ADVERTISEMENT
Thursday, March 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಟಾಪ್ 5 ಸಿನಿಮಾ ನ್ಯೂಸ್ ..!

Namratha Rao by Namratha Rao
November 13, 2020
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

cinema

ಟಾಪ್ 5 ಸಿನಿಮಾ ನ್ಯೂಸ್ ..!

Related posts

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

March 5, 2026
ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

March 5, 2026

ಕೊರೊನಾ ಪರೀಕ್ಷೆ ಎಡವಟ್ಟು: ಚಿರಂಜೀವಿಗೆ ಕೊರೊನಾ ನೆಗೆಟಿವ್..!

ಟಾಲಿವುಡ್ ಮೆಘಾಸ್ಟಾರ್ ಚಿರಂಜೀವಿಗೆ ಕೊರೊನಾ ಪಾಸಿಟಿವ್ ಇದ್ದದ್ದು, ಇತ್ತೀಚೆಗಷ್ಟೇ ಗೊತ್ತಾಗಿತ್ತು. ಹೀಗಾಗಿ ಚಿರಂಜೀವಿ ಅವರು ಮನೆಯಲ್ಲಿಯೇ ಹೋ ಕ್ವಾರಂಟೈನಲ್ಲಿದ್ದು ರೆಸ್ಟ್ ಮಾಡ್ತಿದ್ರು. ಆದರೆ ಇದೀಗ ಅವರಿಗೆ ಕೋವಿಡ್ ನೆಗೆಟಿವ್ ಬಂದಿದೆ. ಗುರುವಾರ ನಡೆಸಲಾದ ಕೋವಿಡ್-19 ಪರೀಕ್ಷೆಯ ರಿಪೋರ್ಟ್ ನಲ್ಲಿ ನೆಗೆಟಿವ್ ಇರುವುದು ದೃಢವಾಗಿದೆ. ಈ ವಿಚಾರವನ್ನ ನಟ ಚಿರಂಜೀವಿ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಮೊದಲು ಮೆಗಾ ಸ್ಟಾರ್ ಗೆ ಕೊರೊನಾ ಪಾಸಿಟಿವ್ ಅಂತ ವರದಿ ನೀಡಲಾಗಿತ್ತು. RT PCR ಕಿಟ್ ದೋಷದಿಂದ ಕೊರೊನಾ ಪಾಸಿಟಿವ್ ಎಂದು ಬಂದಿತ್ತು. ಆದರೆ ಕೊರೊನಾ ಸೋಂಕು ಇಲ್ಲದೇ ಇರುವುದಾಗಿ ಇದೀಗ ಚಿರಂಜೀವಿ ಅವರು ಸ್ಪಷ್ಟನೆ ನೀಡಿದ್ದು, ಅಬಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ.

ರವಿ ಬೆಳಗೆರೆ ನಿಧನದಿಂದ ಆಘಾತಕ್ಕೆ ಒಳಗಾದ ಹಿರಿಯ ನಟಿ ಲೀಲಾವತಿ ಕಣ್ಣೀರು

ಹಾಯ್ ಬೆಂಗಳೂರು ಪತ್ರಿಕೆಯ ಸಂಪಾದಕರು, ಹಿರಿಯ ಪ್ರತ್ರಕರ್ತರು , ಲೇಖಕರು ಆಗಿದ್ದ  ರವಿ ಬೆಳಗೆರೆ ನಿಧನಕ್ಕೆ ಸಿನಿಮಾರಂಗದ ಗಣ್ಯರು, ರಾಜಕೀಯ ಮುಖಂಡರು ಕಂಬನಿ ಮಿಡಿದಿದ್ದಾರೆ. ಇತ್ತ ರವಿ ಬೆಳಗೆರೆ ಅವರ ನಿಧನದ ಸುದ್ದಿ ತಿಳಿದು ಹಿರಿಯ ನಟಿ ಲೀಲಾವತಿ ಅವರು ಕಣ್ಣೀರಿಟ್ಟಿದ್ದಾರೆ. ”ಸಾವಿರಾರು ಜನರ ಸಾಕ್ಷಿಯಾಗಿ ವೇದಿಕೆಯಲ್ಲಿ ಪ್ರೀತಿಯಿಂದ ಅಮ್ಮಾ ಎಂದು ಕರೆದಿದ್ದರು. ಯಾವಾಗಲೂ ಅಮ್ಮ ಎಂದೇ ಕರೆಯುತ್ತಿದ್ದರು. ಆ ದೇವರು ರವಿ ಆತ್ಮಕ್ಕೆ ಶಾಂತಿ ನೀಡಲಿ. ಸದಾ ಬೆಳಗುತ್ತಿರಲಿ” ಎಂದು ಲೀಲಾವತಿ ಅವರು ರವಿ ಅವರನ್ನ ನೆನೆದು ಬಿಕ್ಕಿಬಿಕ್ಕಿ ಅತ್ತಿದ್ದಾರೆ. ಅಂದ್ಹಾಗೆ ರವಿ ಬೆಳಗೆರೆ ಅವರು ಲೀಲಾವತಿ ಅವರ ಜೀವನ ಕುರಿತು ‘ರಾಜ್ ಲೀಲಾ ವಿನೋದ’ ಎಂಬ ಪುಸ್ತಕ ಬರೆದಿದ್ದರು. ಜೊತೆಗೆ ರವಿ ಬೆಳಗೆರೆ ಅವರು ಲೀಲಾವತಿ ಅವರೊಡನೆ ಉತ್ತಮ ಒಡನಾಟ ಹೊಂದಿದ್ದರು.

‘ಇದು ರವಿ ಅವರ ‘ಸಾವಲ್ಲ’, ‘ಹುಟ್ಟು’ : ಯೋಗರಾಜ್ ಭಟ್

ರವಿ ಬೆಳಗೆರೆ ಅವರ ನಿಧನಕ್ಕೆ ವಿಕಟಕವಿ ಯೋಗರಾಜ್ ಭಟ್ ಅವರು ಸಂತಾಪ ಸೂಚಿಸಿದ್ದಾರೆ. ಇಂದು ಬೆಳಿಗ್ಗೆ ಪ್ರಾರ್ಥನಾ ಶಾಲೆಯ ಬಳಿ ಭಟ್ಟರು ರವಿ ಬೆಳಗೆರೆ ಅವರ ಅಂತಿಮ ದರ್ಶನ ಪಡೆದಿದರು. ಬಳಿಕ ಈ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಇದು ರವಿ ಅವರ ಸಾವಲ್ಲ, ಹುಟ್ಟು ಎಂದಿದ್ದಾರೆ. ಅಲ್ಲದೇ ಫೊನಿನಲ್ಲಿ ನಾವಿಬ್ಬರು ಸದಾ ಮಾತನಾಡುತ್ತಿದ್ದೆವು. ಕೆಲವು ದಿನಗಳ ಹಿಂದಷ್ಟೆ ಸಹ ಪರಸ್ಪರ ಚರ್ಚೆ ಮಾಡಿದ್ದೆವು. ಅವರ ಆರೋಗ್ಯದ ಬಗ್ಗೆ ನಮಗೆ ಆತಂಕವೂ ಇತ್ತು. ಕಾವ್ಯಾತ್ಮಕ ಆತ್ಮ ಅವರದ್ದು, ಸಂಗೀತವನ್ನು ಬಹಳವಾಗಿ ಮೋಹಿಸುತ್ತಿದ್ದರು. ಮೊನ್ನೆಯವರೆಗೂ ನಮ್ಮ ಸಿನಿಮಾದ ಹಾಡುಗಳ ಬಗ್ಗೆ ಮಾತನಾಡುತ್ತಿದ್ವಿ. ಒಬ್ಬ ಕನ್ನಡಾಭಿಮಾನಿಯಾಗಿ ಇದು ಅವರ ಸಾವಲ್ಲ, ಹುಟ್ಟು ಎಂದಿದ್ದಾರೆ.

‘ಅಕ್ಷರ ಮಾಂತ್ರಿಕ’ನ ನಿಧನಕ್ಕೆ ಸಂತಾಪ ಸೂಚಿಸಿದ ‘ನವರಸ ನಾಯಕ’

ಅಕ್ಷರ ಮಾಂತ್ರಿಕ ರವಿ ಬೆಳಗೆರೆ ಅವರ ನಿಧನಕ್ಕೆ ಜಗ್ಗೇಶ್ ಅವರು ಕಂಬನಿ ಮಿಡಿದಿದ್ದಾರೆ. ನಟ ಜಗ್ಗೇಶ್ ಅವರು ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ್ದು, ಬೆಳಗೆರೆ ಅವರಿಗೆ ಸಂತಾಪ ಸೂಚಿಸಿದ್ದಾರೆ. ಟ್ವಿಟ್ಟರ್ ನಲ್ಲಿ ‘ಯಾರಿಗೂ ಅರ್ಥವಾಗದ ಮನುಷ್ಯ. ಒಮ್ಮೆ ಈತನ ಮಾತು ಸರಿ ಅನಿಸುತ್ತದೆ. ಕೆಲವೊಮ್ಮೆ ಬೇಕಿತ್ತಾ ಈ ಮಾತು ಅನಿಸುತ್ತದೆ. 30 ವರ್ಷದಿಂದ ಬಲ್ಲೆ ಆದರೂ ನನಗೆ ಅರ್ಥವಾಗದ ಮನುಷ್ಯ. ಸಾಮಾನ್ಯ ಅಸಮಾನ್ಯ ಆದದ್ದು ಮಾತ್ರ ಅನುಸರಣೀಯ. ರವಿ ರವರ ಖಾಸಬಾತ್ ಬರವಣಿಗೆ ನನ್ನ ಅಚ್ಚುಮೆಚ್ಚು. ನಿಮ್ಮ ಆತ್ಮಕ್ಕೆ ಶಾಂತಿ’ ಎಂದು ಬರೆದುಕೊಂಡು ಸಂತಾಪ ಸೂಚಿಸಸಿದ್ದಾರೆ.

‘ಅಕ್ಷರ ರಾಕ್ಷಸ’ನ ನಿಧನಕ್ಕೆ ಕಂಬನಿ ಮಿಡಿದ ‘ಕಿಚ್ಚ’

ಆಗಿದ್ದ ರವಿ ಬೆಳಗೆರೆ ಅವರ ನಿಧನಕ್ಕೆ ಸಿನಿಮಾರಂಗದ ಗಣ್ಯರು, ರಾಜಕೀಯ ಮುಖಂಡರು ಕಂಬನಿ ಮಿಡಿದಿದ್ದಾರೆ. ಅದರಂತೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ‘ಅಕ್ಷರ ಮಾಂತ್ರಿಕ’ನ ನಿಧನಕ್ಕೆ ಸಂತಾಪ ಸೂಚಿಸುತ್ತಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸುದೀಪ್, ‘ಕೊನೆ ಬಾರಿ ನಾನು ಅವರನ್ನು ನೋಡಿದ ಕ್ಷಣದ ಫೋಟೋ ಅತ್ಯಮೂಲ್ಯವಾಗಿರುತ್ತೆ. ಅದು ಎಲ್ಲಾ ಸ್ಪರ್ಧಿಗಳ ಪಾಲಿಗೂ ಅದ್ಭುತವಾದ ಕ್ಷಣವಾಗಿತ್ತು. ನಿಮ್ಮನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತೇವೆ. ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ. ಕುಟುಂಬಕ್ಕೆ ದುಃಖ ಬರಿಸುವ ಶಕ್ತಿ ದೇವರು ನಿಮಗೆ ನೀಡಲಿ’ ಎಂದು ಬಿಗ್ ಬಾಸ್ ನೆನಪನ್ನು ಮೆಲುಕು ಹಾಕಿದ್ದಾರೆ.

 

cinema

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: cinimaRavi BelagereSandalwood
ShareTweetSendShare
Join us on:

Related Posts

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

by Shwetha
March 5, 2026
0

ಬೆಂಗಳೂರಿನ ಎಮ್. ಚಿನ್ನಸ್ವಾಮಿ ಸ್ಟೇಡಿಯಂ ಹೊರಗಡೆ ನಡೆದ ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತನ್ನ ವಿರುದ್ಧದ ಆರೋಪಗಳನ್ನು ತಳ್ಳಿ ಹಾಕಿದೆ. ಸ್ಟೇಡಿಯಂ...

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

by Shwetha
March 5, 2026
0

ಬೆಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ತೀವ್ರ ವಾಗ್ದಾಳಿ ನಡೆಸಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಸರಣಿ ಪ್ರತಿಭಟನೆಗಳು ಆರಂಭವಾಗಲಿವೆ...

ಅನ್ನಭಾಗ್ಯದ ಬಾಗಿಲು ಬಂದ್: 20 ಲಕ್ಷ BPL ನಕಲಿ ಕಾರ್ಡುದಾರರಿಗೆ ಗೇಟ್ ಪಾಸ್; ಅನರ್ಹರಿಗೆ ದಂಡದ ಬಿಸಿ ಮುಟ್ಟಿಸಿದ ಸರ್ಕಾರ

ಅನ್ನಭಾಗ್ಯದ ಬಾಗಿಲು ಬಂದ್: 20 ಲಕ್ಷ BPL ನಕಲಿ ಕಾರ್ಡುದಾರರಿಗೆ ಗೇಟ್ ಪಾಸ್; ಅನರ್ಹರಿಗೆ ದಂಡದ ಬಿಸಿ ಮುಟ್ಟಿಸಿದ ಸರ್ಕಾರ

by Shwetha
March 5, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಗೆ ಅಕ್ರಮವಾಗಿ ಲಗ್ಗೆ ಇಟ್ಟಿದ್ದ ನಕಲಿ ಫಲಾನುಭವಿಗಳಿಗೆ ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ ಭಾರಿ ಆಘಾತ ನೀಡಿದೆ. ಅರ್ಹತೆ ಇಲ್ಲದಿದ್ದರೂ...

ರಾಜಕೀಯ ಚದುರಂಗದಾಟದಲ್ಲಿ ಡಿಕೆಶಿ ಸಿಎಂ ಕನಸಿಗೆ ಸದ್ಯಕ್ಕೆ ಬ್ರೇಕ್: ಹೈಕಮಾಂಡ್ ನಡೆಯಿಂದ ಬೇಸತ್ತ ಕನಕಪುರ ಬಂಡೆಯ ಮುಂದಿನ ನಡೆ ಏನು?

ರಾಜಕೀಯ ಚದುರಂಗದಾಟದಲ್ಲಿ ಡಿಕೆಶಿ ಸಿಎಂ ಕನಸಿಗೆ ಸದ್ಯಕ್ಕೆ ಬ್ರೇಕ್: ಹೈಕಮಾಂಡ್ ನಡೆಯಿಂದ ಬೇಸತ್ತ ಕನಕಪುರ ಬಂಡೆಯ ಮುಂದಿನ ನಡೆ ಏನು?

by Shwetha
March 5, 2026
0

ಕರ್ನಾಟಕದ ರಾಜಕೀಯ ಅಂಗಳದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ದಿನಗಳು ಉರುಳುತ್ತಿದ್ದಂತೆ, ಮುಖ್ಯಮಂತ್ರಿ ಕುರ್ಚಿಗಾಗಿ ನಡೆಯುತ್ತಿರುವ ಶೀತಲ ಸಮರ ಇದೀಗ ತಾರಕಕ್ಕೇರಿದೆ. ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ...

ಬಜೆಟ್ 2026 ರಾಜ್ಯದ ಅಭಿವೃದ್ಧಿಗೆ 13 ಸೂತ್ರಗಳು ಘೋಷಣೆಯಾಗಲಿದೆಯೇ ಈ ಜನಪ್ರಿಯ ಯೋಜನೆಗಳು

17ನೇ ಬಜೆಟ್‌ಗೆ ಸಿದ್ದರಾಮಯ್ಯ ಸಜ್ಜು: ಈ ಬಾರಿ 10-15% ಬಜೆಟ್ ಗಾತ್ರ ಹೆಚ್ಚಳ ಸಾಧ್ಯತೆ

by Shwetha
March 5, 2026
0

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 6ರಂದು 17ನೇ ಬಾರಿ ರಾಜ್ಯ ಬಜೆಟ್ ಮಂಡಿಸಲು ಸಜ್ಜಾಗಿದ್ದಾರೆ. ಬಜೆಟ್ ಮಂಡನೆಗೂ ಮುನ್ನ ಇಂದು ಸಂಜೆ ಆರ್ಥಿಕ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram