ನಾನೇ ಸಿಎಂ ಆಗ್ತೇನೆ ಎಂದು ಯತ್ನಾಳ್ ನನ್ನ ಬಳಿ ಹೇಳಿದ್ದಾರೆ : ಬಸವರಾಜ ಹೊರಟ್ಟಿ (Basavaraj horatti)
ಚಿತ್ರದುರ್ಗ : ಬಿಜೆಪಿಯ ಕೇಂದ್ರದ ನಾಯಕರು ಬಸನಗೌಡ ಪಾಟೀಲ್ ಯತ್ನಾಳ್ ಪರ ಇದ್ದಾರೆ. ನಾನೇ ಸಿಎಂ ಆಗುತ್ತೇನೆ ಎಂದು ಯತ್ನಾಳ್ ನನ್ನ ಬಳಿ ಹೇಳಿದ್ದಾರೆ ಎಂದು ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ (Basavaraj horatti) ಹೇಳಿದ್ದಾರೆ.
ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ ಸಿಎಂ ಬದಲಾವಣೆ ಬಗ್ಗೆ ಯತ್ನಾಳ್ ಹೇಳಿಕೆಗೆ ಬಗ್ಗೆ ಪ್ರತಿಕ್ರಿಯಿಸಿ, ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಬೆಂಬಲ ಇಲ್ಲದೆ ಬಿಜೆಪಿ ಶಾಸಕ ಯತ್ನಾಳ್ ಮುಖ್ಯಮಂತ್ರಿ ಬದಲಾವಣೆ ಹೇಳಿಕೆ ನೀಡಲು ಸಾಧ್ಯವಿಲ್ಲ.
ನರೇಂದ್ರ ಮೋದಿ, ಅಮಿತ್ ಶಾ ಪ್ರಭಾವ ಕಾರಣ ಯತ್ನಾಳ್ ವಿರುದ್ಧ ಈವರೆಗೂ ಕ್ರಮ ಆಗಿಲ್ಲ. ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂದು ಯತ್ನಾಳ್ ನನ್ನ ಬಳಿ ಹೇಳಿದ್ದಾರೆ.
ಆದ್ರೆ ಬಿಎಸ್ ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಇಳಿಸುತ್ತಾರೋ ಇಲ್ವೋ ಗೊತ್ತಿಲ್ಲ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬಳಿಕ ಯತ್ನಾಳ್ ಸಿಎಂ ಆಗುತ್ತಾರೋ ಗೊತ್ತಿಲ್ಲ. ಆದ್ರೆ ಕೇಂದ್ರದ ಎಲ್ಲಾ ನಾಯಕರು ಯತ್ನಾಳ್ ಪರವಾಗಿದ್ದಾರೆ ಎಂದು ಹೇಳಿದರು.
ಇನ್ನು ಕಾಂಗ್ರೆಸ್,ಜೆಡಿಎಸ್ ಪಕ್ಷಗಳಿಗೆ ಹೋಲಿಸಿದರೇ ಬಿಜೆಪಿ ಹೈಕಮಾಂಡ್ ಬಲಿಷ್ಠವಾಗಿದೆ. ಬಿಜೆಪಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಎದುರು ಯಾರೂ ನಿಲ್ಲೋಕಾಗೋದಿಲ್ಲ.
ಇದನ್ನೂ ಓದಿ : ಆರ್.ಆರ್ ನಗರದಲ್ಲಿ ಸಿದ್ದು ಅಬ್ಬರದ ಮತಬೇಟೆ: ಬಿಜೆಪಿ ಕಾರ್ಯಕರ್ತರಿಂದ ಮೋದಿ ಘೋಷಣೆ
ಇಂಥಹ ಸಂದರ್ಭದಲ್ಲಿ ಯತ್ನಾಳ್ ನಾನೇ ಮುಂದಿನ ಸಿಎಂ ಅಂತಿದ್ದಾರೆ. ಯತ್ನಾಳ್ ವಿರುದ್ಧ ಕ್ರಮ ಆಗಿಲ್ಲ ಅಂದರೆ ಹೈಕಮಾಂಡ್ ಅವರ ಪರ ಇದೆ ಎಂದು ತಿಳಿಸಿದರು.
ಇಂದಿನ ಚುನಾವಣೆ ಬಗ್ಗೆ ಮಾತನಾಡಿದ ಹೊರಟ್ಟಿ, ಚುನಾವಣೆಗಳಲ್ಲಿ ಎಲ್ಲಾ ಪಕ್ಷದವರು ಹಣ, ಸಾರಾಯಿ ಹಂಚುತ್ತಾರೆ. ಮತದಾರರು ಮೂರು ಕಡೆಯಿಂದಲೂ ಇವುಗಳನ್ನು ತೆಗೆದುಕೊಂಡು ಒಬ್ಬರಿಗೆ ಟೋಪಿ ಹಾಕ್ತಾರೆ.
ದುಡ್ಡು ಕೊಟ್ಟು ಗೆದ್ದವರು ಅವಧಿ ಪೂರ್ಣ ಕೆಲಸ ಮಾಡುವುದಿಲ್ಲ. ಇದು ಇಂದಿನ ಪ್ರಜಾಪ್ರಭುತ್ವ ವ್ಯವಸ್ಥೆ ಆಗಿದ್ದು ಹೇಸಿಗೆ ತರಿಸಿದೆ. ರಾಜಕಾರಣ ಬೇಡ ಅನ್ನಿಸಿದರೂ ನಾವು ಡ್ರಗ್ ಅಡಿಕ್ಟ್ ಆದಂತಾಗಿದೆ ಎಂದು ಬೇಸರ ಹೊರಹಾಕಿದರು.
ಯತ್ನಾಳ್ ಹೇಳಿದ್ದೇನು..?
ಉಪಚುನಾವಣೆಯ ನಂತರ ಯಾವುದೇ ಸಂದರ್ಭದಲ್ಲಾದರೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ನಾಯಕತ್ವ ಬದಲಾವಣೆಯಾಗಲಿದೆ.
ಲಿಂಗಾಯಿತ ಸಮುದಾಯದವರೇ ರಾಜ್ಯದ ಸಾರಥ್ಯ ವಹಿಸಲಿದ್ದಾರೆ ಎಂದು ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದರು.
ಇದನ್ನೂ ಓದಿ : `ಸಿಎಂ ಬಿಎಸ್ ವೈ ನಿಜವಾದ ವಿಲನ್’ : ಎಸ್.ಟಿ.ಸೋಮಶೇಖರ್ ಎಡವಟ್ಟು
ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೆಚ್ಚು ದಿನ ಸಿಎಂ ಆಗಿ ಉಳಿಯುವುದಿಲ್ಲ. ಏಕೆಂದರೆ ಮೇಲಿನವರಿಗೂ ಬಿಎಸ್ ವೈ ಸಾಕಾಗಿದ್ದಾರೆ.
ಉತ್ತರ ಕರ್ನಾಟಕದವರೇ ಮುಂದಿನ ಸಿಎಂ ಆಗುತ್ತಾರೆ. ಉತ್ತರ ಕರ್ನಾಟಕದವರು 100 ಶಾಸಕರನ್ನು ಗೆಲ್ಲಿಸಿ ವಿಧಾನಸೌಧಕ್ಕೆ ಕಳುಹಿಸುತ್ತಾರೆ.
ಆದರೆ ಉಳಿದ ಭಾಗದಲ್ಲಿ ಕೇವಲ 15 ಶಾಸಕರು ಬಿಜೆಪಿಯಿಂದ ಗೆದ್ದು ಅವರಲ್ಲೇ ಒಬ್ಬರು ಸಿಎಂ ಆಗುತ್ತಾರೆ. ಹೀಗಾಗಿ ಮುಂದಿನ ಬಾರಿ ಉತ್ತರ ಕರ್ನಾಟಕದವರೇ ಸಿಎಂ ಆಗೋದು ಪಕ್ಕಾ.
ಜೊತೆಗೆ ಉತ್ತರ ಕರ್ನಾಟಕದವರನ್ನೇ ಸಿಎಂ ಮಾಡುವ ಭರವಸೆಯನ್ನು ಪ್ರಧಾನಿ ಮೋದಿ ನೀಡಿದ್ದಾರೆ ಎಂದು ಯತ್ನಾಳ್ ಹೇಳಿಕೆ ನೀಡಿದ್ದರು. ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
ಯತ್ನಾಳ್ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಸೇರಿದಂತೆ ಸಚಿವರು, ಕೆಲ ಶಾಸಕರು ಅಸಮಾಧಾನ ಹೊರಹಾಕಿದ್ದರು.
ಕೊಪ್ಪಳದಲ್ಲಿ ಮಾತನಾಡಿದ್ದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ, ಹರಕುಬಾಯಿ ಯತ್ನಾಳ್ರನ್ನ ಪಕ್ಷದಿಂದ ಉಚ್ಛಾಟನೆ ಮಾಡಬೇಕು. ನೋಟಿಸ್ ಕೊಡುವ ಅಗತ್ಯವೂ ಇಲ್ಲ ಎಂದಿದ್ದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









