ರಾಜ್ಯದಲ್ಲಿ ಇಬ್ಬರು ಸಿಎಂ ಇದ್ದಾರೆ : ಸಿದ್ದರಾಮಯ್ಯ
ಚಿತ್ರದುರ್ಗ : ರಾಜ್ಯದಲ್ಲಿ ಇಬ್ಬರು ಸಿಎಂ ಇದ್ದಾರೆ, ಅದರಲ್ಲಿ ವಿಜಯೇಂದ್ರ ಡಿ ಫ್ಯಾಕ್ಟರ್ ಸಿಎಂ ಆಗಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಶಿರಾದಲ್ಲಿ ಗೆಲುವು ನಮ್ಮದೇ ಎಂಬ ಬಿ.ವೈ ವಿಜಯೇಂದ್ರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.
ರಾಜ್ಯದಲ್ಲಿ ಇಬ್ಬರು ಮುಖ್ಯಮಂತ್ರಿಗಳಿದ್ದಾರೆ. ಅದರಲ್ಲಿ ವಿಜಯೇಂದ್ರ ಡಿ ಫ್ಯಾಕ್ಟರ್ ಮುಖ್ಯಮಂತ್ರಿ ಆಗಿದ್ದಾರೆ ಎಂದು ಹರಿಹಾಯ್ದರು.
ಇದೇ ವೇಳೆ ವಿದ್ಯುತ್ ದರ ಏರಿಕೆ ಬಗ್ಗೆ ಮಾತನಾಡಿ, ಕೊರೊನಾದಿಂದಾಗಿ ರಾಜ್ಯದ ಹಣಕಾಸು ಪರಿಸ್ಥಿತಿ ತೀವ್ರ ಹದಗೆಟ್ಟಿದೆ, ಸರ್ಕಾರದ ಬಳಿಯೇ ಸಂಬಳ ಕೊಡಲು ಹಣವಿಲ್ಲ.
ಇಂತಹ ಸಂದರ್ಭದಲ್ಲಿ ವಿದ್ಯುತ್ ದರ ಏರಿಕೆ ಮಾಡಿರುವುದು ಸರಿಯಿಲ್ಲ ಎಂದು ಅಭಿಪ್ರಾಯಪಟ್ಟರು.
ಇನ್ನು ಕೊರೊನಾ ವೈರಸ್ ಗೆ ಲಸಿಕೆ ಬರುವವರೆಗೂ ಗ್ರಾಮ ಪಂಚಾಯಿತಿ ಚುನಾವಣೆ ನಡೆಸುವುದಾಗಲಿ, ಶಾಲೆಗಳನ್ನು ಪುನರಾರಂಭ ಮಾಡುವುದಾಗಲಿ ಮಾಡಬಾರದು ಎಂದು ಒತ್ತಾಯಿಸಿದ ಸಿದ್ದರಾಮಯ್ಯ, ಎಲ್ಲಾ ವಿದ್ಯಾರ್ಥಿಗಳನ್ನು ಈ ವರ್ಷ ಪಾಸ್ ಮಾಡಬೇಕೆಂದು ಸಲಹೆ ನೀಡಿದರು.
ಮಾಜಿ ಸಚಿವ ವಿನಯ್ ಕುಲಕರ್ಣಿ ಸಿಬಿಐ ವಿಚಾರಣೆ ರಾಜಕೀಯ ಪ್ರೇರಿತ ಎಂದು ಹೇಳಿದ ಸಿದ್ದರಾಮಯ್ಯ, ವಿನಯ್ ಕುಲಕರ್ಣಿ ಜೊತೆ ಮಾತನಾಡಿದ್ದೇನೆ.
ನಾನು ಏನೂ ತಪ್ಪು ಮಾಡಿಲ್ಲ ಎಂದು ನನ್ನ ಬಳಿ ಹೇಳಿದ್ದಾನೆ. ಹೀಗಾಗಿ ವಿಚಾರಣೆ ಹಂತದಲ್ಲಿರುವಾಗ ಏನೂ ಹೇಳುವುದಿಲ್ಲ ಎಂದು ವಿನಯ್ ಕುಲಕರ್ಣಿ ಅವರನ್ನು ಸಿಬಿಐ ವಶಕ್ಕೆ ಪಡೆದ ಕುರಿತ ಪ್ರಶ್ನೆಗೆ ಉತ್ತರಿಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel










