ಕೊರೊನಾ ಎಫೆಕ್ಟ್ ನಿಂದಾಗಿ ಇಡಿ ರಾಜ್ಯವೇ ಸ್ತಬ್ದವಾಗಿದೆ. ಇಂದಿನಿಂದ ರಾಜ್ಯ ಲಾಕ್ ಡೌನ್ ಆಗಿದೆ. ಬಡವರಿಗಾಗಿ ಇಂದಿರಾ ಕ್ಯಾಂಟಿನಲ್ಲಿ ಉಚಿತ ಆಹಾರ ನೀಡಲಾಗುವುದ ಎಂದು ಸಿ.ಎಂ ಯಡಿಯೂರಪ್ಪ ಘೋಷಣೆ ಮಾಡಿದ್ದರು. ಇದೀಗ ಇಂದಿರಾ ಕ್ಯಾಂಟಿನ್ ಬಳಿ ಜನ ಹೆಚ್ಚು ಸೇರುತ್ತಿದ್ದಾರೆ ಎನ್ನುವ ಕಾರಣಕ್ಕೆ ಇಂದಿರಾ ಕ್ಯಾಂಟಿನ್ ಸಹ ಬಂದ್ ಮಾಡಲಾಗಿದೆ. ಈ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ , ಜನ ಹೆಚ್ಚು ಸೇರುತ್ತಿರುವ ಕಾರಣಕ್ಕೆ ಇಂದಿರಾ ಕ್ಯಾಂಟಿನ್ ಬಂದ್ ಮಾಡಲಾಗಿದೆ. ಮಾರ್ಚ್ 31 ರವರೆಗೂ ಮನೆಯಿಂದ ಜನ ಹೊರ ಬರಬಾರದು. ಮನೆಯಿಂದ ಹೊರ ಬಂದರೆ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಾರೆ. ಪೊಲೀಸರು ಕ್ರಮ ತೆಗೆದುಕೊಂಡ ನಂತರ ನನ್ನ ದೋಷಿಸಬೇಡಿ.
ಇನ್ನೂ ದಿನಪತ್ರಿಕೆ, ಹಾಲು, ಹಣ್ಣು, ಔಷಧಿಗಳಿಗೆ ಪೊಲೀಸರು ಅಡ್ಡಿ ಮಾಡುತ್ತಿದ್ದಾರೆ ಎಂಬ ಆರೋಪ ಇದೆ. ಅಗತ್ಯ ವಸ್ತುಗಳನ್ನು ಪಡೆಯಲು ಅಡ್ಡಿ ಮಾಡಬೇಡಿ ಎಂದು ಪೊಲೀಸರಿಗೆ ಸೂಚನೆ ನೀಡಲಾಗಿದೆ. ಅನಗತ್ಯವಾಗಿ ಹೊರ ಬಂದರೆ ಮಾತ್ರ ಕ್ರಮ ತೆಗೆದುಕೊಳ್ಳುತ್ತಾರೆ.
ಭಾವಿ ಸಿಎಂ ಎಂಬ ಹಣೆಪಟ್ಟಿ ನನಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ -ನನಗೆ ಪಟ್ಟ ಬೇಡ ಜನರ ಪ್ರೀತಿ ಬೇಕು: ಭಾವಿ ಸಿಎಂ ಎಂಬ ಕೂಗಿಗೆ ಚಿತ್ರದುರ್ಗದಲ್ಲಿ ವಿಜಯೇಂದ್ರ ಖಡಕ್ ಪ್ರತಿಕ್ರಿಯೆ
ಚಿತ್ರದುರ್ಗ: ರಾಜ್ಯ ರಾಜಕಾರಣದಲ್ಲಿ ಮುಂದಿನ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಚರ್ಚೆಗಳು ಸದಾ ಸುದ್ದಿಯಲ್ಲಿರುತ್ತವೆ. ಆದರೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ನೀಡಿರುವ ಒಂದು ಹೇಳಿಕೆ...








