ದೆಹಲಿಗೆ ಟ್ರಬಲ್ ಶೂಟರ್ : ಸಿದ್ದು ಸೇನೆಗೆ ಮೂಗುದಾರ ಹಾಕೋ ಪ್ಲಾನಾ..?
ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೆಹಲಿಗೆ ಭೇಟಿ ನೀಡಿದ್ದು, ಇಂದು ಪಕ್ಷದ ವರಿಷ್ಠರನ್ನು ಭೇಟಿ ಮಾಡಲಿದ್ದಾರೆ.
ಡಿಕೆಶಿ ನಿನ್ನೆ ದೆಹಲಿಗೆ ಭೇಟಿ ನೀಡಿದ್ದಾರೆ ಎಂದು ಮಾಹಿತಿ ಲಭ್ಯವಾಗಿದ್ದು, ಬೈ ಎಲೆಕ್ಷನ್ ನಡೆದ ಎರಡೇ ದಿನಕ್ಕೆ ಟ್ರಬಲ್ ಶೂಟರ್ ದೆಹಲಿಗೆ ಭೇಟಿ ನೀಡಿರುವುದು ಅಚ್ಚರಿ ಮೂಡಿಸಿದೆ.
ಸಿದ್ದು ಸೇನೆಗೆ ಮೂಗುದಾರ..?
ಹೌದು..! ಡಿಕೆಶಿ ದಿಢೀರ್ ದೆಹಲಿಗೆ ಭೇಟಿ ನೀಡಿರುವುದು ಸಿದ್ದು ಸೇನೆಗೆ ಮೂಗುದಾರ ಹಾಕುವ ಪ್ಲಾನಾ ಎಂಬ ಚರ್ಚೆ ರಾಜಕೀಯ ಪಡಸಾಲೆಯಲ್ಲಿ ನಡೆಯುತ್ತಿದೆ. ಯಾಕೆಂದರೇ ಟ್ರಬಲ್ ಶೂಟರ್ ವರಿಷ್ಠರಿಗೆ “ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗಬೇಕು ಎಂಬ ಹೇಳಿಕೆಗಳ ಬಗ್ಗೆ ದೂರು ನೀಡುವ ನಿರೀಕ್ಷೆ ಇದೆ.
ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕು.. ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಸಿದ್ದರಾಮಯ್ಯನವರೇ ಸಿಎಂ ಆಗ್ತಾರೆ ಎಂಬ ಸಿದ್ದರಾಮಯ್ಯನವರ ಬೆಂಬಲಿಗರ ಹೇಳಿಕೆಗಳು ಚುನಾವಣೆಯ ಹೊತ್ತಲ್ಲಿ ಪಕ್ಷಕ್ಕೆ ಮುಜುಗರ ಉಂಟು ಮಾಡಿದೆ.
ಹೇಡಿಗಳ ರಾಜಕೀಯ ಮಾಡುವುದು ಬಿಜೆಪಿಯ ಚಾಳಿ : ಕಾಂಗ್ರೆಸ್
ಇಂತಹ ಹೇಳಿಕೆಗಳಿಂದ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ, ಪಕ್ಷದಲ್ಲಿ ಸಮನ್ವಯತೆ ಇಲ್ಲ ಎಂದು ಬಿಂಬಿತವಾಗಿದೆ. ಇದು ಪಕ್ಷದೊಳಗೆ ಭಿನ್ನಾಭಿಪ್ರಾಯ ತೀವ್ರಗೊಳ್ಳುವುದಕ್ಕೂ ಕಾರಣ ಆಗಬಹುದು.
ಈ ಹಿನ್ನೆಲೆ ಸಿದ್ದರಾಮಯ್ಯ ಮತ್ತು ಬೆಂಬಲಿಗರಿಗೆ ಮುಂದಿನ ಸಿಎಂ ಬಗ್ಗೆ ಬಹಿರಂಗ ಹೇಳಿಕೆಗಳನ್ನು ನೀಡದಂತೆ ಸೂಚಿಸುವಂತೆ ಹೈಕಮಾಂಡ್ ಗೆ ಡಿಕೆಶಿ ಮನವಿ ಮಾಡುವ ಸಾಧ್ಯತೆಗಳಿವೆ.
ಮುಂದಿನ ಸಿಎಂ ಅಭ್ಯರ್ಥಿ ಯಾರು..?
ರಾಜ್ಯ ವಿಧಾನಸಭಾ ಚುನಾವಣೆಗೂ ಮುನ್ನವೇ ಕಾಂಗ್ರೆಸ್ ನಲ್ಲಿ ಮುಂದಿನ ಸಿಎಂ ಅಭ್ಯರ್ಥಿಯ ಬಗ್ಗೆ ಚರ್ಚೆಗಳು ಶುರುವಾಗಿವೆ.
ವಿನಯ್ ಕುಲಕರ್ಣಿ ಬಂಧನ ರಾಜಕೀಯ ಪ್ರೇರಿತವೇ..! ಕೈ,ಕಮಲ,ದಳ ನಾಯಕರು ಹೇಳಿದ್ದೇನು..!
ಸಿದ್ದರಾಮಯ್ಯ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಶಾಸಕರು ಮುಂದಿನ ಸಿಎಂ ಸಿದ್ದರಾಮಯ್ಯನವರೇ ಎನ್ನುತ್ತಿದ್ದರೇ, ಶಾಸಕಿ ಸೌಮ್ಯರೆಡ್ಡಿ ಮುಂದಿನ ಸಿಎಂ ಡಿ.ಕೆ.ಶಿವಕುಮಾರ್ ಅವರೇ ಎನ್ನುತ್ತಿದ್ದಾರೆ ಇದು ಪಕ್ಷಕ್ಕೆ ಭಾರಿ ಮುಜುಗರವನ್ನುಂಟು ಮಾಡಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel