ಕೊರೊನಾ ಭೀತಿಯಿಂದ ಇಡಿ ದೇಶವೇ ಆತಂಕದಲ್ಲಿ ಮುಳುಗಿದೆ. ಮಹಾಮಾರಿ ಕೊರೊನಾ ಹರಡದಂತೆ ತಡೆಯಲು ದೇಶದಲ್ಲಿ ಮಾರ್ಚ್ 22 ರಂದು ಜನತಾ ಕರ್ಪ್ಯೂ ಜಾರಿ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ರಾಜ್ಯದ ಎಲ್ಲಾ ಬಾರ್, ವೈನ್ ಶಾಪ್, ಬಾರ್ ಅಂಡ್ ರೆಸ್ಟೋರೆಂಟ್ ಬಂದ್ ಮಾಡಲು ರಾಜ್ಯ ಬಾರ್ ಮಾಲೀಕರ ಸಂಘ ಮುಂದಾಗಿದೆ. ನಿನ್ನೆಯಷ್ಟೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಜನತಾ ಕರ್ಪ್ಯೂಗೆ ಕರೆ ನೀಡಿದ್ದರು. ಈ ವೇಳೆ ಮಾತನಾಡಿದ ಅವರು, ದೇಶದ ಜನರು ಮನೆಯಿಂದ ಹೊರ ಬರಬಾರದು ಎಂದು ಮನವಿ ಮಾಡಿದ್ದರು. ಹಾಗಾಗಿ ಮಾರ್ಚ್ 22 ರಂದು ನಡೆಯುವ ಜನತಾ ಕರ್ಪ್ಯೂ ಗೆ ರಾಜ್ಯ ಬಾರ್ ಮಾಲೀಕರ ಸಂಘ ಬೆಂಬಲ ಸೂಚಿಸಿದೆ. ಹೀಗಾಗಿ ಮಾರ್ಚ್ 22, 2020ರ ಭಾನುವಾರದಂದು ರಾಜ್ಯಾದ್ಯಂತ ಬಾರ್, ವೈನ್ ಶಾಪ್, ಬಾರ್ ಅಂಡ್ ರೆಸ್ಟೋರೆಂಟ್ ಬಂದ್ ಆಗಲಿದೆ.
2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ
2028ರ ವಿಧಾನಸಭಾ ಚುನಾವಣೆಗೆ ಜೆಡಿಎಸ್–ಬಿಜೆಪಿ ಮೈತ್ರಿ ವಿಚಾರವಾಗಿ ರಾಜಕೀಯ ಸಂದೇಶಗಳು ಹೊರಬರುತ್ತಿರುವ ಹಿನ್ನೆಲೆ, ಬಿಜೆಪಿಯ ಜಿಲ್ಲಾ ಘಟಕದಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ. ವಿಶೇಷವಾಗಿ ಟಿಕೆಟ್ ಆಕಾಂಕ್ಷಿಗಳಲ್ಲಿ ಗೊಂದಲ ಹೆಚ್ಚಾಗಿದೆ...








