿಕೊಂಡಿದ್ದಾರೆ.

ಅಲ್ಲದೇ “ತಮ್ಮ ಪುತ್ರ ಡಾ. ಗೋಪಾಲ ಕಾರಜೋಳ ಕಳೆದ 23 ದಿನಗಳಿಂದ ಆಸ್ಪತ್ರೆಯಲ್ಲಿ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ತಮ್ಮ ಧರ್ಮ ಪತ್ನಿ ಕೂಡಾ ಕೊರೊನಾ ಸೋಂಕಿನಿಂದಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಇದೀಗ ಆಸ್ಪತ್ರೆಯಿಂದ ಹಿಂದಿರುಗಿದ್ದಾರೆ. ನಾನೂ ಕೂಡಾ ಕೋವಿಡ್ 19ಕ್ಕೆ ಒಳಗಾಗಿ ಗುಣಮುಖನಾಗಿ ಹಿಂದಿರುಗಿದ್ದೇನೆ.”

” ಕುಟುಂಬದಲ್ಲಿ 8 ಮಂದಿ ಕೊರೊನಾ ಸೋಂಕಿನಿಂದ ಒಳಗಾಗಿದ್ದೇವೆ. ಇದು ವಸ್ತುಸ್ಥಿತಿ. ಇಂತಹ ಗತ್ಯಂತರ ಸಂದರ್ಭದಲ್ಲಿ ನಾನು ಎಲ್ಲೂ ಹೊರಗಡೆ ಹೋಗುವುದು ಸೂಕ್ತವಲ್ಲ. ಅನಿವಾರ್ಯವಿದ್ದ ಪ್ರಸಂಗದಲ್ಲಿ ಮಾತ್ರ ಮುನ್ನೆಚ್ಚರಿಕೆಯಿಂದ ಆಯಾಸವಾಗದಂತಹ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಂತೆ ವೈದ್ಯರು ಸಲಹೆ ಇದೆ.
ದೂರದ ಪ್ರಯಾಣ ನಿಷಿದ್ಧ ಎಂಬುದು ವೈದ್ಯರು ಕೊಟ್ಟಿರುವ ಎಚ್ಚರಿಕೆ. ಈ ಎಲ್ಲಾ ಅಂಶಗಳು ಮಾನ್ಯ ಮುಖ್ಯಮಂತ್ರಿಗಳಾದ ಶ ಬಿ.ಎಸ್. ಯಡಿಯೂರಪ್ಪನವರ ಗಮನದಲ್ಲಿದೆ. ಅವರೂ ಕೂಡಾ ಆರೋಗ್ಯದ ಬಗ್ಗೆ ಕಾಳಜಿವಹಿಸುವಂತೆ ಸೂಚಿಸಿದ್ದಾರೆ. ಸಾರ್ವಜನಿಕ ಬದುಕಿನಲ್ಲಿರುವವರ ವೈಯಕ್ತಿಕ ಸಂತಸ- ಸಂಕಟಗಳು ಸಾರ್ವಜನಿಕರಿಗೆ ಅಷ್ಟಾಗಿ ತಿಳಿದಿರುವುದಿಲ್ಲ. ಸಂತಸಗಳು ಕೆಲವೊಮ್ಮೆ ಹೊರಗೆ ಬರುತ್ತವೆ.
ಉತ್ತರ ಕರ್ನಾಟಕ ಪ್ರವಾಹದಿಂದ 3 ಸಾವಿರ ಕೋಟಿ ರೂ. : ಸಚಿವ ಆರ್. ಅಶೋಕ್
ಆದರೆ, ಸಂಕಷ್ಟಗಳು ಯಾವತ್ತಿಗೂ ಅನಾಥ. ಅದನ್ನು ಅನುಭವಿಸಿದರಿಗಷ್ಟೇ ಅದರ ಪ್ರಖರತೆ ಗೊತ್ತು. ಇದರ ಪರಿಣಾಮವಾಗಿ ಸಾರ್ವಜನಿಕ ಬದುಕಿನಲ್ಲಿರುವವರ ಹಾಜರಿ ಅಥವಾ ಗೈರುಹಾಜರಿಗಳನ್ನು ಕನ್ನಡಕ ಹಾಕಿ ನೋಡುವ ಪ್ರವೃತ್ತಿ ಹೆಚ್ಚಾಗುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಲಾರದು” ಎಂದು ಬರೆದುಕೊಳ್ಲುವ ಮೂಲಕ ತಮ್ಮ ವಿರುದ್ಧದ ಅಪನಿಂದನೆಗಳಿಗೆ ಉತ್ತರ ನೀಡಿದ್ದಾರೆ.
Dcm Govinda Karajola
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








