ಬೆಂಗಳೂರು: ಕೊರೊನಾ ವೈರಸ್ ಸೋಂಕು ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಸರ್ಕಾರ ಕರ್ನಾಟಕವನ್ನು ಲಾಕ್ ಡೌನ್ ಮಾಡಿದೆ. ಕೊರೊನಾ ಭೀಕರತೆಗೆ ರಾಜ್ಯವೇ ಸ್ತಬ್ಧವಾಗಿದೆ. ಅದರಲ್ಲೂ ಬೆಂಗಳೂರಿನಲ್ಲಿ ಹೋಟೆಲ್, ಮಾಲ್, ಕೆಫೆಗಳು ಮಾರ್ಚ್ 31ರವರೆಗೂ ಬಂದ್ ಆಗಿದ್ದು, ಯಾವುದೇ ಆಹಾರ ಸಿಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಮಧ್ಯೆ ಬಡವರಿಗಾಗಿ ರಾಜ್ಯ ಸರ್ಕಾರ ಇಂದಿರಾ ಕ್ಯಾಂಟೀನ್ನಲ್ಲಿ ಉಚಿತ ತಿಂಡಿ, ಊಟದ ವ್ಯವಸ್ಥೆ ಮಾಡಿದೆ. ಹಾಗಾಗಿ, ಇಂದು ಬೆಳಗ್ಗೆಯಿಂದಲೇ ಬೆಂಗಳೂರಿನ ಇಂದಿರಾ ಕ್ಯಾಂಟೀನುಗಳಿಗೆ ಬಂದವರಿಗೆ ಆಹಾರ ವಿತರಣೆ ಮಾಡಲಾಗ್ತಿದೆ.
ಭಾವಿ ಸಿಎಂ ಎಂಬ ಹಣೆಪಟ್ಟಿ ನನಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ -ನನಗೆ ಪಟ್ಟ ಬೇಡ ಜನರ ಪ್ರೀತಿ ಬೇಕು: ಭಾವಿ ಸಿಎಂ ಎಂಬ ಕೂಗಿಗೆ ಚಿತ್ರದುರ್ಗದಲ್ಲಿ ವಿಜಯೇಂದ್ರ ಖಡಕ್ ಪ್ರತಿಕ್ರಿಯೆ
ಚಿತ್ರದುರ್ಗ: ರಾಜ್ಯ ರಾಜಕಾರಣದಲ್ಲಿ ಮುಂದಿನ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಚರ್ಚೆಗಳು ಸದಾ ಸುದ್ದಿಯಲ್ಲಿರುತ್ತವೆ. ಆದರೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ನೀಡಿರುವ ಒಂದು ಹೇಳಿಕೆ...








