ಸಿದ್ದರಾಮಯ್ಯಗೆ ವಿಪಕ್ಷ ನಾಯಕನಾಗಿರಲು ಯೋಗತ್ಯ ಇಲ್ಲ : ಈಶ್ವರಪ್ಪ
ಚಿತ್ರದುರ್ಗ : ಸಿದ್ದರಾಮಯ್ಯಗೆ ವಿರೋಧ ಪಕ್ಷ ನಾಯಕನಾಗಿರಲು ಯೋಗ್ಯತೆ ಇಲ್ಲ. ಅವರು ಅಯೋಗ್ಯರು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದಾರೆ.
ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿನಯ್ ಕುಲಕರ್ಣಿ ಬಂಧನ ರಾಜಕೀಯ ಪ್ರೇರಿತ ಎಂಬ ಸಿದ್ದರಾಮಯ್ಯ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದರು.
ವಿನಯ್ ಕುಲಕರ್ಣಿ ಬಂಧನ ಕುರಿತು ಕಾಂಗ್ರೆಸ್ ನವರು ಹಲವು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದರ ಹಿಂದೆ ರಾಜಕೀಯ ಉದ್ದೇಶವಿದೆ ಎನ್ನುತ್ತಿದ್ದಾರೆ.
ಈ ರೀತಿ ಹೇಳಿಕೆ ನೀಡುವುದು ಕಾಂಗ್ರೆಸ್ ನವರ ಹುಟ್ಟುಗುಣ. ಸಿದ್ದರಾಮಯ್ಯಗೆ ವಿರೋಧ ಪಕ್ಷ ನಾಯಕನಾಗಿರಲು ಯೋಗ್ಯತೆ ಇಲ್ಲ.
ಸುಳ್ಳು ಹೇಳುವ ಕಾಂಗ್ರೆಸ್ ಗೆ ಶ್ರೇಷ್ಠ ಪ್ರಶಸ್ತಿ ನೀಡಬೇಕಿದೆ : ಲಕ್ಷ್ಮಣ್ ಸವದಿ
ಅವರು ಅಯೋಗ್ಯರು ಎಂದು ಗುಡುಗಿದರು. ಇನ್ನು ರಾಜ್ಯದ ಜನತೆ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಕೂರಿಸಿದ್ದರು. ಆದರೂ ಅವರು ಸಣ್ಣತನ ಬಿಟ್ಟಿಲ್ಲ, ಸಿದ್ದರಾಮಯ್ಯರವರ ಯಾವ ಹೇಳಿಕೆಗೂ ಬೆಲೆಯಿಲ್ಲ ಸಿದ್ದರಾಮಯ್ಯ ವಿರುದ್ಧ ಈಶ್ವರಪ್ಪ ಕಿಡಿಕಾರಿದರು.
ಇನ್ನು ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸುತ್ತಿದೆ. ತನಿಖೆಗೆ ಸಂಬಂಧಿಸಿದಂತೆ ವಿನಯ್ ಕುಲಕರ್ಣಿಯವರ ವಿಚಾರಣೆ ನಡೆಯುತ್ತಿದೆ.
ಈ ಹಿಂದೆ ಕಾಂಗ್ರೆಸ್ ಅಧಿಕಾರದಲ್ಲಿದ್ದ ಸಂದರ್ಭದಲ್ಲೂ ಅವರ ಮೇಲೆ ರೈಡ್ ಗಳು ಆಗಿದ್ದವು. ತಪ್ಪು ಮಾಡಿದವರ ತನಿಖೆ ನಡೆಸುವುದು ತಪ್ಪಾ? ಎಂದು ಪ್ರಶ್ನಿಸಿದ್ದಾರೆ.
ನಾಚಿಕೆಯಾಗಬೇಕು ಇದೊಂದು ಸರ್ಕಾರ ಅಂತಾರೇನ್ರೀ : ರೇವಣ್ಣ ಕಿಡಿ
ಇದೇ ಲಬ್ ಜಿಹಾದ್ ಬಗ್ಗೆ ಮಾತನಾಡಿ, ದೇಶದಲ್ಲಿ ಲವ್ ಜಿಹಾದ್ ಹೆಸರಿನಲ್ಲಿ ಮದುವೆಯಾಗಿ ನಂತರ ಹೆಣ್ಣು ಮಕ್ಕಳನ್ನು ಬೀದಿಗೆ ತಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಲವ್ ಜಿಹಾದ್ ನಿಷೇಧ ಕಾಯ್ದೆ ತರಲು ಮುಂದಾಗಿದ್ದೇವೆ ಎಂದು ತಿಳಿಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel