Siddaramaiah D.K.Shivakumar nalin kumar kateel
ಡಿಕೆಶಿ, ಸಿದ್ದರಾಮಯ್ಯ ಅವರನ್ನ ತಾಲಿಬಾನಿಗಳಿಗೆ ಹೋಲಿಸಿದ ಕಟೀಲ್
ಉಡುಪಿ : ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಪ್ರತಿನಿತ್ಯ ವಾಗ್ದಾಳಿ ಮಾಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಇಂದು ಸಿದ್ದರಾಮಯ್ಯ ಮತ್ತು ಡಿಕೆಶಿವಕುಮಾರ್ ಅವರನ್ನು ತಾಲಿಬಾನಿಗಳಿಗೆ ಹೋಲಿಸಿದ್ದಾರೆ.
ಉಡುಪಿಯ ಶಾರದಾ ಇಂಟರ್ ನ್ಯಾಷನಲ್ ನಲ್ಲಿ ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಗಳ ಪ್ರಶಿಕ್ಷಣ ವರ್ಗ ಸಭೆ ನಡೆಯುತ್ತಿದೆ. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಕಟೀಲ್, ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ತಾಲಿಬಾನಿಗಳ ತರ ಹುಲಿ, ಬಂಡೆ ಅಂತ ಹೆಸರಿಟ್ಟುಕೊಂಡು ಓಡಾಡುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.
ತಾಲಿಬಾನಿಗಳು ಮಿಲಿಟಂಟ್, ಕ್ಯಾಪ್ಟನ್ ಅಂತಾ ನಾನಾ ಹೆಸರುಗಳನ್ನು ಇಟ್ಟುಕೊಂಡಿರುತ್ತಾರೆ. ಸಿದ್ದರಾಮಯ್ಯ ಡಿಕೆಶಿವಕುಮಾರ್ ಬಂಡೆ. ಹುಲಿ ಅಂತ ಹೆಸರಿಟ್ಟುಕೊಂಡು ಓಡಾಡುತ್ತಿದ್ದಾರೆ. ಉಪಚುನಾವಣೆ ಬಳಿಕ ಬಂಡೆಯೂ ಇಲ್ಲ, ಹುಲಿಯೂ ಇಲ್ಲದಂತಹ ದುಸ್ಥಿತಿಗೆ ಕಾಂಗ್ರೆಸ್ ತಳ್ಳಲಾಗಿದೆ ಎಂದು ಟೀಕಿಸಿದ್ದಾರೆ.
ಎಲ್ಲ ಚುನಾವಣೆಗಳಲ್ಲೂ ನಮ್ಮದೇ ಗೆಲುವು
`ಬಿಜೆಪಿಗರ ಶಕುನಿತಂತ್ರ’ ಹೇಳಿಕೆ `ಕಾಂಗ್ರೆಸ್ ಶಕ್ತಿ ಕುಂದಿಸಲ್ಲ’
ರಾಜ್ಯದಲ್ಲಿ ಮುಂದೆ ಎರಡು ವಿಧಾನಸಭೆ, ಒಂದು ಲೋಕಸಭಾ ಚುನಾವಣೆ ಬರುತ್ತೆ. ಈ ಚುನಾವಣೆಯಲ್ಲೀ ಬಿಜೆಪಿ ನೂರಕ್ಕೆ ನೂರು ಗೆಲ್ಲಲಿದೆ.
ನಾವು ಮುಂದಿನ ಚುನಾವಣೆಗಳಿಗೂ ತಯಾರಿ ಮಾಡಿಕೊಂಡಿದ್ದೇವೆ ಎಂದು ತಿಳಿಸಿದ ಕಟೀಲ್, ಪಂಚಾಯತ್ ಚುನಾವಣೆಗಳಲ್ಲೂ ಬಿಜೆಪಿ ಶೇ.80 ಮತ ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇವೇ ವೇಳೆ ಸಿಎಂ ಬದಲಾವಣೆ ಬಗ್ಗೆ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಮಾತನಾಡಿ, ಉಪಚುನಾವಣೆ ಪ್ರಚಾರದ ವೇಳೆ ಕಾಂಗ್ರೆಸ್ ನಾಯಕರು ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ನನ್ನ ಬಗ್ಗೆ ವೈಯುಕ್ತಿಕ ಟೀಕೆ ಮಾಡಿದ್ದರು.
ಸಿಎಂ ಸ್ಥಾನ ಬದಲಾಗುತ್ತೆ ಎಂದು ಜನರಲ್ಲಿ ಗೊಂದಲ ಸೃಷ್ಟಿ ಮಾಡುವ ಪ್ರಯತ್ನ ಮಾಡಿದ್ದರು. ಆದ್ರೆ ಬಿಜೆಪಿಯಲ್ಲಿ ಯಡಿಯೂರಪ್ಪ ಅವರ ನಾಯಕತ್ವ ಬದಲಾವಣೆಯ ಚರ್ಚೆಯೇ ಇಲ್ಲ.
ಮುಂದಿನ ಎರಡೂವರೆ ವರ್ಷಗಳ ಕಾಲ ಅವರೇ ನಮ್ಮ ಸರ್ವಸಮ್ಮತ ನಾಯಕ ಎಂದು ಕಟೀಲ್ ಘೋಷಿಸಿದರು.
ಜೊತೆಗೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 30 ಸ್ಥಾನಕ್ಕೆ ಸೀಮಿತವಾಗುತ್ತದೆ ಎಂದು ಕಟೀಲ್ ಭವಿಷ್ಯ ನುಡಿದರು.
10..100ವರ್ಷ ಅಲ್ಲ, ಜೀವಿ ಇರೋತನಕ ಬಿಜೆಪಿ ಅಧಿಕಾರ ಮಾಡ್ಲಿ: ಕಟೀಲ್ಗೆ ಡಿಕೆಶಿ ಡಿಚ್ಚಿ..!
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel
Siddaramaiah D.K.Shivakumar nalin kumar kateel