ADVERTISEMENT
Saturday, March 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ನಾಡು ಉಳಿಯಬೇಕಾದರೆ ಭಾಷೆ ಉಳಿಯಬೇಕು – ಸಿರಿಗನ್ನಡಂ ಗೆಲ್ಗೆ ಸಿರಿಗನ್ನಡಂ ಬಾಳ್ಗೆ

Shwetha by Shwetha
November 1, 2020
in Newsbeat, Saaksha Special, ಎಸ್ ಸ್ಪೆಷಲ್, ನ್ಯೂಸ್ ಬೀಟ್
Kannada Rajyotsava 2020
Share on FacebookShare on TwitterShare on WhatsappShare on Telegram

ನಾಡು ಉಳಿಯಬೇಕಾದರೆ ಭಾಷೆ ಉಳಿಯಬೇಕು – ಸಿರಿಗನ್ನಡಂ ಗೆಲ್ಗೆ ಸಿರಿಗನ್ನಡಂ ಬಾಳ್ಗೆ Kannada Rajyotsava 2020

ಮಂಗಳೂರು, ನವೆಂಬರ್01: ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು. ಹೀಗೆ ಹಾರೈಸಿದವರು ಕನ್ನಡದ ಪ್ರಮುಖ ಸಾಹಿತಿಗಳಲ್ಲಿ ಒಬ್ಬರಾದ ಹುಯಿಲಗೋಳ ನಾರಾಯಣರಾಯರು. ಕನ್ನಡಿಗರೆಲ್ಲರ ಹೃದಯವು ಈ ಆಶಯಕ್ಕೆ ಅಂದು ದನಿಗೂಡಿಸಿತು. ಕನ್ನಡಿಗರ ಒಕ್ಕೊರಲ ಕೂಗಿಗೆ ಕನ್ನಡ ನಾಡಿನ ಉದಯವಾಯಿತು. Kannada Rajyotsava 2020

Related posts

ಇಂದು ಎಲ್ಲಾ ರಾಜ್ಯಗಳ ಸಿಎಂ ಜೊತೆ ಪ್ರಧಾನಿ ಮೋದಿ ಸಭೆ

ಇಂದು ಎಲ್ಲಾ ರಾಜ್ಯಗಳ ಸಿಎಂ ಜೊತೆ ಪ್ರಧಾನಿ ಮೋದಿ ಸಭೆ

March 27, 2026
ವಾಹನ ನೋಂದಣಿ ತೆರಿಗೆ ಇಳಿಕೆ: ತಿದ್ದುಪಡಿ ವಿಧೇಯಕ ಅಂಗೀಕಾರ

ವಾಹನ ನೋಂದಣಿ ತೆರಿಗೆ ಇಳಿಕೆ: ತಿದ್ದುಪಡಿ ವಿಧೇಯಕ ಅಂಗೀಕಾರ

March 27, 2026

Kannada Rajyotsava 2020

ಕನ್ನಡ ಕೇವಲ ಒಂದು ಭಾಷೆಯಲ್ಲ.‌ ಅದು ಕನ್ನಡಿಗರ ಅಭಿಮಾನ. ಎರಡೂವರೆ ಸಾವಿರ ವರ್ಷಗಳ ಇತಿಹಾಸವಿರುವ ಪ್ರಾಚೀನ ದ್ರಾವಿಡ ಭಾಷೆಗಳಲ್ಲಿ ಕನ್ನಡವೂ ಒಂದು.

ರಾಷ್ಟ್ರ ಕವಿ ಕುವೆಂಪುರವರು ಕನ್ನಡ ಭಾಷೆಯ ಕುರಿತು,
ಕನ್ನಡ ಎನೆ ಕುಣಿದಾಡುವುದೆನ್ನೆದೆ
ಕನ್ನಡ ಎನೆ ಕಿವಿ ನಿಮಿರುವುದು
ಕಾಮನ ಬಿಲ್ಲನು ಕಾಣುವ ಕವಿಯೊಳು
ತೆಕ್ಕನೆ ಮನ ಮೈ ಮರೆಯುವುದು
ಕನ್ನಡ ಕನ್ನಡ ಹ.. ಸವಿಗನ್ನಡ
ಕನ್ನಡದಲಿ ಹರಿ ಬರೆಯುವನು
ಕನ್ನಡದಲಿ ಹರ ತಿರಿಯುವನು
ಎಂದು ಕನ್ನಡ ನುಡಿಯ ಮೇಲಿನ ಪ್ರೀತಿಯನ್ನು ಕನ್ನಡ ಭಾಷೆಯ ಸವಿಯನ್ನು ಎತ್ತಿ ತೋರಿಸಿದ್ದಾರೆ.

ಆದರೆ ಇಂದು ಕನ್ನಡದ ಮೇಲಿನ ಅಭಿಮಾನ ಕನ್ನಡಿಗರಲ್ಲಿ ಕಡಿಮೆಯಾಗುತ್ತಿದೆ. ಇಂಗ್ಲೀಷ್ ಬಗ್ಗೆಗಿನ ವ್ಯಾಮೋಹ ಹೆಚ್ಚಾಗುತ್ತಿದೆ. ಕರ್ನಾಟಕದ ರಾಜಧಾನಿ ಬೆಂಗಳೂರು ವಲಸಿಗರ ತಾಣವಾಗುತ್ತಿರುವುದರಿಂದ ಪರಭಾಷೆಗಳೇ ಇಲ್ಲಿ ಅಧಿಪತ್ಯ ಸ್ಥಾಪಿಸಿದೆ.

ಕಾನೂನು ತಜ್ಞ ಎಂ.ಕೆ.ವಿಜಯ್ ಕುಮಾರ್ ಅವರಿಗೆ ಈ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಇಂಗ್ಲಿಷ್ ನ ವ್ಯಾಮೋಹ ಅತಿಯಾಗಿರುವುದರಿಂದ ಕನ್ನಡ ಮನೆ ಬಳಕೆಯಿಂದಲೂ ದೂರವಾಗಿದೆ. ಕನ್ನಡ ತನ್ನ ಅಸ್ತಿತ್ವ ಕಳೆದು ಕೊಳ್ಳುತ್ತಿದೆ. ಇಂದಿನ ಪೋಷಕರು ಹಾಗೂ ಮಕ್ಕಳಿಗೆ ನಾಡಿನ ಭಾಷೆ ಸಂಸ್ಕೃತಿ ಯ ಬಗ್ಗೆ ಅರಿವಿಲ್ಲ. ಪೋಷಕರು ಇಂಗ್ಲಿಷ್ ಬಳಕೆಯನ್ನು ಮಕ್ಕಳ ಮೇಲೆ ಮನೆಗಳಲ್ಲೂ ಹೇರುತ್ತಿರುವುದನ್ನು ಕಾಣುತ್ತಿದ್ದೇವೆ. ಕನ್ನಡ ಪರ ಹೋರಾಟಗಾರರು ಕೇವಲ ರಾಜಕೀಯ ದಾಳಗಳಾಗಿ ಬಳಕೆಯಾಗುತ್ತಿದ್ದಾರೆ. ಕನ್ನಡವನ್ನು ಉಳಿಸುವ ಬೆಳೆಸುವ ಸಂಕಲ್ಪ ಶಕ್ತಿ ಕಾಣೆಯಾಗಿದೆ.
ಇಂದು ಕೂಡಾ ಕನ್ನಡ ಆಡಳಿತ ಭಾಷೆಯಾಗಬೇಕೆಂಬ ಕೂಗು ಕೇಳಿಸುತ್ತಿದೆ.

ವ್ಯಾವಹಾರಿಕವಾಗಿ ಇಂಗ್ಲಿಷ್ ಬಳಕೆ ಹೆಚ್ಚಾಗುತ್ತಿರುವುದೇ ಇಂಗ್ಲಿಷ್ ಭಾಷೆಯ ವ್ಯಾಮೋಹ ಹೆಚ್ಚಾಗಲು ಕಾರಣ.
ಕನ್ನಡ ‌ಮಾಧ್ಯಮದಲ್ಲಿ ಕಲಿತವರಿಗೆ ಮಾತ್ರ ಸರ್ಕಾರಿ ಕೆಲಸ ಎಂಬ ನಿಯಮ ಕಡ್ಡಾಯ ಮಾಡಿ, ಸರ್ಕಾರಿ ಕಛೇರಿಗಳಲ್ಲಿ ಕನ್ನಡಕ್ಕೆ ಮಾತ್ರ ಆದ್ಯತೆ ನೀಡಿದಾಗ ‌ಕನ್ನಡ ಮಾಧ್ಯಮ ಶಾಲೆಗಳು ಉಳಿಯಬಹುದು. ಐಎಎಸ್‌, ಐಪಿಎಸ್ ಪರೀಕ್ಷೆಗಳನ್ನು ಕನ್ನಡದಲ್ಲೇ ಬರೆಯುವಂತಾಗಲು ಪ್ರೋತ್ಸಾಹ ನೀಡಬೇಕು. ಕನ್ನಡ ಭಾಷೆಯ ಮೇಲಿನ ಪ್ರೀತಿ ಹೆಚ್ಚಾಗಬೇಕು ಎಂದರೆ ಕನ್ನಡ ಕಲಿತವರಿಗೆ ಅವಕಾಶವಿದೆ ಎಂಬ ವಾತಾವರಣ ನಿರ್ಮಾಣವಾಗಬೇಕು. ಕನ್ನಡ ಕಲಿಯದ, ಕಲಿಯಲು ಮನಸ್ಸಿಲ್ಲದ ಯಾರಿಗೂ ಯಾವ ಸೌಲಭ್ಯವು ಕರ್ನಾಟಕದಲ್ಲಿ ಉಚಿತವಾಗಿ ದೊರಕಬಾರದು.‌

Kannada Rajyotsava 2020

ಹಾಗೆಂದು ಇಂಗ್ಲಿಷ್ ಅಥವಾ ಇತರ ಭಾಷೆಗಳನ್ನು ದ್ವೇಷಿಸಬೇಕು ಎಂದು ಅರ್ಥವಲ್ಲ. ಜಗತ್ತಿನ ಆಗುಹೋಗುಗಳನ್ನು ತಿಳಿಯಲು, ಅರ್ಥೈಸಿಕೊಳ್ಳಲು ಇಂಗ್ಲೀಷ್, ಹಿಂದಿ ಭಾಷೆಯ ಅವಶ್ಯಕತೆ ಇದೆ.
ಸುಂದರವಾದ ಹೂವಿನ ತೋಟದಂತೆ ಹಲವಾರು ಬಗೆಯ ಭಾಷೆ ವೈವಿಧ್ಯತೆಗಳಿಂದ ಕೂಡಿದ ದೇಶ ನಮ್ಮ ಭಾರತ.
ಹಾಗಾಗಿಯೇ ವರಕವಿ ಕುವೆಂಪು
ಜೈ ಭಾರತ ಜನನಿಯ ತನುಜಾತೆ..
ಜಯ ಹೇ ಕರ್ನಾಟಕ ಮಾತೆ… ಎಂದು ಹೇಳಿದ್ದಾರೆ.

ಆದರೆ ಭಾರತ ತಾಯಿಗೆ ಕನ್ನಡ ‌ಮಾತೆ ಮಾತ್ರ ಮಗಳಲ್ಲ. ಇತರ ಭಾಷೆಗಳು ಕೂಡ ಮಕ್ಕಳೇ. ಹಾಗಾಗಿ ಇತರ ಭಾಷೆಗಳು ಸೋದರ ಭಾಷೆಗಳು. ಭಾಷೆಗಳ ನಡುವೆ ಸಂಘರ್ಷ ಬೇಡ..
ಅದಕ್ಕಾಗಿಯೇ ಕಲಿಯೋಕೆ ಕೋಟಿ ಭಾಷೆ.. ಆಡೋಕೆ ಒಂದೇ ಭಾಷೆ… ಕನ್ನಡ.. ಕನ್ನಡ.. ಎಂದು ನಾದ ಬ್ರಹ್ಮ ಹಂಸಲೇಖ ಕವನ ರಚಿಸಿದ್ದಾರೆ.

ಕನ್ನಡ ಭಾಷೆ ಕೀಳು ಎಂಬ ಭಾವನೆ ಬಿಟ್ಟು ನಮ್ಮ ಮೊದಲ ಆದ್ಯತೆ ಕನ್ನಡ ಭಾಷೆಯಾಗಿರಲಿ… ಎಲ್ಲಾ ಭಾಷೆಗಳನ್ನು ಗೌರವಿಸೋಣ, ಆದರೆ ನಮ್ಮ ಭಾಷೆಯನ್ನು ಮಾತ್ರ ಪ್ರೀತಿಸೋಣ.. ನಾಡು ಉಳಿಯಬೇಕಾದರೆ ಭಾಷೆ ಉಳಿಯಬೇಕು

ಕನ್ನಡ ಭಾಷೆ ಕುರಿತು ಕಳವಳ ಕಾಳಜಿ ಒಂದು ದಿನಕ್ಕೆ ಸೀಮಿತವಾಗದೆ ಸದಾಕಾಲವೂ ಕನ್ನಡ ಭಾಷೆ ಮೆರೆಯಲಿ…
ಓದುಗರಿಗೆಲ್ಲಾ ಸಾಕ್ಷಾಟಿವಿ ವತಿಯಿಂದ ಕನ್ನಡ ರಾಜೋತ್ಸವದ ಶುಭಾಶಯಗಳು
ಸಿರಿಗನ್ನಡಂ ಗೆಲ್ಗೆ ಸಿರಿಗನ್ನಡಂ ಬಾಳ್ಗೆ

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

Tweets by SaakshaTv

 

Tags: #saakshatvKannada Rajyotsava 2020Karnataka Rajyotwava
ShareTweetSendShare
Join us on:

Related Posts

ಇಂದು ಎಲ್ಲಾ ರಾಜ್ಯಗಳ ಸಿಎಂ ಜೊತೆ ಪ್ರಧಾನಿ ಮೋದಿ ಸಭೆ

ಇಂದು ಎಲ್ಲಾ ರಾಜ್ಯಗಳ ಸಿಎಂ ಜೊತೆ ಪ್ರಧಾನಿ ಮೋದಿ ಸಭೆ

by Shwetha
March 27, 2026
0

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನ ಪರಿಸ್ಥಿತಿಗಳ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ. ಇರಾನ್–ಅಮೆರಿಕ ಹಾಗೂ ಇಸ್ರೇಲ್ ನಡುವಿನ ಯುದ್ಧದ...

ವಾಹನ ನೋಂದಣಿ ತೆರಿಗೆ ಇಳಿಕೆ: ತಿದ್ದುಪಡಿ ವಿಧೇಯಕ ಅಂಗೀಕಾರ

ವಾಹನ ನೋಂದಣಿ ತೆರಿಗೆ ಇಳಿಕೆ: ತಿದ್ದುಪಡಿ ವಿಧೇಯಕ ಅಂಗೀಕಾರ

by Shwetha
March 27, 2026
0

ರಾಜ್ಯದಲ್ಲಿ ವಾಹನ ನೋಂದಣಿ ತೆರಿಗೆಯನ್ನು ಇಳಿಸುವ ಮಹತ್ವದ ತಿದ್ದುಪಡಿ ವಿಧೇಯಕ ಅಂಗೀಕರಿಸಲಾಗಿದೆ. ಈ ಮೂಲಕ 2026-27ನೇ ಸಾಲಿನಲ್ಲಿ ಹೊಸ ವಾಹನಗಳ ನೋಂದಣಿಯಿಂದ ಸುಮಾರು ₹250 ಕೋಟಿ ಆದಾಯ...

ವಿಧಾನಸೌಧದಲ್ಲಿ ಐಪಿಎಲ್ ಗದ್ದಲ: ನಾವು ವಿಐಪಿಗಳು, ಕ್ಯೂನಲ್ಲಿ ನಿಲ್ಲಲ್ಲ! ಆರ್​ಸಿಬಿ ಟಿಕೆಟ್​ಗಾಗಿ ಪಟ್ಟು ಹಿಡಿದ ಶಾಸಕರು

ವಿಧಾನಸೌಧದಲ್ಲಿ ಐಪಿಎಲ್ ಗದ್ದಲ: ನಾವು ವಿಐಪಿಗಳು, ಕ್ಯೂನಲ್ಲಿ ನಿಲ್ಲಲ್ಲ! ಆರ್​ಸಿಬಿ ಟಿಕೆಟ್​ಗಾಗಿ ಪಟ್ಟು ಹಿಡಿದ ಶಾಸಕರು

by Shwetha
March 27, 2026
0

ಬೆಂಗಳೂರು: ರಾಜ್ಯದಲ್ಲಿ ಐಪಿಎಲ್ ಕ್ರಿಕೆಟ್ ಜ್ವರ ತಾರಕಕ್ಕೇರಿದ್ದು, ಈ ಬಿಸಿಯು ಈಗ ರಾಜ್ಯದ ಶಕ್ತಿ ಕೇಂದ್ರವಾದ ವಿಧಾನಸೌಧಕ್ಕೂ ವ್ಯಾಪಿಸಿದೆ. ಅಭಿಮಾನಿಗಳು ಟಿಕೆಟ್‌ಗಾಗಿ ಕ್ರೀಡಾಂಗಣದ ಹೊರಗೆ ಮತ್ತು ಆನ್‌ಲೈನ್‌ನಲ್ಲಿ...

ಬ್ರೋಕನ್ ಪಾಕಿಸ್ತಾನ ಇಂದು ಬ್ರೋಕರ್ ಆಗಲು ಮೋದಿಯೇ ಕಾರಣ ಎಂದು ಕಾಂಗ್ರೆಸ್ ತೀವ್ರ ವಾಗ್ದಾಳಿ

ಬ್ರೋಕನ್ ಪಾಕಿಸ್ತಾನ ಇಂದು ಬ್ರೋಕರ್ ಆಗಲು ಮೋದಿಯೇ ಕಾರಣ ಎಂದು ಕಾಂಗ್ರೆಸ್ ತೀವ್ರ ವಾಗ್ದಾಳಿ

by Shwetha
March 27, 2026
0

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ವಿದೇಶಾಂಗ ನೀತಿಯ ಮತ್ತು ರಾಜತಾಂತ್ರಿಕ ವೈಫಲ್ಯಗಳಿಂದಾಗಿ, ಆರ್ಥಿಕವಾಗಿ ಮತ್ತು ರಾಜಕೀಯವಾಗಿ ಅಸ್ಥಿರವಾಗಿದ್ದ ಪಾಕಿಸ್ತಾನವು ಇಂದು ಜಾಗತಿಕ...

ಮುಖ್ಯಮಂತ್ರಿಗಳ ಸಂಧಾನಕ್ಕೂ ಜಗ್ಗದ ಸಾದಿಕ್ ಅಖಾಡದಲ್ಲೇ ಉಳಿದ ಪೈಲ್ವಾನ್ : ಕೈ ಪಾಳೆಯದಲ್ಲಿ ನಡುಕ ಶುರು

ಮುಖ್ಯಮಂತ್ರಿಗಳ ಸಂಧಾನಕ್ಕೂ ಜಗ್ಗದ ಸಾದಿಕ್ ಅಖಾಡದಲ್ಲೇ ಉಳಿದ ಪೈಲ್ವಾನ್ : ಕೈ ಪಾಳೆಯದಲ್ಲಿ ನಡುಕ ಶುರು

by Shwetha
March 27, 2026
0

ದಾವಣಗೆರೆ: ಬೆಣ್ಣೆ ನಗರಿ ದಾವಣಗೆರೆಯ ರಾಜಕೀಯ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ದಶಕಗಳಿಂದ ಶಾಮನೂರು ಕುಟುಂಬದ ಭದ್ರಕೋಟೆಯಾಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಈಗ ಬಂಡಾಯದ ಬಿರುಗಾಳಿ ಎದ್ದಿದೆ....

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram