ಕೊರೊನಾ ಭೀತಿಯಿಂದ ಇಡಿ ದೇಶವೇ ಆತಂಕದಲ್ಲಿ ಮುಳುಗಿದೆ. ಮಹಾಮಾರಿ ಕೊರೊನಾ ಹರಡದಂತೆ ತಡೆಯಲು ದೇಶದಲ್ಲಿ ಮಾರ್ಚ್ 22 ರಂದು ಜನತಾ ಕರ್ಪ್ಯೂ ಜಾರಿ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ರಾಜ್ಯದ ಎಲ್ಲಾ ಬಾರ್, ವೈನ್ ಶಾಪ್, ಬಾರ್ ಅಂಡ್ ರೆಸ್ಟೋರೆಂಟ್ ಬಂದ್ ಮಾಡಲು ರಾಜ್ಯ ಬಾರ್ ಮಾಲೀಕರ ಸಂಘ ಮುಂದಾಗಿದೆ. ನಿನ್ನೆಯಷ್ಟೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಜನತಾ ಕರ್ಪ್ಯೂಗೆ ಕರೆ ನೀಡಿದ್ದರು. ಈ ವೇಳೆ ಮಾತನಾಡಿದ ಅವರು, ದೇಶದ ಜನರು ಮನೆಯಿಂದ ಹೊರ ಬರಬಾರದು ಎಂದು ಮನವಿ ಮಾಡಿದ್ದರು. ಹಾಗಾಗಿ ಮಾರ್ಚ್ 22 ರಂದು ನಡೆಯುವ ಜನತಾ ಕರ್ಪ್ಯೂ ಗೆ ರಾಜ್ಯ ಬಾರ್ ಮಾಲೀಕರ ಸಂಘ ಬೆಂಬಲ ಸೂಚಿಸಿದೆ. ಹೀಗಾಗಿ ಮಾರ್ಚ್ 22, 2020ರ ಭಾನುವಾರದಂದು ರಾಜ್ಯಾದ್ಯಂತ ಬಾರ್, ವೈನ್ ಶಾಪ್, ಬಾರ್ ಅಂಡ್ ರೆಸ್ಟೋರೆಂಟ್ ಬಂದ್ ಆಗಲಿದೆ.
2028ಕ್ಕೆ ನಶೆ ಮುಕ್ತ ಕರ್ನಾಟಕ- ಮಾದಕ ಜಾಲದ ಮಾಹಿತಿ ನೀಡಿದರೆ ಸಿಗಲಿದೆ ಭರ್ಜರಿ ಬಹುಮಾನ: ಮಾದಕ ದಂಧೆಕೋರರ ವಿರುದ್ಧ ಡಿ ಕೆ ಶಿವಕುಮಾರ್ ಸಮರ
ಮಾದಕ ವಸ್ತುಗಳ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಈಗ ಹೊಸ ಸಂಕಲ್ಪ ಮಾಡಿದೆ. 2028ರ ವೇಳೆಗೆ ಕರ್ನಾಟಕವನ್ನು ಸಂಪೂರ್ಣ ನಶೆ ಮುಕ್ತ ರಾಜ್ಯವನ್ನಾಗಿ ಮಾಡುವ ದೃಢ...








