ADVERTISEMENT
Tuesday, March 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಮೀನು ಹರಾಜು ವಿಚಾರವಾಗಿ ಮೀನುಗಾರರ ನಡುವೆ ಘರ್ಷಣೆ: ದೋಣಿ ಮೇಲೇರಿ ಲಾಠಿಚಾರ್ಜ್

Kariyappa N by Kariyappa N
November 8, 2020
in Newsbeat, Samagra karnataka, ರಾಜ್ಯ
udupi
Share on FacebookShare on TwitterShare on WhatsappShare on Telegram

ಉಡುಪಿ: ಜಿಲ್ಲೆಯ ಬೈಂದೂರು ಸಮೀಪದ ಕಿರಿಮಂಜೇಶ್ವರ ಗ್ರಾಮದ ಕೊಡೇರಿ ಕಿರು ಮೀನುಗಾರಿಕಾ ಬಂದರಿನಲ್ಲಿ ಮೀನು ಹರಾಜು ಸಂಬಂಧ ಉಪ್ಪುಂದ ಹಾಗೂ ಕೊಡೇರಿ ಮೀನುಗಾರರ ನಡುವೆ ಕೆಲಕಾಲದಿಂದ ಹೊಗೆಯಾಡುತ್ತಿದ್ದ ಅಸಮಾಧಾನ ಸ್ಫೋಟಗೊಂಡಿದೆ. ಈ ಅಸಮಧಾನ ಭಾರಿ ಘರ್ಷಣೆಗೆ ಕಾರಣವಾಗಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ ಘಟನೆ ನಡೆದಿದೆ.

lati charge
ಮೀನುಗಾರಿಕೆ ಇಲಾಖೆಯು ಕೊಡೇರಿ ಬಂದರಿನ ಮೀನು ಹರಾಜು ಪ್ರಾಂಗಣದಲ್ಲಿ ಮೀನು ಹರಾಜು ಮಾಡಲು ಉಪ್ಪುಂದ, ಕೊಡೇರಿ ಹಾಗೂ ಮರವಂತೆ ಭಾಗದ ಮೀನುಗಾರರಿಗೆ ಇತ್ತೀಚೆಗಷ್ಟೆ ತಾತ್ಕಾಲಿಕ ಅನುಮತಿ ನೀಡಿತ್ತು.
ಉಪ್ಪುಂದ ಭಾಗದ ನೂರಕ್ಕೂ ಹೆಚ್ಚು ದೋಣಿಗಳು ಶನಿವಾರ ಮಧ್ಯಾಹ್ನ ಮೀನುಗಾರಿಕೆ ನಡೆಸಿ, ಎಡಮಾವಿನ ಹೊಳೆಯ ಮೂಲಕ ಮೀನು ಮಾರಾಟ ಮಾಡಲು ಬಂದರಿನ ಪ್ರಾಂಗಣ ಪ್ರವೇಶ ಮಾಡಿವೆ. ಈ ವೇಳೆ ಕೊಡೇರಿಯ ಮೀನುಗಾರರು ಅಲ್ಲಿ ತಮಗೆ ಮೂಲಸೌಕರ್ಯ ಕಲ್ಪಿಸುವ ಮತ್ತು ಪ್ರಾಂಗಣ ಇರುವ ದಂಡೆಗೆ ಹೋಗಲು ನದಿಗೆ ಸೇತುವೆ ನಿರ್ಮಾಣ ಮಾಡಬೇಕು. ಅಲ್ಲಿಯವರೆಗೆ ಮೀನು ಹರಾಜಿಗೆ ಅವಕಾಶ ನೀಡುವುದಿಲ್ಲ ಎಂದು ನದಿಯಲ್ಲಿ ಉಪ್ಪುಂದದ ದೋಣಿಗಳು ಸಂಚರಿಸದಂತೆ ತಮ್ಮ ದೋಣಿಯನ್ನು ಅಡ್ಡ ಇರಿಸಿ ತಡೆಯೊಡ್ಡಿದರು.

Related posts

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

March 10, 2026
ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

March 10, 2026

fishers
ಕುಂದಾಪುರ ಎಎಸ್‍ಪಿ ಹರಿರಾಮ್ ಶಂಕರ ಅಗಮಿಸಿ, ಎರಡು ಭಾಗದ ಮೀನುಗಾರರ ನಡುವೆ ಮಾತುಕತೆ ನಡೆಸಿ ಪರಿಸ್ಥಿತಿ ತಿಳಿಗೊಳಿಸುವ ಪ್ರಯತ್ನ ಮಾಡಿದರು. ಆದರೆ, ತಮ್ಮ ಬೇಡಿಕೆ ಈಡೇರುವ ತನಕ ಹರಾಜು ಪ್ರಾಂಗಣ ಬಳಕೆಗೆ ಅವಕಾಶ ನೀಡುವುದಿಲ್ಲ ಎಂದು ಕೊಡೇರಿ ಮೀನುಗಾರರು ಪಟ್ಟುಹಿಡಿದರು.

ಮಾತುಕತೆ ವಿಫಲ, ಲಾಠಿಚಾರ್ಜ್
ಸುಮಾರು ನಾಲ್ಕು ತಾಸು ಉಪ್ಪುಂದದ ಮೀನುಗಾರರು ತಮ್ಮ ದೋಣಿಯಲ್ಲಿದ್ದ ಮೀನು ಖಾಲಿ ಮಾಡದೆ ದೋಣಿಗಳನ್ನು ನದಿಯಲ್ಲೇ ನಿಲ್ಲಿಸಿದ್ದರು. ಬಳಿಕ ತಹಶೀಲ್ದಾರ ಬಿ.ಪಿ. ಪೂಜಾರ್ ಭೇಟಿ ನೀಡಿ ಎರಡು ಭಾಗದ ಮೀನುಗಾರರೊಂದಿಗೆ ಮಾತುಕತೆ ನಡೆಸಿದರು.


ಆದರೆ ಮಾತುಕತೆ ಫಲ ನೀಡಲಿಲ್ಲ. ಮೀನು ಹರಾಜಿಗೆ ತಡೆಯೊಡ್ಡಿದ ಕಾರಣ ಉಪ್ಪುಂದದ ಕಡೆಯವರು ತಮ್ಮ ದೋಣಿಗಳನ್ನು ಕೊಡೇರಿ ಕಡೆಯ ದೋಣಿಗಳತ್ತ ನುಗ್ಗಿಸಿದರು. ಆಗ ಎರಡೂ ಕಡೆಯವರ ನಡುವೆ ಘರ್ಷಣೆ ನಡೆದು ನದಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಯಿತು. ಪೊಲೀಸರು ದೋಣಿ ಮೇಲೇರಿ ಲಾಠಿಬೀಸಿ ತಹಬಂದಿಗೆ ತರುವ ಪ್ರಯತ್ನ ನಡೆಸಿದರು.

ಕೊಡೇರಿ ಮೀನುಗಾರರ ವಾದ
ಬಂದರು ನಿರ್ಮಾಣ ಸಂದರ್ಭ ನೀಡಿದ ಸೇತುವೆ ಭರವಸೆ ಈಡೇರಿಲ್ಲ. ಸೇತುವೆ ನಿರ್ಮಿಸಬೇಕು, ಬಂದರು ಪ್ರದೇಶದಲ್ಲಿ ಎಲ್ಲ ಮೂಲ ಸೌಲಭ್ಯ ಕಲ್ಪಿಸಬೇಕು. ಅಲ್ಲಿಯ ತನಕ ಪ್ರಾಂಗಣದಲ್ಲಿ ಹರಾಜಿಗೆ ಅವಕಾಶ ನೀಡಬಾರದು ಎನ್ನುವುದು ಕೊಡೇರಿ ಜನರ ಪರವಾಗಿ ಅಲ್ಲಿನ ಟ್ರಾಲ್‍ಬೋಟ್ ಸಂಘದ ಅಧ್ಯಕ್ಷ ಶುಕ್ರದಾಸ್ ಖಾರ್ವಿ ವಾದಿಸುತ್ತಿದ್ದಾರೆ.

ತಮಗೆ ಹರಾಜಿಗೆ ಅನುಮತಿ ನೀಡಿದ್ದಾರೆ
ಬಂದರಿನಲ್ಲಿ ಮೀನು ಹರಾಜಿಗೆ ಸಂಬಂಧಿಸಿ ಕೊಡೇರಿ ಭಾಗದ ಮೀನುಗಾರರೊಂದಿಗೆ ಹಲವು ಸುತ್ತಿನ ಮಾತುಕತೆ ನಡೆಸಿದ್ದೇವೆ. ಅವರು ವಿಧಿಸಿದ್ದ ಷರತ್ತಿನಂತೆ ಮೀನುಗಾರಿಕೆ ಇಲಾಖೆಯಿಂದ ಷರತ್ತುಬದ್ಧ ತಾತ್ಕಾಲಿಕ ಲಿಖಿತ ಅನುಮತಿ ಪಡೆದಿದ್ದೇವೆ.
ಆದರೂ ಕೊಡೇರಿ ಭಾಗದವರು ಕೆಲವು ಬೇಡಿಕೆ ಮುಂದಿಟ್ಟು ಮೀನು ಹರಾಜಿಗೆ ತಡೆಯೊಡ್ಡುತ್ತಿದ್ದಾರೆ. ಬಂದರು ಕೊಡೇರಿಗೆ ಮಾತ್ರ ಸೀಮಿತವಲ್ಲ, ಬದಲಾಗಿ ಎಲ್ಲ ಮೀನುಗಾರರಿಗೂ ಮುಕ್ತವಾಗಿದೆ. ಮೂಲ ಸೌಕರ್ಯ, ಸೇತುವೆ ಬಗ್ಗೆ ನಾವೂ ಅವರೊಡನೆ ಸೇರಿ ಹೋರಾಡಲು ಸಿದ್ಧ ಎನ್ನುವುದು ಉಪ್ಪುಂದ ರಾಣಿಬಲೆ ಮೀನುಗಾರರ ಒಕ್ಕೂಟದ ಅಧ್ಯಕ್ಷ ವೆಂಕಟರಮಣ ಖಾರ್ವಿ ಅವರ ನಿಲುವು.


ಈ ನಡುವೆ, ಎರಡು ತಂಡಗಳ ಮೀನುಗಾರರ ಭಿನ್ನಾಭಿಪ್ರಾಯವನ್ನು ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಬೇಕು. ಆದರೆ ಯಾರೇ ಆದರೂ ಕಾನೂನು ಕೈಗೆತ್ತಿಕೊಂಡರೆ ಅದನ್ನು ನಿಭಾಯಿಸಲು ಪೊಲೀಸ್ ಇಲಾಖೆ ಸನ್ನದ್ಧವಾಗಿದೆ ಎಂದು ಹೆಚ್ಚುವರಿ ಎಎಸ್‍ಪಿ ಕುಮಾರಚಂದ್ರ ತಿಳಿಸಿದ್ದಾರೆ.
ಲಾಠಿಚಾರ್ಜ್ ಬಳಿಕವೂ ಬಂದರು ಪ್ರದೇಶದಲ್ಲಿ ಮತ್ತೆ ಘರ್ಷಣೆ ನಡೆದಿದೆ. ಕೆಲವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಉಭಯ ತಂಡಗಳ ದಾಂಧಲೆ ನಿಯಂತ್ರಿಸಲು ಮುಂದಾದ ಪೊಲೀಸರ ಮೇಲೆ ಕಲ್ಲು ತೂರಲಾಗಿದೆ. ಈ ಹಿನ್ನೆಲೆಯಲ್ಲಿ ಬಂದರಿನಲ್ಲಿ ಹೆಚ್ಚಿನ ಸಂಖ್ಯೆಯ ಪೊಲೀಸರನ್ನು ನಿಯೋಜಿಸಲಾಗಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: fishers galatekundapuralatichargenew fish yardUdupi
ShareTweetSendShare
Join us on:

Related Posts

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

by Shwetha
March 10, 2026
0

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಪರಿಣಾಮ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಒಂದೇ ದಿನದಲ್ಲಿ ಕಚ್ಚಾ ತೈಲದ ಬೆಲೆ ಸುಮಾರು 29% ಏರಿಕೆ ಕಂಡಿದ್ದು, ಜಾಗತಿಕ...

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

by Shwetha
March 10, 2026
0

ಇಸ್ರೇಲ್–ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷದ ಹಿನ್ನೆಲೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಭಾರತೀಯರ ಸುರಕ್ಷತೆ ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ. ಅರಬ್ ರಾಷ್ಟ್ರಗಳಲ್ಲಿ ವಾಸಿಸುತ್ತಿರುವ ಭಾರತೀಯರ...

ದಾವಣಗೆರೆ ದಕ್ಷಿಣ ಟಿಕೆಟ್ ದಂಗಲ್ : ಎಲ್ಲಿಂದಲೋ ಬಂದ ಜಮೀರ್ ಗೆ ದಾವಣಗೆರೆ ಬಗ್ಗೆ ಮಾತಾಡಲು ಹಕ್ಕಿಲ್ಲ ಸಚಿವ ಮಲ್ಲಿಕಾರ್ಜುನ್ ಆಕ್ರೋಶ

ದಾವಣಗೆರೆ ದಕ್ಷಿಣ ಟಿಕೆಟ್ ದಂಗಲ್ : ಎಲ್ಲಿಂದಲೋ ಬಂದ ಜಮೀರ್ ಗೆ ದಾವಣಗೆರೆ ಬಗ್ಗೆ ಮಾತಾಡಲು ಹಕ್ಕಿಲ್ಲ ಸಚಿವ ಮಲ್ಲಿಕಾರ್ಜುನ್ ಆಕ್ರೋಶ

by Shwetha
March 10, 2026
0

ಕರ್ನಾಟಕ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಅಧಿಕಾರ ಹಂಚಿಕೆ ಹಾಗೂ ನಾಯಕತ್ವದ ವಿಚಾರವಾಗಿ ನಡೆಯುತ್ತಿರುವ ಮುಸುಕಿನ ಗುದ್ದಾಟಗಳ ನಡುವೆಯೇ, ಇದೀಗ ನಾಯಕರ ನಡುವಿನ ಬಹಿರಂಗ ಕಚ್ಚಾಟ ತಾರಕಕ್ಕೇರಿದೆ. ಸಚಿವರು...

ಎಚ್ಚರಿಕೆ : ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ ನಡೆಸಿದರೆ ಕಠಿಣ ಜೈಲು ಶಿಕ್ಷೆ!

ಶಿಕ್ಷಣಕ್ಕೆ ಮೊದಲ ಆದ್ಯತೆ: ವರ್ಗಾವಣೆಗೊಂಡ ಶಿಕ್ಷಕರನ್ನು ಗಣತಿ ಕಾರ್ಯಗಳಿಗೆ ಬಳಸದಿರಲು ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಆದೇಶ

by Shwetha
March 10, 2026
0

ರಾಜ್ಯದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತರುವ ಹಾಗೂ ಮಕ್ಕಳ ಭವಿಷ್ಯವನ್ನು ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ದಿಟ್ಟ ಹೆಜ್ಜೆಯನ್ನಿಟ್ಟಿದೆ. 2024-25ನೇ ಸಾಲಿನಲ್ಲಿ ವರ್ಗಾವಣೆಗೊಂಡಿರುವ ಸರ್ಕಾರಿ...

ಮಾ.11ರಂದು ಫ್ರೀಡಂ ಪಾರ್ಕ್‌ನಲ್ಲಿ ವಿದ್ಯುತ್ ಗುತ್ತಿಗೆದಾರರ ಬೃಹತ್ ಪ್ರತಿಭಟನೆ

ಮಾ.11ರಂದು ಫ್ರೀಡಂ ಪಾರ್ಕ್‌ನಲ್ಲಿ ವಿದ್ಯುತ್ ಗುತ್ತಿಗೆದಾರರ ಬೃಹತ್ ಪ್ರತಿಭಟನೆ

by Shwetha
March 10, 2026
0

ಕರ್ನಾಟಕ ರಾಜ್ಯದ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಾರ್ಚ್ 11ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಇದರ ಭಾಗವಾಗಿ ಬೆಂಗಳೂರಿನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram