ADVERTISEMENT
Wednesday, March 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports IPL 2020

ಸಾಕು ಧೋನಿಯ ಜಪ… ಬೇಕಾಗಿದ್ದಾರೆ ಸಿಎಸ್ ಕೆಗೆ ಹೊಸ ಆಟಗಾರರು.. ಹುಡುಕಿಕೊಡಿ ಪ್ಲೀಸ್…!

Sanath Rai by Sanath Rai
October 20, 2020
in IPL 2020, Newsbeat, ಕ್ರೀಡೆ
mahendra singh dhoni csk ipl 2020 saakshatv
Share on FacebookShare on TwitterShare on WhatsappShare on Telegram

ಸಾಕು ಧೋನಿಯ ಜಪ… ಬೇಕಾಗಿದ್ದಾರೆ ಸಿಎಸ್ ಕೆಗೆ ಹೊಸ ಆಟಗಾರರು.. ಹುಡುಕಿಕೊಡಿ ಪ್ಲೀಸ್…!

m.s dhoni csk ipl 2020 saakshatvಮಹೇಂದ್ರ ಸಿಂಗ್ ಧೋನಿ.. ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕಿಗೆ ನಿವೃತ್ತಿ ಹೇಳಿಯಾಗಿದೆ. ಇದೀಗ ಐಪಿಎಲ್ ಗೂ ಗುಡ್ ಬೈ ಹೇಳ್ತಾರಾ ?

Related posts

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

March 4, 2026
ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

March 4, 2026

ಈ ಪ್ರಶ್ನೆ ಸಹಜವಾಗಿ ಧೋನಿ ಅಭಿಮಾನಿಗಳಲ್ಲಿ ಮೂಡುತ್ತಿದೆ.

ಹಾಗೇ ನೋಡಿದ್ರೆ ಧೋನಿಯ ವಯಸ್ಸು ಕೂಡ 39 ಆಗಿದೆ. ಹಾಗಂತ ಅವರ ಫಿಟ್ ನೆಸ್ ನೋಡಿದ್ರೆ ಅನ್ನಿಸುವುದಿಲ್ಲ.

ಅದೇ ರೀತಿ ಕೀಪಿಂಗ್ ವಿಚಾರದಲ್ಲೂ ಧೋನಿಗೆ ವಯಸ್ಸು ಆಗಿದೆ ಎಂಬುದೇ ಭಾಸವಾಗುತ್ತಿಲ್ಲ.

ಅನುಭವ ಮತ್ತು ಕೌಶಲ್ಯ ಹಾಗೂ ಫಿಟ್ ನೆಸ್ ಅನ್ನು ನೋಡಿದ್ರೆ ಧೋನಿ ಇನ್ನೂ ಕನಿಷ್ಠವಾದ್ರೂ ಎರಡು ವರ್ಷ ಆಡುವಂತಹ ಸಾಮಥ್ರ್ಯವನ್ನು ಹೊಂದಿದ್ದಾರೆ.

ಆದ್ರೆ ಬ್ಯಾಟಿಂಗ್ ಫಾರ್ಮ್ ಅನ್ನು ನೋಡಿದ್ರೆ ಧೋನಿ ಲಯ ಕಳೆದುಕೊಂಡಿದ್ದಾರೆ ಅನ್ನೋದು ಸ್ಪಷ್ಟವಾಗಿ ಗೊತ್ತಾಗುತ್ತದೆ.
ಅದಕ್ಕೂ ಒಂದು ಕಾರಣವಿದೆ.

2019ರ ವಿಶ್ವಕಪ್ ನಂತರ ಧೋನಿ ಕ್ರಿಕೆಟ್ ಆಡಿಲ್ಲ. ಅಂತಾರಾಷ್ಟ್ರೀಯ ಮತ್ತು ದೇಸಿ ಟೂರ್ನಿಗಳಿಂದ ದೂರವೇ ಉಳಿದಿದ್ದರು.

ಕಳೆದ ಮಾರ್ಚ್ ನಲ್ಲಿ ಐಪಿಎಲ್ ಗಾಗಿ ಅಭ್ಯಾಸದಲ್ಲಿ ನಿರತರಾಗಿದ್ರೂ ಕೋವಿಡ್-19 ಅಡ್ಡಿಯನ್ನುಂಟು ಮಾಡಿತ್ತು.

