ADVERTISEMENT
Monday, March 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಪುರಸಭೆ ಮಹಿಳಾ ಸದಸ್ಯರನ್ನು ಎಳೆದಾಡಿದ್ರಾ ಬಿಜೆಪಿ ಎಂಎಲ್‍ಎ ಸಿದ್ದು ಸವದಿ..!

Kariyappa N by Kariyappa N
November 11, 2020
in Newsbeat, Politics, Samagra karnataka, ರಾಜ್ಯ
mla halle
Share on FacebookShare on TwitterShare on WhatsappShare on Telegram

ಬಾಗಲಕೋಟೆ: ಬಾಗಲಕೋಟೆ ಪುರಸಭೆಯ ಅಧ್ಯಕ್ಷ ಸ್ಥಾನ ಚುನಾವಣೆ ವೇಳೆ ತೆರೆದಾಳ ಬಿಜೆಪಿ ಶಾಸಕ ಸಿದ್ದು ಸವದಿ ಮಹಿಳಾ ಸದಸ್ಯೆಯೊಬ್ಬರನ್ನು ಎಳೆದಾಡಿ ಅಸಭ್ಯ ವರ್ತನೆ ತೋರಿದ ಆರೋಪ ಕೇಳಿ ಬಂದಿದೆ.
ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಪುರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಿತ್ತು. ಈ ವೇಳೆ ಅಧ್ಯಕ್ಷೆ ಸ್ಥಾನದ ಆಕಾಂಕ್ಷಿ ಸವಿತಾ ಹುರಕಡ್ಲಿ ಅವರನ್ನು ಶಾಸಕ ಸಿದ್ದು ಸವದಿ ಎಳೆದಾಡಿದ್ದು, ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಬಿಜೆಪಿ ಸದಸ್ಯೆ ಸವಿತಾ ಹುರಕಡ್ಲಿ ಕಾಂಗ್ರೆಸ್ ಗೆ ಬೆಂಬಲಿಸಲು ಮುಂದಾದಾಗ ಶಾಸಕ ಸಿದ್ದು ಸವದಿ, ಅವರನ್ನು ತಳ್ಳಾಡಿ ಅಸಭ್ಯ ವರ್ತನೆ ತೋರಿದ್ದಾರೆಂದು ಹೇಳಲಾಗುತ್ತಿದೆ. ನೂಕಾಟದ ಮಧ್ಯೆ ಮಹಿಳಾ ಸದಸ್ಯೆ ಕೆಳಕ್ಕೆ ಬಿದ್ದಿದ್ದು, ಶಾಸಕರ ಈ ವರ್ತನೆಗೆ ಆಕ್ರೋಶ ವ್ಯಕ್ತವಾಗಿದೆ.

savadi siddu
ಈ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿದ್ದು ಸವದಿ, ಮಹಿಳೆಯರ ಬಗ್ಗೆ ಗೌರವವಿದೆ. ಮಹಿಳಾ ಸದಸ್ಯರನ್ನು ಎಳೆದಾಡಿ, ಅಸಭ್ಯ ವರ್ತನೆ ನಡೆಸಿಲ್ಲ. ಬಹುಮತವಿರುವ ಬಿಜೆಪಿ ಸದಸ್ಯರು ನಮ್ಮವರು, ವಿನಾಕಾರಣ ಅವರಿಗೆ ಆಮಿಷವೊಡ್ಡಿ ಕಿಡ್ನಾಪ್ ಮಾಡುವ ನೀಚ ರಾಜಕಾರಣವನ್ನು ಕಾಂಗ್ರೆಸ್ ನಡೆಸುತ್ತಿದೆ. ಹಕ್ಕು ಮಂಡನೆಗೆ ಅವಕಾಶ ನೀಡಿಲ್ಲವೆಂದು ಮಾಜಿ ಸಚಿವೆ ಉಮಾಶ್ರೀ ನೀಡಿರುವ ಹೇಳಿಕೆ ಶುದ್ಧ ಸುಳ್ಳು. ಅಂತಹ ಕೀಳುಮಟ್ಟದ ರಾಜಕೀಯ ನಡೆಸುವ ಸಂಸ್ಕøತಿ ಬಿಜೆಪಿಯಲ್ಲಿ ಇಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.
ಮಹಾಲಿಂಗಪುರ ಪುರಸಭೆಯಲ್ಲಿ ಬಹುಮತವಿದ್ದರೂ ಕಾಂಗ್ರೆಸ್ ವಾಮಮಾರ್ಗದಿಂದ ಪುರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಪಡೆಯಬೇಕೆಂಬ ಹುನ್ನಾರ ನಡೆಸಿರುವುದು ಜನತೆಗೆ ಅರಿವಾಗಿದೆ. ರಾತ್ರೋರಾತ್ರಿ ಸದಸ್ಯರನ್ನು ಕಿಡ್ನಾಪ್ ಮಾಡಿದ್ದಲ್ಲದೆ, ಉಮಾಶ್ರೀಯವರೇ ಮಹಿಳೆಯರ ಮೇಲೆ ಅಗೌರವ ತರುವ ರೀತಿಯಲ್ಲಿ ವರ್ತನೆ ನಡೆಸಿದ್ದಾರೆಂದು ಸವದಿ ಆರೋಪಿಸಿದ್ದಾರೆ.

Related posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (30-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

March 30, 2026
ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

March 29, 2026

ಬಿಜೆಪಿ ನಾಯಕರಿಗೆ ನಿಯಂತ್ರಣವೇ ಇಲ್ಲದಂತಾಗಿದೆ: ಡಿ.ಕೆ ಶಿವಕುಮಾರ್
ರಾಜ್ಯದಲ್ಲಿ ಬಿಜೆಪಿ ನಾಯಕರಿಗೆ ಯಾರ ನಿಯಂತ್ರಣವೂ ಇಲ್ಲದಂತಾಗಿದ್ದು, ತಾವು ಏನು ಮಾಡಿದರೂ ನಡೆಯುತ್ತದೆ ಎಂಬ ಮನಸ್ಥಿತಿಗೆ ಬಂದಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಟೀಕಿಸಿದ್ದಾರೆ.


ತೇರದಾಳ ಶಾಸಕ ಸಿದ್ದು ಸವದಿ ಹಾಗೂ ಅವರ ಬೆಂಬಲಿಗರು ಪುರಸಭೆ ಕಾಂಗ್ರೆಸ್ ಸದಸ್ಯೆ ಸವಿತಾ ಹುರಕಡ್ಲಿ ಅವರ ಮೇಲೆ ಹಲ್ಲೆ ನಡೆಸಿರುವ ವಿಚಾರವಾಗಿ ಮಾತನಾಡಿರುವ ಡಿಕೆಶಿ, ‘ಇದು ಬಿಜೆಪಿಯ ಸಂಸ್ಕøತಿ. ಬಿಜೆಪಿ ನಾಯಕರು ಯಾರಿಗೆ ಏನು ಬೇಕಾದರೂ ಮಾಡಬಹುದು ಎಂಬ ಹವ್ಯಾಸ ಹಾಗೂ ಅಭ್ಯಾಸ ಬೆಳೆಯುತ್ತಿದೆ. ಬಿಜೆಪಿಯ ಯಾವುದೇ ಶಾಸಕರು, ನಾಯಕರಿಗೆ ನಿಯಂತ್ರಣವೇ ಇಲ್ಲದಂತಾಗಿದೆ. ಕಾಪೆರ್Çರೇಟರ್ ನಿಂದ ಕೌನ್ಸಲರ್ ವರೆಗೂ ಎಲ್ಲೆಡೆ ಇಂತಹ ಘಟನೆ ನಡೆಯುತ್ತಿದೆ. ಬೇರೆ ಸಮಯದಲ್ಲಿ ಪೆÇಲೀಸರು ಸುಮೋಟೋ ಪ್ರಕರಣ ದಾಖಲಿಸುತ್ತಾರೆ. ಈ ಘಟನೆ ಪೆÇಲೀಸರ ಸಮ್ಮುಖದಲ್ಲೇ ಹೆಣ್ಣು ಮಕ್ಕಳ ಮೇಲೆ ಹಲ್ಲೆ ನಡೆದರೂ ಯಾವುದೇ ಕ್ರಮ ಕೈಗೊಂಡಿಲ್ಲ.

ತಪ್ಪಿತಸ್ಥರ ವಿರುದ್ಧ ಕ್ರಮ 
ಮಹಾಲಿಂಗಪುರ ಪುರಸಭೆಯಲ್ಲಿ ನಡೆದ ಗಲಾಟೆ ಸಂಬಂಧ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.
ಇಲ್ಲಿಯವರೆಗೂ ಯಾರೂ ದೂರು ನೀಡಿಲ್ಲ. ಮಹಾಲಿಂಗಪುರ ಪೆÇಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ದೂರು ದಾಖಲಾಗಿದೆ. ಪರಿಸ್ಥಿತಿ ಕೈ ಮೀರಿದಾಗ ಲಾಠಿ ಚಾರ್ಜ್ ಮಾಡಲಾಗಿದೆ ಎಂದು ಬಾಗಲಕೋಟೆ ಎಸ್ಪಿ ಲೋಕೇಶ್ ಪ್ರತಿಕ್ರಿಯೆ ನೀಡಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: attack lady corporatorbagalkotebjp mlamahalingapurasiddu savadi
ShareTweetSendShare
Join us on:

Related Posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (30-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 30, 2026
0

ದಿನ ಭವಿಷ್ಯ: 30-03-2026 1. ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹದ ದಿನವಾಗಿದೆ. ನಿಮ್ಮ ದೈನಂದಿನ ಕೆಲಸಗಳಲ್ಲಿ ಚುರುಕುತನ ಇರುತ್ತದೆ. ಉದ್ಯೋಗ ಮತ್ತು ಹಣಕಾಸು: ಕಚೇರಿಯಲ್ಲಿ...

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

by Shwetha
March 29, 2026
0

ರಾಜ್ಯ ಸರ್ಕಾರಿ ಉದ್ಯೋಗವನ್ನು ಪಡೆಯಬೇಕು ಹಾಗೂ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂಬ ಕನಸು ಹೊತ್ತಿರುವ ನಾಡಿನ ಅಸಂಖ್ಯಾತ ಉದ್ಯೋಗಾಕಾಂಕ್ಷಿಗಳಿಗೆ ಹಾಗೂ ಅನುಭವಿ ವೃತ್ತಿಪರರಿಗೆ ಕರ್ನಾಟಕ ರಾಜ್ಯ ಕಂದಾಯ...

ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

by Shwetha
March 29, 2026
0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಾಂಗ ನೀತಿ ಹಾಗೂ ಇಸ್ರೇಲ್ ಪ್ರವಾಸದ ಕುರಿತು ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್...

ಪರೀಕ್ಷೆ ನಡೆಯುತ್ತಿರುವಾಗಲೇ ಎಸ್ಎಸ್ಎಲ್ಸಿ ಅಂಕ 525ಕ್ಕೆ ಇಳಿಕೆ: ಮಕ್ಕಳ ಭವಿಷ್ಯದ ಜೊತೆ ಸರ್ಕಾರದ ಕ್ರೂರ ಚೆಲ್ಲಾಟ –  ಸುರೇಶ್ ಕುಮಾರ್

ಪರೀಕ್ಷೆ ನಡೆಯುತ್ತಿರುವಾಗಲೇ ಎಸ್ಎಸ್ಎಲ್ಸಿ ಅಂಕ 525ಕ್ಕೆ ಇಳಿಕೆ: ಮಕ್ಕಳ ಭವಿಷ್ಯದ ಜೊತೆ ಸರ್ಕಾರದ ಕ್ರೂರ ಚೆಲ್ಲಾಟ – ಸುರೇಶ್ ಕುಮಾರ್

by Shwetha
March 29, 2026
0

ಬೆಂಗಳೂರು: ರಾಜ್ಯದಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳು ಅತ್ಯಂತ ಆತಂಕ ಹಾಗೂ ಶ್ರದ್ಧೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಬರೆಯುತ್ತಿರುವಾಗಲೇ ರಾಜ್ಯ ಸರ್ಕಾರ ಮತ್ತು ಶಿಕ್ಷಣ ಇಲಾಖೆ ತೆಗೆದುಕೊಂಡಿರುವ ತರಾತುರಿಯ ದಿಢೀರ್...

ಪರಮಾತ್ಮ ಬಂದ್ರೂ ಹಿಂದೆ ಸರಿಯಲ್ಲ ಎಂದಿದ್ದ ಸಾದಿಕ್ ಪೈಲ್ವಾನ್ ಬಂಡಾಯ ಕೊನೆಗೂ ಸುಖಾಂತ್ಯ  : ಚುನಾವಣಾ ಆಯೋಗ ಮೈಕ್‌ ಚಿಹ್ನೆ ಕೊಟ್ರು ಕಾಂಗ್ರೆಸ್ ಅಭ್ಯರ್ಥಿಗೆ ಪೈಲ್ವಾನ್ ಬೆಂಬಲ‌ ಶುರು!

ಪರಮಾತ್ಮ ಬಂದ್ರೂ ಹಿಂದೆ ಸರಿಯಲ್ಲ ಎಂದಿದ್ದ ಸಾದಿಕ್ ಪೈಲ್ವಾನ್ ಬಂಡಾಯ ಕೊನೆಗೂ ಸುಖಾಂತ್ಯ : ಚುನಾವಣಾ ಆಯೋಗ ಮೈಕ್‌ ಚಿಹ್ನೆ ಕೊಟ್ರು ಕಾಂಗ್ರೆಸ್ ಅಭ್ಯರ್ಥಿಗೆ ಪೈಲ್ವಾನ್ ಬೆಂಬಲ‌ ಶುರು!

by Shwetha
March 29, 2026
0

ಕಣದಿಂದ ಹಿಂದೆ ಸರಿಯುವಂತೆ ಹೇಳಲು ಸಾಕ್ಷಾತ್ ಪರಮಾತ್ಮನೇ ಧರೆಗಿಳಿದು ಬಂದರೂ ನಾನು ಸ್ಪರ್ಧೆಯಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಗುಡುಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದ ಬಂಡಾಯ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram