ಕೊರೊನಾ ಎಫೆಕ್ಟ್ ನಿಂದಾಗಿ ಇಡಿ ರಾಜ್ಯವೇ ಸ್ತಬ್ದವಾಗಿದೆ. ಇಂದಿನಿಂದ ರಾಜ್ಯ ಲಾಕ್ ಡೌನ್ ಆಗಿದೆ. ಬಡವರಿಗಾಗಿ ಇಂದಿರಾ ಕ್ಯಾಂಟಿನಲ್ಲಿ ಉಚಿತ ಆಹಾರ ನೀಡಲಾಗುವುದ ಎಂದು ಸಿ.ಎಂ ಯಡಿಯೂರಪ್ಪ ಘೋಷಣೆ ಮಾಡಿದ್ದರು. ಇದೀಗ ಇಂದಿರಾ ಕ್ಯಾಂಟಿನ್ ಬಳಿ ಜನ ಹೆಚ್ಚು ಸೇರುತ್ತಿದ್ದಾರೆ ಎನ್ನುವ ಕಾರಣಕ್ಕೆ ಇಂದಿರಾ ಕ್ಯಾಂಟಿನ್ ಸಹ ಬಂದ್ ಮಾಡಲಾಗಿದೆ. ಈ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ , ಜನ ಹೆಚ್ಚು ಸೇರುತ್ತಿರುವ ಕಾರಣಕ್ಕೆ ಇಂದಿರಾ ಕ್ಯಾಂಟಿನ್ ಬಂದ್ ಮಾಡಲಾಗಿದೆ. ಮಾರ್ಚ್ 31 ರವರೆಗೂ ಮನೆಯಿಂದ ಜನ ಹೊರ ಬರಬಾರದು. ಮನೆಯಿಂದ ಹೊರ ಬಂದರೆ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಾರೆ. ಪೊಲೀಸರು ಕ್ರಮ ತೆಗೆದುಕೊಂಡ ನಂತರ ನನ್ನ ದೋಷಿಸಬೇಡಿ.
ಇನ್ನೂ ದಿನಪತ್ರಿಕೆ, ಹಾಲು, ಹಣ್ಣು, ಔಷಧಿಗಳಿಗೆ ಪೊಲೀಸರು ಅಡ್ಡಿ ಮಾಡುತ್ತಿದ್ದಾರೆ ಎಂಬ ಆರೋಪ ಇದೆ. ಅಗತ್ಯ ವಸ್ತುಗಳನ್ನು ಪಡೆಯಲು ಅಡ್ಡಿ ಮಾಡಬೇಡಿ ಎಂದು ಪೊಲೀಸರಿಗೆ ಸೂಚನೆ ನೀಡಲಾಗಿದೆ. ಅನಗತ್ಯವಾಗಿ ಹೊರ ಬಂದರೆ ಮಾತ್ರ ಕ್ರಮ ತೆಗೆದುಕೊಳ್ಳುತ್ತಾರೆ.
ರಾಜ್ಯದ ರೈತರಿಗೆ ಗುಡ್ ನ್ಯೂಸ್ ಹಾಗೂ ರಸಗೊಬ್ಬರ ಮಾಫಿಯಾಗೆ ಬಿಗ್ ಶಾಕ್: ಇನ್ಮುಂದೆ ಗೊಬ್ಬರ ಖರೀದಿಗೆ ಫ್ರೂಟ್ಸ್ ಐಡಿ ಕಡ್ಡಾಯ
ರಾಜ್ಯದ ಅನ್ನದಾತರಿಗೆ ಮುಂಗಾರು ಹಂಗಾಮಿನ ಸಮಯದಲ್ಲಿ ಎದುರಾಗುತ್ತಿದ್ದ ಬಹುದೊಡ್ಡ ಸಮಸ್ಯೆಗೆ ಮುಕ್ತಿ ಹಾಡಲು ರಾಜ್ಯ ಸರ್ಕಾರ ಮುಂದಾಗಿದೆ. ರೈತರಿಗೆ ಸಕಾಲದಲ್ಲಿ ರಸಗೊಬ್ಬರ ತಲುಪಿಸಲು ಮತ್ತು ಮಾರುಕಟ್ಟೆಯಲ್ಲಿ ಉದ್ದೇಶಪೂರ್ವಕವಾಗಿ...