ಹೀಗಾಗಿ ಧೋನಿಗೆ ಅಭ್ಯಾಸದ ಕೊರತೆ ಕಾಡುತ್ತಿದೆ ಎಂಬುದನ್ನು ಅಲ್ಲಗಳೆಯುವಂತಿಲ್ಲ.

csk ipl 2020 ipl dhoni saakshatvಅದೇನೇ ಇರಲಿ, ಧೋನಿ ಈ ಬಾರಿಯ ಐಪಿಎಲ್ ನಲ್ಲಿ ಸಾಕಷ್ಟು ಟೀಕೆಗೂ ಗುರಿಯಾಗಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸರಿಯಾದ ರೀತಿಯಲ್ಲಿ ಮುನ್ನೆಡಸಿಲ್ಲ ಎಂಬ ಆರೋಪವೂ ಅವರ ಮೇಲಿದೆ.

ಅದಕ್ಕೆ ಕಾರಣಗಳು ಹಲವು ಇರಬಹುದು. ತಂಡದೊಳಗಿನ ಬಿಕ್ಕಟ್ಟು, ಆಟಗಾರರ ವೈಫಲ್ಯ, ಸ್ವತಃ ಧೋನಿ ಬ್ಯಾಟಿಂಗ್ ನಲ್ಲಿ ವಿಫಲವಾಗಿರುವುದು,

ಗೆಲುವಿನ ತಂತ್ರಗಾರಿಕೆಯಲ್ಲಿ ವಿಫಲವಾಗಿರುವುದು, ಹಿರಿಯ ಆಟಗಾರರ ಮೇಲೆ ಹೆಚ್ಚು ಅವಲಂಬನೆ ಮಾಡಿಕೊಂಡಿರುವುದು, ಕಿರಿಯ ಆಟಗಾರರನ್ನು ಕಡೆಗಣಿಸಿರುವುದು..

ಹೀಗೆ ಸೋತಾಗ ಅನೇಕ ಕಾರಣಗಳು ಸಿಗುತ್ತವೆ.

ಆದ್ರೆ ಧೋನಿ ಯುವ ಆಟಗಾರರ ಮೇಲೆ ಬೊಟ್ಟು ಮಾಡಿ ತೋರಿಸುವುದು ಎಷ್ಟರ ಮಟ್ಟಿಗೆ ಸರಿ ಅನ್ನೋ ಪ್ರಶ್ನೆ ಕೂಡ ಮೂಡುತ್ತಿದೆ.

ಹಾಗೇ ನೋಡಿದ್ರೆ ಈ ಬಾರಿಯ ಐಪಿಎಲ್ ಅಂತಲ್ಲ..

ಹಿಂದಿನ ಐಪಿಎಲ್ ಟೂರ್ನಿಯನ್ನು ನೋಡಿದಾಗಲೂ ಸಿಎಸ್ ಕೆ ತಂಡ ಯಾವತ್ತೂ ಯುವ ಆಟಗಾರರಿಗೆ ಹೆಚ್ಚು ಅವಕಾಶವನ್ನು ನೀಡಿಲ್ಲ.

dhoni csk ipl 2020 saakshatvಒಂದು ವೇಳೆ ಅವಕಾಶ ನೀಡಿದ್ರೂ ಗಮನ ಸೆಳೆದಿರುವ ಆಟಗಾರರನ್ನು ತಂಡದಲ್ಲಿ ಉಳಿಸಿಕೊಂಡಿಲ್ಲ. ಇದು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಇಂದಿನ ಪರಿಸ್ಥಿತಿಗೆ ಕಾರಣವಾಗಿದೆ.

ಅಷ್ಟೇ ಅಲ್ಲ, ಸಿಎಸ್ ಕೆ ತಂಡ ಪರ್ಯಾಯ ಆಟಗಾರರ ಕೊರತೆಯನ್ನು ಕಾಡುತ್ತಿದೆ.

ಧೋನಿಯ ನಂತರ ಯಾರು ತಂಡವನ್ನು ಮುನ್ನಡೆಸಬೇಕು ಅನ್ನೋ ಪ್ರಶ್ನೆಗೂ ಸಿಎಸ್ ಕೆ ಟೀಮ್ ಮ್ಯಾನೇಜ್ ಮೆಂಟ್ ನಲ್ಲಿ ಉತ್ತರವಿಲ್ಲ.

ಬದಲಾಗಿ ಹೊಸ ನಾಯಕನನ್ನು ಆಯ್ಕೆ ಮಾಡಬೇಕಾದ ಪರಿಸ್ಥಿತಿ ಕೂಡ ನಿರ್ಮಾಣವಾಗಿದೆ.

ಮೂರು ಬಾರಿ ಚಾಂಪಿಯನ್, ಐದು ಬಾರಿ ರನ್ನರ್ ಅಪ್ ಆಗಿರುವ ಸಿಎಸ್‍ಕೆ ತಂಡಕ್ಕೆ ಧೋನಿ ಕೊಡುಗೆ ಅಪಾರ. ಅದನ್ನು ಯಾರು ಕೂಡ ಪ್ರಶ್ನೆ ಮಾಡುವಂಗಿಲ್ಲ.

ಧೋನಿ ನಾಯಕತ್ವದಲ್ಲಿ 100ಕ್ಕೂ ಅಧಿಕ ಪಂದ್ಯಗಳನ್ನು ಗೆದ್ದ ದಾಖಲೆ ಇದೆ. ಅತ್ಯಧಿಕ ಟೂರ್ನಿಗಳಲ್ಲಿ ಆಡಿರುವ ಗೌರವವೂ ಇದೆ.

ಕೀಪಿಂಗ್ ನಲ್ಲಿ 150ಕ್ಕೂ ಹೆಚ್ಚು ಕ್ಯಾಚ್, ಗರಿಷ್ಠ ಸಿಕ್ಸರ್, ಮ್ಯಾಚ್ ಫಿನಿಷರ್, 4000ಕ್ಕೂ ಅಧಿಕ ರನ್ ಹೀಗೆ ಧೋನಿ ಹೆಸರಿನ ಮುಂದೆ ಹಲವು ಸಾಧನೆಗಳು ಅಂಟಿಕೊಂಡಿವೆ.

ಆದ್ರೆ ಅದು ಈಗ ಲೆಕ್ಕಕ್ಕೆ ಬರುವುದಿಲ್ಲ. ಈ ಬಾರಿಯ ಐಪಿಎಲ್ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಪಾಠ ಕಲಿಸಿದೆ.

ತನ್ನದೇ ಆಪ್ತ ಬಳಗದವರನ್ನು ಕಟ್ಟಿಕೊಂಡ್ರೆ ಏನು ಆಗುತ್ತದೆ ಎಂಬುದಕ್ಕೆ ಸಿಎಸ್‍ಕೆ ತಂಡ ಉತ್ತಮ ನಿದರ್ಶನ.

ಒಟ್ಟಿನಲ್ಲಿ ಧೋನಿ ನಾಯಕನಾಗಿ ಸೋಲು ಅನ್ನು ಒಪ್ಪಿಕೊಳ್ಳಬೇಕು. ಅದಕ್ಕೆ ಕಾರಣ ನೀಡುವುದರಲ್ಲಿ ಅರ್ಥವಿಲ್ಲ. ಯಾಕಂದ್ರೆ ಸಿಎಸ್‍ಕೆ ತಂಡ ಅಂದ್ರೆ ಅದು ಧೋನಿಯ ತಂಡ.

ಅಲ್ಲಿ ತಂಡದ ಆಯ್ಕೆಯ ಸಂಪೂರ್ಣ ಸ್ವಾತಂತ್ರ್ಯ ಧೋನಿಯ ಮೇಲಿದೆ.

ಹೀಗಾಗಿ ಬಲಿಷ್ಠ ತಂಡವನ್ನು ಕಟ್ಟಲು ಹಳೆಯ ಹುಲಿಗಳನ್ನು ಆಯ್ಕೆ ಮಾಡಿಕೊಂಡು ಈಗ ಯುವ ಕ್ರಿಕೆಟಿಗರು ಸರಿಯಾಗಿ ಆಡಿಲ್ಲ ಎಂದು ಹೇಳುವುದು ಎಷ್ಟರ ಮಟ್ಟಿಗೆ ಸರಿ.

ಅಷ್ಟಕ್ಕೂ ಸಿಎಸ್ ಕೆ ತಂಡ ಎಷ್ಟು ಯುವ ಆಟಗಾರರಿಗೆ ಅವಕಾಶ ನೀಡಿದೆ ?

csk dhoni ipl 2020 saakshatvದೇಸಿ ಟೂರ್ನಿ ಅಥವಾ 19 ವಯೋಮಿತಿ ವಿಶ್ವಕಪ್ ನಲ್ಲಿ ಆಡಿರುವಂತಹ ಎಷ್ಟು ಮಂದಿ ಯುವ ಪ್ರತಿಭೆಗಳು ಇದ್ದಾರೆ.

ಆಡುವ 11ರ ಬಳಗದಲ್ಲಿ ಯಾರಿಗೆಲ್ಲಾ ಸ್ಥಾನ ಕೊಟ್ಟಿದೆ ? ಹೀಗೆ ಹಲವು ಪ್ರಶ್ನೆಗಳಿಗೆ ಧೋನಿ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡ ಉತ್ತರ ನೀಡಬೇಕಿದೆ.

ಏನೇ ಆಗ್ಲಿ, ಧೋನಿಯ ಯುಗ ಮುಗಿಯುತ್ತಾ ಬಂದಿದೆ. ಎಲ್ಲದಕ್ಕೂ ಒಂದು ಅಂತ್ಯ ಇರುತ್ತೆ. ಆ ಸಮಯ ಬರುತ್ತಿದೆ.

ಇದನ್ನು ಧೋನಿ ಅರಿತುಕೊಳ್ಳಬೇಕು. ಇದು ಧೋನಿ ಅಭಿಮಾನಿಗಳಿಗೆ ಬೇಸರವನ್ನುಂಟು ಮಾಡಬಹುದು.

ಹಾಗಂತ ಪ್ರತಿ ಬಾರಿಯೂ ಒಬ್ಬನೇ ಆಟಗಾರನ ಜಪ ಮಾಡೋದು ಸರಿಯಲ್ಲ.

ಹಳೆ ಬೇರು ಹೊಸ ಚಿಗುರು ಅನ್ನೋ ಹಾಗೇ ಹೊಸ ಆಟಗಾರರಿಗೆ ಚೆನ್ನೈ ಸೂಪರ್ ಕಿಂಗ್ಸ್ ಅವಕಾಶ ನೀಡುವ ಸಮಯ ಈಗ ಬಂದಿದೆ.

Tags: #saakshatv#uae iplchennai super kingscskDHONIIPLIPL 2020Mahendra Singh Dhoniravindra jadejashen watsonSuresh Raina
ShareTweetSendShare
Join us on:

Related Posts

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

by Shwetha
March 4, 2026
0

ಉಪ ಮುಖ್ಯಮಂತ್ರಿ ಹಾಗೂ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಕಮಿಟಿ (KPCC) ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರು ಆ ಹುದ್ದೆಯಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ...

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

by Shwetha
March 4, 2026
0

ಇರಾನ್–ಇಸ್ರೇಲ್ ನಡುವಿನ ಸಂಘರ್ಷ ಜಾಗತಿಕ ವ್ಯಾಪಾರಕ್ಕೆ ಧಕ್ಕೆಯೊಡ್ಡುತ್ತಿರುವ ಹಿನ್ನೆಲೆ, ಅದರ ಪರಿಣಾಮ ಬೆಂಗಳೂರಿನ ಮಾರುಕಟ್ಟೆಯ ಮೇಲೂ ಬೀರುವ ಸಾಧ್ಯತೆ ಇದೆ ಎಂದು ಸ್ಥಳೀಯ ವ್ಯಾಪಾರಿಗಳು ಹೇಳುತ್ತಿದ್ದಾರೆ. ವಿಶೇಷವಾಗಿ...

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

by Shwetha
March 4, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೊಂದು ಸುತ್ತಿನ ರಣರೋಚಕ ಚರ್ಚೆ ಶುರುವಾಗಿದೆ. ರಾಜ್ಯ ಬಜೆಟ್ ಮಂಡನೆ ಯಶಸ್ವಿಯಾಗಿ ಮುಗಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊರಡಿಸಿರುವ ಪತ್ರಿಕಾ ಪ್ರಕಟಣೆ...

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

by Shwetha
March 4, 2026
0

ರಾಜ್ಯವನ್ನೇ ಬೆಚ್ಚಿಬೀಳಿಸಿದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಸ್ಫೋಟಕ ಮಾಹಿತಿ ಹೊರಬೀಳುತ್ತಿದೆ. ಇದೀಗ ಹೈ ಪ್ರೊಫೈಲ್ ಆರೋಪಿ ದರ್ಶನ್ ತೂಗುದೀಪ ಮತ್ತು ಗ್ಯಾಂಗ್ ವಿರುದ್ಧದ ತನಿಖೆಯಲ್ಲಿ ಪೊಲೀಸರು...

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

by Shwetha
March 4, 2026
0

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದು, ಭಾರತವು ಈ ವಿಚಾರದಲ್ಲಿ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು ಎಂದು ಹೇಳಿದ್ದಾರೆ. ಇರಾನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram