ತುಮಕೂರು: ಉಪಚುನಾವಣೆ ಅಖಾಡಕ್ಕೆ ಮೊದಲ ಬಾರಿಗೆ ಧುಮುಕಿರುವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಶಿರಾ ಕ್ಷೇತ್ರದ ಮತದಾರರಿಗೆ ಭರವಸೆಗಳ ಸುರಿಮಳೆಗೈದಿದ್ದಾರೆ.
ಬೆಳಿಗ್ಗೆ 11ಗಂಟೆಗೆ ಶಿರಾ ತಾಲೂಕಿನ ಮದಲೂರಿಗೆ ಆಗಮಿಸಿದ ಸಿಎಂ ಯಡಿಯೂರಪ್ಪ, ಬಿಜೆಪಿ ಅಭ್ಯರ್ಥಿ ಡಾ.ರಾಜೇಶ್ಗೌಡ ಪರ ಪ್ರಚಾರ ಮಾಡಿದರು. ಈ ವೇಳೆ ಮಾತನಾಡಿದ ಅವರು, ಮದಲೂರು ಕೆರೆ ಕಾಲುವೆ ನಿರ್ಮಾಣಕ್ಕೆ ಅನುದಾನ ನೀಡಿರುವುದೇ ನಾನು. 6 ತಿಂಗಳಲ್ಲಿ ಕೆರೆ ತುಂಬಿಸಿ ನಾನೇ ಉದ್ಘಾಟಿಸುತ್ತೇನೆ. ಯಡಿಯೂರಪ್ಪ ನೀಡಿದ ಭರವಸೆ ಹುಸಿಯಾಗುವುದಿಲ್ಲ ಎಂದು ಅಭಯ ನೀಡಿದರು.
ಭದ್ರಾ ಮೇಲ್ದಂಡೆ ಯೋಜನೆಯಿಂದ ಶಿರಾ ತಾಲೂಕಿನ 60 ಕೆರೆಗಳನ್ನು ತುಂಬಿಸುವ ಕೆಲಸ ಮಾಡುತ್ತೇನೆ. ಸ್ತ್ರೀಶಕ್ತಿ ಸಂಘಗಳ ಬಲವರ್ಧನೆ ಮಾಡಲಾಗುವುದು. ರಾಜ್ಯದಲ್ಲಿರುವ ಬಡವರಿಗೆ ಮನೆ, ನಿವೇಶನ ನೀಡಬೇಕು ಎನ್ನುವುದು ಸರ್ಕಾರದ ಆಶಯವಾಗಿದೆ ಎಂದರು.
ಶಿಕಾರಿಪುರದಂತೆ ಶಿರಾ ಮಾದರಿ ತಾಲೂಕಾಗಿ ಅಭಿವೃದ್ಧಿ..
ಶಿಕಾರಿಪುರ ತಾಲೂಕು ತೀರಾ ಹಿಂದುಳಿದಿದ್ದು, ಈಗ ಶಿಕಾರಿಪುರ ಅಭಿವೃದ್ಧಿ ಹೊಂದಿದೆ. ಅದೇ ರೀತಿ ಶಿಕಾರಿಪುರ ತಾಲೂಕನ್ನು ಅಭಿವೃದ್ಧಿ ಮಾಡಿದಂತೆ ಶಿರಾವನ್ನು ಮಾದರಿ ತಾಲೂಕಾಗಿ ಅಭಿವೃದ್ಧಿ ಮಾಡಲು ಏನೆಲ್ಲ ಹಣಕಾಸು ಸಹಾಯಬೇಕೋ ಅದನ್ನು ನೀಡಲು ಸಿದ್ಧ. ಶಿರಾ ಕ್ಷೇತ್ರದ ಅಭಿವೃದ್ಧಿಗೆ ಬಿಜೆಪಿ ಅಭ್ಯರ್ಥಿಗೆ ಮತಹಾಕಿ 25 ಸಾವಿರ ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಸಿಎಂ ಯಡಿಯೂರಪ್ಪ ಮನವಿ ಮಾಡಿದರು.
ಮುದ್ದನಕ್ಕಹಳ್ಳಿಯಲ್ಲಿ ಬೋವಿ ಸಮುದಾಯದ ಕಲ್ಲುಗಣಿ ಸಮಸ್ಯೆಯನ್ನು ಶೀಘ್ರ ಪರಿಹರಿಸುತ್ತೇವೆ. ಹೇಮಾವತಿಯಿಂದ ಮದಲೂರು ಕೆರೆಗೆ ನೀರು ಹಾಗೂ ಬಗರ್ಹುಕುಂ ಸಾಗುವಳಿ ಚೀಟಿಗಳನ್ನು ವಿತರಣೆ ಮಾಡುತ್ತೇವೆ. ಕಾಂಗ್ರೆಸ್, ಜೆಡಿಎಸ್ ಭದ್ರಕೋಟೆ ಎನಿಸಿರುವ ಶಿರಾ ಕ್ಷೇತ್ರವನ್ನು ನುಚ್ಚುನೂರು ಮಾಡಿ ಬಿಜೆಪಿ ಬಾವುಟ ಹಾರಿಸುತ್ತೇವೆ. ಶಿರಾದಲ್ಲಿ ಬಿಜೆಪಿ ಗೆಲ್ಲುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಬಿಎಸ್ವೈ ವಿಶ್ವಾಸ ವ್ಯಕ್ತಪಡಿಸಿದರು.
ಸಮಾಜಕಲ್ಯಾಣ ಸಚಿವ ಬಿ.ಶ್ರೀರಾಮುಲು ಮಾತನಾಡಿ, ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಶಿರಾ ಕ್ಷೇತ್ರವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ. ಆದರೆ ಗೆಲುವುದು ಸಾಧಿಸುವುದು ಬಿಜೆಪಿ, ಶಿರಾದಲ್ಲಿ ಬಿಜೆಪಿ ಗೆಲುವಿಗೆ ವಿಜಯೇಂದ್ರ ಪಣತೊಟ್ಟಿದ್ದಾರೆ. ಹಿಂದೂ ಸಾಮ್ರಾಟ ಶಿವಾಜಿಯಂತೆ ವಿಜಯೇಂದ್ರ ಉಪಚುನಾವಣೆಗಳಲ್ಲಿ ಬಿಜೆಪಿಗೆ ಗೆಲುವು ತಂದುಕೊಡುತ್ತಿದ್ದಾರೆ ಎಂದರು ಹೇಳಿದರು.
ಮದಲೂರು ಕೆರೆ ಯೋಜನೆ ಸ್ಥಗಿತಗೊಳಿಸಿದ್ದೇ ಬಿಎಸ್ವೈ-ಟಿ.ಬಿ ಜಯಚಂದ್ರ
ಸುಮಾರು 520 ಎಕೆರೆ ಪ್ರದೇಶದಲ್ಲಿರುವ ಮದಲೂರು ಕೆರೆಗೆ ಹೇಮಾವತಿ ನದಿಯಿಂದ ಈ ಹಿಂದೆಯೇ ನೀರು ಹರಿಸಲಾಗಿತ್ತು. ಆದರೆ, ಹೇಮಾವತಿ ನದಿ ನೀರು ಕಾವೇರಿಕೊಳ್ಳದ ವ್ಯಾಪ್ತಿ ಎಂಬ ಕಾರಣಕ್ಕೆ ಅರ್ಧಕ್ಕೆ ಸ್ಥಗಿತಗೊಳಿಸಲಾಗಿತ್ತು. ಹೀಗಾಗಿ ಈಗ ಭದ್ರಾ ಮೇಲ್ದಂಡೆ ಯೋಜನೆಯಿಂದ ನೀರು ಹರಿಸಲು ಯೋಜನೆ ರೂಪಿಸಲಾಗುತ್ತಿದೆ. ಆದರೆ,ಯಡಿಯೂರಪ್ಪ ಅವರಿಗೆ ಮದಲೂರು ಕೆರೆ ಯೋಜನೆ ಬಗ್ಗೆ ಗೊತ್ತು ಎಂದು ಭಾವಿಸುತ್ತೇನೆ. ಕೇವಲ ಓಟಿಗಾಗಿ ಸಿಎಂ ಹೇಳಿಕೆ ನೀಡಿದ್ದಾರೆ. 2008ರಲ್ಲಿ ಹೇಮಾವತಿಯಿಂದ ಮದಲೂರು ಕೆರೆಗೆ ನೀರು ಹರಿಸಬಾರದು ಎಂದು ಅಡ್ಡಿ ಮಾಡಿದ್ದೇ ಬಿಜೆಪಿ ನಾಯಕರು ಎಂದು ಟಿ.ಬಿ ಜಯಚಂದ್ರ ಆರೋಪಿಸಿದ್ದಾರೆ.
ಹೀಗಾಗಿ 2008ರಲ್ಲಿ ಮದಲೂರು ಕೆರೆಗೆ ನೀರು ಹರಿಸುವ ಯೋಜನೆ ಮಾಡಿದ್ದೇ ಯಡಿಯೂರಪ್ಪ. ಆದರೆ ನಾನು ಕೇಂದ್ರದ ಬಳಿ ಹೋಗಿ ಯೋಜನೆ ಮುಂದುವರೆಸಲು ಅನುಮತಿ ಪಡೆದು 60 ಕೋಟಿ ಹಣ ಮಂಜೂರು ಮಾಡಿಸಿದ್ದೆ. ಆದರೆ, ಬಿಜೆಪಿಯವರು ಹಣ ನೀಡದೇ ಕೆಲಸ ಮಾಡಲು ಬಿಡಲಿಲ್ಲ ಎಂದು ಜಯಚಂದ್ರ ದೂರಿದ್ದಾರೆ.
ಕೆರೆಗಳಿಗೆ ನೀರು ತುಂಬಿಸದಿದ್ದರೆ ಪಾದಯಾತ್ರೆ: ಹೆಚ್ಡಿಕೆ ಎಚ್ಚರಿಕೆ
850 ಕೋಟಿ ವೆಚ್ಚದ
ಲ್ಲಿ ಶಿರಾ ತಾಲೂಕಿನ ಕೆರೆಗಳಿಗೆ ನೀರು ತುಂಬಿಸಲು ಖಾಸಗಿ ಕಂಪನಿಗೆ ಗುತ್ತಿಗೆ ನೀಡಲಾಗಿತ್ತು. ಆದರೆ, ನಮ್ಮ ಸರ್ಕಾರ ಉರುಳಿದ ಕಾರಣ ಯೋಜನೆ ನೆನೆಗುದಿಗೆ ಬಿದ್ದಿದೆ.
ತಾಲೂಕಿನ 65 ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡದಿದ್ದರೆ ಶಿರಾದಿಂದ ವಿಧಾನಸೌಧದವರೆಗೆ ಪಾದಯಾತ್ರೆ ನಡೆಸುವುದಾಗಿ ಮಾಜಿ ಸಿಎಂ ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel