ಬೆಂಗಳೂರು : ಮುಂದಿನ ವರ್ಷ ಆರಂಭದಲ್ಲೇ ರಾಜ್ಯದಲ್ಲಿ ಕೊರೊನಾ ಲಸಿಕೆ ( covid vaccine) ಲಭ್ಯವಾಗಲಿದೆ ಎಂದು ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೊರೊನಾ ಲಸಿಕೆ ( covid vaccine) ಬಗ್ಗೆ ಮಾಹಿತಿ ನೀಡಿದ್ರು. ಅಸ್ಟ್ರಾಜನಿಕಾ ಸಂಸ್ಥೆ ಎಂಡಿ ಗಗನ್ ದೀಪ್ ಸೇರಿದಂತೆ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದೇವೆ.
ಅಕ್ಸಫರ್ಡ್ ವಿವಿ ಲಸಿಕೆ ಪ್ರಯೋಗ ಮೊದಲ ಹಂತ ಮುಕ್ತಾಯವಾಗಿದ್ದು, 2021 ಆರಂಭದಲ್ಲೇ ರಾಜ್ಯದ ಜನತೆಗೆ ಕೋವಿಡ್ ಲಸಿಕೆ ಸಿಗಲಿದೆ ಎಂದು ತಿಳಿಸಿದರು.
ಆಕ್ಸಫರ್ಡ್ ವಿವಿ ಅಸ್ಟ್ರಾಜನಿಕಾ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಂಡು ಸಂಶೋಧನೆ ಮಾಡುತ್ತಿದ್ದಾರೆ. ಇಂದು ಅವರ ಜೊತೆಗೆ ಸಮಾಲೋಚನೆ ನಡೆಸಿದ್ದು, ತೃಪ್ತಿದಾಯಕವಾಗಿದೆ.
2021ರ ಆರಂಭದಲ್ಲಿಯೇ ಈ ರೋಗಕ್ಕೆ ಲಸಿಕೆ ಬರುವ ಸಾಧ್ಯತೆ ಇದೆ ಎಂದ ಸುಧಾಕರ್, ಭಾರತದಲ್ಲಿ 1600 ಜನರಿಗೆ ಲಸಿಕೆ ನೀಡಿ ಪ್ರಯೋಗ ಮಾಡಲಾಗುತ್ತಿದೆ.
ಐದು ವರ್ಷದವರಿಂದ ಹಿಡಿದು ವಯೋವೃದ್ದರವರೆಗೂ ಎಲ್ಲ ವಯೋಮಾನದವರಿಗೆ ಲಸಿಕೆ ನೀಡುವ ಪ್ರಯೋಗ ಮಾಡಲಾಗುತ್ತಿದೆ. ಲಸಿಕೆ ಕೊಟ್ಟ 28 ದಿನದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಾಗುವ ಸಾಧ್ಯತೆ ಇದೆ.
ಇದನ್ನೂ ಓದಿ : ಕಾದಿದೆ ಅವಾಂತರ : ನಾಳೆಯಿಂದ ರಾಜ್ಯದಲ್ಲಿ ಮತ್ತೆ ಮಳೆ
ಎರಡು ಮತ್ತು ಮೂರನೇ ಹಂತದಲ್ಲಿ ಮತ್ತೊಂದು ರೀತಿ ನೀಡಿ ಪ್ರಯೋಗ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಇನ್ನು ಇದೇ ವೇಳೆ ಲಸಿಕೆಗೆ ದರ ನಿಗದಿ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಸಿದ ಸುಧಾಕರ್, ದರ ನಿಗದಿ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಇಲ್ಲ. ಲಸಿಕೆ ಪ್ರಯೋಗದ ಹಂತದಲ್ಲಿದೆ.
ಸಂಸ್ಥೆಯವರು ಇದರಲ್ಲಿ ಯಾವುದೇ ಲಾಭ ಪಡೆಯುವುದಿಲ್ಲ. ಲಸಿಕೆಗೆ ತಗಲುವ ವೆಚ್ಚವನ್ನು ಮಾತ್ರ ಪಡೆಯುವುದಾಗಿ ಹೇಳಿದ್ದಾರೆ. ಕೇಂದ್ರ ಸರ್ಕಾರದ ಜೊತೆ ಮಾತನಾಡಿ ದರ ನಿಗದಿ ಮಾಡುವ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ಹೇಳಿದರು.
ಲಸಿಕೆ ಬಂದ ಬಳಿಕ ಎಪಿಡಾಮಿಕ್ ಟೆಕ್ನಿಕ್ ಸಮಿತಿ ರಚನೆ ಮಾಡಲು ತೀರ್ಮಾನಿಸಲಾಗಿದ್ದು ಕೋವಿಡ್ ವಾರಿಯರ್ಸ್ ಮೊದಲು ಈ ಚಿಕಿತ್ಸೆಗೆ ಒಳ ಪಡುತ್ತಾರೆ.
ಯಾರಿಗೆ ರೋಗ ನಿರೋಧಕ ಶಕ್ತಿ ಕಡಿಮೆ ಇರುತ್ತದೆಯೋ ಅವರಿಗೆ ಮೊದಲು ಲಸಿಕೆ ನೀಡಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.
ಇದನ್ನೂ ಓದಿ : ದುರ್ಗಾದೇವಿ ಕೆರೆಗೆ ಬಾಗೀನ ಅರ್ಪಿಸಿದ ಬಿ.ಸಿ.ಪಾಟೀಲ್
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel