ಬೆಂಗಳೂರು : ಆರ್ ಆರ್ ನಗರ ಮಿನಿ ಕುರುಕ್ಷೇತ್ರಕ್ಕೆ ಇಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ( Darshan) ಮಾಸ್ ಎಂಟ್ರಿ ಕೊಟ್ಟಿದ್ದಾರೆ. ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಸಾರಥಿ ಪ್ರಚಾರಕ್ಕೆ ಧುಮುಕಿದ್ದಾರೆ. ಇಂದು ಇಡೀ ದಿನ ಬಾಕ್ಸ್ ಆಫೀಸ್ ಸುಲ್ತಾನ ದರ್ಶನ್ ( Darshan) ಮುನಿರತ್ನ ಪರ ಕ್ಯಾಂಪೇನ್ ನಡೆಸಲಿದ್ದಾರೆ.
“ಮಾನವೀಯತೆ ನೋಡಿ ಪ್ರಚಾರ”
ಪ್ರಚಾರಕ್ಕೆ ತೆರಳುವ ಮುನ್ನ ಸುದ್ದಿವಾಹಿನಿ ಜೊತೆ ಮಾತನಾಡಿದ ದರ್ಶನ್, ಕೊರೊನಾ ಸಂಕಷ್ಟದಲ್ಲಿ ಮುನಿರತ್ನ ಅನ್ನ ದಾಸೋಹ ನಡೆಸಿದ್ದಾರೆ.
ಕೊರೊನಾ ಸಮಯದಲ್ಲಿ ಅಕ್ಕಿ ನೀಡಿರುವುದು ದೊಡ್ಡತನ. ನಾನು ಮಾನವೀಯ ದೃಷ್ಠಿಯಿಂದಷ್ಟೇ ಪ್ರಚಾರಕ್ಕೆ ಹೋಗುತ್ತಿದ್ದೇನೆ.
ಅವರ ಆ ದೊಡ್ಡತನದಿಂದಲೇ ನಾನು ಪ್ರಚಾರಕ್ಕೆ ಬಂದಿದ್ದೇನೆ. ನಾನು ಯಾವುದೇ ಪಕ್ಷ ನೋಡಿ ಪ್ರಚಾರಕ್ಕೆ ಹೋಗುತ್ತಿಲ್ಲ. ವ್ಯಕ್ತಿ ನೋಡಿ ಮುನಿರತ್ನ ಪರ ಪ್ರಚಾರಕ್ಕೆ ಹೋಗುತ್ತಿದ್ದೇನೆ ಎಂದು ಹೇಳಿದರು.
‘ಇದೇ ವೇಳೆ ನಿಖಿಲ್ ಬಗ್ಗೆ ಮಾತನಾಡಿ, ನಿಖಿಲ್ ಅವರು ಅವರ ಅಭ್ಯರ್ಥಿ ಪರ ಪ್ರಚಾರ ಮಾಡುತ್ತಿದ್ದಾರೆ ಎಂದರು.
ಇದನ್ನೂ ಓದಿ : ಆರ್.ಆರ್ ನಗರಕ್ಕೆ ಚಕ್ರವರ್ತಿ `ಸುಂಟರಗಾಳಿ’
ಮುನಿರತ್ನ ಬೆಂಬಲಿಸಲು ಅವರು ಮಾಡಿರುವ ಸಹಾಯವೇ ಸಾಕು. ಮಾನವೀಯತೆಯ ಆಧಾರದ ಮೇಲೆ ಅವರ ಪರ ಪ್ರಚಾರ ಮಾಡುತ್ತೇನೆ. ಮುನಿರತ್ನ ಕರೆದಲ್ಲಿಗೆ ಹೋಗಿ ಪ್ರಚಾರ ಮಾಡ್ತೀನಿ. ಅವರು ನನ್ನ ಅತ್ಯಂತ ಆಪ್ತರು. ಸಂಕಷ್ಟಕ್ಕೆ ನಿಂತವರ ಪರ ಪ್ರಚಾರಕ್ಕೆ ತೆರಳುತ್ತಿರುವುದಾಗಿ ಅವರು ಹೇಳಿದರು.
ಸದ್ಯ ದಾಸ ಯಶವಂತಪುರದಿಂದ ಪ್ರಚಾರ ಆರಂಭಿಸಿದ್ದು, ದರ್ಶನ್ ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ಆರ್ ಅಶೋಕ್ ಸಾಥ್ ಕೊಟ್ಟಿದ್ದಾರೆ.
ದರ್ಶನ್ ರೋಡ್ ಶೋ ಎಲ್ಲೆಲ್ಲಿ?
ಯಶವಂತಪುರ ರೈಲ್ವೆ ನಿಲ್ದಾಣದ ಮುಂಭಾಗದಿಂದ ದರ್ಶನ್ ರೋಡ್ ಶೋ ಶುರು
ಬಳಿಕ ಜೆ.ಪಿ.ಪಾರ್ಕ್ ವಾರ್ಡ್ ವ್ಯಾಪ್ತಿಯಲ್ಲಿ ರೋಡ್ ಶೋ
ಮಧ್ಯಾಹ್ನ 1:15 ಗಂಟೆ ಜಾಲಹಳ್ಳಿ ವಿಲೇಜ್ ಮೂಲಕವಾಗಿ ರೋಡ್ ಶೋ
ಮಧ್ಯಾಹ್ನ 2:00 ಗಂಟೆ ಹೆಚ್ ಎಂಟಿ, ಪೀಣ್ಯಾ ಮಾರ್ಗವಾಗಿ ಗೊರಗುಂಟೆಪಾಳ್ಯದಲ್ಲಿ ಪ್ರಚಾರ
ಸಂಜೆ 4:00 ಗಂಟೆ ಲಕ್ಷ್ಮಿದೇವಿನಗರದ ಕೂಲಿನಗರ ಸೇತುವೆಯಿಂದ ರೋಡ್ ಶೋ
ಇದನ್ನೂ ಓದಿ : ಶಿರಾ ಅಖಾಡಕ್ಕೆ ಇಂದು ರಾಜಾಹುಲಿ `ಬಿಎಸ್ವೈ’ ಎಂಟ್ರಿ
ಸಂಜೆ 5:00 ಗಂಟೆ ಲಗ್ಗೆರೆಯ ಆಲದಮರ ಸರ್ಕಲ್, ಕೊಟ್ಟಿಗೆಪಾಳ್ಯದ ಪೈಪ್ ಲೈನ್, ಸುಂಕದಕಟ್ಟೆಗಳಲ್ಲಿ ರೋಡ್ ಶೋ
ಸಂಜೆ 6:00 ಗಂಟೆ ಕೊಟ್ಟಿಗೆಪಾಳ್ಯದ ಬಿಡಿಎ ಕಾಂಪ್ಲೆಕ್ಸ್ ವರೆಗೆ ರೋಡ್ ಶೋ
ರಾತ್ರಿ 8:15 ಗಂಟೆ ಜ್ಞಾನಭಾರತಿಯ ಕೆಂಗುಂಟೆ, ಮಲ್ಲತ್ತಹಳ್ಳಿಯಲ್ಲಿ ರೋಡ್ ಶೋ
ರಾತ್ರಿ 9:00 ಗಂಟೆ ರಾಜರಾಜೇಶ್ವರಿನಗರದ ಪ್ರಮುಖ ರಸ್ತೆಗಳಲ್ಲಿ ರೋಡ್ ಶೋ ನಡೆಸಲಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel