ಕೊರೊನ್ ಭೀತಿಯಿಂದ ರಾಜ್ಯ ಲಾಕ್ ಡೌನ್ ಆಗಿದೆ. ಈ ಹಿನ್ನೆಲೆಯಲ್ಲಿ ಕಾರ್ಮಿಕರಿಗೆ ವಿಶೇಷ ಪ್ಯಾಕೇಜ್ ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಕೊರೊನಾ ವೈರಸ್ ಹರಡುವಿಕೆ ಹೆಚ್ಚಾಗಿದೆ. ಇದರಿಂದ ರಾಜ್ಯ ಲಾಕ್ ಡೌನ್ ಆಗಿದೆ. ಹಾಗಾಗಿ ಸಾರ್ವಜನಿಕರಿಗೆ ಸಾಕಷ್ಟು ತೊಂದರೆಯಾಗಿದೆ. ಅದರಲ್ಲೂ ಕಾರ್ಮಿಕರಲ್ಲಿ ಆತಂಕ ಹೆಚ್ಚಾಗಿತ್ತು. ಈ ಕಾರಣಕ್ಕಾಗಿ ಕಟ್ಟಡ ಕಾರ್ಮಿಕರಿಗೆ ತಿಂಗಳಿಗೆ 1000 ರೂ ಸಹಾಯ ಧನ ನೀಡಲು ನಿರ್ಧರಿಸಲಾಗಿದೆ. ರೇಷನ್ ಕಾರ್ಡ್ ಹೊಂದಿದ ಸಾರ್ವಜನಿಕರಿಗೆ 2 ತಿಂಗಳ ಪಡಿತರವನ್ನು ಮುಂಗಡವಾಗಿ ನೀಡಲು ಸೂಚನೆ ನೀಡಲಾಗಿದೆ. ಅಲ್ಲದೆ ಸಾಮಾಜಿಕ ಭದ್ರತಾ ಪಿಂಚಣಿ ಹಣವನ್ನು ಸಹ ಮುಂಗಡವಾಗಿ ನೀಡಲು ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ. ಜೊತೆಗೆ ಎರಡು ತಿಂಗಳ ಮಾನವ ದಿನಗಳ ಬಾಬ್ತು ಮನ್ನಾ ಮಾಡಲು ಸರ್ಕಾರ ನಿರ್ಧರಿಸಿದೆ. ಇನ್ನೂ ವಿಶೇಷ ಎಂದರೆ ಬಡವರ ಬಂಧು ಯೋಜನೆಯಲ್ಲಿ ಸಾಲ ಪಡೆದವರ ಸಂಪೂರ್ಣ ಸಾಲ ಮನ್ನಾ ಮಾಡುವುದಾಗಿ ಸರ್ಕಾರ ಘೋಷಣೆ ಮಾಡಿದೆ
ನಮಗೆ ಯುದ್ಧ ಬೇಡ ಶಾಂತಿ ಬೇಕು, ಆದರೆ ಇದು ನಮ್ಮ ಬಲಹೀನತೆಯಲ್ಲ: ಸ್ವಾತಂತ್ರ್ಯ ದಿನದಂದು ಭಾರತಕ್ಕೆ ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ ಎಚ್ಚರಿಕೆ
ಇಸ್ಲಾಮಾಬಾದ್: ನಮಗೆ ಯುದ್ಧ ಬೇಕಾಗಿಲ್ಲ, ನಾವು ಶಾಂತಿಯನ್ನು ಮಾತ್ರ ಬಯಸುತ್ತೇವೆ. ಆದರೆ, ಶಾಂತಿಗಾಗಿ ನಾವು ಕೈಜೋಡಿಸುತ್ತಿರುವುದನ್ನು ಯಾರೂ ನಮ್ಮ ಬಲಹೀನತೆ ಎಂದು ಭಾವಿಸಬಾರದು ಎಂದು ಪಾಕಿಸ್ತಾನದ ಪ್ರಧಾನಿ...








