ADVERTISEMENT
Saturday, April 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಇಂದಿನಿಂದ ಬಾಗಿಲು ತೆರೆಯಲಿದೆ ಹಾಸನಾಂಬೆ ದೇವಳ; ಭಕ್ತರಿಗಿಲ್ಲ ದರ್ಶನ ಭಾಗ್ಯ..!

Kariyappa N by Kariyappa N
November 5, 2020
in Newsbeat, Samagra karnataka, ರಾಜ್ಯ
hasanambe devi
Share on FacebookShare on TwitterShare on WhatsappShare on Telegram

ಹಾಸನ: ಜಿಲ್ಲೆಯ ಅಧಿದೇವತೆ ಹಾಸನಾಂಬೆ ದರ್ಶನೋತ್ಸವ ಸಂಪ್ರದಾಯದಂತೆ ಅಶ್ವಯುಜ ಮಾಸದ ಪೂರ್ಣಿಮೆಯ ನಂತರದ ಪ್ರಥಮ ಗುರುವಾರವಾದ ಇಂದು ದೇವಸ್ಥಾನದ ಗರ್ಭಗುಡಿಯ ಬಾಗಿಲು ತೆರೆಯಲಿದೆ.
ಅಶ್ವಯುಜ ಮಾಸದ ಪೂರ್ಣಿಮೆಯ ನಂತರದ ಪ್ರಥಮ ಗುರುವಾರವಾದ ಇಂದು, ಹಾಸನಾಂಬೆ ದೇವಸ್ಥಾನದ ಗರ್ಭಗುಡಿಯ ಬಾಗಿಲು ತೆರೆಯಲಿದ್ದು, ಬಲಿಪಾಡ್ಯಮಿಯ ಮರುದಿನ ಬೆಳಗ್ಗೆ ಧಾರ್ಮಿಕ ವಿಧಿ-ವಿಧಾನಗಳನ್ವಯ ಪೂಜೆ ನೆರವೇರಿಸಿ ಗರ್ಭಗುಡಿಯ ಬಾಗಿಲು ಮುಚ್ಚಲಾಗುತ್ತದೆ.

door
ಕೊರೊಬಾ ವೈರಸ್ ಹರಡುವ ಭೀತಿಯ ಕಾರಣದಿಂದಾಗಿ ಈ ಬಾರಿ ಭಕ್ತರಿಗೆ ಹಾಸನಾಂಬೆ ದರ್ಶನಕ್ಕೆ ಅವಕಾಶ ನಿಷೇಧಿಸಲಾಗಿದೆ. ಬಲಿಪಾಡ್ಯಮಿಯ ಮರು ದಿನ ಅಂದರೆ ನ.16ರ ಬೆಳಿಗ್ಗೆ ಧಾರ್ಮಿಕ ವಿಧಿ-ವಿಧಾನಗಳನ್ವಯ ಪೂಜೆ ನೆರವೇರಿಸಿ ಗರ್ಭಗುಡಿಯ ಬಾಗಿಲು ಮುಚ್ಚಲಾಗುತ್ತದೆ.
ಕಟ್ಟಿದ ಹರಕೆಗಳು ತಪ್ಪದೆ ಈಡೇರುತ್ತವೆ ಎನ್ನುವುದರ ಜೊತೆಗೆ ಭಕ್ತರು ನಂಬಿಕೆಗಳ ಬೆಟ್ಟವನ್ನೇ ಹೊತ್ತಿರುವ ಐತಿಹಾಸಿಕ ದೇವಾಲಯ ಇದಾಗಿದೆ. ಮತ್ತೆ ಮುಂದಿನ ವರ್ಷದ ಅಶ್ವಯುಜ ಮಾಸದ ಹುಣ್ಣಿಮೆಯ ನಂತರದ ಪ್ರಥಮ ಗುರುವಾರವೇ ದೇವಿಯ ದರ್ಶನ ಲಭಿಸುವುದು.

Related posts

23 ಕೋಟಿ ಬೆಲೆಯ ಸರ್ಕಾರಿ ಜಾಗ ಕಾಂಗ್ರೆಸ್ ಪಾಲಾಯ್ತೇ? ಕೇವಲ 17 ಲಕ್ಷಕ್ಕೆ ಭೂಮಿ ಮಂಜೂರು ಮಾಡಿದ್ದಕ್ಕೆ ಹೈಕೋರ್ಟ್ ಗರಂ

23 ಕೋಟಿ ಬೆಲೆಯ ಸರ್ಕಾರಿ ಜಾಗ ಕಾಂಗ್ರೆಸ್ ಪಾಲಾಯ್ತೇ? ಕೇವಲ 17 ಲಕ್ಷಕ್ಕೆ ಭೂಮಿ ಮಂಜೂರು ಮಾಡಿದ್ದಕ್ಕೆ ಹೈಕೋರ್ಟ್ ಗರಂ

April 24, 2026
150 ಕೋಟಿ ಭಾರತೀಯರ ರಕ್ತದಲ್ಲೂ ಪ್ಲಾಸ್ಟಿಕ್ ಅಂಶ ಪತ್ತೆ ನಿಮ್ಮ ಜೀವ ಉಳಿಸಿಕೊಳ್ಳಲು ಈ 10 ಸೂತ್ರಗಳನ್ನು ಇಂದೇ ಪಾಲಿಸಿ

150 ಕೋಟಿ ಭಾರತೀಯರ ರಕ್ತದಲ್ಲೂ ಪ್ಲಾಸ್ಟಿಕ್ ಅಂಶ ಪತ್ತೆ ನಿಮ್ಮ ಜೀವ ಉಳಿಸಿಕೊಳ್ಳಲು ಈ 10 ಸೂತ್ರಗಳನ್ನು ಇಂದೇ ಪಾಲಿಸಿ

April 24, 2026

ಹಾಸನಾಂಬೆ ದೇವಿಯ ಧಾರ್ಮಿಕ ಹಿನ್ನೆಲೆ..
12ನೇ ಶತಮಾನದಲ್ಲಿ ಈಗಿನ ಹಾಸನ ನಗರ ಸಿಂಹಾಸನಪುರಿ ಎಂದು ಪ್ರಸಿದ್ಧವಾಗಿತ್ತು. ನಗರವನ್ನಾಳುತ್ತಿದ್ದ ಪಾಳೇಗಾರ ಕೃಷ್ಣಪ್ಪನಾಯಕ ಒಮ್ಮೆ ಕುದುರೆಯೇರಿ ಹೋಗುತ್ತಿರುವಾಗ ಈಗ ಹಾಸನಾಂಬೆ ದೇವಸ್ಥಾನವಿರುವ ಸ್ಥಳದಲ್ಲಿ ಮೊಲವೊಂದು ರಸ್ತೆಗೆ ಅಡ್ಡಲಾಗಿ ಓಡಿ ಹೋಯಿತಂತೆ. ಅಂದು ಆತನ ಕನಸಿನಲ್ಲಿ ಕಾಣಿಸಿಕೊಂಡ ಸಪ್ತ ಮಾತೃಕೆಯರು, ತಾವು ಮೊಲ ಅಡ್ಡ ಹೋದ ಜಾಗದಲ್ಲಿ ನೆಲೆಸಿದ್ದು, ಅಲ್ಲಿ ತಮ್ಮ ಗುಡಿ ನಿರ್ಮಿಸುವಂತೆ ಸೂಚನೆ ನೀಡಿದರಂತೆ. ಅದರಂತೆ ಕೃಷ್ಣಪ್ಪನಾಯಕ ಅಲ್ಲಿ ಹಾಸನಾಂಬೆಗೆ ದೇವಸ್ಥಾನ ನಿರ್ಮಿಸಿದ ಎನ್ನಲಾಗುತ್ತದೆ.
ವಾರಣಾಸಿಯಿಂದ ದಕ್ಷಿಣದತ್ತ ವಾಯು ವಿಹಾರಾರ್ಥವಾಗಿ ಬಂದ ಸಪ್ತ ಮಾತೃಕೆಯರಾದ ಬ್ರಾಹ್ಮಿದೇವಿ, ಮಾಹೇಶ್ವರಿ, ಕೌಮಾರಿ, ವೈಷ್ಣವಿ, ವಾರಾಹಿ, ಇಂದ್ರಾಣಿ ಮತ್ತು ಚಾಮುಂಡಿಯರು ಜಿಲ್ಲೆಯಲ್ಲಿಯೇ ನೆಲೆಸಿದರು. ಅವರಲ್ಲಿ ವೈಷ್ಣವಿ, ಕೌಮಾರಿ, ಮಹೇಶ್ವರಿ ದೇವಿಯರು ಈಗಿನ ಹಾಸನಾಂಬೆ ದೇವಾಲಯದಲ್ಲಿ ಹುತ್ತ ರೂಪದಿಂದ ಬ್ರಾಹ್ಮಿದೇವಿ ಆಲೂರು ತಾಲೂಕಿನ ಕೆಂಚಮ್ಮನ ಹೊಸಕೋಟೆಯಲ್ಲಿ ಕೆಂಚಾಂಬಿಕೆಯಾಗಿ ಹಾಗೂ ಚಾಮುಂಡಿ, ವಾರಾಹಿ, ಇಂದ್ರಾಣಿ ದೇವಿಯರು ನಗರದ ಮಧ್ಯ ಭಾಗದಲ್ಲಿರುವ ದೇವಿಗೆರೆಯಲ್ಲಿ ನೆಲೆಸಿದ್ದಾರೆ ಎನ್ನುವುದು ಇಲ್ಲಿನ ಧಾರ್ಮಿಕ ನಂಬಿಕೆ ಎನ್ನುತ್ತಾರೆ ಭಕ್ತರು.

ಹಾಸನಾಂಬೆ ಪೂಜೆ ವಿಧಾನಗಳೇನು..
ಹಾಸನಾಂಬೆ ದರ್ಶನೋತ್ಸವದ ಆರಂಭದ ದಿನ ಮಾತ್ರವೇ ಅಲಂಕಾರಗಳಿಲ್ಲದ ದೇವಿಯ ವಿಶ್ವರೂಪ ದರ್ಶನಕ್ಕೆ ಅವಕಾಶವಿರುತ್ತದೆ. ಬಾಗಿಲು ತೆರೆಯುವ ದಿನದ ಸಂಜೆ ದೇವಿಗೆ ವಸ್ತ್ರಾಭರಣಗಳನ್ನು ಧರಿಸಿ, ಅಲಂಕರಿಸಿ ಅಧಿಕೃತವಾಗಿ ಪೂಜೆ ಆರಂಭಿಸಲಾಗುತ್ತದೆ.

hasanamba pooje
ದೇವಿಯ ವಿಶ್ವರೂಪ ದರ್ಶನದಿಂದ ಹೆಚ್ಚು ಪುಣ್ಯ ಲಭಿಸುವುದು ಎಂಬ ನಂಬಿಕೆ ಹಿನ್ನೆಲೆಯಲ್ಲಿ ಬಾಗಿಲು ತೆರೆದ ತಕ್ಷಣವೇ ದರ್ಶನ ಪಡೆಯಲು ಭಕ್ತರು ಬರುತ್ತಾರೆ. ಅಂದು ಅಧಿಕೃತವಾಗಿ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶವಿಲ್ಲ. ಗರ್ಭಗುಡಿ ಬಾಗಿಲು ತೆರೆದ ತಕ್ಷಣ ದೇವಿಯ ಪ್ರಖರ ದೃಷ್ಟಿ ತಗುಲಿ ಯಾವುದೇ ತೊಂದರೆಯಾಗದಿರಲಿ ಎಂದು ಪ್ರತಿ ವರ್ಷವೂ ದೇವಸ್ಥಾನದ ಗರ್ಭಗುಡಿಯ ಬಾಗಿಲು ತೆರೆಯುವ ಮುನ್ನ ದೇವಾಲಯದ ಮುಂಬಾಗಿಲ ಎದುರಿಗೆ ತಳವಾರ ಮನೆತನದವರು ಬಾಳೆ ಕಂದು ನೆಟ್ಟು, ಭಕ್ತಿಯಿಂದ ಭಜಿಸಿ, ಪಂಜಿನ ಆರತಿ ಎತ್ತಿ ಬಾಳೆ ಕಂದು ಕತ್ತರಿಸುತ್ತಾರೆ.
ಹಾಸನಾಂಬೆ ರಾಜ್ಯದ ಮೂಲೆ ಮೂಲೆಯಲ್ಲಿ ಭಕ್ತರನ್ನು ಹೊಂದಿದ್ದು, ಜಿಲ್ಲೆಯಲ್ಲಿ ಕೊರೊನಾ ಹೆಚ್ಚಿರುವುದರಿಂದ ಸರಳ ಮಹೋತ್ಸವಕ್ಕೆ ಜಿಲ್ಲಾಡಳಿತ ನಿರ್ಧರಿಸಿದೆ. ನಗರದ 10 ಕಡೆ ಎಲ್‍ಇಡಿ ಪರದೆಗೆ ವ್ಯವಸ್ಥೆ ಮಾಡಿದ್ದು, ಅಲ್ಲಿಂದಲೇ ಭಕ್ತರು ದೇವಿಯ ದರ್ಶನ ಪಡೆಯಬಹುದು.
ಮಧ್ಯಾಹ್ನ 1.30ರಿಂದ 2.30ರವರೆಗಿನ ನೈವೇದ್ಯ ಸಮಯ ಹೊರತುಪಡಿಸಿ ಉಳಿದ ವೇಳೆ ದೇವಿಯನ್ನು ಜನರು ಕಣ್ತುಂಬಿಕೊಳ್ಳಬಹುದು. ಗರ್ಭಗುಡಿ ಬಾಗಿಲು ತೆರೆಯುವ ಹಾಗೂ ಹಾಕುವ ದಿನದಂದು ವಿಶೇಷ ಆಹ್ವಾನಿತರಿಗೆ ದೇವಸ್ಥಾನಕ್ಕೆ ಬರಲು ಅವಕಾಶ ಕಲ್ಪಿಸಲಾಗಿದೆ.
ಕೋವಿಡ್ ಭೀತಿ ಹಿನ್ನೆಲೆ ಈ ಬಾರಿ ಹಾಸನಾಂಬೆ ದೇವಿ ದರ್ಶನ ಮಾಡಲು ಸಾರ್ವಜನಿಕರಿಗೆ ಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ತಿಳಿಸಿದ್ದಾರೆ.
ಈ ವರ್ಷ ನವೆಂಬರ್ 5 ರಿಂದ 16ರವರೆಗೆ ಬಾಗಿಲು ತೆರೆಯಲಿದೆ. ದೇವಾಲಯದ ಬಾಗಿಲು ತೆರೆಯುವ ಮೊದಲ ದಿನ ಮತ್ತು ಕೊನೆಯ ದಿನದಂದು ಆಹ್ವಾನಿತರಿಗೆ ಮಾತ್ರ ದೇವರ ದರ್ಶನಕ್ಕೆ ಅವಕಾಶ ನೀಡಲಾಗುವುದು.

hasan temple
ಉಳಿದಂತೆ ಹಾಸನಾಂಬ ದೇವರ ದರ್ಶನಕ್ಕೆ ಯಾರಿಗೂ ಅವಕಾಶವಿಲ್ಲ. ಸಾರ್ವಜನಿಕರಿಗಾಗಿ ದೇವರ ಪೂಜೆ ವೀಕ್ಷಿಸಲು ಹಾಸನ ನಗರದ 10 ಕಡೆ ಎಲ್‍ಇಡಿ ಪರದೆ ಅಳವಡಿಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. “hasanambalive2020” ಎಂದು ಸರ್ಚ್ ಮಾಡುವ ಮೂಲಕ ಯೂಟ್ಯೂಬ್‍ನಿಂದ ಪೂಜೆಯ ನೇರ ಪ್ರಸಾರ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ. ಈ ಬಾರಿ ಪ್ರಸಾದದ ವ್ಯವಸ್ಥೆ ಕೂಡ ಇರುವುದಿಲ್ಲ ಎಂದು ಡಿಸಿ ಗಿರೀಶ್ ಹೇಳಿದ್ದಾರೆ.
ಕಳೆದ ವರ್ಷ ಸುಮಾರು 5 ಲಕ್ಷ ಭಕ್ತರು ನೇರವಾಗಿ ಹಾಸನಾಂಬೆ ದರ್ಶನ ಪಡೆದಿದ್ದರು. ಅಂದರೆ ಪ್ರತಿ ದಿನ ಸುಮಾರು 50 ಸಾವಿರ ಭಕ್ತರು ದೇವರ ದರ್ಶನ ಪಡೆದಿದ್ದರು. ಈ ಹಿನ್ನೆಲೆಯಲ್ಲಿ ಹೆಚ್ಚು ಜನ ಬಂದರೆ ನಿಯಂತ್ರಿಸುವುದು ಕಷ್ಟ ಸಾಧ್ಯ. ಅಲ್ಲದೇ ಕೋವಿಡ್ ಭೀತಿಯೂ ಇರುವುದರಿಂದ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶವಿಲ್ಲ ಎಂದು ತಿಳಿಸಿದರು.
ಹಾಸನನಾಂಬ ದೇವಾಲಯದ ಬಾಗಿಲು ವರ್ಷಕ್ಕೊಮ್ಮೆ ತೆಗೆದರೂ ಹಲವಾರು ಪವಾಡಕ್ಕೆ ಹೆಸರುವಾಸಿಯಾಗಿದೆ. ದೇವಾಲಯದ ಬಾಗಿಲು ಹಾಕುವಾಗ ಹಚ್ಚಿದ ದೀಪ ಮುಂದಿನವರ್ಷ ಬಾಗಿಲು ತೆರೆದಾಗಲೂ ಆರಿರುವುದಿಲ್ಲ. ದೇವರಿಗೆ ಮುಡಿಸಿದ ಹೂವು ಬಾಡಿರುವುದಿಲ್ಲ.
ದೇವರ ನೈವೇದ್ಯಕ್ಕೆ ಇಟ್ಟ ಅನ್ನ ಹಳಸಿರುವುದಿಲ್ಲ ಎಂಬ ನಂಬಿಕೆ ಇದೆ. ಈ ಹಿನ್ನೆಲೆಯಲ್ಲಿ ಪ್ರತಿ ವರ್ಷ ಲಕ್ಷಾಂತರ ಭಕ್ತರು ದರ್ಶನ ಪಡೆಯುತ್ತಾರೆ ಎಂದು ಹಾಸನಾಂಬೆ ಮಹಿಮೆ ಕುರಿತು ಜಿಲ್ಲಾಧಿಕಾರಿ ಗಿರೀಶ್ ತಿಳಿಸಿದರು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: door openevery one yearHasanhasanamba templekovid-19
ShareTweetSendShare
Join us on:

Related Posts

23 ಕೋಟಿ ಬೆಲೆಯ ಸರ್ಕಾರಿ ಜಾಗ ಕಾಂಗ್ರೆಸ್ ಪಾಲಾಯ್ತೇ? ಕೇವಲ 17 ಲಕ್ಷಕ್ಕೆ ಭೂಮಿ ಮಂಜೂರು ಮಾಡಿದ್ದಕ್ಕೆ ಹೈಕೋರ್ಟ್ ಗರಂ

23 ಕೋಟಿ ಬೆಲೆಯ ಸರ್ಕಾರಿ ಜಾಗ ಕಾಂಗ್ರೆಸ್ ಪಾಲಾಯ್ತೇ? ಕೇವಲ 17 ಲಕ್ಷಕ್ಕೆ ಭೂಮಿ ಮಂಜೂರು ಮಾಡಿದ್ದಕ್ಕೆ ಹೈಕೋರ್ಟ್ ಗರಂ

by Shwetha
April 24, 2026
0

ತುಮಕೂರು ನಗರದ ಆಯಕಟ್ಟಿನ ಜಾಗದಲ್ಲಿರುವ ಕೋಟ್ಯಂತರ ರೂಪಾಯಿ ಮೌಲ್ಯದ ಸರ್ಕಾರಿ ಜಮೀನನ್ನು ಕಾಂಗ್ರೆಸ್ ಭವನ ಟ್ರಸ್ಟ್ ಗೆ ಅತಿ ಕಡಿಮೆ ಬೆಲೆಗೆ ನೀಡಲಾಗಿದೆ ಎಂಬ ಗಂಭೀರ ಆರೋಪದ...

150 ಕೋಟಿ ಭಾರತೀಯರ ರಕ್ತದಲ್ಲೂ ಪ್ಲಾಸ್ಟಿಕ್ ಅಂಶ ಪತ್ತೆ ನಿಮ್ಮ ಜೀವ ಉಳಿಸಿಕೊಳ್ಳಲು ಈ 10 ಸೂತ್ರಗಳನ್ನು ಇಂದೇ ಪಾಲಿಸಿ

150 ಕೋಟಿ ಭಾರತೀಯರ ರಕ್ತದಲ್ಲೂ ಪ್ಲಾಸ್ಟಿಕ್ ಅಂಶ ಪತ್ತೆ ನಿಮ್ಮ ಜೀವ ಉಳಿಸಿಕೊಳ್ಳಲು ಈ 10 ಸೂತ್ರಗಳನ್ನು ಇಂದೇ ಪಾಲಿಸಿ

by Shwetha
April 24, 2026
0

ಭಾರತ ಇಂದು ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ರಾಷ್ಟ್ರ. ಆದರೆ ಇದೇ 150 ಕೋಟಿ ಜನಸಂಖ್ಯೆಯ ಮೇಲೆ ಇಂದು ಮೈಕ್ರೋಪ್ಲಾಸ್ಟಿಕ್ ಎಂಬ ಸದ್ದಿಲ್ಲದ ಕೊಲೆಗಾರ ದಾಳಿ...

ಇಂಡಿಯಾ ಒಕ್ಕೂಟದ ನಡೆಯಿಂದ ದಕ್ಷಿಣ ಭಾರತಕ್ಕೆ ಭಾರಿ ಅನ್ಯಾಯ: ಸಂಸದರ ಸ್ಥಾನ ಕುಸಿಯುವ ಆತಂಕ ವ್ಯಕ್ತಪಡಿಸಿದ ಡಾ.ಸಿ.ಎನ್.ಮಂಜುನಾಥ್

ಇಂಡಿಯಾ ಒಕ್ಕೂಟದ ನಡೆಯಿಂದ ದಕ್ಷಿಣ ಭಾರತಕ್ಕೆ ಭಾರಿ ಅನ್ಯಾಯ: ಸಂಸದರ ಸ್ಥಾನ ಕುಸಿಯುವ ಆತಂಕ ವ್ಯಕ್ತಪಡಿಸಿದ ಡಾ.ಸಿ.ಎನ್.ಮಂಜುನಾಥ್

by Shwetha
April 24, 2026
0

ಬೆಂಗಳೂರು: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರದ ವಿಚಾರದಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ ತೆಗೆದುಕೊಂಡ ನಿರ್ಧಾರದಿಂದಾಗಿ ದಕ್ಷಿಣ ಭಾರತದ ರಾಜ್ಯಗಳು ದೊಡ್ಡ ಮಟ್ಟದ ಹಿನ್ನಡೆ ಅನುಭವಿಸುವಂತಾಗಿದೆ...

ಮುಸ್ಲಿಮರು ಮತ್ತು ನಾವು ಯಾವತ್ತೂ ಸಹೋದರರು: ಅಲ್ಪಸಂಖ್ಯಾತರ ಬೆನ್ನಿಗೆ ಕಾಂಗ್ರೆಸ್ ಯಾವಾಗಲೂ ಇದೆ ಎಂದ ಗೃಹ ಸಚಿವ ಡಾ ಜಿ ಪರಮೇಶ್ವರ

ಈಗ ತಮಾಷೆಯನ್ನೂ ಮಾಡುವಂತಿಲ್ಲ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್ ತೀವ್ರ ಅಸಮಾಧಾನ

by Shwetha
April 24, 2026
0

ಬೆಂಗಳೂರು: ಕಬಡ್ಡಿ ಪಂದ್ಯಾವಳಿಯ ವೇಳೆ ಬೆಟ್ಟಿಂಗ್ ಕುರಿತು ನೀಡಿದ್ದ ಹೇಳಿಕೆ ಈಗ ಕಾನೂನು ಸಂಕಷ್ಟಕ್ಕೆ ತಿರುಗಿದ್ದು, ಈ ಬಗ್ಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು...

SSLC RESULT – ಟ್ವೀಟ್ ಎಲ್ಲಿ ಮಹಾಜ್ಞಾನಿ ಕಲಬುರಗಿ ಕೊನೆಯ ಸ್ಥಾನಕ್ಕೆ ಪ್ರಿಯಾಂಕ್ ಖರ್ಗೆ ಕಾಲೆಳೆದ ಬಿಜೆಪಿ

SSLC RESULT – ಟ್ವೀಟ್ ಎಲ್ಲಿ ಮಹಾಜ್ಞಾನಿ ಕಲಬುರಗಿ ಕೊನೆಯ ಸ್ಥಾನಕ್ಕೆ ಪ್ರಿಯಾಂಕ್ ಖರ್ಗೆ ಕಾಲೆಳೆದ ಬಿಜೆಪಿ

by Shwetha
April 24, 2026
0

ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗುತ್ತಿದ್ದಂತೆಯೇ ರಾಜ್ಯ ರಾಜಕಾರಣದಲ್ಲಿ ಹೊಸ ಸಮರ ಶುರುವಾಗಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳು ಕ್ರಮವಾಗಿ ಪ್ರಥಮ ಹಾಗೂ ದ್ವಿತೀಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram