ಹಿಂದೂ ಭಾವನೆಗಳಿಗೆ ಧಕ್ಕೆ ಆರೋಪ : ಬಿಗ್ ಬಿ ವಿರುದ್ಧ ಎಫ್ ಐಆರ್
ಮುಂಬೈ : ಹಿಂದೂ ಭಾವನೆಗಳಿಗೆ ಧಕ್ಕೆ ತಂದ ಆರೋಪದಡಿ ಬಿಗ್ ಬಿ ಅಮಿತಾಬ್ ಬಚ್ಚನ್ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಅಮಿತಾಬ್ ಬಚ್ಚನ್ ಅವರು ಹಿಂದೂಗಳ ಭಾವನೆಗಳಿಗೆ ಧಕ್ಕೆಯನ್ನುಂಟು ಮಾಡಿದ್ದಾರೆ ಎಂದು ಆರೋಪಿಸಿ ಮಹಾರಾಷ್ಟ್ರದ ಬಿಜೆಪಿ ಶಾಸಕ ಅಭಿಮನ್ಯು ಪವಾರ್ ದೂರು ದಾಖಲಿಸಿದ್ದರು..
ಇದೀಗ ಈ ದೂರಿನನ್ವಯ ಪೊಲೀಸರು ಬಿಗ್ ಬಿ ಹಾಗೂ ಕಾರ್ಯಕ್ರಮ ನಡೆಸಿದ ಚಾನೆಲ್ ಮೇಲೆ ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ :ಸ್ಯಾಂಡಲ್ವುಡ್ ಡ್ರಗ್ಸ್ ಕೇಸ್; ನಶೆರಾಣಿ ರಾಗಿಣಿ, ಸಂಜನಾ ಜಾಮೀನು ಅರ್ಜಿ ವಜಾ
ಎಫ್ ಐಆರ್ ಯಾಕೆ..?
ಶುಕ್ರವಾರ ಅಮಿತಾಬ್ ಬಚ್ಚನ್ ನಿರೂಪಣೆಯ ಕೌನ್ ಬನೇಗಾ ಕರೋರ್ ಪತಿಯಲ್ಲಿ ಕರ್ಮವೀರ್ ವಿಶೇಷ ಎಪಿಸೋಡ್ ಪ್ರಸಾರ ಮಾಡಲಾಗಿತ್ತು.
ಈ ಎಪಿಸೋಡ್ ನಲ್ಲಿ ಬಿಗ್ ಬಿ, 6,40,000 ರೂಪಾಯಿಯ ನಗದು ಬಹುಮಾನಕ್ಕಾಗಿ “1927ರ ಡಿಸೆಂಬರ್ 25ರಂದು ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಅವರ ಅನುಯಾಯಿಗಳು ಯಾವ ಗ್ರಂಥದ ಪ್ರತಿಗಳನ್ನು ಸುಟ್ಟು ಹಾಕಿದರು? ಎಂದು ಪ್ರಶ್ನೆ ಕೇಳಿದ್ದರು.
ಇದಕ್ಕೆ ಆಯ್ಕೆಗಳು ಹೀಗಿದ್ದವು “ಎ. ವಿಷ್ಣುಪುರಾಣ, ಬಿ. ಭಗವದ್ಗೀತೆ, ಸಿ. ಋಗ್ವೇದ, ಡಿ. ಮನುಸ್ಮೃತಿ”
ಈ ಪ್ರಶ್ನೆಗೆ ಉತ್ತಿರಿಸಿದ ಸ್ಪರ್ಧಿ “ಮನುಸ್ಮೃತಿ” ಎಂದು ಪ್ರಶ್ನೆಗೆ ಉತ್ತರವಾಗಿ ಹೇಳಿದರು.
ಈ ವೇಳೆ ಬಿಗ್ ಬಿ ಇದು ಸರಿ ಉತ್ತರವೆಂದು ಘೋಷಿಸಿ, ಈ ಬಗ್ಗೆ ವಿವರಿಸುತ್ತಾ, ಡಾ.ಬಿ.ಆರ್.ಅಂಬೇಡ್ಕರ್ ಅವರು ಪ್ರಾಚೀನ ಹಿಂದೂ ಧರ್ಮ ಗ್ರಂಥದ ಪ್ರತಿಗಳನ್ನು ಸುಟ್ಟು ಹಾಕಿದರು ಎಂದು ಹೇಳಿದ್ದರು.
ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡುತ್ತಿದೆ. ನೆಟ್ಟಗರು ಸೋಶಿಯಲ್ ಮೀಡಿಯಾದಲ್ಲಿ ಕಾರ್ಯಕ್ರಮದ ವಿರುದ್ಧ ಕಿಡಿಕಾರುತ್ತಿದ್ದಾರೆ..
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel