ADVERTISEMENT
Sunday, March 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Happy Birthday Prem : ಮಂಡ್ಯ ಹೈದನ ಸಿನಿಮಾ ಜರ್ನಿ ಹೇಗಿದೆ ಗೊತ್ತಾ..?

Namratha Rao by Namratha Rao
October 22, 2020
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

Happy Birthday Prem

ಸ್ಯಾಂಡಲ್ ವುಡ್ ನ ಸ್ಟಾರ್ ನಿರ್ದೇಶಕ ಹಾಗೂ ನಟ ಪ್ರೇಮ್ ಅವರು ಇಂದು ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ನೆಚ್ಚಿನ ನಟ ಹಾಗೂ ನಿರ್ಮಾಪಕನಿಗೆ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳಿಂದ ಶುಭಾಷಯಗಳ ವiಹಾಪೂರವೇ ಹರಿದುಬರುತ್ತಿದೆ. ಚಿತ್ರರಂಗದವರು ಪ್ರೇಮ್ ಅವರಿಗೆ ಹುಟ್ಟುಹಬ್ಬದ ಶುಭಹಾರೈಸುತ್ತಿದ್ದಾರೆ.
ಚಂದನವನದಲ್ಲಿ ವಿಭಿನ್ನ ಸಿನಿಮಾಗಳಿಂದಲೇ ಗಮನ ಸೆಳೆಯುವ ಪ್ರೇಮ್ ಅವರ ಮತ್ತೊಂದು ವಿಶೇಷ ಅಂದ್ರೆ ಸಿನಿಮಾದ ಪ್ರಮೋಶನ್. ಹೌದು ಪ್ರೇಮ್ ಅವರು ತಮ್ಮ ನಿರ್ದೇಶನದ ಸಿನಿಮಾಗಳ ಬಗ್ಗೆ ಪ್ರೇಕ್ಷಕರಲ್ಲಿ ಕ್ರೇಜ್ ಕ್ರಿಯೇಟ್ ಮಾಡೋದ್ರಲ್ಲಿ ನಂ. 1.

Related posts

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

March 29, 2026
ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

March 29, 2026

ನಟ ಹಾಗೂ ನಿರ್ದೇಶಕ ಪ್ರೇಮ್ ಹಲವಾರು ಹಿಟ್ ಸಿನಿಮಾಗಳನ್ನ ಸ್ಯಾಂಡಲ್ ವುಡ್ ಗೆ ಕೊಟ್ಟಿದ್ದಾರೆ. ಆದ್ರೆ ಅದೆಲ್ಲದ್ದಕ್ಕಿಂತ ಪ್ರೇಮ್ ಅವರಿಗೆ ಹೆಚ್ಚು ಯಶಸ್ಸು, ಹೆಸರು ಕೀರ್ತಿ ತಂದುಕೊಟ್ಟ ಸಿನಿಮಾ ಅಂದ್ರೆ ಅದೇ ಜೋಗಿ. ಹೌದು ತಾಯಿ ಸೆಂಟಿಮೆಂಟ್, ಪಾತಕ ಜಗತ್ತು, ಲವ್ ಸ್ಟೋರಿ ಹೀಗೆ ಎಲ್ಲದರ ಮಿಶ್ರಣವಾಗಿದ್ದ ಜೋಗಿ ಸೂಪರ್ ಹಿಟ್ ಆಗಿ ಹೊರಹೊಮ್ಮಿತ್ತು. ಗಲ್ಲಾ ಪೆಟ್ಟಿಗೆ ಓಚಿದ್ದ ಬ್ಲಾಕ್ ಬಾಸ್ರ್ ಜೋಗಿ ಸಿನಿಮಾ ಈಗಲೂ ಅದೇ ಕ್ರೇಜ್ ಮೇಂಟೇನ್ ಮಾಡಿದೆ. ಈ ಸಿನಿಮಾ ಸ್ಯಾಂಡಲ್ ವುಡ್ ನಲ್ಲಿ ಸೆನ್ ಸೇಷನ್ ಕ್ರಿಯೇಟ್ ಮಾಡಿತ್ತು. ಜೋಗಿ ಪ್ರೇಮ್ ಆಕ್ಷನ್ ಕಟ್, ಹ್ಯಾಟ್ರಿಕ್ ಹೀರೋ ಶಿವಣ್ಣನ ನಟನೆ ಮೋಡಿ ಮಾಡಿತ್ತು. ಯಾರ ಬಾಯಲ್ಲಿ ನೋಡಿದ್ರು ಜೋಗಿ ಜೋಗಿ ಎನ್ನುವಷ್ಟರ ಮಟ್ಟಿಗೆ ಈ ಸಿನಿಮಾ ಟ್ರೆಂಡ್ ಸೃಷ್ಟಿಸಿತ್ತು.

ಮೂಲತಹ ಮಂಡ್ಯದ ಮದ್ದೂರಿನವರಾದ ಪ್ರೇಮ್ ಅವರ ನಿಜವಾದ ಹೆಸರು ಕಿರಣ್ ಕುಮಾರ್. ಇವರು ಜನಿಸಿದ್ದು, 1976ರ ಅಕ್ಟೋಬರ್ 22 ರಂದು. ತಂದೆ ರಾಜಪ್ಪ ತಾಯಿ ಭಾಗ್ಯಮ್ಮ. ಪ್ರೇಮ್ 2007ರಲ್ಲಿ ಸ್ಯಾಂಡಲ್ ವುಡ್ ನಲ್ಲಿ ಸ್ಟಾರ್ ನಟಿಯಾಗಿ ಮಿಂಚಿದ್ದ ನಟಿ ರಕ್ಷಿತಾ ಅವರನ್ನು ವಿವಾಹವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಈ ಜೋಡಿಗೆ ಸೂರ್ಯ ಎಂಬ ಮುದ್ದಾದ ಮಗ ಇದ್ದಾನೆ.

ಅದ್ಭುತ ಸಿನಿಮಾಗಳನ್ನ ಚಂದನವನಕ್ಕೆ ಕೊಟ್ಟ ಮಂಡ್ಯ ಹೈದನ ಸಿನಿಮಾ ಜರ್ನಿ ಹೇಗಿದೆ ಗೊತ್ತಾ..?

ಆರಂಭದಲ್ಲಿ ಕೆಲ ವಿóಣುವರ್ಧನ್ ಅವರ ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕನಾಗಿ ಕಾರ್ಯನಿರ್ವಹಿಸಿದ ಪ್ರೇಮ್ ಅವರು ಬಳಿಕ 2003ರಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕರಿಯ ಚಿತ್ರಕ್ಕೆ ಮೊದಲ ಬಾರಿಗೆ ಆಕ್ಷನ್ ಕಟ್ ಹೇಳುವ ಮೂಲಕ ನಿರ್ದೇಶಕರಾಗಿ ಪಾದಾರ್ಪಣೆ ಮಾಡಿದರು. ಈ ಚಿತ್ರವೂ ಸೂಪರ್ ಹಿಟ್ ಆಗಿತ್ತು. ಈ ಚಿತ್ರದಲ್ಲಿ ನಿಜಜೀವನದ ಡಾನ್ ಗಳು ಕಾಣಿಸಿಕೊಂಡಿದ್ದು ಸಹ ಸಿನಿಮಾಗೆ ದೊಡ್ಡ ಮಟ್ಟದ ಹೈಪ್ ತಂದುಕೊಟ್ಟಿತ್ತು. ಇದಾದ ಬಳಿಕ 2003ರಲ್ಲೇ ಮತ್ತೊಂದು ಸೂಪರ್ ಹಿಟ್ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ರು ಪ್ರೇಮ್. ಅದೇ ಎಕ್ಸ್ ಕ್ಯೂಸ್ ಮಿ. ಟ್ರಯಾಂಗಲ್ ಲವ್ ಸ್ಟೋರಿ ಜೊತೆಗೆ ಕಾಮಿಡಿ, ತಾಯಿ ಸೆಂಟಿಮೆಂಟ್ ಎಲ್ಲದರ ಮಿಶ್ರಣವಾಗಿದ್ದ ಈ ಸಿನಿಮಾಗೆ ಅಭಿಮಾನಿಗಳು ಫಿದಾ ಆಗಿದ್ದರು. ಈ ಸಿನಿಮಾ ಈಗಲೂ ಅನೇಕರ ಫೇವರೇಟ್. ಈ ಸಿನಿಮಾ ಆಗ ಸಖತ್ ಕ್ರೇಜ್ ಸೃಷ್ಟಿಸಿತ್ತು. ಈ ಚಿತ್ರದ ಹಾಡುಗಳು ಒಂದೊಂದು ಸೂಪರ್ ಹಿಟ್ ಆಗಿದ್ದವು. ಆರ್ ಪಿ ಪಟ್ನಾಯಕ್ ಅವರ ಸಂಯೋಜನೆಯ ಹಾಡುಗಳಿಗೆ ಈಗಲೂ ಅಷ್ಟೇ ಕ್ರೇಜ್ ಇದೆ. ಇದಾದ ಬಳಿಕವೇ ಮೂರನೇ ಸಿನಿಮಾ ಸೂಪರ್ ಹಿಟ್ ಸಿನಿಮಾವಾಗಿ ಹೊರಹೊಮ್ಮಿದ್ದ ಜೋಗಿಗೆ ಆಕ್ಷನ್ ಕಟ್ ಹೇಳಿದ್ರು ಪ್ರೇಮ್. 2005ರಲ್ಲಿ ತೆರೆಕಂಡ ಈ ಬ್ಲಾಕ್ ಬಾಸ್ಟರ್ ಸಿನಿಮಾದಿಂದ ಪ್ರೇಮ್ ಅವರ ಖದರೇ ಬದಲಾಗಿಹೋಯ್ತು. ಈ ಚಿತ್ರದ ಮೂಲಕ ಪ್ರೇಮ್ ಅವರು ಚಂದನವನದ ಸ್ಟಾರ್ ನಿರ್ದೇಶಕರಾಗಿ ಹೊರಹೊಮ್ಮಿದರು.

ಹೀಗೆ ಬ್ಯಾಕ್ ಟು ಬ್ಯಾಕ್ ಹಿಟ್ ಸಿನಿಮಾಗಳನ್ನ ನಿರ್ದೇಶಿಸಿದ ಪ್ರೇಮ್ ಅವರು ಡೈರೆಕ್ಷೆನ್ ಜೊತೆಗೆ ನಟನೆಯಲ್ಲೂ ತಮ್ಮ ಅದೃಷ್ಟ ಪರೀಕ್ಷೆಗಿಳಿದರು.
ಹೌದು 2008ರಲ್ಲಿ ತೆರೆಕಂಡ ಈ ಪ್ರೀತಿ ಯಾಕೆ ಭೂಮಿ ಮೇಲಿದೆ… ಈ ಚಿತ್ರದ ಕ್ಲೈಮ್ಯಾಕ್ಸ್ ಜನರ ತಲೆಗೆ ಹುಳ ಬಿಟ್ಟಿತ್ತಾದ್ರೂ ಈ ಚಿತ್ರದ ಹಾಡುಗಳು ಸೂಪರ್ ಹಿಟ್ ಆಗಿದ್ವು. ಈ ಸಿನಿಮಾ ಕಥೆಗಿಂತ ಹಾಡುಗಳು ಹಾಗೂ ಪ್ರಮೋಶನ್ ನಿಂದಲೇ ಸದ್ದು ಮಾಡಿದ್ದು ಹೆಚ್ಚು. ಈ ಚಿತ್ರದಲ್ಲಿ ಬಾಲಿವುಡ್ ನಟಿ ಮಲೈಕಾ ಅರೋರಾ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದು ವಿಸೇಷ. ಅಷ್ಟೇ ಅಲ್ಲ ಈ ಚಿತ್ರವನ್ನೂ ಖುದ್ದು ಪ್ರೇಮ್ ಅವರೇ ನಿರ್ದೇಶನ ಮಾಡಿದ್ದರು. ಇದಾದ ಬಳಿಕ ಮತ್ತೆ 2010 ರಲ್ಲಿ ತೆರೆಕಂಡು ಅತ್ಯಂತ ಯಶಸ್ಸು ಕಂಡ ಹಿಟ್ ಸಿನಿಮಾ ರಾಜ್ ಗೂ ಆಕ್ಷನ್ ಕಟ್ ಹೇಳಿದ್ರೂ. ಈ ಸಿನಿಮಾವೂ ಸಹ ಅತ್ಯಂತ ಯಶಸ್ವಿಯಾಗಿತ್ತು. ಚಿತ್ರದ ಹಾಡುಗಳಿಗೆ ಜನರು ಫಿದಾ ಆಗಿದ್ದರು. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆ ಜಾದೂ ಮಾಡಿತ್ತು. ಮತ್ತೆ 2011ರಲ್ಲಿ ಶಿವಣ್ಣ ಅಭಿನಯದ ಜೋಗಯ್ಯ ಸಿನಿಮಾಗೂ ಆಕ್ಷನ್ ಕಟ್ ಹೇಳಿದ್ರು ಪ್ರೇಮ್.Prem

ಇದಾದ ಬಳಿಕ ನಿರ್ದೇಶನ ಮಾಡದೇ ಹೀರೋ ಆಗಿ ನಟಿಸಿದ ಚಿತ್ರ ಅಂದ್ರೆ ಅದು 2012ರಲ್ಲಿ ತೆರೆಕಂಡ ಪ್ರೇಮ್ ಅಡ್ಡಾ. ಈ ಚಿತ್ರ ಸಾಕಷ್ಟು ವಿವಾದಗಳಿಂದ ಸುದ್ದಿಯಾಗಿತ್ತು. ತಮಿಳು ಚಿತ್ರ ಸುಬ್ರಮಣಿಯಪುರಂ ಸಿನಿಮಾದ ರೀಮೇಕ್ ಆಗಿದ್ದ ಪ್ರೇಮ್ ಅಡ್ಡದಲ್ಲಿ ಪ್ರೇಮ್ ( Prem) ಹಾಗೂ ಕೃತಿ ಕರಬಂದಾ ಕಾಂಬಿನೇಷನ್ ಅಭಿಮಾನಿಗಳ ಮನಗೆದ್ದಿತ್ತು. ಇಬ್ಬರ ಕೆಮಿಸ್ಟ್ರಿಗೆ ಸಿನಿಪ್ರೇಕ್ಷಕರು ಫಿದಾ ಆಗಿದ್ದರು. ಈ ಚಿತ್ರ ಸಾಧಾರಣ ಯಶಸ್ಸು ಕಂಡಿತ್ತು. ಇದಾದ ಬಳಿಕ ನಿರ್ಮಾಪಕನಾದ ಪ್ರೇಮ್ ಅವರು 2014ರಲ್ಲಿ ಡಿಕೆ ಸಿನಿಮಾಗೆ ಬಂಡವಾಳ ಹೂಡಿದರು. ಅಲ್ಲದೇ ಪ್ರೇಮ್ ಡ್ರೀಮ್ಸ್ ಬ್ಯಾನರ್ ನ ಅಡಿ ಮೂಡಿಬಂದ ಈ ಚಿತ್ರದಲ್ಲಿ ನಾಯಕನಟನಾಗಿ ಮಿಂಚಿ ಅಭಿಮಾನಿಗಳನ್ನ ರಂಜಿಸಿದ್ದರು.
2018ರಲ್ಲಿ ತೆರೆಕಂಡ ದಿ ವಿಲನ್ ಚಿತ್ರಕ್ಕೂ ನಿರ್ದೇಶನ ಮಾಡಿದ್ದರು ಪ್ರೇಮ್. ಈ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಇದಾದ ಬಳಿಕ 2018ರಲ್ಲೇ ತೆರೆಕಂಡ ಅಂಬಿ ನಿಂಗೆ ವಯಸ್ಸಾಯ್ತೋ ಚಿತ್ರದಲ್ಲಿ ಹಾಡಿಗೆ ಸಾಹಿತ್ಯ ರಚಿಸಿದ್ದರು. ಪ್ರಸ್ತುತ ಏಕ್ ಲವ್ ಯಾ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ ಪ್ರೇಮ್. ಈ ಚಿತ್ರದಲ್ಲಿ ತಮ್ಮ ಬಾಮೈದ ಅಂದ್ರೆ ರಕ್ಷಿತಾ ಅವರ ಸಹೋದರ ರಾಣಾನನ್ನ ಚಂದನವನಕ್ಕೆ ನಾಯಕನಾಗಿ ಪರಿಚಯಿಸುತ್ತಿದ್ದಾರೆ ಪ್ರೇಮ್. ಈ ಸಿನಿಮಾದ ಶೂಟಿಂಗ್ ಇನ್ನೂ ನಡೀತಾಯಿದೆ.Prem

ಒಟ್ಟಾರೆಯಾಗಿ ಕೇವಲ ನಿರ್ದೇಶನ , ನಿರ್ಮಾಪಕರಾಗಿ ಮಾತ್ರವೇ ಪ್ರೇಮ್ ಗುರುತಿಸಸಿಕೊಂಡು ಹೆಸರು ಗಳಿಸಿಲ್ಲ. ಜೊತೆಗೆ ನಟನೆಯಲ್ಲೂ ಮೋಡಿ ಮಾಡಿರುವ ಪ್ರೇಮ್ ಅನೇಕ ಪಹಾಡುಗಳನ್ನ ಸಂಯೋಜಿಸಿ ಸಾಹಿತಿ ರಚಿಸಿ , ಹಿನ್ನೆಲೆ ಧ್ವನಿ ನೀಡುವ ಮೂಲಕ ಚಂದನವನದಲ್ಲಿ ಆಲ್ ರೌಂಡರ್ ಆಗಿ ಗುರುತಿಸಿಕೊಂಡಿದ್ದಾರೆ. ಇಂತಹ ಪ್ರತಿಭಾವಂತರಾದ ಪ್ರೇಮ್ ಅವರಿಗೆ ಹುಟ್ಟುಹಬ್ಬದ ಶುಭಾಷಯಗಳು. Happy Birthday Prem

Prem

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: director premhappy birthdaySandalwood
ShareTweetSendShare
Join us on:

Related Posts

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

by Shwetha
March 29, 2026
0

ರಾಜ್ಯ ಸರ್ಕಾರಿ ಉದ್ಯೋಗವನ್ನು ಪಡೆಯಬೇಕು ಹಾಗೂ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂಬ ಕನಸು ಹೊತ್ತಿರುವ ನಾಡಿನ ಅಸಂಖ್ಯಾತ ಉದ್ಯೋಗಾಕಾಂಕ್ಷಿಗಳಿಗೆ ಹಾಗೂ ಅನುಭವಿ ವೃತ್ತಿಪರರಿಗೆ ಕರ್ನಾಟಕ ರಾಜ್ಯ ಕಂದಾಯ...

ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

by Shwetha
March 29, 2026
0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಾಂಗ ನೀತಿ ಹಾಗೂ ಇಸ್ರೇಲ್ ಪ್ರವಾಸದ ಕುರಿತು ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್...

ಪರೀಕ್ಷೆ ನಡೆಯುತ್ತಿರುವಾಗಲೇ ಎಸ್ಎಸ್ಎಲ್ಸಿ ಅಂಕ 525ಕ್ಕೆ ಇಳಿಕೆ: ಮಕ್ಕಳ ಭವಿಷ್ಯದ ಜೊತೆ ಸರ್ಕಾರದ ಕ್ರೂರ ಚೆಲ್ಲಾಟ –  ಸುರೇಶ್ ಕುಮಾರ್

ಪರೀಕ್ಷೆ ನಡೆಯುತ್ತಿರುವಾಗಲೇ ಎಸ್ಎಸ್ಎಲ್ಸಿ ಅಂಕ 525ಕ್ಕೆ ಇಳಿಕೆ: ಮಕ್ಕಳ ಭವಿಷ್ಯದ ಜೊತೆ ಸರ್ಕಾರದ ಕ್ರೂರ ಚೆಲ್ಲಾಟ – ಸುರೇಶ್ ಕುಮಾರ್

by Shwetha
March 29, 2026
0

ಬೆಂಗಳೂರು: ರಾಜ್ಯದಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳು ಅತ್ಯಂತ ಆತಂಕ ಹಾಗೂ ಶ್ರದ್ಧೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಬರೆಯುತ್ತಿರುವಾಗಲೇ ರಾಜ್ಯ ಸರ್ಕಾರ ಮತ್ತು ಶಿಕ್ಷಣ ಇಲಾಖೆ ತೆಗೆದುಕೊಂಡಿರುವ ತರಾತುರಿಯ ದಿಢೀರ್...

ಪರಮಾತ್ಮ ಬಂದ್ರೂ ಹಿಂದೆ ಸರಿಯಲ್ಲ ಎಂದಿದ್ದ ಸಾದಿಕ್ ಪೈಲ್ವಾನ್ ಬಂಡಾಯ ಕೊನೆಗೂ ಸುಖಾಂತ್ಯ  : ಚುನಾವಣಾ ಆಯೋಗ ಮೈಕ್‌ ಚಿಹ್ನೆ ಕೊಟ್ರು ಕಾಂಗ್ರೆಸ್ ಅಭ್ಯರ್ಥಿಗೆ ಪೈಲ್ವಾನ್ ಬೆಂಬಲ‌ ಶುರು!

ಪರಮಾತ್ಮ ಬಂದ್ರೂ ಹಿಂದೆ ಸರಿಯಲ್ಲ ಎಂದಿದ್ದ ಸಾದಿಕ್ ಪೈಲ್ವಾನ್ ಬಂಡಾಯ ಕೊನೆಗೂ ಸುಖಾಂತ್ಯ : ಚುನಾವಣಾ ಆಯೋಗ ಮೈಕ್‌ ಚಿಹ್ನೆ ಕೊಟ್ರು ಕಾಂಗ್ರೆಸ್ ಅಭ್ಯರ್ಥಿಗೆ ಪೈಲ್ವಾನ್ ಬೆಂಬಲ‌ ಶುರು!

by Shwetha
March 29, 2026
0

ಕಣದಿಂದ ಹಿಂದೆ ಸರಿಯುವಂತೆ ಹೇಳಲು ಸಾಕ್ಷಾತ್ ಪರಮಾತ್ಮನೇ ಧರೆಗಿಳಿದು ಬಂದರೂ ನಾನು ಸ್ಪರ್ಧೆಯಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಗುಡುಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದ ಬಂಡಾಯ...

ದಮ್ ಇದ್ರೆ ಬನ್ನಿ ಅಂದ್ರಿ, ಈಗ ಬಂದು ನಿಂತಿದ್ದೀನಿ ಎಂದ ಪ್ರದೀಪ್ ಈಶ್ವರ್‌ : ಹುಚ್ಚ ಎಂದು ಕೂಗಿ ಪ್ರದೀಪ್ ಈಶ್ವರ್ ಗೆ ಪೊರಕೆ ಚಪ್ಪಲಿ ತೋರಿಸಿದ ಬಿಜೆಪಿಗರು!

ದಮ್ ಇದ್ರೆ ಬನ್ನಿ ಅಂದ್ರಿ, ಈಗ ಬಂದು ನಿಂತಿದ್ದೀನಿ ಎಂದ ಪ್ರದೀಪ್ ಈಶ್ವರ್‌ : ಹುಚ್ಚ ಎಂದು ಕೂಗಿ ಪ್ರದೀಪ್ ಈಶ್ವರ್ ಗೆ ಪೊರಕೆ ಚಪ್ಪಲಿ ತೋರಿಸಿದ ಬಿಜೆಪಿಗರು!

by Shwetha
March 29, 2026
0

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇದೀಗ ನೇರಾನೇರ ಸವಾಲುಗಳ ಅಖಾಡವಾಗಿ ಮಾರ್ಪಟ್ಟಿದೆ. ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram