ADVERTISEMENT
Sunday, August 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports IPL 2020

ಸಾಕು ಧೋನಿಯ ಜಪ… ಬೇಕಾಗಿದ್ದಾರೆ ಸಿಎಸ್ ಕೆಗೆ ಹೊಸ ಆಟಗಾರರು.. ಹುಡುಕಿಕೊಡಿ ಪ್ಲೀಸ್…!

Sanath Rai by Sanath Rai
October 20, 2020
in IPL 2020, Newsbeat, ಕ್ರೀಡೆ
mahendra singh dhoni csk ipl 2020 saakshatv
Share on FacebookShare on TwitterShare on WhatsappShare on Telegram

ಸಾಕು ಧೋನಿಯ ಜಪ… ಬೇಕಾಗಿದ್ದಾರೆ ಸಿಎಸ್ ಕೆಗೆ ಹೊಸ ಆಟಗಾರರು.. ಹುಡುಕಿಕೊಡಿ ಪ್ಲೀಸ್…!

m.s dhoni csk ipl 2020 saakshatvಮಹೇಂದ್ರ ಸಿಂಗ್ ಧೋನಿ.. ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕಿಗೆ ನಿವೃತ್ತಿ ಹೇಳಿಯಾಗಿದೆ. ಇದೀಗ ಐಪಿಎಲ್ ಗೂ ಗುಡ್ ಬೈ ಹೇಳ್ತಾರಾ ?

Related posts

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

August 9, 2026
ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

August 9, 2026

ಈ ಪ್ರಶ್ನೆ ಸಹಜವಾಗಿ ಧೋನಿ ಅಭಿಮಾನಿಗಳಲ್ಲಿ ಮೂಡುತ್ತಿದೆ.

ಹಾಗೇ ನೋಡಿದ್ರೆ ಧೋನಿಯ ವಯಸ್ಸು ಕೂಡ 39 ಆಗಿದೆ. ಹಾಗಂತ ಅವರ ಫಿಟ್ ನೆಸ್ ನೋಡಿದ್ರೆ ಅನ್ನಿಸುವುದಿಲ್ಲ.

ಅದೇ ರೀತಿ ಕೀಪಿಂಗ್ ವಿಚಾರದಲ್ಲೂ ಧೋನಿಗೆ ವಯಸ್ಸು ಆಗಿದೆ ಎಂಬುದೇ ಭಾಸವಾಗುತ್ತಿಲ್ಲ.

ಅನುಭವ ಮತ್ತು ಕೌಶಲ್ಯ ಹಾಗೂ ಫಿಟ್ ನೆಸ್ ಅನ್ನು ನೋಡಿದ್ರೆ ಧೋನಿ ಇನ್ನೂ ಕನಿಷ್ಠವಾದ್ರೂ ಎರಡು ವರ್ಷ ಆಡುವಂತಹ ಸಾಮಥ್ರ್ಯವನ್ನು ಹೊಂದಿದ್ದಾರೆ.

ಆದ್ರೆ ಬ್ಯಾಟಿಂಗ್ ಫಾರ್ಮ್ ಅನ್ನು ನೋಡಿದ್ರೆ ಧೋನಿ ಲಯ ಕಳೆದುಕೊಂಡಿದ್ದಾರೆ ಅನ್ನೋದು ಸ್ಪಷ್ಟವಾಗಿ ಗೊತ್ತಾಗುತ್ತದೆ.
ಅದಕ್ಕೂ ಒಂದು ಕಾರಣವಿದೆ.

2019ರ ವಿಶ್ವಕಪ್ ನಂತರ ಧೋನಿ ಕ್ರಿಕೆಟ್ ಆಡಿಲ್ಲ. ಅಂತಾರಾಷ್ಟ್ರೀಯ ಮತ್ತು ದೇಸಿ ಟೂರ್ನಿಗಳಿಂದ ದೂರವೇ ಉಳಿದಿದ್ದರು.

ಕಳೆದ ಮಾರ್ಚ್ ನಲ್ಲಿ ಐಪಿಎಲ್ ಗಾಗಿ ಅಭ್ಯಾಸದಲ್ಲಿ ನಿರತರಾಗಿದ್ರೂ ಕೋವಿಡ್-19 ಅಡ್ಡಿಯನ್ನುಂಟು ಮಾಡಿತ್ತು.

ಹೀಗಾಗಿ ಧೋನಿಗೆ ಅಭ್ಯಾಸದ ಕೊರತೆ ಕಾಡುತ್ತಿದೆ ಎಂಬುದನ್ನು ಅಲ್ಲಗಳೆಯುವಂತಿಲ್ಲ.

csk ipl 2020 ipl dhoni saakshatvಅದೇನೇ ಇರಲಿ, ಧೋನಿ ಈ ಬಾರಿಯ ಐಪಿಎಲ್ ನಲ್ಲಿ ಸಾಕಷ್ಟು ಟೀಕೆಗೂ ಗುರಿಯಾಗಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸರಿಯಾದ ರೀತಿಯಲ್ಲಿ ಮುನ್ನೆಡಸಿಲ್ಲ ಎಂಬ ಆರೋಪವೂ ಅವರ ಮೇಲಿದೆ.

ಅದಕ್ಕೆ ಕಾರಣಗಳು ಹಲವು ಇರಬಹುದು. ತಂಡದೊಳಗಿನ ಬಿಕ್ಕಟ್ಟು, ಆಟಗಾರರ ವೈಫಲ್ಯ, ಸ್ವತಃ ಧೋನಿ ಬ್ಯಾಟಿಂಗ್ ನಲ್ಲಿ ವಿಫಲವಾಗಿರುವುದು,

ಗೆಲುವಿನ ತಂತ್ರಗಾರಿಕೆಯಲ್ಲಿ ವಿಫಲವಾಗಿರುವುದು, ಹಿರಿಯ ಆಟಗಾರರ ಮೇಲೆ ಹೆಚ್ಚು ಅವಲಂಬನೆ ಮಾಡಿಕೊಂಡಿರುವುದು, ಕಿರಿಯ ಆಟಗಾರರನ್ನು ಕಡೆಗಣಿಸಿರುವುದು..

ಹೀಗೆ ಸೋತಾಗ ಅನೇಕ ಕಾರಣಗಳು ಸಿಗುತ್ತವೆ.

ಆದ್ರೆ ಧೋನಿ ಯುವ ಆಟಗಾರರ ಮೇಲೆ ಬೊಟ್ಟು ಮಾಡಿ ತೋರಿಸುವುದು ಎಷ್ಟರ ಮಟ್ಟಿಗೆ ಸರಿ ಅನ್ನೋ ಪ್ರಶ್ನೆ ಕೂಡ ಮೂಡುತ್ತಿದೆ.

ಹಾಗೇ ನೋಡಿದ್ರೆ ಈ ಬಾರಿಯ ಐಪಿಎಲ್ ಅಂತಲ್ಲ..

ಹಿಂದಿನ ಐಪಿಎಲ್ ಟೂರ್ನಿಯನ್ನು ನೋಡಿದಾಗಲೂ ಸಿಎಸ್ ಕೆ ತಂಡ ಯಾವತ್ತೂ ಯುವ ಆಟಗಾರರಿಗೆ ಹೆಚ್ಚು ಅವಕಾಶವನ್ನು ನೀಡಿಲ್ಲ.

dhoni csk ipl 2020 saakshatvಒಂದು ವೇಳೆ ಅವಕಾಶ ನೀಡಿದ್ರೂ ಗಮನ ಸೆಳೆದಿರುವ ಆಟಗಾರರನ್ನು ತಂಡದಲ್ಲಿ ಉಳಿಸಿಕೊಂಡಿಲ್ಲ. ಇದು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಇಂದಿನ ಪರಿಸ್ಥಿತಿಗೆ ಕಾರಣವಾಗಿದೆ.

ಅಷ್ಟೇ ಅಲ್ಲ, ಸಿಎಸ್ ಕೆ ತಂಡ ಪರ್ಯಾಯ ಆಟಗಾರರ ಕೊರತೆಯನ್ನು ಕಾಡುತ್ತಿದೆ.

ಧೋನಿಯ ನಂತರ ಯಾರು ತಂಡವನ್ನು ಮುನ್ನಡೆಸಬೇಕು ಅನ್ನೋ ಪ್ರಶ್ನೆಗೂ ಸಿಎಸ್ ಕೆ ಟೀಮ್ ಮ್ಯಾನೇಜ್ ಮೆಂಟ್ ನಲ್ಲಿ ಉತ್ತರವಿಲ್ಲ.

ಬದಲಾಗಿ ಹೊಸ ನಾಯಕನನ್ನು ಆಯ್ಕೆ ಮಾಡಬೇಕಾದ ಪರಿಸ್ಥಿತಿ ಕೂಡ ನಿರ್ಮಾಣವಾಗಿದೆ.

ಮೂರು ಬಾರಿ ಚಾಂಪಿಯನ್, ಐದು ಬಾರಿ ರನ್ನರ್ ಅಪ್ ಆಗಿರುವ ಸಿಎಸ್‍ಕೆ ತಂಡಕ್ಕೆ ಧೋನಿ ಕೊಡುಗೆ ಅಪಾರ. ಅದನ್ನು ಯಾರು ಕೂಡ ಪ್ರಶ್ನೆ ಮಾಡುವಂಗಿಲ್ಲ.

ಧೋನಿ ನಾಯಕತ್ವದಲ್ಲಿ 100ಕ್ಕೂ ಅಧಿಕ ಪಂದ್ಯಗಳನ್ನು ಗೆದ್ದ ದಾಖಲೆ ಇದೆ. ಅತ್ಯಧಿಕ ಟೂರ್ನಿಗಳಲ್ಲಿ ಆಡಿರುವ ಗೌರವವೂ ಇದೆ.

ಕೀಪಿಂಗ್ ನಲ್ಲಿ 150ಕ್ಕೂ ಹೆಚ್ಚು ಕ್ಯಾಚ್, ಗರಿಷ್ಠ ಸಿಕ್ಸರ್, ಮ್ಯಾಚ್ ಫಿನಿಷರ್, 4000ಕ್ಕೂ ಅಧಿಕ ರನ್ ಹೀಗೆ ಧೋನಿ ಹೆಸರಿನ ಮುಂದೆ ಹಲವು ಸಾಧನೆಗಳು ಅಂಟಿಕೊಂಡಿವೆ.

ಆದ್ರೆ ಅದು ಈಗ ಲೆಕ್ಕಕ್ಕೆ ಬರುವುದಿಲ್ಲ. ಈ ಬಾರಿಯ ಐಪಿಎಲ್ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಪಾಠ ಕಲಿಸಿದೆ.

ತನ್ನದೇ ಆಪ್ತ ಬಳಗದವರನ್ನು ಕಟ್ಟಿಕೊಂಡ್ರೆ ಏನು ಆಗುತ್ತದೆ ಎಂಬುದಕ್ಕೆ ಸಿಎಸ್‍ಕೆ ತಂಡ ಉತ್ತಮ ನಿದರ್ಶನ.

ಒಟ್ಟಿನಲ್ಲಿ ಧೋನಿ ನಾಯಕನಾಗಿ ಸೋಲು ಅನ್ನು ಒಪ್ಪಿಕೊಳ್ಳಬೇಕು. ಅದಕ್ಕೆ ಕಾರಣ ನೀಡುವುದರಲ್ಲಿ ಅರ್ಥವಿಲ್ಲ. ಯಾಕಂದ್ರೆ ಸಿಎಸ್‍ಕೆ ತಂಡ ಅಂದ್ರೆ ಅದು ಧೋನಿಯ ತಂಡ.

ಅಲ್ಲಿ ತಂಡದ ಆಯ್ಕೆಯ ಸಂಪೂರ್ಣ ಸ್ವಾತಂತ್ರ್ಯ ಧೋನಿಯ ಮೇಲಿದೆ.

ಹೀಗಾಗಿ ಬಲಿಷ್ಠ ತಂಡವನ್ನು ಕಟ್ಟಲು ಹಳೆಯ ಹುಲಿಗಳನ್ನು ಆಯ್ಕೆ ಮಾಡಿಕೊಂಡು ಈಗ ಯುವ ಕ್ರಿಕೆಟಿಗರು ಸರಿಯಾಗಿ ಆಡಿಲ್ಲ ಎಂದು ಹೇಳುವುದು ಎಷ್ಟರ ಮಟ್ಟಿಗೆ ಸರಿ.

ಅಷ್ಟಕ್ಕೂ ಸಿಎಸ್ ಕೆ ತಂಡ ಎಷ್ಟು ಯುವ ಆಟಗಾರರಿಗೆ ಅವಕಾಶ ನೀಡಿದೆ ?

csk dhoni ipl 2020 saakshatvದೇಸಿ ಟೂರ್ನಿ ಅಥವಾ 19 ವಯೋಮಿತಿ ವಿಶ್ವಕಪ್ ನಲ್ಲಿ ಆಡಿರುವಂತಹ ಎಷ್ಟು ಮಂದಿ ಯುವ ಪ್ರತಿಭೆಗಳು ಇದ್ದಾರೆ.

ಆಡುವ 11ರ ಬಳಗದಲ್ಲಿ ಯಾರಿಗೆಲ್ಲಾ ಸ್ಥಾನ ಕೊಟ್ಟಿದೆ ? ಹೀಗೆ ಹಲವು ಪ್ರಶ್ನೆಗಳಿಗೆ ಧೋನಿ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡ ಉತ್ತರ ನೀಡಬೇಕಿದೆ.

ಏನೇ ಆಗ್ಲಿ, ಧೋನಿಯ ಯುಗ ಮುಗಿಯುತ್ತಾ ಬಂದಿದೆ. ಎಲ್ಲದಕ್ಕೂ ಒಂದು ಅಂತ್ಯ ಇರುತ್ತೆ. ಆ ಸಮಯ ಬರುತ್ತಿದೆ.

ಇದನ್ನು ಧೋನಿ ಅರಿತುಕೊಳ್ಳಬೇಕು. ಇದು ಧೋನಿ ಅಭಿಮಾನಿಗಳಿಗೆ ಬೇಸರವನ್ನುಂಟು ಮಾಡಬಹುದು.

ಹಾಗಂತ ಪ್ರತಿ ಬಾರಿಯೂ ಒಬ್ಬನೇ ಆಟಗಾರನ ಜಪ ಮಾಡೋದು ಸರಿಯಲ್ಲ.

ಹಳೆ ಬೇರು ಹೊಸ ಚಿಗುರು ಅನ್ನೋ ಹಾಗೇ ಹೊಸ ಆಟಗಾರರಿಗೆ ಚೆನ್ನೈ ಸೂಪರ್ ಕಿಂಗ್ಸ್ ಅವಕಾಶ ನೀಡುವ ಸಮಯ ಈಗ ಬಂದಿದೆ.

Tags: #saakshatv#uae iplchennai super kingscskDHONIIPLIPL 2020Mahendra Singh Dhoniravindra jadejashen watsonSuresh Raina
ShareTweetSendShare
Join us on:

Related Posts

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

by Shwetha
August 9, 2026
0

ಬಾಗಲಕೋಟೆ: ಪಂಚಮಸಾಲಿ ಪೀಠದ ಬಸವಜಯಮೃತ್ಯುಂಜಯ ಸ್ವಾಮೀಜಿ ಹಾಗೂ ಸಚಿವ ವಿಜಯಾನಂದ ಕಾಶಪ್ಪನವರ ನಡುವಿನ ಶೀತಲ ಸಮರ ಈಗ ಬೀದಿಗೆ ಬಂದಿದೆ. ತಮ್ಮ ಸಚಿವ ಸ್ಥಾನ ತಪ್ಪಿಸಲು ಸ್ವಾಮೀಜಿಗಳು...

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

by Shwetha
August 9, 2026
0

ನವದೆಹಲಿ: ವಿದ್ಯಾರ್ಥಿಗಳ ಹೋರಾಟದ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಇಂಡಿ ಒಕ್ಕೂಟವು ಡಬಲ್ ಸ್ಟ್ಯಾಂಡರ್ಡ್ ಅನುಸರಿಸುತ್ತಿವೆ ಎಂದು ಬಿಜೆಪಿ ತೀವ್ರವಾಗಿ ವಾಗ್ದಾಳಿ ನಡೆಸಿದೆ. ದೆಹಲಿಯಲ್ಲಿ ನಡೆಯುವ ಪ್ರತಿಭಟನೆಗಳಿಗೆ ಓಡೋಡಿ...

ಕ್ಯೂ ಲೈನ್‌ನಲ್ಲಿ 24 ಗಂಟೆ ಕಾಯುವ ಭಕ್ತರ ಕಷ್ಟಕ್ಕೆ ಟಿಟಿಡಿ ಚೆಕ್‌ಮೇಟ್: ಟಿಟಿಡಿಯಿಂದ ಮೂವಿಂಗ್ ಟೇಬಲ್ ಮ್ಯಾಜಿಕ್-ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಟೆಕ್ನಾಲಜಿ ಹವಾ ಶುರು

ಕ್ಯೂ ಲೈನ್‌ನಲ್ಲಿ 24 ಗಂಟೆ ಕಾಯುವ ಭಕ್ತರ ಕಷ್ಟಕ್ಕೆ ಟಿಟಿಡಿ ಚೆಕ್‌ಮೇಟ್: ಟಿಟಿಡಿಯಿಂದ ಮೂವಿಂಗ್ ಟೇಬಲ್ ಮ್ಯಾಜಿಕ್-ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಟೆಕ್ನಾಲಜಿ ಹವಾ ಶುರು

by Shwetha
August 9, 2026
0

ತಿರುಮಲಕ್ಕೆ ಬರುವ ಭಕ್ತರ ಸಂಖ್ಯೆ ಪ್ರತಿ ದಿನವೂ ಹೊಸ ದಾಖಲೆ ಬರೆಯುತ್ತಿದೆ. ವಿಶೇಷವಾಗಿ ಯಾವುದೇ ಟೋಕನ್ ಇಲ್ಲದೆ ಧರ್ಮ ದರ್ಶನಕ್ಕೆ ಬರುವ ಸಾಮಾನ್ಯ ಭಕ್ತರ ಸಂಖ್ಯೆ ಗಣನೀಯವಾಗಿ...

ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಲಿ ಇಲ್ಲದಿದ್ದರೆ ಕೋಮಾಗೆ ಹೋಗುವುದು ಗ್ಯಾರಂಟಿ: ಸವದಿ ವ್ಯಂಗ್ಯದ ಏಟು

ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಲಿ ಇಲ್ಲದಿದ್ದರೆ ಕೋಮಾಗೆ ಹೋಗುವುದು ಗ್ಯಾರಂಟಿ: ಸವದಿ ವ್ಯಂಗ್ಯದ ಏಟು

by Shwetha
August 9, 2026
0

ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಸಚಿವ ಲಕ್ಷ್ಮಣ ಸವದಿ ಅವರು ಪ್ರತಿಪಕ್ಷ ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿದ್ದು, ಕೆಲಸ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಬಿಜೆಪಿ ಅಸ್ತಿತ್ವ ಕಳೆದುಕೊಳ್ಳಲಿದೆ ಎಂದು...

ಬೆಳೆಯುವ ನಾಯಕರನ್ನು ಮುಗಿಸಲು ದೊಡ್ಡ ಸಂಚು ನಡೆಯುತ್ತಿದೆ: ವಿರೋಧಿಗಳಿಗೆ ಜಮೀರ್ ಎಚ್ಚರಿಕೆ

ಬೆಳೆಯುವ ನಾಯಕರನ್ನು ಮುಗಿಸಲು ದೊಡ್ಡ ಸಂಚು ನಡೆಯುತ್ತಿದೆ: ವಿರೋಧಿಗಳಿಗೆ ಜಮೀರ್ ಎಚ್ಚರಿಕೆ

by Shwetha
August 9, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ಪುನರ್‌ರಚನೆಯ ಚರ್ಚೆಗಳು ಬಿರುಸಾಗಿರುವ ಬೆನ್ನಲ್ಲೇ ಸಚಿವ ಜಮೀರ್ ಅಹ್ಮದ್ ಖಾನ್ ನೀಡಿರುವ ಹೇಳಿಕೆ ಸಂಚಲನ ಮೂಡಿಸಿದೆ. ರಾಜಕೀಯವಾಗಿ ಎತ್ತರಕ್ಕೆ ಬೆಳೆಯುವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram