ADVERTISEMENT
Saturday, August 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಪುರಸಭೆ ಮಹಿಳಾ ಸದಸ್ಯರನ್ನು ಎಳೆದಾಡಿದ್ರಾ ಬಿಜೆಪಿ ಎಂಎಲ್‍ಎ ಸಿದ್ದು ಸವದಿ..!

Kariyappa N by Kariyappa N
November 11, 2020
in Newsbeat, Politics, Samagra karnataka, ರಾಜ್ಯ
mla halle
Share on FacebookShare on TwitterShare on WhatsappShare on Telegram

ಬಾಗಲಕೋಟೆ: ಬಾಗಲಕೋಟೆ ಪುರಸಭೆಯ ಅಧ್ಯಕ್ಷ ಸ್ಥಾನ ಚುನಾವಣೆ ವೇಳೆ ತೆರೆದಾಳ ಬಿಜೆಪಿ ಶಾಸಕ ಸಿದ್ದು ಸವದಿ ಮಹಿಳಾ ಸದಸ್ಯೆಯೊಬ್ಬರನ್ನು ಎಳೆದಾಡಿ ಅಸಭ್ಯ ವರ್ತನೆ ತೋರಿದ ಆರೋಪ ಕೇಳಿ ಬಂದಿದೆ.
ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಪುರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಿತ್ತು. ಈ ವೇಳೆ ಅಧ್ಯಕ್ಷೆ ಸ್ಥಾನದ ಆಕಾಂಕ್ಷಿ ಸವಿತಾ ಹುರಕಡ್ಲಿ ಅವರನ್ನು ಶಾಸಕ ಸಿದ್ದು ಸವದಿ ಎಳೆದಾಡಿದ್ದು, ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಬಿಜೆಪಿ ಸದಸ್ಯೆ ಸವಿತಾ ಹುರಕಡ್ಲಿ ಕಾಂಗ್ರೆಸ್ ಗೆ ಬೆಂಬಲಿಸಲು ಮುಂದಾದಾಗ ಶಾಸಕ ಸಿದ್ದು ಸವದಿ, ಅವರನ್ನು ತಳ್ಳಾಡಿ ಅಸಭ್ಯ ವರ್ತನೆ ತೋರಿದ್ದಾರೆಂದು ಹೇಳಲಾಗುತ್ತಿದೆ. ನೂಕಾಟದ ಮಧ್ಯೆ ಮಹಿಳಾ ಸದಸ್ಯೆ ಕೆಳಕ್ಕೆ ಬಿದ್ದಿದ್ದು, ಶಾಸಕರ ಈ ವರ್ತನೆಗೆ ಆಕ್ರೋಶ ವ್ಯಕ್ತವಾಗಿದೆ.

savadi siddu
ಈ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿದ್ದು ಸವದಿ, ಮಹಿಳೆಯರ ಬಗ್ಗೆ ಗೌರವವಿದೆ. ಮಹಿಳಾ ಸದಸ್ಯರನ್ನು ಎಳೆದಾಡಿ, ಅಸಭ್ಯ ವರ್ತನೆ ನಡೆಸಿಲ್ಲ. ಬಹುಮತವಿರುವ ಬಿಜೆಪಿ ಸದಸ್ಯರು ನಮ್ಮವರು, ವಿನಾಕಾರಣ ಅವರಿಗೆ ಆಮಿಷವೊಡ್ಡಿ ಕಿಡ್ನಾಪ್ ಮಾಡುವ ನೀಚ ರಾಜಕಾರಣವನ್ನು ಕಾಂಗ್ರೆಸ್ ನಡೆಸುತ್ತಿದೆ. ಹಕ್ಕು ಮಂಡನೆಗೆ ಅವಕಾಶ ನೀಡಿಲ್ಲವೆಂದು ಮಾಜಿ ಸಚಿವೆ ಉಮಾಶ್ರೀ ನೀಡಿರುವ ಹೇಳಿಕೆ ಶುದ್ಧ ಸುಳ್ಳು. ಅಂತಹ ಕೀಳುಮಟ್ಟದ ರಾಜಕೀಯ ನಡೆಸುವ ಸಂಸ್ಕøತಿ ಬಿಜೆಪಿಯಲ್ಲಿ ಇಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.
ಮಹಾಲಿಂಗಪುರ ಪುರಸಭೆಯಲ್ಲಿ ಬಹುಮತವಿದ್ದರೂ ಕಾಂಗ್ರೆಸ್ ವಾಮಮಾರ್ಗದಿಂದ ಪುರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಪಡೆಯಬೇಕೆಂಬ ಹುನ್ನಾರ ನಡೆಸಿರುವುದು ಜನತೆಗೆ ಅರಿವಾಗಿದೆ. ರಾತ್ರೋರಾತ್ರಿ ಸದಸ್ಯರನ್ನು ಕಿಡ್ನಾಪ್ ಮಾಡಿದ್ದಲ್ಲದೆ, ಉಮಾಶ್ರೀಯವರೇ ಮಹಿಳೆಯರ ಮೇಲೆ ಅಗೌರವ ತರುವ ರೀತಿಯಲ್ಲಿ ವರ್ತನೆ ನಡೆಸಿದ್ದಾರೆಂದು ಸವದಿ ಆರೋಪಿಸಿದ್ದಾರೆ.

Related posts

swiggy-99-store-affordable-food-delivery-karnataka-news

49 ರೂ.ಗೆ ಊಟ, ಜೊತೆಗೆ ಫ್ರೀ ಡೆಲಿವರಿ: ಆನ್‌ಲೈನ್ ಫುಡ್ ಆರ್ಡರ್ ಟ್ರೆಂಡ್ ಬದಲಿಸಿದ ಸ್ವಿಗ್ಗಿ ’99 ಸ್ಟೋರ್’!

August 14, 2026
shravana-sampath-shukravara-pooja-vidhana

ಶ್ರಾವಣ ಶುಕ್ರವಾರ ಮಹಾಲಕ್ಷ್ಮಿ ಪೂಜೆ: ಸಂಪತ್ ಗೌರಿ ವ್ರತ ಆಚರಿಸುವುದು ಹೇಗೆ? ಇಲ್ಲಿದೆ ಪೂಜಾ ವಿಧಿ ಮತ್ತು ಕಥೆ

August 14, 2026

ಬಿಜೆಪಿ ನಾಯಕರಿಗೆ ನಿಯಂತ್ರಣವೇ ಇಲ್ಲದಂತಾಗಿದೆ: ಡಿ.ಕೆ ಶಿವಕುಮಾರ್
ರಾಜ್ಯದಲ್ಲಿ ಬಿಜೆಪಿ ನಾಯಕರಿಗೆ ಯಾರ ನಿಯಂತ್ರಣವೂ ಇಲ್ಲದಂತಾಗಿದ್ದು, ತಾವು ಏನು ಮಾಡಿದರೂ ನಡೆಯುತ್ತದೆ ಎಂಬ ಮನಸ್ಥಿತಿಗೆ ಬಂದಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಟೀಕಿಸಿದ್ದಾರೆ.


ತೇರದಾಳ ಶಾಸಕ ಸಿದ್ದು ಸವದಿ ಹಾಗೂ ಅವರ ಬೆಂಬಲಿಗರು ಪುರಸಭೆ ಕಾಂಗ್ರೆಸ್ ಸದಸ್ಯೆ ಸವಿತಾ ಹುರಕಡ್ಲಿ ಅವರ ಮೇಲೆ ಹಲ್ಲೆ ನಡೆಸಿರುವ ವಿಚಾರವಾಗಿ ಮಾತನಾಡಿರುವ ಡಿಕೆಶಿ, ‘ಇದು ಬಿಜೆಪಿಯ ಸಂಸ್ಕøತಿ. ಬಿಜೆಪಿ ನಾಯಕರು ಯಾರಿಗೆ ಏನು ಬೇಕಾದರೂ ಮಾಡಬಹುದು ಎಂಬ ಹವ್ಯಾಸ ಹಾಗೂ ಅಭ್ಯಾಸ ಬೆಳೆಯುತ್ತಿದೆ. ಬಿಜೆಪಿಯ ಯಾವುದೇ ಶಾಸಕರು, ನಾಯಕರಿಗೆ ನಿಯಂತ್ರಣವೇ ಇಲ್ಲದಂತಾಗಿದೆ. ಕಾಪೆರ್Çರೇಟರ್ ನಿಂದ ಕೌನ್ಸಲರ್ ವರೆಗೂ ಎಲ್ಲೆಡೆ ಇಂತಹ ಘಟನೆ ನಡೆಯುತ್ತಿದೆ. ಬೇರೆ ಸಮಯದಲ್ಲಿ ಪೆÇಲೀಸರು ಸುಮೋಟೋ ಪ್ರಕರಣ ದಾಖಲಿಸುತ್ತಾರೆ. ಈ ಘಟನೆ ಪೆÇಲೀಸರ ಸಮ್ಮುಖದಲ್ಲೇ ಹೆಣ್ಣು ಮಕ್ಕಳ ಮೇಲೆ ಹಲ್ಲೆ ನಡೆದರೂ ಯಾವುದೇ ಕ್ರಮ ಕೈಗೊಂಡಿಲ್ಲ.

ತಪ್ಪಿತಸ್ಥರ ವಿರುದ್ಧ ಕ್ರಮ 
ಮಹಾಲಿಂಗಪುರ ಪುರಸಭೆಯಲ್ಲಿ ನಡೆದ ಗಲಾಟೆ ಸಂಬಂಧ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.
ಇಲ್ಲಿಯವರೆಗೂ ಯಾರೂ ದೂರು ನೀಡಿಲ್ಲ. ಮಹಾಲಿಂಗಪುರ ಪೆÇಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ದೂರು ದಾಖಲಾಗಿದೆ. ಪರಿಸ್ಥಿತಿ ಕೈ ಮೀರಿದಾಗ ಲಾಠಿ ಚಾರ್ಜ್ ಮಾಡಲಾಗಿದೆ ಎಂದು ಬಾಗಲಕೋಟೆ ಎಸ್ಪಿ ಲೋಕೇಶ್ ಪ್ರತಿಕ್ರಿಯೆ ನೀಡಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: attack lady corporatorbagalkotebjp mlamahalingapurasiddu savadi
ShareTweetSendShare
Join us on:

Related Posts

swiggy-99-store-affordable-food-delivery-karnataka-news

49 ರೂ.ಗೆ ಊಟ, ಜೊತೆಗೆ ಫ್ರೀ ಡೆಲಿವರಿ: ಆನ್‌ಲೈನ್ ಫುಡ್ ಆರ್ಡರ್ ಟ್ರೆಂಡ್ ಬದಲಿಸಿದ ಸ್ವಿಗ್ಗಿ ’99 ಸ್ಟೋರ್’!

by admin
August 14, 2026
0

49 ರೂ.ಗೆ ಊಟ, ಜೊತೆಗೆ ಫ್ರೀ ಡೆಲಿವರಿ: ಆನ್‌ಲೈನ್ ಫುಡ್ ಆರ್ಡರ್ ಟ್ರೆಂಡ್ ಬದಲಿಸಿದ ಸ್ವಿಗ್ಗಿ '99 ಸ್ಟೋರ್'! ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಆನ್‌ಲೈನ್‌ನಲ್ಲಿ ಊಟ ಆರ್ಡರ್...

shravana-sampath-shukravara-pooja-vidhana

ಶ್ರಾವಣ ಶುಕ್ರವಾರ ಮಹಾಲಕ್ಷ್ಮಿ ಪೂಜೆ: ಸಂಪತ್ ಗೌರಿ ವ್ರತ ಆಚರಿಸುವುದು ಹೇಗೆ? ಇಲ್ಲಿದೆ ಪೂಜಾ ವಿಧಿ ಮತ್ತು ಕಥೆ

by admin
August 14, 2026
0

ಶ್ರಾವಣ ಮಾಸದಲ್ಲಿ ಐದು ಶುಕ್ರವಾರ ಬಂದರೆ ಶ್ರೇಷ್ಠ . ಸಂಜೆಯ ಹೊತ್ತು ಮಹಾಲಕ್ಷ್ಮಿಯನ್ನು ಎಲ್ಲ ಮುತ್ತೈದೆಯರು ನಾನಾ ವಿಧವಾಗಿ ಪೂಜೆ ಮಾಡಿ ಆನಂದಿಸುತ್ತಾರೆ ಅದರಲ್ಲೂ ವಿಶೇಷವಾಗಿ ಸಂಪತ್...

ರೇಷನ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್: ಈ ಕೆಲಸ ಮಾಡದಿದ್ದರೆ ಮುಂದಿನ ತಿಂಗಳಿಂದ ಪಡಿತರ ಬಂದ್!

ರೇಷನ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್: ಈ ಕೆಲಸ ಮಾಡದಿದ್ದರೆ ಮುಂದಿನ ತಿಂಗಳಿಂದ ಪಡಿತರ ಬಂದ್!

by Shwetha
August 14, 2026
0

ಬೆಂಗಳೂರು: ರಾಜ್ಯದ ಬಿಪಿಎಲ್, ಎಪಿಎಲ್ ಹಾಗೂ ಅಂತ್ಯೋದಯ ಪಡಿತರ ಚೀಟಿದಾರರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಅತಿ ಮುಖ್ಯವಾದ ಸೂಚನೆಯೊಂದನ್ನು ನೀಡಿದೆ. ರೇಷನ್ ಕಾರ್ಡ್‌ನಲ್ಲಿ ಹೆಸರಿರುವ...

ರೇಣುಕಾಸ್ವಾಮಿ ಕೊಲೆ ಪ್ರಕರಣ; ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್

ರೇಣುಕಾಸ್ವಾಮಿ ಕೊಲೆ ಪ್ರಕರಣ; ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್

by Shwetha
August 14, 2026
0

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್‌ವುಡ್ ನಟ ದರ್ಶನ್ ಅವರು ಇದೀಗ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣದ ಮತ್ತೊಬ್ಬ ಆರೋಪಿ ಪ್ರದೋಷ್‌ರನ್ನು ಮಾಫಿ ಸಾಕ್ಷಿ...

ಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್ ರೇವಣ್ಣ ನೈಟ್ ಶೋ: ಸರ್ಕಾರ ನಿಮ್ಮದೇ ಇದೆ, ಇಷ್ಟಬಂದಂತೆ ತನಿಖೆ ಮಾಡಿಸಿ- ಪ್ರಜ್ವಲ್ ಜೈಲು ರಂಪಾಟಕ್ಕೆ ಎಚ್‌ಡಿ ರೇವಣ್ಣ ತಿರುಗೇಟು

ಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್ ರೇವಣ್ಣ ನೈಟ್ ಶೋ: ಸರ್ಕಾರ ನಿಮ್ಮದೇ ಇದೆ, ಇಷ್ಟಬಂದಂತೆ ತನಿಖೆ ಮಾಡಿಸಿ- ಪ್ರಜ್ವಲ್ ಜೈಲು ರಂಪಾಟಕ್ಕೆ ಎಚ್‌ಡಿ ರೇವಣ್ಣ ತಿರುಗೇಟು

by Shwetha
August 14, 2026
0

ಬೆಂಗಳೂರು: ಲೈಂಗಿಕ ದೌರ್ಜನ್ಯ ಮತ್ತು ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಜೈಲಿನ ಸೆಲ್‌ನಲ್ಲಿ ಆರಾಮವಾಗಿ ಕುಳಿತು ಮೊಬೈಲ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram