ಮೈಸೂರು: ಕೊರೊನಾ ಸೋಂಕು ಹರಡುತ್ತಿರುವ ಕಾರಣಕ್ಕಾಗಿ ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಸರಳವಾಗಿ ಆಚರಿಸುತ್ತಿದ್ದೇವೆ. ಮುಂದಿನ ವರ್ಷ ವಿಜೃಂಭಣೆಯಿಂದ ದಸರಾ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಘೋಷಿಸಿದ್ದಾರೆ.

ಮೈಸೂರು ಅರಮನೆ ಆವರಣದಲ್ಲಿ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿ, ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ವಿಜಯದಶಮಿ ಮೆರವಣಿಗೆಗೆ ಚಾಲನೆ ನೀಡಲು ಶಿವಮೊಗ್ಗದಿಂದ ಮೈಸೂರಿಗೆ ಆಗಮಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಹಾಗೂ ಇತರೆ ಕಾರಣಕ್ಕಾ ಸರಳವಾಗಿ ದಸರಾ ಹಾಗೂ ಜಂಬೂ ಸವಾರಿಯನ್ನು ಆಚರಿಸಲಾಗುತ್ತಿದೆ. ತಾಯಿ ಚಾಮುಂಡೇಶ್ವರಿ ಆಶೀರ್ವಾದಿಂದ ಕೊರೊನಾದಿಂದ ಮುಕ್ತರಾದ ಮೇಲೆ ಮುಂದಿನ ವರ್ಷ ವಿಜೃಂಭಣೆಯಿಂದ ದಸರಾ ಆಚರಣೆಗೆ ತಾಯಿ ಚಾಮುಂಡಿ ಶಕ್ತಿ ನೀಡಲಿ. ನಾಡಿನ ಜನರು ಎಲ್ಲಾ ಸಂಕಷ್ಟಗಳಿಂದ ಪಾರಾಗಿ ನೆಮ್ಮದಿಯಿಂದ ಬದುಕುವಂತಹ ಒಳ್ಳೆಯ ದಿನಗಳು ಬರಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಬಂಗಾರಪ್ಪ ಸ್ಮಾರಕಕ್ಕೆ 1 ಕೋಟಿ ರೂ ಬಿಡುಗಡೆ
ಶಿವಮೊಗ್ಗ ಜಿಲ್ಲೆ ಸೊರಬ ಪಟ್ಟಣದಲ್ಲಿ ನಿರ್ಮಾಣವಾಗುತ್ತಿರುವ ದಿ.ಬಂಗಾರಪ್ಪ ಅವರ ಸ್ಮಾರಕ ನಿರ್ಮಿಸಲು ಒಂದು ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ಸೂಚನೆ ನೀಡಲಾಗಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ನಡೆದ ದಿ.ಎಸ್ ಬಂಗಾರಪ್ಪನವರ 87ನೇ ಜನ್ಮಸ್ಮರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಸೊರಬ ಪಟ್ಟಣದಲ್ಲಿ 21.15 ಲಕ್ಷ ಅನುದಾನದಲ್ಲಿ ನಿರ್ಮಿಸಲಾಗಿರುವ ಉದ್ಯಾನವನ್ನು ಆನ್ಲೈನ್ ಮೂಲಕ ಉದ್ಘಾಟಿಸಿ ಮಾತನಾಡಿದರು.

ಶಿಕ್ಷಣ, ಆರೋಗ್ಯ, ಕೃಷಿ ಕ್ಷೇತ್ರದಲ್ಲಿ ಬಂಗಾರಪ್ಪ ಅವರು ತಂದ ದೂರದೃಷ್ಟಿ ಯೋಜನೆಗಳಿಂದಾಗಿ ಅವರು ಜನಮಾನಸದಲ್ಲಿ ಇಂದಿಗೂ ಚಿರಸ್ಥಾಯಿಯಾಗಿ ಉಳಿದಿದ್ದಾರೆ. ಕೃಷಿ ಕಾರ್ಮಿಕರು, ರೈತರು, ದೀನ ತಲಿತರು ಹಾಗೂ ಗ್ರಾಮೀಣ ಜನತೆಯ ಅಭ್ಯುದಯಕ್ಕಾಗಿ ಶ್ರಮಿಸಿದ ಬಂಗಾರಪ್ಪ ಜನಪರ ಚಿಂತನೆಯ ನಾಯಕ ಎಂದು ಸಿಎಂ ಯಡಿಯೂರಪ್ಪ ಬಣ್ಣಿಸಿದ್ದಾರೆ.
ಕೊರೊನಾ ಸಂಕಷ್ಟದ ನಡುವೆಯೂ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಪ್ರಮಾಣಿಕ ಪ್ರಯತ್ನಗಳನ್ನು ನಡೆಸಲಾಗುತ್ತಿದೆ. ರಾಜ್ಯದ ಎಲ್ಲಾ ಭಾಗಗಳನ್ನು ಸಮಾನವಾಗಿ ಅಭಿವೃದ್ಧಿಪಡಿಸಲು ಸರ್ಕಾರ ಕಾರ್ಯಪ್ರವೃತ್ತವಾಗಿದೆ ಎಂದು ಭರವಸೆ ನೀಡಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








