BJP MLA
ನವದೆಹಲಿ: ಕೊರೊನಾ ಹಾವಳಿಗೆ ವಿಶ್ವದ ಜನರು ಬೆಚ್ಚಿಬಿದ್ದಿದ್ದಾರೆ. ಅನೇಕರು ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ರಾಜಕೀಯ ಮುಖಂಡರು, ಕಲಾವಿದರು ಸಹ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಇದೀಗ ಕೊರೊನಾ ಸೋಂಕಿಗೆ ತುತ್ತಾಗಿದ್ದ ಉತ್ತರಾಖಂಡದ ಬಿಜೆಪಿ ಶಾಸಕ ನಿಧನರಾಗಿದ್ದಾರೆ.
ದೇಶದಲ್ಲಿ 5 ಲಕ್ಷಕ್ಕಿಳಿದ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ
ಉತ್ತರಾಖಂಡದ ಅಲ್ಮೋರಾ ಜಿಲ್ಲೆಯ ಸಾಲ್ಟ್ ವಿಧಾನಸಭಾ ಕ್ಷೇತ್ರದ ಶಾಸಕರಾದ ಸುರೇಂದ್ರ ಸಿಂಗ್ ಜೀನಾ ಅವರಿಗೆ ಕಳೆದ 15 ದಿನಗಳ ಹಿಂದೆ ಸೋಂಕು ತಗುಲಿತ್ತು. ಬಳಿಕ ಚಿಕಿತ್ಸೆಗೆ ಒಳಗಾಗಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಇಹಲೋಕ ತ್ಯಜಿಸಿದ್ದಾರೆ. ದೆಹಲಿಯ ಗಂಗಾರಾಮ್ ಆಸ್ಪತ್ರೆಯಲ್ಲಿ ಸುರೇಂದ್ರ ಸಿಂಗ್ ಅವರು ಕೊನೆಯುಸಿರೆಳೆದಿದ್ದಾರೆ. ವಿಪರ್ಯಾಸ ಅಂದ್ರೆ ಇತ್ತೀಚೆಗಷ್ಟೇ ಸುರೇಂದ್ರ ಸಿಂಗ್ ಅವರ ಪತ್ನಿ ಸಹ ಹೃದಯಾಗಾತದಿಂದಾಗಿ ವಿಧಿವಶರಾಗಿದ್ದರು.
BJP MLA
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel