ಬೆಂಗಳೂರು: ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಆದರೆ ಮಳೆ ಬಂದ್ರೆ ಕೊರೊನಾ ಹರಡುವ ಸಾಧ್ಯತೆ ಹೆಚ್ಚಿದೆ ಎಂದು ಭೂಗರ್ಭ ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮಳೆಯಲ್ಲಿ ಕೊರೊನಾ ವೈರಸ್ ವ್ಯಾಪಕತೆ ಹೆಚ್ಚಾಗುತ್ತಂತೆ. ಅಲ್ಲದೇ ಮಳೆಯಿಂದ ಭೂಮಿಯಲ್ಲಿ ಈ ವೈರಸ್ ನೆಲೆಗೊಳ್ಳಲು ಬಹು ಸುಲಭ. ಹೀಗಾಗಿ ನೀರಿನಲ್ಲಿ ವೈರಸ್ ಸೇರಿಕೊಂಡು ಕುಡಿಯುವ ನೀರಿನ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ ಮಳೆಯಿಂದ ಕೊರೊನಾ ವೈರಸ್ ಹರಡುವ ಸಾಧ್ಯತೆಯಿದೆ ಎಂದು ಭೂಗರ್ಭ ತಜ್ಞರು ಹೇಳಿದ್ದಾರೆ. ಅಲ್ಲದೆ ಮಳೆಗಾಲದ ಮುಂಚೆಯೇ ಇದಕ್ಕೆ ಕಡಿವಾಣ ಹಾಕಬೇಕು. ಇಲ್ಲದಿದ್ದರೇ ಪರಿಸ್ಥಿತಿ ಕೈ ಮೀರಿ ಹೋಗುವ ಸಾಧ್ಯತೆಗಳಿವೆ ಎಂದು ಭೂಗರ್ಭ ಶಾಸ್ತ್ರಜ್ಞರು ಎಚ್ಚರಿಕೆ ನೀಡಿದ್ದಾರೆ.
2028ಕ್ಕೆ ನಶೆ ಮುಕ್ತ ಕರ್ನಾಟಕ- ಮಾದಕ ಜಾಲದ ಮಾಹಿತಿ ನೀಡಿದರೆ ಸಿಗಲಿದೆ ಭರ್ಜರಿ ಬಹುಮಾನ: ಮಾದಕ ದಂಧೆಕೋರರ ವಿರುದ್ಧ ಡಿ ಕೆ ಶಿವಕುಮಾರ್ ಸಮರ
ಮಾದಕ ವಸ್ತುಗಳ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಈಗ ಹೊಸ ಸಂಕಲ್ಪ ಮಾಡಿದೆ. 2028ರ ವೇಳೆಗೆ ಕರ್ನಾಟಕವನ್ನು ಸಂಪೂರ್ಣ ನಶೆ ಮುಕ್ತ ರಾಜ್ಯವನ್ನಾಗಿ ಮಾಡುವ ದೃಢ...








